Breaking News

ರಾಷ್ಟ್ರೀಯ

ಬಿಜೆಪಿ-ಜೆಡಿಎಸ್ ಟಿಕೆಟ್ ಹಂಚಿಕೆ ಇನ್ನೂ ಅಂತಿಮವಾಗಿಲ್ಲ:ಜೋಶಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ-ಜೆಡಿಎಸ್ ಮಧ್ಯೆ ಟಿಕೆಟ್ ಹಂಚಿಕೆ ಕುರಿತು ಮಾತುಕತೆ ಇನ್ನೂ ಅಂತಿಮವಾಗಿಲ್ಲ, ಸೀಟು ಹಂಚಿಕೆ ಸರಿಯಾಗಿಯೇ ಆಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ, ಮಂಡ್ಯ ಸಂಸದೆ ಸುಮಲತಾ ಬಿಜೆಪಿಯಲ್ಲಿಯೇ ಇರುತ್ತಾರೆ ಎಂದರು.

Read More »

ಗೂಂಡಾಗಿರಿ ಮಾಡುವ ಜೊತೆಗೆ ಸ್ವಲ್ಪ ಅಭಿವೃದ್ಧಿಯನ್ನು ಮಾಡಿದ್ದರೆ ಈಗ ಊರಿಗಿಂತ ಮುಂಚೆ ಮತದಾರರಿಗೆ ಕುಕ್ಕರ್ ಹಂಚುವ ಪ್ರಮೇಯ ಬರುತ್ತಿರಲಿಲ್ಲಾ: ಬಿಜೆಪಿ

ಬೆಂಗಳೂರು: ಲೋಕಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ವಿರುದ್ಧ ಮತದಾರರಿಗೆ ಕುಕ್ಕರ್ ಆಮಿಷದ ಆರೋಪ ಕೇಳಿಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಬಿಜೆಪಿ, ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದ ಬ್ರದರ್ಸ್ ಗಳ ಬ್ರದರ್ ರಿಂದ ಕುಕ್ಕರ್ ಹಂಚಲಾಗುತ್ತಿದೆ. ದೇಶ ವಿಭಜನೆ ಮಾಡುವ ಸಂಚು ರೂಪಿಸಿದ್ದ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅವರಿಗೆ ಚುನಾವಣೆ ಘೋಷಣೆ ಮುನ್ನವೇ …

Read More »

ಲೋಕಸಭೆ ಚುನಾವಣೆಗೆ ಮುನ್ನ ‘ಹಿಂದಿನ ತಪ್ಪುಗಳನ್ನು’ ಸರಿಪಡಿಸಿಕೊಳ್ಳಲು ರಾಜ್ಯ ಬಿಜೆಪಿ ಮುಂದು!

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ನಾಯಕರು ಶುಕ್ರವಾರ ಚಿಂತನ-ಮಂಥನ ನಡೆಸಿದ್ದು, ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಮಾಡಿದ ತಪ್ಪುಗಳು ಮರುಕಳಿಸದಂತೆ ನಿರ್ಧರಿಸಿದ್ದಾರೆ, ವಿಶೇಷವಾಗಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಕೋಟಾದ ಸೂಕ್ಷ್ಮ ವಿಷಯದ ಬಗ್ಗೆ ಕಾಳಜಿ ವಹಿಸಲು ನಿರ್ಧರಿಸಿದ್ದಾರೆ.   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಈ ಸಮುದಾಯಗಳ ಕೋಟಾವನ್ನು ವರ್ಗೀಕರಿಸಿತ್ತು, ಆದರೆ ಕೇಸರಿ ಪಕ್ಷವು ಕೇವಲ 66 ವಿಧಾನಸಭಾ ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಜೆಡಿಎಸ್ …

Read More »

ದೆಹಲಿಯಲ್ಲಿ ಜಂಟಿಯಾಗಿ ಕಣಕ್ಕೆ ಇಳಿಯಲಿದೆ ಆಪ್, ಕಾಂಗ್ರೆಸ್

ಹೊಸದಿಲ್ಲಿ: ಇಂಡಿಯಾ ಒಕ್ಕೂಟದ (INDIA bloc) ಆಮ್ ಆದ್ಮಿ ಪಕ್ಷ (AAP) ಮತ್ತು ಕಾಂಗ್ರೆಸ್ (congress) ನಡುವೆ ದೆಹಲಿಯ (delhi) ಲೋಕಸಭಾ (loksabha) ಸ್ಥಾನಗಳ ಸೀಟು ಹಂಚಿಕೆ ಒಪ್ಪಂದ ಅಂತಿಮಗೊಳಿಸಲಾಗಿದೆ. ಆಪ್ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಈ ಬಗ್ಗೆ ಎರಡೂ ಪಕ್ಷಗಳು ಜಂಟಿಯಾಗಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಿವೆ. ಎಎಪಿ ಅಭ್ಯರ್ಥಿಗಳು ಹೊಸದಿಲ್ಲಿ (New Delhi), ದಕ್ಷಿಣ ದೆಹಲಿ (South Delhi), ಪಶ್ಚಿಮ …

Read More »

ಇಂಡಿಯಾ ಮೈತ್ರಿಕೂಟ ಹೊಸ ಬಾಟಲಿಯಲ್ಲಿನ ಹಳೆಯ ವೈನ್: ಮೋದಿ ವ್ಯಂಗ್ಯ

ಇಂಡಿಯಾ ಮೈತ್ರಿಕೂಟ ಹೊಸ ಬಾಟಲಿಯಲ್ಲಿನ ಹಳೆಯ ವೈನ್: ಮೋದಿ ವ್ಯಂಗ್ಯ ಲಕ್ನೋ : ತಮ್ಮ ವಿರುದ್ಧ ಒಗ್ಗೂಡುತ್ತಿರುವ ಇಂಡಿಯಾ ಮೈತ್ರಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಅದೊಂದು ಹೊಸ ಬಾಟಲಿಯಲ್ಲಿರುವ ಹಳೆಯ ವೈನ್ ಎಂದು ವ್ಯಂಗ್ಯವಾಡಿದ್ದಾರೆ. ಶುಕ್ರವಾರ ವಾರಣಾಸಿಯಲ್ಲಿ ಮಾತನಾಡಿರುವ ಮೋದಿ, ಅವರು ಪ್ರತಿ ಚುನಾವಣೆಗೂ ಮುನ್ನ ಒಗ್ಗೂಡುತ್ತಾರೆ ಮತ್ತು ಗೆಲುವು ಪಡೆಯುವಲ್ಲಿ ವಿಫಲವಾದಾಗ ಪರಸ್ಪರ ನಿಂದಿಸಿಕೊಳ್ಳುತ್ತಾರೆ. ಅವರು ಒಂದು ರೀತಿ ಹೊಸ ಬಾಟಲಿಯಲ್ಲಿರುವ ಹಳೆಯ ವೈನ್ʼನಂತೆ …

Read More »

ಸಚಿವ ಸಂತೋಷ್‌ ಲಾಡ್ ಹುಟ್ಟುಹಬ್ಬ: ವಿಜಯ ಪ್ರಕಾಶ್‌, ಸಲ್ಮಾನ್ ಅಲಿ ಗಾಯನ

ಹೊಸಪೇಟೆ (ವಿಜಯನಗರ): ಬುದ್ಧ, ಬಸವ ತತ್ವದ ಅನುಯಾಯಿಯೂ ಆಗಿರುವ ಕಾರ್ಮಿಕ ಸಚಿವ ಸಂತೋಷ್‌ ಲಾಡ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸಂತೋಷ್‌ ಲಾಡ್ ಫೌಂಡೇಶನ್ ವತಿಯಿಂದ ಕಾಯಕಯೋಗಿ ಬಸವಣ್ಣ ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಕುರಿತ ಗೀತೆಗಳ ಬಿಡುಗಡೆ ಸಮಾರಂಭ ಫೆ.27ರಂದು ನಗರದಲ್ಲಿ ನಡೆಯಲಿದೆ.   ‘ನಗರದ ಪುನೀತ್‌ ರಾಜ್‌ಕುಮಾರ್ ಮೈದಾನದಲ್ಲಿ ಅಂದು ಸಂಜೆ 4ರ ಬಳಿಕ ‘ಅಭಿಮಾನ ಸಮರ್ಪಣೆ’ ಕಾರ್ಯಕ್ರಮ ನಡೆಯಲಿದೆ. ಚಲನಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್‌ ರಚನೆಯ ಈ ಗೀತೆಗಳ …

Read More »

ಮಂಡ್ಯ ಬಿಡುವ ಮಾತೇ ಇಲ್ಲ;ಸುಮಲತಾ

ಮಂಡ್ಯ: ಇಂಡಿಯಾ ಲೋಕಸಭಾ ಚುನಾವಣೆಗೆ ಮುನ್ನ ಮಂಡ್ಯ ಭಾರಿ ಸದ್ದು ಮಾಡುತ್ತಿದೆ. ಹಾಲಿ ಸಂಸದೆ ಸುಮಲತಾ ಅವರ ಕಾರಣಕ್ಕಾಗಿ ಮಂಡ್ಯ ಲೋಕಸಭಾ ಕ್ಷೇತ್ರ ಸದ್ಯ ಗಮನ ಸೆಳೆಯುತ್ತಿದ್ದು, ಯಾರೆಲ್ಲಾ ಸ್ಪರ್ಧೆ ಮಾಡುತ್ತಾರೆ ಎನ್ನುವ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಜೆಡಿಎಸ್‌ ಎನ್‌ಡಿಎ ಒಕ್ಕೂಟ ಸೇರಿಕೊಂಡಿದ್ದು ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಮಂಡ್ಯದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದು, ಮಂಡ್ಯ ಸೀಟಿಗಾಗಿ ಬೇಡಿಕೆ ಇಟ್ಟಿದೆ ಎನ್ನುವ ವದಂತಿಗಳ ನಡುವೆ, ಬಿಜೆಪಿಗೆ ಬೆಂಬಲ ನೀಡಿರುವ ಸುಮಲತಾ …

Read More »

ಪ್ರತಿ ಜಿಲ್ಲೆಯ ಒಂದು ವಸತಿ ಶಾಲೆಗೆ ಸಿಬಿಎಸ್ ಸಿ ಪಠ್ಯಕ್ರಮ: ಮಹದೇವಪ್ಪ

ಬೆಂಗಳೂರು: ರಾಜ್ಯದ ವಸತಿ ಶಾಲೆಗಳಲ್ಲಿ (Residential School) ಸಿಬಿಎಸ್ ಸಿ (cbsc) ಪಠ್ಯಕ್ರಮ ಅಳವಡಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ (Social welfare department) ಸಚಿವ ಹೆಚ್‌.ಸಿ.ಮಹದೇವಪ್ಪ (H.C.Mahadevappa) ಹೇಳಿದರು.   ವಿಧಾನ ಪರಿಷತ್ (Legislative Council) ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ (congres) ಅನಿಲ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ವಸತಿ ಶಾಲೆಗಳಲ್ಲಿ ಸದ್ಯ ರಾಜ್ಯ ಪಠ್ಯಕ್ರಮ ಇದೆ. ಪ್ರತಿ …

Read More »

ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮತ್ತು‌ ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಬೆಂಗಳೂರು: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ನೀಡಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್‌ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದೆ. ಅಲ್ಲದೆ, ಮಾರ್ಚ್ 28ಕ್ಕೆ ಸಿದ್ದರಾಮಯ್ಯ, ಡಿಕೆಶಿ ಹಾಗೂ ರಾಹುಲ್ ಗಾಂಧಿ ಕೋರ್ಟ್ ಗೆ ಖುದ್ದು ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ.   ವಿಧಾನಸಭೆಯ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಡಬ್ಬಲ್ ಎಂಜಿನ್ ಸರ್ಕಾರ ಹಾಗೂ 40% ಸರ್ಕಾರ ಎಂದು …

Read More »

ಜನಾರ್ದನ ರೆಡ್ಡಿ ಬೆಂಬಲ ನಮಗೆ ಇದೆ: ಡಿಕೆಶಿ

ಬೆಂಗಳೂರು: ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಸೇರಿದಂತೆ ನಮ್ಮ 138 ಶಾಸಕರು ಒಂದಾಗಿದ್ದಾರೆ, ನಮ್ಮ ಮನೆಯನ್ನು ಭದ್ರವಾಗಿಟ್ಟುಕೊಳ್ಳುವುದು ಹೇಗೆ ಅಂತ ಗೊತ್ತು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಸುದ್ದಿಗಾರರೊಂದಿಗೆ ಮಾತಾಡಿದ ಅವರು, ರಾಜ್ಯಸಭಾ ಚುನಾವಣೆಗೆ ನಮ್ಮ ಪಕ್ಷ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿರೋಧ ಪಕ್ಷದವರು ಏನೆಲ್ಲ ಕಸರತ್ತು ನಡೆಸಿದ್ದಾರೆನ್ನುವುದರ ಮೇಲೂ ನಿಗಾ ಇಡಲಾಗಿದೆ. ಜನರ್ದನ ರೆಡ್ಡಿ ಬೆಂಬಲ ನಮಗಿದೆ ಎಂದು …

Read More »