Breaking News

ರಾಷ್ಟ್ರೀಯ

ಶ್ರೀರಾಮಸೇನೆ’ಯಿಂದ ‘ಲವ್ ಜಿಹಾದ್’ ತಡೆಗೆ ‘ಸಹಾಯವಾಣಿ’ ಆರಂಭ

ಧಾರವಾಡ: ರಾಜ್ಯದಲ್ಲಿ ಶ್ರೀರಾಮಸೇನೆಯಿಂದ ಲವ್ ಜಿಹಾದ್ ತಡೆಗೆ ಅಭಿಯಾನ ಆರಂಭಿಸಲಾಗಿದೆ. ಇದರ ಸಲುವಾಗಿ ಶ್ರೀರಾಮಸೇನೆಯಿಂದ ಸಹಾಯವಾಣಿ ಕೂಡ ಆರಂಭಿಸಲಾಗಿದ್ದು, ಅದಕ್ಕೆ ಹೆಚ್ಚು ಬೆದರಿಕೆ ಕರೆಗಳೇ ಬರುತ್ತಿರೋದಾಗಿ ತಿಳಿದು ಬಂದಿದೆ. ಧಾರವಾಡ ಶ್ರೀರಾಮಸೇನಾ ಕರ್ನಾಟಕ ಕೇಂದ್ರದಿಂದ ಲವ್ ಜಿಹಾದ್ ಗೆ ತಡೆ ನೀಡುವ ಸಲುವಾಗಿ ಸಹಾಯವಾಣಿ ಆರಂಭಿಸಲಾಗಿದೆ. ಲವ್ಜಿಹಾದ್ ಸಂಬಂಧ 9090443444ಗೆ ಕರೆ ಮಾಡಿ ತಿಳಿಸುವಂತೆ ಮನವಿ ಮಾಡಿದೆ. ಈ ಸಹಾಯವಾಣಿ ಸಂಖ್ಯೆ ಆರಂಭಿಸಿದ ನಂತ್ರ ಮೊದಲ ದಿನವೇ ಅಭೂತಪೂರ್ವ ಸ್ಪಂದನೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹಳ್ಳೂರ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ದರ್ಶನ್‌ ಬಂಧನ: ಸಾಕ್ಷಿಗಳ ಹಿಂದೆ ಬಿದ್ದ ಪೊಲೀಸರು: ಮಹತ್ವದ ಸಾಕ್ಷಿಗಳು ವಶಕ್ಕೆ

ದರ್ಶನ್‌ ಬಂಧನ: ಸಾಕ್ಷಿಗಳ ಹಿಂದೆ ಬಿದ್ದ ಪೊಲೀಸರು: ಮಹತ್ವದ ಸಾಕ್ಷಿಗಳು ವಶಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾಡು ಹಿಡಿದು ಜಾಲಾಡುತ್ತಿರುವ ಪೊಲೀಸರಿಗೆ ದಿನವೂ ಹೊಸ ಹೊಸ ಸಾಕ್ಷಿಗಳು ಕೈಗೆ ಸಿಗುತ್ತಿವೆ. ಈ ಸಾಕ್ಷಿಗಳನ್ನು ಈಗಾಗಲೇ ನ್ಯಾಯಾಧಿಶರ ಮುಂದೆ ಪ್ರಸ್ತುತ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಈ ಸಾಕ್ಷ್ಯಗಳ ಹೇಳಿಕೆಗಳನ್ನು ನ್ಯಾಯಾಧೀಶರ ಎದುರು ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ. ದರ್ಶನ್‌ ಕನ್ನಡ ಚಿತ್ರ ರಂಗ ಸ್ಟಾರ್ ನಟ. ದೊಡ್ಡ ಸೆಲಿಬ್ರಿಟಿ. ಪ್ರಭಾವ …

Read More »

ಕೊಯ್ನಾ ಜಲಾಶಯಕ್ಕೆ ಹರಿದು ಬಂದ 2 ಟಿಎಂಸಿ ಅಡಿ ನೀರು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರ ರಾಜ್ಯದ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಬೀಳುತ್ತಿದ್ದರಿಂದ ಮಹಾರಾಷ್ಟ್ರ ರಾಜ್ಯದ ಸಾತಾರಾ ಜಿಲ್ಲೆಯ ಕೊಯ್ನಾ ಡ್ಯಾಂ ಗೆ 24 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ಅಡಿಗಳಷ್ಟು ನೀರು ಹರಿದು ಬಂದಿದ್ದು, 105 ಟಿಎಂಸಿ ಅಡಿ ಸಾಮರ್ಥ್ಯದ ಈ ಡ್ಯಾಂನಲ್ಲಿ ಬುಧವಾರ 23 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ 24 ಗಂಟೆಗಳಲ್ಲಿ ಕೊಯ್ನಾ ಆಣೆಕಟ್ಟು ಪ್ರದೇಶದಲ್ಲಿ 13.3 ಸೆ.ಮೀ, ಕೃಷ್ಣಾ ನದಿ ಉಗಮ …

Read More »

ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ ಮಹಾಲಿಂಗಪುರ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮಳೆಯಾಗಿ ಮತ್ತು ಅಂತರಾಜ್ಯದಲ್ಲಿ ಮಳೆಯಾಗಿ ಕೃಷ್ಣಾ ಮತ್ತು ಘಟಪ್ರಭಾ ನದಿಗಳಿಗೆ ಪ್ರವಾಹ ಬಂದು ಮಹಾಲಿಂಗಪುರ ಸುತ್ತಮುತ್ತಲಿನ ಗ್ರಾಮಗಳು ಪ್ರವಾಹ ಎದುರಿಸುವದರಿಂದ ವಿಪತ್ತು ನಿರ್ವಹಣೆಗೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ಹೇಳಿದರು. ಪುರಸಭೆಯಲ್ಲಿ ಜರುಗಿದ ಸ್ಥಳೀಯ ಮಟ್ಟದ ಅ ಧಿಕಾರಿಗಳ ವಿಪತ್ತು ನಿರ್ವವಣಾ ಮುಂಜಾಗ್ರತೆಯ ಕ್ರಮಗಳ ಸಭೆಯ ಅಧ್ಯಕ್ಷತೆ …

Read More »

ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕಳೆದೆರಡು ದಿನಗಳಲ್ಲಿ ಸುಮಾರು 29 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರವು ಇದೀಗ ಆಡಳಿತಾತ್ಮಕ ವಿಭಾಗದಲ್ಲಿ ಮೇಜರ್ ಸರ್ಜರಿ ಮಾಡಿದೆ. 23 ಐಎಎಸ್ ಅಧಿಕಾರಿಗಳನ್ನು ಶುಕ್ರವಾರ ವರ್ಗಾವಣೆ ಮಾಡಲಾಗಿದೆ. ಐವರು ಜಿಲ್ಲಾಧಿಕಾರಿಗಳು ಸೇರಿ ಒಟ್ಟು 23 ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಹಾವೇರಿ, ಗದಗ, ದಾವಣಗೆರೆ, ಮೈಸೂರು, ರಾಯಚೂರು, ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಿಗೆ ಹೊಸ ಡಿಸಿ ನೇಮಿಸಲಾಗಿದೆ. ಇಲ್ಲಿದೆ ಐಎಎಸ್ ವರ್ಗಾವಣೆ ವಿವರ ಹೆಸರು-ಎಲ್ಲಿಂದ- ಎಲ್ಲಿಗೆ ಡಾ. …

Read More »

ಭಾರೀ ಮಳೆ ಹಿನ್ನೆಲೆ : ದಕ್ಷಿಣ ಕನ್ನಡ ಜಿಲ್ಲೆಯ ಈ ತಾಲ್ಲೂಕುಗಳ ಶಾಲೆಗಳಿಗೆ ರಜೆ

ಉಡುಪಿ : ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ. ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಇಂದು ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಬಂಟ್ವಾಳ ತಾಲೂಕಿನ ಎಲ್ಲ ಶಾಲೆಗಳಿಗೆ ತಹಶೀಲ್ದಾರ್ ರಜೆ …

Read More »

ರಸ್ತೆಗಿಳಿಯಲಿವೆ ‘ವಿಮಾನ ಮಾದರಿ ಬಸ್’

ನವದೆಹಲಿ: ಶೀಘ್ರದಲ್ಲಿಯೇ ವಿಮಾನ ಮಾದರಿಯ ಬಸ್ ಗಳನ್ನು ರಸ್ತೆಗಿಳಿಸಲಾಗುವುದು. ಈ ಬಸ್ ಗಳ ಪ್ರಯಾಣ ದರ ಮಾಮೂಲಿ ಬಸ್ ಗಳಿಗಿಂತಲೂ ಶೇಕಡ 30ರಷ್ಟು ಕಡಿಮೆ ಇರಲಿದೆ. ಸಧ್ಯವೇ ನಾಗಪುರದಲ್ಲಿ ಪ್ರಾಯೋಗಿಕ ಸಂಚಾರ ಆರಂಭಿಸಲಾಗುವುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.   ಮಹಾರಾಷ್ಟ್ರದ ನಾಗಪುರದಲ್ಲಿ 132 ಸೀಟ್ ಗಳ ವಿಮಾನ ಮಾದರಿಯ ಬಸ್ ಪ್ರಾಯೋಗಿಕ ಸಂಚಾರ ಆರಂಭಿಸಲಿದೆ. ಬಸ್ ಸಖಿಯರು ಕೂಡ ಇರಲಿದ್ದು, ಪ್ರಯಾಣಿಕರಿಗೆ ನೆರವು …

Read More »

ಡಿಸ್ಚಾರ್ಜ್​ ಆದ ಬೆನ್ನಲ್ಲೇ ಮತ್ತೆ ಆಸ್ಪತ್ರೆಗೆ ದಾಖಲಾದ ಬಿಜೆಪಿ ಹಿರಿಯ ನಾಯಕ

ಡಿಸ್ಚಾರ್ಜ್​ ಆದ ಬೆನ್ನಲ್ಲೇ ಮತ್ತೆ ಆಸ್ಪತ್ರೆಗೆ ದಾಖಲಾದ ಬಿಜೆಪಿ ಹಿರಿಯ ನಾಯಕ ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿಯ ಹಿರಿಯ ನಾಯಕ ಲಾಲ್​ ಕೃಷ್ಣ ಅಡ್ವಾಣಿ ಅವರು ಮತ್ತೊಮ್ಮೆ ಇಂದು (ಜುಲೈ 04) ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದು ವಾರದ ಹಿಂದಷ್ಟೇ ರಾಷ್ಟ್ರ ರಾಜಧಾನಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್​) ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಸ್ತುತ ಅಡ್ವಾಣಿ ಅವರು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದೆ. ಅವರನ್ನು ನಿಗಾದಲ್ಲಿ ಇರಿಸಲಾಗಿದ್ದು, ಅವರ …

Read More »

ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ʻಡೆಂಗ್ಯೂʼ ಪರೀಕ್ಷೆಗೆ 300 ರೂ. ದರ ನಿಗದಿ : ರಾಜ್ಯ ಸರ್ಕಾರ ಆದೇಶ

ಬೆಂಗಲೂರು : ರಾಜ್ಯದಲ್ಲಿ ಡೆಂಘಿ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘಿ ಪರೀಕ್ಷೆಗೆ ಆಸ್ಪತ್ರೆ ಹಾಗೂ ಪ್ರಯೋಗಾಲಯಗಳಲ್ಲಿ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಹಿನ್ನೆಲೆಯಲ್ಲ ರಾಜ್ಯ ಸರ್ಕಾರ ಪರೀಕ್ಷಾ ಶುಲ್ಕಗಳನ್ನು ನಿಗದಿ ಮಾಡಿ ಆದೇಶ ಹೊರಡಿಸಿದೆ.   ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪದ್ಮ.ವಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿ ಡೆಂಗಿಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ …

Read More »