ಮೈಸೂರು: ಜೆಡಿಎಸ್ ನೊಂದಿಗೆ (JDS) ಮೈತ್ರಿ ಹೈಕಮಾಂಡ್ ನಿರ್ಧಾರ. ಈ ವಿಚಾರದಲ್ಲಿ ಯಾರೂ ಮಾತನಾಡಬಾರದು ಎಂದು ಕೇಂದ್ರ ಗೃಹ ಮಂತ್ರಿ (home minister) ಅಮಿತ್ ಶಾ (Amit Shah) ರಾಜ್ಯ ನಾಯಕರಿಗೆ ಎಚ್ಚರಿಕೆ ನೀಡಿದರು. ಬಿಜೆಪಿ (BJP) ನಾಯಕರ ಜೊತೆ ಮೈಸೂರಿನ (mysore) ಖಾಸಗಿ ಹೊಟೇಲ್ ನಲ್ಲಿ ಮೈಸೂರು, ಚಾಮರಾಜನಗರ (chamrajnagar), ಮಂಡ್ಯ (mandya), ಹಾಸನ (hassan) ಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ ಸಭೆ ನಡೆಸಿದ ಅವರು, ಮೈತ್ರಿ ಧರ್ಮ ಪಾಲಿಸುವಂತೆ …
Read More »ಆರ್ಎಸ್ಎಸ್ ಕಾರ್ಯಕರ್ತ ನಾರಾಯಣ ಭಾಂಡಗೆ ಬಿಜೆಪಿ ರಾಜಸಭೆ ಟಿಕೆಟ್; ಇಲ್ಲಿದೆ ವ್ಯಕ್ತಿಚಿತ್ರ
ಬಾಗಲಕೋಟೆ, ಫೆ.11: ರಾಜ್ಯಸಭೆ ಚುನಾವಣೆಗೆ (Rajya Sabha elections) ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಪ್ರಕಟ ಮಾಡಲಾಗಿದ್ದು, ಮಾಜಿ ಸಚಿವ ಸೋಮಣ್ಣಗೆರಾಜ್ಯಸಭೆ ಟಿಕೆಟ್ ಕೈತಪ್ಪಿದೆ. ಅವರ ಬದಲು ಬಾಗಲಕೋಟೆಯ ನಾರಾಯಣ ಭಾಂಡ(Narayan Banda)ಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನಲೆ ಬಾಗಲಕೋಟೆ ನಾರಾಯಣ ಬಾಂಡ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಬಾಂಡ ಅವರಿಗೆ ಕುಟುಂಬಸ್ಥರು ಸಿಹಿ ತಿನ್ನಿಸಿ ಸಂಭ್ರಮಪಟ್ಟಿದ್ದಾರೆ. ಮನೆಯಲ್ಲಿ ಬಿಜೆಪಿ ಕೇಂದ್ರ ಹಾಗೂ ರಾಜ್ಯ ನಾಯಕರ ಪರ ಘೋಷಣೆ …
Read More »ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲಿಯೂ ಎನ್ಡಿಎ ಗೆಲ್ಲುವ ವಿಶ್ವಾಸ: ಬಿವೈ ವಿಜಯೇಂದ್ರ
ಮೈಸೂರು, : ಬಿಜೆಪಿಯ (BJP) ಚುನಾವಣಾ ಚಾಣಕ್ಯ ಅಮಿತ್ ಶಾ (Amit Shah) ಅವರ ಮೈಸೂರು (Mysuru) ಪ್ರವಾಸ ಯಶಸ್ವಿಯಾಗಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಭಾನುವಾರ ಸಂಜೆ ತಿಳಿಸಿದರು. ಮೈಸೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯ ಬಳಿಕ ಮಾತನಾಡಿದ ಅವರು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಮುಖಂಡರ ಜತೆ ಚರ್ಚೆಯಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕೂಡ ಎನ್ಡಿಎ ಮೈತ್ರಿಕೂಟ ಗೆಲ್ಲುವ ವಾತಾವರಣ ಇದೆ. ಪ್ರತಿ ಬೂತ್ನಲ್ಲೂ ಶೇ 10ರ ವೋಟ್ ಹೆಚ್ಚಳ ಮಾಡಬೇಕು …
Read More »ನಾವು 20 ಸೀಟ್ ಗೆಲ್ಲೋದು ಗ್ಯಾರಂಟಿ : ಸಲೀಮ್ ಅಹ್ಮದ್
ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕಾಂಗ್ರೆಸ್ (Congress) ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ ಎಂಬುದು ಈಗಾಗಲೇ ಪಕ್ಷದ ಆಂತರಿಕ ಸರ್ವೇ ವರದಿಗಳಲ್ಲಿ ಬಹಿರಂಗವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ (Saleem Ahmed) ತಿಳಿಸಿದ್ಧಾರೆ. ಭಾನುವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ನ ಗ್ಯಾರಂಟಿ ಹಾಗೂ ಕೇಂದ್ರದಲ್ಲಿ ಬಿಜೆಪಿಯ 10 ವರ್ಷಗಳ ದುರಾಡಳಿತ ಕಾಂಗ್ರೆಸ್ಗೆ ಗೆಲುವು ತಂದುಕೊಡಲಿದೆ. ಈಗಾಗಲೇ ಬಿಜೆಪಿಯವರಿಗೆ …
Read More »ವಿಧಾನಮಂಡಲ ಜಂಟಿ ಅಧಿವೇಶನಕದನ; 40 ಪರ್ಸೆಂಟ್ ಕಮಿಷನ್ ವರ್ಸಸ್ ಅನುದಾನ ತಾರತಮ್ಯ
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ (Assembly Session) ನಡೆಯಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ಆರೋಪ – ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಲಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಬಿಟ್ಟಿರುವ 40 ಪರ್ಸೆಂಟ್ ಕಮಿಷನ್ (40 percent commission) ಬಾಣವು ವಿಪಕ್ಷಗಳಿಗೆ ಅಸ್ತ್ರವಾದರೆ, ಈಗಾಗಲೇ ಕೇಂದ್ರ ಸರ್ಕಾರದಿಂದ ಅನುದಾನ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್ ಅದನ್ನೇ ಪುನರುಚ್ಚಾರ ಮಾಡಲು ಸಿದ್ಧವಾಗಿದೆ. ನಾಳೆಯಿಂದ ಜಂಟಿ ಅಧಿವೇಶನ ಆರಂಭವಾಗುತ್ತಿದ್ದು, ಬೆಳಗ್ಗೆ …
Read More »ಗಂಗಾವತಿ ಅಭಿವೃದ್ಧಿಗೆ ಜಾರಿಯಾಗಿದ್ದ ನೂರಾರು ಕೋಟಿ ರೂಪಾಯಿ ಲೂಟಿ
ಕೊಪ್ಪಳ, ಫೆಬ್ರವರಿ 11: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಭಿವೃದ್ದಿಗಾಗಿ ಪ್ರತಿವರ್ಷ ನೂರಾರು ಕೋಟಿ ಹಣವನ್ನು ಖರ್ಚು ಮಾಡುತ್ತದೆ. ಸರ್ಕಾರ ನೀಡಿರುವ ಹಣದಲ್ಲಿ ಸರಿಯಾಗಿ ಕಾಮಗಾರಿಗಳನ್ನು ಮಾಡಿದ್ದರೆ, ಅನೇಕ ನಗರಗಳು ಅಭಿವೃದ್ದಿಯಾಗುತ್ತಿದ್ದವು. ಗಂಗಾವತಿ (Gangavati) ಪಟ್ಟಣ ಅಭಿವೃದ್ಧಿಗೆ ಸರ್ಕಾರದಿಂದ ನೂರಾರು ಕೋಟಿ ಹಣ ಜಾರಿಯಾಗಿದೆ. ಆದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿಕೊಂಡು ಕಳಪೆ ಕಾಮಾಗರಿ ಮಾಡಿ, ಕೋಟಿ ಕೋಟಿ ಹಣವನ್ನು ನುಂಗಿ ನೀರು ಕುಡಿದಿದ್ದಾರೆ. ಹೀಗಾಗಿ ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ನಡೆದಿರುವ …
Read More »ಅಮಿತ ಶಾ ರಿಗೆ ಶ್ರೀಗಂಧದಲ್ಲಿ ಕೆತ್ತನೆ ಮಾಡಿದ ಚಾಮುಂಡೇಶ್ವರಿ ದೇವಿಯ ವಿಗ್ರಹನೀಡಿದ ಸುತ್ತೂರು ಶ್ರೀ
ಮೈಸೂರು, ಫೆ.11: ಕೇಂದ್ರ ಗೃಹ ಸಚಿವಅಮಿತ್ ಶಾ (Amit Shah)ಅವರು ಮೈಸೂರು ಜಿಲ್ಲೆಯ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದರು. ಸಭಾ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು ಅಮಿತ್ ಶಾ ಅವರಿಗೆ ಶ್ರೀಗಂಧದಲ್ಲಿ ಕೆತ್ತನೆ ಮಾಡಿದ ಚಾಮುಂಡೇಶ್ವರಿ ದೇವಿಯ ವಿಗ್ರಹ ಹಾಗೂ ಅಮಿತ್ ಶಾ ಭಾವಚಿತ್ರ ಫೋಟೋವನ್ನು ಉಡುಗೊರೆಯಾಗಿ ನೀಡಿದರು. ಇದಕ್ಕೂ ಮುನ್ನ ಅಮಿತ್ ಶಾ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.
Read More »ರೈತರ ಬೆಳೆ ರಕ್ಷಣೆಗೆ ಸಾಥ್ ನೀಡಿವೆ ಬಿಯರ್ ಬಾಟಲ್ಗಳು
ಯಾದಗಿರಿ, : ಕಾಡು ಪ್ರಾಣಿಗಳ (Wild Animals) ಹಾವಳಿಯಿಂದ ಬೆಳೆ ರಕ್ಷಣೆ ಮಾಡಲು ಯಾದಗಿರಿ ಜಿಲ್ಲೆಯ ರೈತರು (Yadgir Farmers) ಬಿಯರ್ ಬಾಟಲ್ಗಳು ಮತ್ತು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳ ಮೊರೆ ಹೋಗಿದ್ದಾರೆ! ಕಾಡು ಹಂದಿ ಹಾಗೂ ಹಕ್ಕಿಗಳಿಂದ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಖಾಲಿ ಬಿಯರ್ ಬಾಟಲ್ಗಳ ಮೊರೆ ಹೋಗಿದ್ದಾರೆ. ಅಷ್ಟೇ ಯಾಕೆ ಬಿಸಾಡುವ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳನ್ನೂ ಬಳಸುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪೈಕಿ ಯಾದಗಿರಿ ಜಿಲ್ಲೆಯ ರೈತರು ಕೂಡ ಹೆಚ್ಚಾಗಿ ಬಿಳಿ …
Read More »ಪಟ್ಟಾ ಜಮೀನು ಪರಭಾರೆ ಅವ್ಯವಹಾರ: ತನಿಖೆಗೆ ಸೂಚನೆ
ಲಿಂಗಸುಗೂರು: ಕೃಷ್ಣಾ ನದಿಯ ನಡುಗಡ್ಡೆ ಪ್ರದೇಶದ ಐತಿಹಾಸಿಕ ಜಲದುರ್ಗ ಜಹಗೀರಿ ಪಟ್ಟಾ ಜಮೀನುಗಳಿಗೆ ನಕಲಿ ದಾಖಲೆ ಸೃಷ್ಠಿಸಿ ಪರಭಾರೆ ಮಾಡುತ್ತಿರುವ ಕುರಿತಂತೆ ಪ್ರಜಾವಾಣಿ ಸರಣಿ ವರದಿ ಆಧರಿಸಿ ಅವ್ಯವಹಾರ ತನಿಖೆ ನಡೆಯಿಸಿ ತಿಂಗಳಲ್ಲಿ ವರದಿ ಸಲ್ಲಿಸಲು ಉಪ ವಿಭಾಗಾಧಿಕಾರಿ ಶಿಂಧೆ ಅವಿನಾಶ ಸಂಜೀವನ್ ಸೂಚಿಸಿದ್ದಾರೆ. ‘ಜಹಗೀರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ’ ಹಾಗೂ ‘ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ’ ಶೀರ್ಷಿಕೆಯಡಿ ಪ್ರಜಾವಾಣಿ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ …
Read More »ವಾ.ಕ.ರ.ಸಾ ಸಂಸ್ಥೆʼಯ ಧಾರವಾಡ ಘಟಕದಲ್ಲಿ ʻQRʼ ಕೋಡ್ ಬಳಸಿ ಟಿಕೆಟ್ ನೀಡುವ ವ್ಯವಸ್ಥೆ ಜಾರಿ
ಧಾರವಾಡ : , 2024 ರಿಂದ ಜಾರಿಗೆ ಬರುವಂತೆ ವಾ.ಕ.ರ.ಸಾ ಸಂಸ್ಥೆಯ ಧಾರವಾಡ ಘಟಕದ ಅನುಸೂಚಿಗಳ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ನೀಗಿಸುವ ಹಾಗೂ ಡಿಜಿಟಲ್ ಪೇಮೆಂಟ್ ಪ್ರೋತ್ಸಾಹಿಸಿ ಸಮಯ ಉಳಿತಾಯ ಮಾಡುವ ಉದ್ದೇಶದಿಂದ ಯು.ಪಿ.ಆಯ್ ಮುಖಾಂತರ ಕ್ಯೂ.ಆರ್ ಕೋಡ್ ಬಳಸಿ ಟಿಕೇಟ್ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಮುಂಬರುವ ಕೆಲವೇ ದಿನಗಳಲ್ಲಿ ವಿಭಾಗದ ವ್ಯಾಪ್ತಿಯ ಘಟಕಗಳಾದ ಸವದತ್ತಿ, ರಾಮದುರ್ಗ, ಹಳಿಯಾಳ, ದಾಂಡೇಲಿಯಲ್ಲಿಯೂ ಸಹ ಈ ವ್ಯವಸ್ಥೆ …
Read More »