ಬೆಂಗಳೂರು: ಒಂದೆಡೆ ಮೈತ್ರಿ ಪಕ್ಷಗಳ ನಡುವೆ ಸೀಟು ಹಂಚಿಕೆ ವಿಳಂಬ, ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುವ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ೋಷಣೆ ಮತ್ತಷ್ಟು ವಿಳಂಬವಾಗಲಿದೆ. ಮಂಡ್ಯ, ಹಾಸನ, ಕೋಲಾರ ಈ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸುವುದಾಗಿ ಕುಮಾರಸ್ವಾಮಿ ಹೇಳಿದ್ದರೂ ಕೋಲಾರ ವಿಚಾರದಲ್ಲಿ ಇನ್ನೂ ಅನಿಶ್ಚಿತತೆ ಮುಂದುವರಿದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಜೆಡಿಎಸ್ಗೆ ಮೂರು ಕ್ಷೇತ್ರ ಕೊಡುತ್ತೇವೆ ಎಂದು ಹೇಳಿದ್ದಾರೆ. …
Read More »ಬೆಳಗಾವಿಯಲ್ಲಿ ಆಸ್ತಿ ವಿವಾದ: ಅಳಿಯನ ಮೇಲೆಯೇ ಮಾವನಿಂದ ಫೈರಿಂಗ್
ಬೆಳಗಾವಿ, ಮಾರ್ಚ್ 18: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಅಳಿಯನ ಮೇಲೆ ಮಾವನಿಂದ ಫೈರಿಂಗ್(firing)ಮಾಡಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಬಳಿ ಕೃತ್ಯ ನಡೆದಿದೆ. 30 ಗುಂಟೆ ಜಮೀನಿಗಾಗಿ ಶಾಂತಿನಾಥ ಆಲಗೂರು (32) ಮೇಲೆ ಮಾವ ಧನಪಾಲ್ ಆಸಂಗಿ (54) ಫೈರಿಂಗ್ ಮಾಡಿದ್ದಾರೆ. ಆತ್ಮರಕ್ಷಣೆಗಾಗಿ ಪಡೆದಿದ್ದ ರಿವಾಲ್ವರ್ದಿಂದಲೇ ಒಂದು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ ಧನಪಾಲ್. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆರೋಪಿ ಧನಪಾಲ್ ಬಂಧಿಸಿ ವಿಚಾರಣೆ …
Read More »ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಶ್ಯಾಮ್ಸುಂದರ್ ಗಾಯಕವಾಡ್
ಬೆಂಗಳೂರು: ‘ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ’ ಎಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷ ಶಾಮಸುಂದರ್ ಗಾಯಕವಾಡ್ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ 50 ಲಕ್ಷ ಜನಸಂಖ್ಯೆಯಿರುವ ಮರಾಠ ಸಮುದಾಯಕ್ಕೆ ಬಿಜೆಪಿ ಸರಿಯಾದ ಪ್ರಾತಿನಿಧ್ಯ ನೀಡುತ್ತಿಲ್ಲ. ರಾಜ್ಯದಲ್ಲಿ ಶೇ 52ರಷ್ಟು ಜನಸಂಖ್ಯೆ ಹೊಂದಿರುವ ಹಿಂದುಳಿದ ವರ್ಗದ ಕುರುಬರು, ನೇಕಾರರು, ಗೊಲ್ಲರು, ಮೀನುಗಾರರು, ತಿಗಳರು, ಗಾಣಿಗರು, ಕುಂಬಾರರು, ಮಡಿವಾಳ, ದೇವಾಡಿಗ ಸಮುದಾಯದವರಿಗೆ ಟಿಕೆಟ್ …
Read More »ರಾಜ್ಯದಲ್ಲಿ ಇನ್ಮೇಲೆ ಕೆಎಂಎಫ್ ಎಮ್ಮೆ ಹಾಲು ಸಿಗಲ್ಲ! ಮೂರೇ ತಿಂಗಳಿಗೆ ಮಾರಾಟಕ್ಕೆ ಬ್ರೇಕ್ ಹಾಕಲು ಚಿಂತನೆ
ಬೆಂಗಳೂರು: ಕಳೆದ ಮೂರು ತಿಂಗಳ ಹಿಂದಷ್ಟೇ ಕರ್ನಾಟಕ ಹಾಲು ಒಕ್ಕೂಟ (Karnataka Milk Federation) ರಾಜ್ಯಾಧ್ಯಂತ ಎಮ್ಮೆ ಹಾಲು ಮಾರಾಟಕ್ಕೆ (Selling buffalo milk) ಚಾಲನೆ ನೀಡಿತ್ತು. ಆದರೆ ಇದಾದ ಮೂರೇ ತಿಂಗಳಿಗೆ ಎಮ್ಮೆ ಹಾಲು ಮಾರಾಟಕ್ಕೆ ಬ್ರೇಕ್ ಹಾಕಲು ಕೆಎಂಎಫ್ (KMF) ಚಿಂತನೆ ನಡೆಸಿದೆಯಂತೆ. ಹೌದು, ಕಳೆದ ವರ್ಷ ಡಿಸೆಂಬರ್ ತಿಂಗಳಿಂದ ಎಮ್ಮೆ ಹಾಲು ಮಾರುಕಟ್ಟೆಗೆ (Market) ಕೆಎಂಎಫ್ ಬಿಡುಗಡೆ ಮಾಡಿತ್ತು, ಆದರೆ ಸದ್ಯ ಎಮ್ಮೆ ಹಾಲು ಮಾರಾಟ …
Read More »ಸೂಲಗತ್ತಿ ಲಕ್ಷ್ಮೀಬಾಯಿಗೆ ಶಾಂತ ಸಿರಿ ಪ್ರಶಸ್ತಿ
ಸಿಂದಗಿ: 600 ಮಹಿಳೆಯರಿಗೆ ಉಚಿತವಾಗಿ ಸಹಜ ಹೆರಿಗೆ ಮಾಡಿಸಿದ ತಾಲ್ಲೂಕಿನ ಯರಗಲ್ ಬಿ.ಕೆ. ಗ್ರಾಮದ ಲಕ್ಷ್ಮೀಬಾಯಿ ಪಂಚಯ್ಯ ಗುಬ್ಬೇವಾಡ ಇವರಿಗೆ ಶಾಂತ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇಲ್ಲಿಯ ಊರನಹಿರಿಯಮಠದ ಶಿವಾನುಭವ ಮಂಟಪದಲ್ಲಿ ಭಾನುವಾರ ರಾತ್ರಿ ಶಾಂತವೀರ ಪಟ್ಟಾಧ್ಯಕ್ಷರ 44ನೆಯ ಸ್ಮರಣೋತ್ಸವದ ಅಂಗವಾಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಪ್ರಶಸ್ತಿ ₹5 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಅಫಜಲಪುರ ಸಂಸ್ಥಾನಹಿರೇಮಠದ ಪೀಠಾಧ್ಯಕ್ಷ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯ ಸ್ವಾಮೀಜಿ ಪ್ರಶಸ್ತಿ …
Read More »ಬೆಳಗಾವಿ ಲೋಕಸಭಾ ಚುನಾವಣೆಗೆ ಒಪ್ತಾರಾ ಯತ್ನಾಳ್? ಏನು ಬಿಎಲ್ ಸಂತೋಷ್ ತಂತ್ರಗಾರಿಕೆ?
ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಬೆಳಗಾವಿಯ ಬಿಜೆಪಿ ಅಭ್ಯರ್ಥಿ (Belagavi BJP Candidate) ಎಂದು ಬಿಂಬಿತವಾಗಿದ್ದಾರೆ. ಧಾರವಾಡ (Dharwad) ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಶೆಟ್ಟರ್ ಅವರಿಗೆ ಟಿಕೆಟ್ ತಪ್ಪಿದ್ದರಿಂದ ಬೆಳಗಾವಿಗೆ (Belagavi) ಕಳುಹಿಸಲಾಗುತ್ತಿದೆ ಎಂದು ಹೇಳಲಾಗಿತ್ತು. ಆದರೆ ಟಿಕೆಟ್ ಘೋಷಣೆಗೂ ಮುನ್ನವೇ ಬೆಳಗಾವಿ ಬಿಜೆಪಿ ಘಟಕದಲ್ಲಿ ಜಗದೀಶ್ ಶೆಟ್ಟರ್ ವಿರುದ್ಧ ಅಸಮಾಧಾನ ಉಂಟಾಗಿದೆ. ಎಂಎಲ್ಸಿ ಮಹಾಂತೇಶ್ ಕವಟಗಿಮಠ ಸೇರಿದಂತೆ ಹಲವು ನಾಯಕರು (Belagavi …
Read More »ಸವಾಲು ಸ್ವೀಕರಿಸಿದ್ದೇನೆ-ರಾಹುಲ್ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು
ಶಿವಮೊಗ್ಗ: ಭ್ರಷ್ಟಾಚಾರದಲ್ಲಿ ಮುಳುಗಿದ್ದವರು ಇಂದು(ಇಂಡಿಯಾ ಮೈತ್ರಿಕೂಟ) ಒಂದಾಗಿದ್ದಾರೆ. ಅಷ್ಟೇ ಅಲ್ಲ ಕಾಂಗ್ರೆಸ್ “ಶಕ್ತಿ” ನಾಶವನ್ನು ಬಯಸುತ್ತಿದೆ. ಇದು ಹಿಂದೂ ದ್ವೇಷದ ಮನಸ್ಥಿತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆಗೆ ಸೋಮವಾರ (ಮಾರ್ಚ್ 18) ತಿರುಗೇಟು ನೀಡಿದರು. ಶಿವಮೊಗ್ಗದ ಅಲ್ಲಪ್ರಭು ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿಯ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ನಾನು ಮಹಿಳೆಯನ್ನು ಶಕ್ತಿ ಎಂದು ಪರಿಗಣಿಸುತ್ತೇನೆ. ಪ್ರತಿಯೊಬ್ಬ ಮಹಿಳೆಯೂ (ತಾಯಿ, ಮಗಳು, …
Read More »ಶ್ರೀರಾಮ ಕೇವಲ ಬಿಜೆಪಿ ಗೆ ಸೀಮಿತವಾಗಿಲ್ಲ. ಎಲ್ಲ ಸಮುದಾಯದಲ್ಲೂ ಶ್ರೀರಾಮ ಇದ್ದಾನೆ ಎಂದು ಸತೀಶ ಜಾರಕಿಹೋಳಿ
ಬೆಳಗಾವಿ: ರಾಜ್ಯದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಹೇಳುವದಿಲ್ಲ. ಆದರೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ನಮ್ಮದೇ ತಂತ್ರಗಾರಿಕೆಯನ್ನು ಅನುಸರಿಸುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ 15 ರಿಂದ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಹೇಳಿದರು. ಬಿಜೆಪಿ ಯವರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಕೊಂಡು ಚುನಾವಣೆ ಎದುರಿಸಿದರೆ ನಾವು ಸಂವಿಧಾನ ಉಳಿಸಿ ಕಾಂಗ್ರೆಸ್ …
Read More »ಪ್ರಧಾನಿ ಶಿವಮೊಗ್ಗಕ್ಕೆ ಬಂದರೂ ಈಶ್ವರಪ್ಪ ಬರಲಿಲ್ಲ : ಮೋದಿಗೆ ತಟ್ಟಿದ ‘BJP’ ಬಂಡಾಯದ ಬಿಸಿ..!
ಶಿವಮೊಗ್ಗ : ಪ್ರಧಾನಿ ಮೋದಿಯ ಶಿವಮೊಗ್ಗ ಕಾರ್ಯಕ್ರಮಕ್ಕೆ ನಾನು ಬರೋದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕೊನೆಗೂ ತಮ್ಮ ಹಠ ಸಾಧಿಸಿದ್ದಾರೆ. ಹೇಳಿದಂತೆ ಪ್ರಧಾನಿ ಮೋದಿಯ ಶಿವಮೊಗ್ಗ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹಾವೇರಿ- ಗದಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಪುತ್ರ ಕಾಂತೇಶ್ಗೆ ಅವಕಾಶ ಕೊಡಲಿಲ್ಲ ಎಂದು ಆಕ್ರೋಶಗೊಂಡು ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಆಗಮಿಸಲೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ …
Read More »ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಹಲ್ಲೆ
ಬೆಂಗಳೂರು: ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಮುಸ್ಲಿಂ ಸಮುದಾಯದ ಯುವಕರಿಂದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ. ಘಟನೆಯ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಸುಲೇಮಾನ್, ಶಾನವಾಜ್, ರೋಹಿತ್, ದ್ಯಾನೀಶ್ ಮತ್ತು ತರುಣ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಖೇಶ್ ಹಲ್ಲೆಗೊಳಗಾಗಿರುವ ಯುವಕ. ವರ್ಧಮಾನ್ ಟೆಲಿಕಾಮ್’ …
Read More »
Laxmi News 24×7