Breaking News

ರಾಷ್ಟ್ರೀಯ

ಬೇರೆ ಪಕ್ಷಕ್ಕೆ ಹೋಗುವುದಿಲ್ಲ: ಸಂಗಣ್ಣ ಕರಡಿ ಸ್ಪಷ್ಟನೆ

ಕೊಪ್ಪಳ: ನಾನು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನ ಕೆಲವರು ನನ್ನ ಜೊತೆ ಸೌಜನ್ಯಕ್ಕಾಗಿ ಮಾತನಾಡಿದ್ದಾರೆ. ಆದರೆ ಪಕ್ಷ ಸೇರುವ ಬಗ್ಗೆ ಮಾತನಾಡಿಲ್ಲ. ನಾನು ಪಕ್ಷದಲ್ಲಿಯೇ ಇರುತ್ತೇನೆ. ಕೆಆರ್ಪಿಪಿ ಪಕ್ಷಕ್ಕೆ ಹೋಗುವೆ ಎನ್ನುವ ವಿಚಾರ ಎಲ್ಲವೂ ಊಹಾಪೋಹ. ನಾನು ಈಗಲೇ ಎಲ್ಲವೂ ನಿರ್ಧಾರ ಮಾಡಿಲ್ಲ ಎಂದು ಕೊಪ್ಪಳದಲ್ಲಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಹೇಳಿದರು. ಮುಂದಿನ ಲೋಕಸಭೆ ಚುನಾವಣೆಗೆ ಅವರಿಗೆ ಟಿಕೆಟ್ ತಪ್ಪಿದ ಬಳಿಕ ಬೆಂಬಲಿಗರು ಪಕ್ಷದ …

Read More »

ಜಮೀನು ಮಾರಾಟದ ಹಣಕ್ಕಾಗಿ ತಂದೆಯನ್ನೇ ಕೊಂದ ಮಕ್ಕಳು

ಗದಗ: ಜಮೀನು ಮಾರಾಟದಿಂದ ಸಿಕ್ಕ ಹಣವನ್ನು ಸಮನಾಗಿ ಹಂಚಿಕೆ ಮಾಡಿಲ್ಲ ಎಂಬ ವಿಚಾರಕ್ಕೆ ಮಕ್ಕಳೇ ತಂದೆಯನ್ನು ರಾಡ್‌ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಗುರುವಾರ ನಡೆದಿದೆ. ವಿವೇಕಾನಂದ ಕರಿಯಲ್ಲಪ್ಪ (65) ಕೊಲೆಯಾದ ವ್ಯಕ್ತಿ. ವಿವೇಕಾನಂದ ಅವರ ಮೊದಲನೇ ಪತ್ನಿ ಕಸ್ತೂರಿ ಅವರ ಮಕ್ಕಳಾದ ಮಲ್ಲೇಶ ಮತ್ತು ಪ್ರಕಾಶ ಆರೋಪಿಗಳು. ವಿವೇಕಾನಂದ ಅವರು ಪಿತ್ರಾರ್ಜಿತವಾಗಿ ಬಂದಿದ್ದ ಆರು ಎಕರೆ ಜಮೀನಿನಲ್ಲಿ ಮೂರು ಎಕರೆಯನ್ನು ಮಾರಾಟ ಮಾಡಿದ್ದರು. ಅದರಿಂದ ಬಂದ …

Read More »

ತಮ್ಮ ಹೆಸರಿನ ರಸ್ತೆ ತಾವೇ ಉದ್ಘಾಟಿಸಿದ ಕೋವಿಂದ್‌!

ಹೊಸದಿಲ್ಲಿ: ರಾಷ್ಟ್ರಪತಿ ಭವನ ಎಸ್ಟೇಟ್‌ನಲ್ಲಿ ತಮ್ಮ ಹೆಸರಿನಲ್ಲಿ ನಿರ್ಮಿಸಲಾದ ರಸ್ತೆಯನ್ನು ಮಾಜಿ ರಾಷ್ಟ್ರ ಪತಿ ರಾಮನಾಥ್‌ ಕೋವಿಂದ್‌ ತಾವೇ ಖುದ್ದಾಗಿ ಲೋಕಾರ್ಪಣೆಗೊಳಿಸಿದ್ದಾರೆ. ತಮ್ಮ ನೇತೃತ್ವದ ಸಮಿ ತಿಯ “ಒಂದು ದೇಶ, ಒಂದು ಚುನಾವಣೆ’ ವರದಿ ಯನ್ನು ರಾಷ್ಟ್ರಪತಿಗೆ ಹಸ್ತಾಂತರಿಸಲು ಕೋವಿಂದ್‌ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. “ಅನಿರೀಕ್ಷಿತವಾದ ಈ ಘಟನೆ ನನ್ನ ಪಾಲಿನ ವಿಧಿ ಆಗಿದ್ದಿರಬಹುದು. ಅಚ್ಚರಿಯ ಅವಕಾಶವನ್ನು ನೀಡಿದ ರಾಷ್ಟ್ರಪತಿ ಭವನಕ್ಕೆ ಕೃತಜ್ಞ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

Read More »

PSI ಹಗರಣ ಎಸ್‌ಐಟಿ ತನಿಖೆಗೆ: ಸಿಎಂ ನೇತೃತ್ವದ ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು: ಲೋಕಸಭಾ ಚುನಾ ವಣೆಯ ಹೊಸ್ತಿಲಲ್ಲಿ ಬಿಜೆಪಿ ವಿರುದ್ಧ ಮತ್ತೂಂದು ತನಿಖಾಸ್ತ್ರ ಬಳಕೆಗೆ ಕಾಂಗ್ರೆಸ್‌ ಮುಂದಾಗಿದೆ. ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಪಿಎಸ್‌ಐ ನೇಮಕ ಹಗರಣದ ಬಗ್ಗೆ ವಿಶೇಷ ತನಿಖಾ ಸಮಿತಿ (ಎಸ್‌ಐಟಿ) ರಚಿಸಿ ತನಿಖೆ ನಡೆಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಿಎಂ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯವೂ ಸೇರಿ ಒಟ್ಟು 48 ವಿಷಯಗಳಿಗೆ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಕಂದಾಯ …

Read More »

ಮಾರ್ಚ್ 16ಕ್ಕೆ ಬಹು ನಿರೀಕ್ಷಿತ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ದೇಶದ ಜನರು ಬಹುದಿನಗಳಿಂದ ಕಾತುರದಿಂದ ಕಾಯುತ್ತಿದ್ದ ಲೋಕ ಸಭಾ ಚುನಾವಣೆಗೆ ದಿನಾಂಕ ನಿಗದಿಗೊಳಿಸುವ ಸಮಯ ಹತ್ತಿರ ಬಂದಿದೆ. ಹೌದು ಬಹುನಿರೀಕ್ಷಿತ ಲೋಕಸಭಾ ಚುನಾವಣೆಗೆ ನಾಳೆ( ಮಾರ್ಚ್ 16) ಮಧ್ಯಾಹ್ನ ದಿನಾಂಕ ಘೋಷಣೆ ಮಾಡಲಾಗುವುದೆಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಹೊಸದಾಗಿ ಚುನಾಯಿತ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರೊಂದಿಗೆ ನಾಳೆ ಮಧ್ಯಾಹ್ನ 3 ಗಂಟೆಗೆ ದೆಹಲಿಯ ವಿಜ್ಞಾನ …

Read More »

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ’ ಬಿಗ್ ರಿಲೀಫ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ಅಪೆಕ್ಸ್ ಬ್ಯಾಂಕ್ ಸಾಲ ಮರುಪಾವತಿ ಮಾಡದೇ ವಂಚನೆ ಪ್ರಕರಣದಲ್ಲಿ ಬಿಗ್ ರಿಲೀಫ್ ನೀಡಿದೆ. ಅದೇ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸದಂತೆ ಹೈಕೋರ್ಟ್ ಸಿಐಡಿಗೆ ಸೂಚಿಸಿದೆ. ಇಂದು ಅಪೆಕ್ಸ್ ಸಹಕಾರಿ ಬ್ಯಾಂಕ್ ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ಎಸ್​ಪಿಪಿ ಬ್ಯಾತ ಎನ್ ಜಗದೀಶ್ ಅವರು ರಮೇಶ್ ಜಾರಕಿಹೊಳಿಯವರು ಸಿಐಡಿ ನೋಟಿಸ್ …

Read More »

ಪ್ರಧಾನಿ ಮೋದಿ ರೋಡ್ ಶೋ’ಗೆ ಅನುಮತಿ ನಿರಾಕರಣೆ

ಕೊಯಮತ್ತೂರು : ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶಿತ ರೋಡ್ ಶೋಗೆ ತಮಿಳುನಾಡಿನ ಕೊಯಮತ್ತೂರು ಆಡಳಿತ ಅನುಮತಿ ನಿರಾಕರಿಸಿದೆ. ಲೋಕಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು, ಮಾರ್ಚ್ 18 ರಂದು ಪ್ರಧಾನಿ ಮೋದಿಯವರ 3.6 ಕಿ.ಮೀ ಉದ್ದದ ರೋಡ್ ಶೋ ನಡೆಸಲು ಅನುಮತಿ ಕೋರಿ ಭಾರತೀಯ ಜನತಾ ಪಕ್ಷ ಗುರುವಾರ ಕೊಯಮತ್ತೂರು ನಗರ ಪೊಲೀಸರಿಗೆ ಜ್ಞಾಪಕ ಪತ್ರವನ್ನ ಸಲ್ಲಿಸಿತ್ತು. ಕೊಯಮತ್ತೂರು ಆಡಳಿತವು ವಿವಿಧ ಕಾರಣಗಳನ್ನ ನೀಡಿ ಅನುಮತಿ ನಿರಾಕರಿಸಿದೆ. ಮೂಲಗಳ ಪ್ರಕಾರ, ಅನುಮತಿ …

Read More »

ರಾಜ್ಯ ಸರ್ಕಾರದಿಂದ ಏ.1ರಿಂದ ಭಾನುವಾರವೂ ‘ಸಬ್ ರಿಜಿಸ್ಟ್ರಾರ್ ಕಚೇರಿ’ ತೆರೆಯಲು ಅಧಿಕೃತ ಆದೇಶ

ಬೆಂಗಳೂರು: ರಾಜ್ಯದಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ( sub-registrar’s office ) ಸಾರ್ವಜನಿಕರಿಗೆ ಮತ್ತಷ್ಟು ಜನಸ್ನೇಹಿ ಸೇವೆ ನೀಡಲು ಏಪ್ರಿಲ್.1ರಿಂದ ಭಾನುವಾರವೂ ಕಾರ್ಯನಿರ್ವಹಿಸುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ನೋಂದಣಿ ಮತ್ತು ಮುದ್ರಾಂಕದ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಉತ್ತಮ ಸೇವೆಯನ್ನು ನೀಡುವ ಹಾಗೂ ಆಡಳಿತ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕಾಗಿ ಪ್ರಾಯೋಗಿಕವಾಗಿ ಮೊದಲನೇ ಹಂತದಲ್ಲಿ ಮಾರ್ಚ್ 2024 …

Read More »

ಅಣ್ಣಾಮಲೈ ವಾರ್ನಿಂಗ್, ದಳಪತಿ ವಿಜಯ್‌ ಜೊತೆ ಏನಿದು ಕಿರಿಕ್?

ತಮಿಳುನಾಡು ರಾಜಕೀಯದಲ್ಲಿ ಅಣ್ಣಾಮಲೈ ಹವಾ ಬಲು ಜೋರಾಗಿದ್ದು, ಲೋಕಸಭೆಗೂ ಮೊದಲು ದಕ್ಷಿಣ ಭಾರತದ ಪ್ರಮುಖ ರಾಜ್ಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಗೆಲುವಿಗಾಗಿ ಎನ್‌ಡಿಎ & ಇಂಡಿಯಾ ಮೈತ್ರಿಕೂಟಗಳ ನಡುವೆ ತಿಕ್ಕಾಟ ಬಲು ಜೋರಾಗಿರುವ ಸಮಯದಲ್ಲೇ ನಟ ದಳಪತಿ ವಿಜಯ್ ಕೊಟ್ಟಿರುವ ಹೇಳಿಕೆ ಸಂಚಲನ ಸೃಷ್ಟಿ ಮಾಡಿದೆ.ಹಾಗೇ ವಿಜಯ್ ಅವರು ಕೊಟ್ಟಿದ್ದ ಹೇಳಿಕೆಗೆ ಈಗ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ ಅಣ್ಣಾಮಲೈ.2024ರ ಲೋಕಸಭೆ ಚುನಾವಣೆ ಅಖಾಡ ರಂಗೇರಿದ್ದು, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ …

Read More »

ST ವರ್ಗದವರಿಗೆ ಗುಡ್ ನ್ಯೂಸ್ 5 ಲಕ್ಷ ರೂ.ಗಳಷ್ಟು ಸಹಾಯಧನ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತ್ತಕೋತ್ತರ ಪದವಿ ಪಡೆದ ಪರಿಶಿಷ್ಠ ಪಂಗಡದ ನಿರುದ್ಯೋಗಿ ಯುವಕ, ಯುವತಿಯರು ಜಿಲ್ಲಾ ಅಥವಾ ತಾಲ್ಲೂಕು ಮಟ್ಟದಲ್ಲಿ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮ ಕ್ಷೇತ್ರಗಳಲ್ಲಿ ಉದ್ದಿಮೆ ಸ್ಥಾಪಿಸಲು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ಯುಟ್ಯೂಬ್ ಚಾನೆಲ್, ಸೋಶಿಯಲ್ …

Read More »