Breaking News
Home / ರಾಷ್ಟ್ರೀಯ (page 21)

ರಾಷ್ಟ್ರೀಯ

ಪ್ರಧಾನಿ ಮೋದಿಯದ್ದು ಸುಳ್ಳಿನ ಪಿಕ್ಚರ್ ಬಾಕಿ ಇರಬಹುದು

ಮೈಸೂರು, ಏಪ್ರಿಲ್ 1: ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರಿನಲ್ಲಿ (Mysuru) ತಿರುಗೇಟು ನೀಡಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಆಗಿದ್ದರೆ ತಾನೇ ಟ್ರೇಲರ್. ಅವರದ್ದು (ಮೋದಿ) ಸುಳ್ಳಿನ ಪಿಕ್ಚರ್ ಬಾಕಿ ಇರಬಹುದು ಎಂದು ವ್ಯಂಗ್ಯವಾಡಿದರು. ಬಿಜೆಪಿ 400 ಸೀಟ್ ಗೆಲ್ಲಬೇಕು ಎಂಬ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಚುನಾವಣೆಯಲ್ಲಿ ಬಿಜೆಪಿ 200 ಸೀಟ್​ ಗೆಲ್ಲುವುದು …

Read More »

ಲೋಕಸಭಾ ಚುನಾವಣೆ ಹೊತ್ತಲ್ಲೇ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸಂಕಷ್ಟ

ಚಾಮರಾನಗರ, (ಏಪ್ರಿಲ್ 01): ಈ ಬಾರಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರವನ್ನು ಗೆಲ್ಲಲು ಖುದ್ದು ಸಿಎಂ ಸಿದ್ದರಾಮಯ್ಯ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಹೀಗಾಗಿ ಪುತ್ರ ಯತೀಂದ್ರಗೂ (Yathindra Siddaramaiah )ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಿಳಿಯುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಯತೀಂದ್ರ ಅವರು ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ನೇಹಿತ ಸುನೀಲ್ ಬೊಸ್ ಗೆಲುವಿಗಾಗಿ ಹಗಲಿರುಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಟ ನಡೆಸಿದ್ದಾರೆ. ಇದರ ಮಧ್ಯೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ …

Read More »

ಕರ್ನಾಟಕದ ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ‘ಅಸಮಾಧಾನ’ದ ಕಂಟಕ

ಬೆಂಗಳೂರು, ಏ.1: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Lok Sabha Elections) ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ವಿಧಾನಸಭೆ ಚುನಾವಣೆಯಲ್ಲಾದ ಹೀನಾಯ ಸೋಲಿನ ಕಹಿಯನ್ನು ಮರೆಯಲು ಬಿಜೆಪಿ (BJP) ಮುಂದಾಗಿದೆ. ಅಲ್ಲದೆ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಎಲ್ಲಾ 28 ಕ್ಷೇತ್ರಗಳನ್ನು ಗೆದ್ದುಕೊಳ್ಳುವ ಟಾರ್ಗೆಟ್ ಇಟ್ಟುಕೊಂಡಿದೆ. ಆದರೆ, ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಕಷ್ಟ ಎಂಬ ಮಾಹಿತಿ ಅರಿತ ಬಿಜೆಪಿ ಚಾಣಕ್ಯ ಎಂದು ಕರೆಯಲ್ಪಡುವ ಕೇಂದ್ರ ಗೃಹ ಸಚಿವಅಮಿತ್ …

Read More »

ಮಗುವನ್ನ ಮಡಿಲಲ್ಲಿ ಮಲಗಿಸಿಕೊಂಡು ಭಿಕ್ಷಾಟನೆ ಮಾಡ್ತಿದ್ದ ತಾಯಿ-ಮಗುವಿನ ರಕ್ಷಣೆ

ಬೆಂಗಳೂರು ಗ್ರಾಮಾಂತರ, ಏ.01: ನಗರದ ಹೊರವಲಯದ ಆನೇಕಲ್(Anekal) ಪಟ್ಟಣದ ಶನಿಮಹಾತ್ಮ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಕಳೆದೊಂದು ವರ್ಷದಿಂದರಾಯಚೂರುಮೂಲದ ಮಹಿಳೆ ಮಗು ಹಿಡಿದುಕೊಂಡು ಭಿಕ್ಷೆ ಬೇಡುತ್ತಿರುವ ಬಗ್ಗೆ ಸ್ಥಳೀಯರು ಡಿಸಿಪಿಓಗೆ ದೂರು ನೀಡಿದ್ದರು. ನಂತರ ನಾಲ್ಕೈದು ಬಾರಿ ಅಧಿಕಾರಿಗಳು ಭಿಕ್ಷೆ ಬೇಡದಂತೆ ಎಚ್ಚರಿಕೆಯನ್ನು ಕೂಡ ನೀಡಿದ್ದರು. ಆದರೆ, ಮತ್ತೆ ದೇವಸ್ಥಾನದ ಮುಂಭಾಗದಲ್ಲಿ ಭಿಕ್ಷೆ ಬೇಡುತ್ತಿರುವ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆಶಾ ನೇತೃತ್ವದ ತಂಡ ದಾಳಿ ಮಾಡಿ, ಇಬ್ಬರನ್ನು ರಕ್ಷಿಸಿದ್ದಾರೆ. …

Read More »

ಏಪ್ರಿಲ್ 8ರಂದು ಸೂರ್ಯಗ್ರಹಣ; ಈ ಪ್ರದೇಶದಲ್ಲಿ ಶಾಲೆಗಳಿಗೆ ರಜೆ ಘೋಷಣೆ!

ಏಪ್ರಿಲ್ 8ರಂದು ಸೂರ್ಯಗ್ರಹಣ (Solar Eclipse) ಸಂಭವಿಸಲಿದೆ. ಈ ಖಗೋಳ ವಿಸ್ಮಯ ಉತ್ತರ ಅಮೆರಿಕಾದಾದ್ಯಂತ ಗೋಚರಿಸುತ್ತದೆ. ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋಗುವಾಗ ಸೂರ್ಯಗ್ರಹಣ ಸಂಭವಿಸಲಿದ್ದು, ಭಾಗಶಃ ಸೌರ ಗ್ರಹಣವು ಸುತ್ತಮುತ್ತಲಿನ ಸಾವಿರಾರು ಕಿಲೋ ಮೀಟರ್ ಅಗಲದ ಪ್ರದೇಶದಲ್ಲಿ ಗೋಚರಿಸಲಿದೆ. ಏಪ್ರಿಲ್ 8ರಂದು ಸಂಭವಿಸಲಿರುವ ಸೂರ್ಯಗ್ರಹಣ ವೀಕ್ಷಿಸಲು ಲಕ್ಷಾಂತರ ಜನ ನಯಾಗರಕ್ಕೆ (Niagara) ಬರುವ ಹಿನ್ನೆಲೆ ನಯಾಗರದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ತುರ್ತು ಪರಿಸ್ಥಿತಿ ಘೋಷಣೆ ಕೆನಡಾ ದೇಶದ …

Read More »

30ಕ್ಕೂ ಹೆಚ್ಚು ನಾಯಕರು ನಾಳೆ ಕಾಂಗ್ರೆಸ್ ಸೇರ್ಪಡೆ

ಚಾಮರಾಜನಗರ- ಇಲ್ಲಿನ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಪುತ್ರ ಹಾಗೂ ಸಹೋದರರು ಸೇರಿದಂತೆ 30ಕ್ಕೂ ಹೆಚ್ಚು ಪ್ರಮುಖ ನಾಯಕರು ನಾಳೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿಕೊಳ್ಳಲೇಬೇಕು ಎಂದು ಹಠಕ್ಕೆ ಬಿದ್ದಿರುವ ಪಕ್ಷದ ಮುಖಂಡರು ಆಪರೇಷನ್ ಹಸ್ತಕ್ಕೆ ಕೈ ಹಾಕಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಯಡಿಯೂರಪ್ಪ ಅವರ ಆಪ್ತರನ್ನು ಇತ್ತೀಚೆಗೆ ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲಾಗಿತ್ತು. ಈಗ ಚಾಮರಾಜನಗರದಲ್ಲೂ ಅದೇ ರೀತಿಯ ಕಾರ್ಯಾಚರಣೆಗಳು ನಡೆದಿದ್ದು, 30ಕ್ಕೂ ಹೆಚ್ಚು …

Read More »

ಇಷ್ಟಾರ್ಥಸಿದ್ಧಿಯ ಚಾಂಗದೇವನ ಯಮನೂರು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಭೂಮಿ! ಸ್ಥಳ ಮಹಾತ್ಮೆ ಏನು?

12 ನೇ ಶತಮಾನದಲ್ಲಿ ಜೀವಿಸಿದ್ದ ಚಾಂಗದೇವ ಮುಸ್ಲಿಂ ಆಗಿದ್ದರೂ ಆತನಿಗೆ ಇಲ್ಲಿ ದೇವಸ್ಥಾನ ನಿರ್ಮಿಸಿದ್ದು ಭಾವೈಕ್ಯತೆಯ ಸಂಕೇತವೇ. ಒಂದು ಕಡೆ ಆತನಿಗೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದರೆ, ಜಾತ್ರೆಯ ಎರಡನೇ ದಿನ ಅದೇ ಚಾಂಗದೇವನ ಹೆಸರಿನಲ್ಲಿ ಇದೇ ದೇವಸ್ಥಾನದ ಮುಂದೆ ಉರುಸು ಕೂಡ ನೆರವೇರುತ್ತೆ. ಇನ್ನು ಈ ಚಾಂಗದೇವನಿಗೆ ಇಷ್ಟಾರ್ಥಸಿದ್ಧಿ ದೇವ ಅಂತಾನೂ ಕರೆಯಲಾಗುತ್ತೆ.ಅದೊಂದು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಸ್ಥಳ. ಭಾವೈಕ್ಯತೆಯನ್ನು ನಾಡಿಗೆ ಸಾರಿ ಹೇಳಿದ ಪುಣ್ಯ ಭೂಮಿಯದು …

Read More »

15 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ: 100 ಯುನಿಟ್​​ಗಿಂತ ಹೆಚ್ಚು ಬಳಸುವವರಿಗೆ ಲಾಭ

ಬೆಂಗಳೂರು, ಏಪ್ರಿಲ್​ 01: ಲೋಕಸಭೆ ಚುನಾವಣೆ (Lok Sabha Election) ಸಮಯದಲ್ಲಿ ಎಲ್ಲ ವರ್ಗದ ವಿದ್ಯುತ್​ ಬಳಕೆದಾರರಿಗೆ ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗವು (KERC) ಗುಡ್​ ನ್ಯೂಸ್​ ನೀಡಿದೆ. ಗೃಹ ಬಳಕೆಯಲ್ಲಿ 100 ಯುನಿಟ್​​ಗಿಂತ ಹೆಚ್ಚು ವಿದ್ಯುತ್​​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ (Electricity bill reduce) ಮಾಡಲಾಗಿದೆ. ಈ ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ. 2024-25ನೇ ಸಾಲಿಗೆ ಅನ್ವಯವಾಗುವಂತೆ …

Read More »

ರಾಹುಲ್ ಗಾಂಧಿಗೆ ಲೋಕಸಭೆ ಚುನಾವಣೆ ಸೋಲಿ‌ನ‌ ಕನಸು ಬೀಳುತ್ತಿದೆ: ಪ್ರಹ್ಲಾದ್​ ಜೋಶಿ

ಬಿಜೆಪಿ, ಆರ್​​ಎಸ್​ಎಸ್​ ವಿಷವಿದ್ದಂತೆ, ಅದರ ರುಚಿ ನೋಡಬೇಡಿ ಎಂಬ ಕಾಂಗ್ರೆಸ್​ ಮುಖಂಡ ಮಲ್ಲಿಕಾರ್ಜುನ್​ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಮಲ್ಲಿಕಾರ್ಜುನ ಖರ್ಗೆ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ ಎಂದು ಹರಿಹಾಯ್ದರು. ಹುಬ್ಬಳ್ಳಿ, ಏಪ್ರಿಲ್​ 01: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಲೋಕಸಭೆ ಚುನಾವಣೆ (Lok Sabha Election) ಸೋಲಿ‌ನ‌ ಕನಸು ಬೀಳುತ್ತಿದೆ ಎಂದು ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ …

Read More »

ಉದ್ಯೋಗ ವಾರ್ತೆ : ʻPDOʼ ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ.   ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದಾರೆ. …

Read More »