Breaking News

ರಾಷ್ಟ್ರೀಯ

ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!!

ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!! ಗಣೇಶೋತ್ಸವ ಕೇವಲ ಎಂಟು ದಿನಗಳಲ್ಲಿ ಬರಲಿದ್ದು, ಬೆಳಗಾವಿ ನಗರದ ಪಂಗುಲ್ ಗಲ್ಲಿ ಪ್ರದೇಶದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ವ್ಯಾಪಾರಿಗಳು ಇಲ್ಲಿ ರಸ್ತೆಯಲ್ಲಿ ಅಂಗಡಿಗಳನ್ನು ಇಟ್ಟಿದರಿಂದ್ದ, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಹರ ಸಾಹಸ ಪಡುತ್ತಿದ್ದಾರೆ. ನಾಲ್ಕು ದಿನಗಳ ಮಳೆಯ ನಂತರ ಇಂದು, ಸಾರ್ವಜನಿಕರು ಖರೀದಿ ಮಾಡಲು ಮಾರುಕಟ್ಟೆಗಳತ್ತ ಮುಖ ಮಾಡಿದ್ದಾರೆ. ಬೆಳಗಾವಿ ಮಹಾನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾದ …

Read More »

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

ಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಪ್ರವಾಸಿ ಮಂದಿರದ ವೃತ್ತದ ಬಳಿ ಬುಧವಾರ (ಇಂದು) ಬೆಳಗಿನ ಜಾವ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ವಿದ್ಯಾರ್ಥಿಗಳಾದ ಆದಿತ್ಯ (21) ಮತ್ತು ಸಂದೀಪ್‌ (21) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರು ದಾವಣಗೆರೆ ಜಿಲ್ಲೆ ಸುರಹೊನ್ನೆ ಹಾಗೂ ಉಡುಪಿ ಜಿಲ್ಲೆಯ ಮೂಲದವರಾಗಿದ್ದರು. ಸಿಮ್ಸ್ ಮೆಡಿಕಲ್ …

Read More »

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ ಪಟ್ಟಣದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿದ್ದು, 200 ಕುಟುಂಬಗಳು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿವೆ. ಈ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕಾಲಿಗೆ ಬಿದ್ದು ಓರ್ವ ಮಹಿಳೆ ಅಳಲು ತೋಡಿಕೊಂಡರು. ಉಕ್ಕಿ ಹರಿಯುತ್ತಿರುವ ನದಿಗಳು: ಸತತ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸಪ್ತನದಿಗಳು ತುಂಬಿ ಹರಿಯುತ್ತಿವೆ. ಆ ಕಡೆ ಕೃಷ್ಣೆ ಆರ್ಭಟಿಸುತ್ತಿದ್ದರೆ, ಇತ್ತ ಘಟಪ್ರಭೆ …

Read More »

ನಿರಂತರ ಮಳೆಗೆ ಧಾರವಾಡದಲ್ಲಿ ಮೊಳಕೆಯೊಡೆಯುತ್ತಿವೆ ಹೆಸರು ಬೆಳೆ.. ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಮಾಡಿದ ವರುಣರಾಯ.

ನಿರಂತರ ಮಳೆಗೆ ಧಾರವಾಡದಲ್ಲಿ ಮೊಳಕೆಯೊಡೆಯುತ್ತಿವೆ ಹೆಸರು ಬೆಳೆ.. ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಮಾಡಿದ ವರುಣರಾಯ. : ಧಾರವಾಡ ಜಿಲ್ಲೆಯಲ್ಲಿ ಸದ್ಯ ಭಾಗಶಃ ಹೆಸರು ಬೆಳೆ ಈಗ ಕಟಾವಿಗೆ ಬಂದಿದೆ. ಆದರೆ, ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅನ್ನದಾತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾದ ಪರಿಸ್ಥಿತಿ ನಿರ್ಮಾಣವಾಗಿದೆ.  ಹೌದು! ಧಾರವಾಡ ಜಿಲ್ಲೆಯಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗೆ ಬಂದ ಹೆಸರು ಬೆಳೆ …

Read More »

ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಹೆಚ್ಚಳ: ಎರಡೇ ವರ್ಷದಲ್ಲಿ ಶೇ 26 ರಷ್ಟು ಹೆಚ್ಚಾದ ಪೋಕ್ಸೊ ಕೇಸ್

ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಹೆಚ್ಚಳ: ಎರಡೇ ವರ್ಷದಲ್ಲಿ ಶೇ 26 ರಷ್ಟು ಹೆಚ್ಚಾದ ಪೋಕ್ಸೊ ಕೇಸ್   ಬೆಂಗಳೂರು, ಆಗಸ್ಟ್ 19: ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ಪ್ರತಿಪಕ್ಷಗಳ ಆರೋಪ ಒಂದೆಡೆಯಾದರೆ, ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿರುವುದು ಗೊತ್ತಾಗಿದೆ. ಕೇವಲ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಪೋಕ್ಸೊ (Pocso) (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) …

Read More »

ರೈತರ ಜೊತೆಗೆ ಬಿಜೆಪಿ ಇದ್ದು, ರೈತರ ಸಲುವಾಗಿ ಹೋರಾಟ ನಡೆಸಲಿದೆ: ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ*

ರಾಜ್ಯದಲ್ಲಿ ಸುರಿದ ಬಾರಿ ಮಳೆಯಿಂದ ಆಗಿರುವ ಬೆಳೆಹಾನಿಯ ಕುರಿತು ತಂಡ ರಚನೆ ಮಾಡಿ ಸರ್ವೇ ಆಗಬೇಕಿದೆ. ರಾಜ್ಯ ಸರ್ಕಾರ ತಕ್ಷಣ ಸರ್ವೇ ಮಾಡಿ ಪರಿಹಾರ ಕೊಡುವ ಕೆಲಸ ಮಾಡಬೇಕಿದೆ. ಮೊದಲ ಹಂತದಲ್ಲಿ ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಬೇಕು. ಕಳೆದೊಂದು ವಾರದಿಂದ ಮಳೆಯಾಗುತ್ತಿದ್ದರೂ ಸರ್ಕಾರ ಸಿಎಂ, ಸಚಿವರು ಹಾನಿ ಪ್ರದೇಶಕ್ಕೆ ಭೇಟಿ ನೀಡಿಲ್ಲಾ ಎಂದು ಬಿಜೆಪಿ ರಾಜ್ಯ ರೈತ ಮೊರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದರು. …

Read More »

ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಆರೋಪದಡಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ವಿರುದ್ಧ ಏರ್ಪೋರ್ಟ್​ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು : ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಜೀವ ಬೆದರಿಕೆಯೊಡ್ಡಿದ ಆರೋಪದಡಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಶ್ರೀಭಗವಾನ್ ಶರ್ಮಾ ಅಲಿಯಾಸ್ ಗುಡ್ಡು ಪಂಡಿತ್ ಎಂಬುವರು ತನ್ನನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದು, ಖಾಸಗಿ ಹೋಟಲ್​ನಲ್ಲಿ ಅತ್ಯಾಚಾರ ಎಸಗಿ, ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆಗಸ್ಟ್ 17 …

Read More »

ಯೋಗೀಶ್‌ಗೌಡ ಕೊಲೆ ಪ್ರಕರಣ : ಆರೋಪಿ ಅಶ್ವತ್ಥ್‌ ಜಾಮೀನು ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿಯ ಜಿಲ್ಲಾ ಪಂಚಾಯತ್​ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣದ ಆರೋಪಿಯಾಗಿದ್ದ ಅಶ್ವತ್ಥ್​ ಅವರ ಜಾಮೀನನ್ನು ಹೈಕೋರ್ಟ್​ ತಾತ್ಕಾಲಿಕವಾಗಿ ರದ್ದುಪಡಿಸಿ ಆದೇಶ ಹೊರಡಿಸಿದೆ. ಬಿಜೆಪಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಒಂಬತ್ತನೇ ಆರೋಪಿ ಅಶ್ವತ್ಥ್‌ ಎಂಬುವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಐ. ಅರುಣ್‌ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಪ್ರಕರಣ ಸಂಬಂಧ ಇತರೆ ಸಾಕ್ಷಿಗಳ …

Read More »

ಅಮೆರಿಕದ ಐಸಿಎಸ್ ಇಂಟರ್‌ನ್ಯಾಷನಲ್‌ನಿಂದ ಉಡುಪಿಯ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್​ಗೆ ಗೌರವ ಫೆಲೋಶಿಪ್‌

ಉಡುಪಿ: ವಿಶ್ವ ಛಾಯಾಗ್ರಹಣ ದಿನದಂದು ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಇಮೇಜ್‌ ಕಾಲಿಗ್‌ ಸೊಸೈಟಿ ಇಂಟರ್‌ನ್ಯಾಷನಲ್‌ (ICS) ವತಿಯಿಂದ ಅತ್ಯುನ್ನತ ಗೌರವಗಳಲ್ಲಿ ಒಂದಾದ ಆನರರಿ ಫೆಲೋಶಿಪ್‌ (Hon.FICS) ಅನ್ನು ಪ್ರದಾನ ಮಾಡಲಾಗಿದೆ. ಟೋನಿ ಲೀ ಕಿಮ್ ಥುವಾನ್ APSA, Hon.EFIAP, ಕು. ಸಾರಾ ತೈ ಮೇ ಲಿನ್ ARPS ಹಾಗೂ ICS ಗೌರವ ಸಮಿತಿ ಅವರ ನೇತೃತ್ವದಲ್ಲಿ ನೀಡಲಾದ ಈ ಪ್ರಶಸ್ತಿ, ಛಾಯಾಗ್ರಹಣ ಕಲೆ ಹಾಗೂ ಸಂಸ್ಕೃತಿಯ …

Read More »

ಸಂಬಳದ ನಕಲಿ ದಾಖಲೆ ಸಲ್ಲಿಸಿ ಬ್ಯಾಂಕ್‌ನಿಂದ ₹23 ಲಕ್ಷ ಸಾಲ ಪಡೆದ ವಂಚಕರು

ಮೈಸೂರು: ನಕಲಿ ದಾಖಲೆಗಳನ್ನು ಸಲ್ಲಿಸಿ ಮೈಸೂರಿನ ಬೃಂದಾವನ ಬಡಾವಣೆಯಲ್ಲಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ(ಎಸ್‌ಬಿಐ)ಗೆ​ 23.16 ಲಕ್ಷ ರೂ. ವಂಚಿಸಲಾಗಿದೆ. ಈ ಕುರಿತು ಬ್ಯಾಂಕ್ ಮ್ಯಾನೇಜರ್​​​ ಪ್ರತಿಭಾ ಅವರು ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ವಿ.ವಿ.ಪುರಂ ಪೊಲೀಸ್​​​​​ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಸಂಬಳ​​​​​​ ಸೇರಿದಂತೆ ಇತರೆ ನಕಲಿ ದಾಖಲಾತಿಗಳನ್ನು ಸಲ್ಲಿಸಿ ಬ್ಯಾಂಕ್‌ನಿಂದ ಮೂವರು ಸಾಲ ಪಡೆದಿದ್ದರು. ದಾಖಲಾತಿ ಪರಿಶೀಲನೆಯ ಸಂದರ್ಭದಲ್ಲಿ ದಾಖಲೆಗಳು ನಕಲಿ ಎಂದು ಗೊತ್ತಾಗಿದೆ ಎಂದು ಮ್ಯಾನೇಜರ್​ …

Read More »