Breaking News

ರಾಷ್ಟ್ರೀಯ

ಕಿರಾಣಿ ಅಂಗಡಿಯಲ್ಲಿ ಪತ್ನಿಗೆ ಐಸ್ ಕ್ಯಾಂಡಿ ಕೊಡಿಸಿದ ನಟ ಯಶ್

ಭಟ್ಕಳ ತಾಲೂಕಿನ ಶಿರಾಲಿಯ ಚಿತ್ರಾಪುರ ಮಠಕ್ಕೆ ರಾಕಿಂಗ್ ಸ್ಟಾರ್ ನಟ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ ನಟ ಯಶ್ ಮಠದ ಬೀದಿಯಲ್ಲಿರುವ ಕಿರಾಣಿ ಅಂಗಡಿಗೆ ತೆರಳಿ ಪತ್ನಿಗೆ ಐಸ್ಕ್ಯಾಂಡಿ ಕೊಡಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ನಟ ಯಶ್ ಸರಳತೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಿರಾಣಿ ಅಂಗಡಿಯಲ್ಲಿ ನಟ ಯಶ್ ತನ್ನ ಪತ್ನಿ ರಾಧಿಕಾ …

Read More »

ಕನ್ನಡ ನಾಮಫಲಕ ಅಳವಡಿಸಿಕೊಳ್ಳದ ಅಂಗಡಿಗಳಿಗೆ ಬೀಗ

ಬೆಂಗಳೂರು: ಮಳಿಗೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಸದ 18 ಉದ್ದಿಮೆಗಳನ್ನು ತಾತ್ಕಾಲಿಕವಾಗಿ ಬಿಬಿಎಂಪಿ ವತಿಯಿಂದ ಮುಚ್ಚಿಸಲಾಗಿದೆ. ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್‌ಗಳಲ್ಲಿ ಕನ್ನಡ ನಾಮಫಲಕ ಬಳಸದ ಅಂಗಡಿಗಳಿಗೆ ಬಿಬಿಎಂಪಿ ಪೂರ್ವ ವಲಯದ ಸಿಬ್ಬಂದಿ ಎಚ್ಚರಿಕೆ ನೀಡಿದರು. ಈಗಿರುವ ನಾಮಫಲಕಗಳಲ್ಲಿ ಇಂಗ್ಲಿಷ್‌ ಅಕ್ಷರಗಳನ್ನು ಮುಚ್ಚಿ, ಕನ್ನಡವನ್ನು ಚಿಕ್ಕದಾಗಿ ಕಾಣುವಂತೆ ಕೆಲವು ಮಾಡಿದ್ದಾರೆ. ಇದು ಸರಿಯಲ್ಲ. ಶೇ 60ರಷ್ಟು ಕನ್ನಡ ಇರಲೇಬೇಕು ಎಂದು ಮಳಿಗೆಯವರಿಗೆ ತಾಕೀತು ಮಾಡಿದರು. ವಲಯ …

Read More »

ಕಲ್ಲಂಗಡಿ ತಿನ್ನಲು ಅಂಗಡಿಗೆ ಬಂದ ಕಾಡಾನೆ,

ಆನೇಕಲ್, ಫೆ.17: ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗದಲ್ಲಿಕಾಡಾನೆಗಳ(Wild Elephant) ಹಾವಳಿ ಹೆಚ್ಚಾಗುತ್ತಿದೆ. ಇದೀಗ ಬೆಂಗಳೂರಿನ ಆನೇಕಲ್​ ತಾಲೂಕಿನ ಬಳಿ ಇರುವ ತಮಿಳುನಾಡಿಗೆ (Tamil Nadu) ಡೆಂಕಣಿಕೋಟೆ ಗ್ರಾಮಕ್ಕೆ ಒಂಟಿ ಸಲಗ ನುಗ್ಗಿದೆ. ಮುಂಜಾನೆ 5 ಗಂಟೆಯ ಸುಮಾರಿಗೆ ಗ್ರಾಮದ ಸುತ್ತಲೂ ಅಡ್ಡಾಡಿದ ಒಂಟಿ ಸಲಗ, ರಸ್ತೆ ಬದಿಯಲ್ಲಿ ಕಲ್ಲಂಗಡಿ ಅಂಗಡಿ ಬಳಿ ಹೋಗಿದೆ. ಈ ವೇಳೆ ಅಲ್ಲೇ ಗಾಢ ನಿದ್ರೆಗೆ ಜಾರಿದ್ದ ಅಂಗಡಿ ವ್ಯಾಪಾರಸ್ಥರಾದ ದಂಪತಿಗೆ ಇತರೆ ಗ್ರಾಮಸ್ಥರು ಬೊಬ್ಬೆ ಹಾಕಿ …

Read More »

ಅಭಿವೃದ್ಧಿ ಬೇಕಾ? ಧರ್ಮ ಪ್ರಚೋದನಾಕಾರಿ ಮಾತುಗಳು ಬೇಕಾ; ಇದನ್ನು ಜನರ ಮುಂದಿಡುತ್ತೇವೆ: ದಿನೇಶ್ ಗುಂಡೂರಾವ್

ಮಂಗಳೂರು, ಫೆ.17: ಅಭಿವೃದ್ಧಿ, ಶಾಂತಿ ನೆಮ್ಮದಿ ಬೇಕಾ ಅಥವಾ ಧರ್ಮ, ಜಾತಿ, ಸ್ವಾರ್ಥ ಪ್ರಚೋದನಾಕಾರಿ ಮಾತುಗಳು ಬೇಕಾ ಎಂದು ಮಂಗಳೂರಿಗರನ್ನು ಆರೋಗ್ಯ ಸಚಿವದಿನೇಶ್ ಗುಂಡೂರಾವ್(Dinesh Gundu Rao) ಕೇಳಿದರು. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಉಳಿದಿರುವಂತೆ ಬಿಜೆಪಿ ಹಾಗೂ ಹಿಂದುತ್ವದ ಭದ್ರಕೋಟೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ (Mangaluru) ಆಯೋಜಿಸಿದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಇಲ್ಲಿ ನಾವು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಆಗಲಿಲ್ಲ. ಇದನ್ನ ಒಪ್ಪಿಕೊಳ್ಳುತ್ತೇವೆ. ಆದರೆ …

Read More »

ಸಂಕಷ್ಟದಲ್ಲಿ ಬಸನಗೌಡ ಯತ್ನಾಳ್, ಸಕ್ಕರೆ ಕಾರ್ಖಾನೆಗೆ ನೀಡಿರುವ ನೋಟೀಸ್​ಗೆ 24 ಗಂಟೆಗಳಲ್ಲಿ ಉತ್ತರಿಸಲು ಸೂಚನೆ

ಕಲಬುರಗಿ: ದೃಶ್ಯಗಳಲ್ಲಿ ಕಾಣುತ್ತಿರೋದು ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿರುವ ಸಿದ್ಧಸಿರಿ ಸಕ್ಕರೆ ಕಾರ್ಖಾನೆ (Siddha Siri Ethanol and Power). ಬಿಜೆಪಿ ಫೈರ್ ಬ್ರ್ಯಾಂಡ್ ನಾಯಕನೆಂದು ಗುರುತಿಸಿಕೊಳ್ಳುವ ಮತ್ತುವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಇದರ ಮಾಲೀಕ. ಬಿಜೆಪಿ ನಾಯಕರು (BJP leaders) ಇವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಹಿಂಜರಿಯುವ ಸಂಗತಿ ನಮಗೆಲ್ಲ ಗೊತ್ತಿದೆ. ಆದರೆ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಇಲಾಖೆಯು ಪಾಟೀಲ್ ಮತ್ತು ಅವರ ಕಾರ್ಖಾನೆ …

Read More »

ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಬೆಳಗಾವಿಗೆ ವಿಶೇಷ ಕೊಡುಗೆ

ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಬೆಳಗಾವಿಗೆ ವಿಶೇಷ ಕೊಡುಗೆ ಬೆಳಗಾವಿಯಲ್ಲಿ ವಾಹನ ಸಂಚಾರ ದಟ್ಟಣೆ ನಿವಾರಿಸಲು 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ ಗ್ರಿನ್‌ ಸಿಗ್ನಲ್ ಕೊಟ್ಟ ಸಿಎಂ ಬೆಳಗಾವಿ: ಈ ಭಾರಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ 2024-25ರ ಕರ್ನಾಟಕ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ …

Read More »

ಇಂದು ‘ದೆಹಲಿ ವಿಧಾನಸಭೆ’ಯಲ್ಲಿ ‘ಸಿಎಂ ಕೇಜ್ರಿವಾಲ್’ರಿಂದ ‘ವಿಶ್ವಾಸಮತ ಯಾಚನೆ’

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಫೆಬ್ರವರಿ 16) ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವುದಾಗಿ ಹೇಳಿದ್ದಾರೆ. ಎಎಪಿ ಶಾಸಕರನ್ನ ಬೇಟೆಯಾಡಲು ಮತ್ತು ತಮ್ಮ ಸರ್ಕಾರವನ್ನ ಉರುಳಿಸಲು ಬಿಜೆಪಿ ಪ್ರಯತ್ನಿಸಿದೆ ಎಂದು ಅವರು ಆರೋಪಿಸಿದ ಕೆಲವು ದಿನಗಳ ನಂತರ ಈ ಪ್ರಕಟಣೆ ಹೊರಬಿದ್ದಿದೆ. “ನಾನು ಇಂದು ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ತರುತ್ತೇನೆ” ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ. ಆದಾಗ್ಯೂ, ಈ ಕ್ರಮದ ಹಿಂದಿನ ಕಾರಣವನ್ನು ಅವರು ನಿರ್ದಿಷ್ಟಪಡಿಸಲಿಲ್ಲ.

Read More »

ಕಾಂಗ್ರೆಸ್ ನಾಯಕಿ ‘ಪ್ರಿಯಾಂಕಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ನವದೆಹಲಿ: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಾಗಿ ಅವರು ಇಂದು (ಶುಕ್ರವಾರ) ಉತ್ತರ ಪ್ರದೇಶದ ಚಂದೌಲಿಯಲ್ಲಿ ನಡೆಯಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ, ಪ್ರಿಯಾಂಕಾ ಗಾಂಧಿ ತಮ್ಮ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಚಂದೌಲಿಯಲ್ಲಿ …

Read More »

70 ಎಕರೆಯಲ್ಲಿ ಅತ್ಯಾಧುನಿಕ ಕ್ರೀಡಾ ನಗರ ಸ್ಥಾಪನೆ : ಬಜೆಟ್‌ನಲ್ಲಿ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್‌ ನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಕ್ಷೇತ್ರಕ್ಕೆ ಒತ್ತು ನೀಡಿದ್ದು, ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಲಭ್ಯವಿರುವ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಛಯಗಳನ್ನು ಒಳಗೊಂಡ ಕ್ರೀಡಾ ನಗರವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದಾಗಿ ಘೋಷಿಸಿದರು.   ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ 4 ಸ್ಥಳಗಳಲ್ಲಿ ಬಹುಕ್ರೀಡಾ ಸೌಲಭ್ಯಗಳನ್ನೊಳಗೊಂಡ ಅತ್ಯಾಧುನಿಕ …

Read More »

ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್ : ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಪತ್ರಕರ್ತರಿಗೂ ಆಗಾಗ ಹಲವು ಯೋಜನೆಗಳ ಘೋಷಣೆ ಮಾಡುತ್ತಿರುತ್ತಾರೆ. ಇದೀಗ ಈ ಬಾರಿಯ ಬಜೆಟ್ ನಲ್ಲೂ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆಬ್ರವರಿ 3 ಮತ್ತು 4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ …

Read More »