ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅಭಿಮನ್ಯು ನೇತೃತ್ವದ ಮೊದಲ ತಂಡದ 9 ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಯಿತು. ಈ ತೂಕ ಪರೀಕ್ಷೆಯಲ್ಲಿ 25 ವರ್ಷದ ಭೀಮನೇ ಅತೀ ಹೆಚ್ಚು ತೂಕ ಹೊಂದಿರುವ ಆನೆಯಾಗಿದ್ದು, ಆನಂತರ ಜಂಬೂ ಸವಾರಿ ಕ್ಯಾಪ್ಟನ್ ಅಭಿಮನ್ಯು 2ನೇ ಸ್ಥಾನದಲ್ಲಿದೆ. ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಮೊದಲ ಹಂತದ ಅಭಿಮನ್ಯು ನೇತೃತ್ವದ ಗಜಪಡೆಗೆ ಇಂದು ನಗರದ ಧನ್ವಂತರಿ ರಸ್ತೆಯಲ್ಲಿರುವ ತೂಕ ಕೇಂದ್ರದಲ್ಲಿ ತೂಕ ಪರೀಕ್ಷೆ …
Read More »ಧರ್ಮಸ್ಥಳ ಘರ್ಷಣೆ ಪ್ರಕರಣ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ 6 ಮಂದಿ ಬಂಧನ
ಬೆಳ್ತಂಗಡಿ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ ಆ. 6ರಂದು ನಡೆದಿದ್ದ ಅಹಿತಕರ ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್ (32), ಸುಹಾಸ್ (22), ಶಶಿಧರ್(30), ಉಜಿರೆ ನಿವಾಸಿ ಕಲಂದರ್ ಪುತ್ತುಮೋನು (42), ಕಳೆಂಜ ನಿವಾಸಿ ಚೇತನ್ (21), ಕಲ್ಮಂಜ ನಿವಾಸಿ ಗುರುಪ್ರಸಾದ್ (19) ಬಂಧಿತ ಆರೋಪಿಗಳು. ಧರ್ಮಸ್ಥಳದ ಪಾಂಗಳದಲ್ಲಿ ಆಗಸ್ಟ್ 6 ರಂದು ನಾಲ್ವರು ಯೂಟ್ಯೂಬರ್ಗಳ …
Read More »ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ
ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಮಾತೋಶ್ರೀ ಭೀಮಾಬಾಯಿ ಲಿಂಬಾವಳಿ (80) ಅವರು ಬಾಗಲಕೋಟೆಯಲ್ಲಿ ನಿಧನರಾದರು. ಮೃತರು ಮಹಾದೇವಪುರ ಶಾಸಕಿ ಮಂಜುಳಾ ಅವರ ಅತ್ತೆಯಾಗಿದ್ದು, ಮೃತರು ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ ಐವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇಂದು ಸಂಜೆ 4 ಗಂಟೆಗೆ ತುಳಸಿಗೇರಿಯ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Read More »ಮೆಜೆಸ್ಟಿಕ್ ರೈಲು ನಿಲ್ದಾಣ ಸುತ್ತಮುತ್ತ ಸಂಚಾರ ನಿರ್ಬಂಧ
ಬೆಂಗಳೂರು: ಬೆಂಗಳೂರು – ಬೆಳಗಾವಿ ಮಾರ್ಗದ ವಂದೇ ಭಾರತ್ ರೈಲಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ನಗರದ ಹೃದಯ ಪ್ರದೇಶವಾಗಿರುವ ನಗರ ರೈಲು ಹಾಗೂ ಮೆಜೆಸ್ಟಿಕ್ ಬಸ್ ನಿಲ್ದಾಣಗಳು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಟ್ರಾಫಿಕ್ ಪೊಲೀಸರು ವಾಹನ ಸಂಚಾರ ನಿರ್ಬಂಧಿಸಿದ್ದಾರೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು – ಬೆಳಗಾವಿ ನಡುವಿನ …
Read More »ಧರ್ಮಸ್ಥಳದ ಬಗ್ಗೆ ಅಪಪ್ರಚಾರ, ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿದೆ: ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ
ಬೆಳಗಾವಿ: ಹಿಂದೂ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಮತ್ತು ಅಲ್ಲಿನ ನಂಬಿಕೆಗಳ ಬಗ್ಗೆ ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದರು. ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆ ವಿಚಾರಕ್ಕೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಥಮಿಕ ಸಾಕ್ಷ್ಯಗಳು ಇಲ್ಲದೇ ಎಸ್ಐಟಿ ರಚನೆ ಮಾಡಿದರು. ಸರಿ ತಪ್ಪು ಎಂಬುದು ತನಿಖೆ ಆಗಲಿ. 13 ಸ್ಥಳಗಳಲ್ಲಿ …
Read More »ಮಹಾರಾಷ್ಟ್ರ ಚುನಾವಣೆಯಲ್ಲಿ ‘ಗೆಲುವಿನ ಗ್ಯಾರಂಟಿ’ ನೀಡಿದ್ದ ಅನಾಮಿಕರು: ಶರದ್ ಪವಾರ್
ನಾಗ್ಪುರ (ಮಹಾರಾಷ್ಟ್ರ) : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡುತ್ತಿರುವ ನಡುವೆ, I.N.D.I.A ಕೂಟದ ಭಾಗವಾದ ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಮತ್ತೊಂದು ಅಚ್ಚರಿಯ ಅಂಶವನ್ನು ಬಹಿರಂಗಪಡಿಸಿದ್ದಾರೆ. 2024 ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮೊದಲು ದೆಹಲಿಯಲ್ಲಿ ಇಬ್ಬರು ವ್ಯಕ್ತಿಗಳು ತಮ್ಮನ್ನು ಭೇಟಿಯಾಗಿ, 288 ಕ್ಷೇತ್ರಗಳ ಪೈಕಿ 160 ಸ್ಥಾನ ಗೆಲ್ಲಿಸಿಕೊಡುವುದಾಗಿ ‘ಗ್ಯಾರಂಟಿ’ ನೀಡಿದ್ದರು ಎಂದು ಹೇಳಿದ್ದಾರೆ. ಇದು ರಾಜಕೀಯ ವಲಯದಲ್ಲಿ ಮತ್ತೊಂದು …
Read More »ಬಾಗಲಕೋಟೆ ಸಹಪಾಠಿಗಳಿಂದ ರ್ಯಾಗಿಂಗ್ ಆರೋಪ: ಯುವತಿ ಆತ್ಮಹತ್ಯೆ
ಬಾಗಲಕೋಟೆ: ಸಹಪಾಠಿಗಳ ರ್ಯಾಗಿಂಗ್ಗೆ ಮಾನಸಿಕವಾಗಿ ನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ನಡೆದಿದೆ. ಅಂಜಲಿ ಮುಂಡಾಸ (21) ಮೃತ ವಿದ್ಯಾರ್ಥಿನಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ತಾನು ಸಹಪಾಠಿಗಳು ನೀಡುತ್ತಿದ್ದ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಯುವತಿ ಡೆತ್ನೋಟ್ನಲ್ಲಿ ಬರೆದಿದ್ದಾರೆ. ಜೊತೆಗೆ ತನಗೆ ರ್ಯಾಗಿಂಗ್ ಮಾಡಿದ ತನ್ನಿಬ್ಬರು ಸಹಪಾಠಿಗಳ ಹೆಸರು, ಅವರ ವಿಳಾಸವನ್ನು ಅದರಲ್ಲಿ ನಮೂದಿಸಿದ್ದಾರೆ. ಇವರ ವಿರುದ್ಧ ಕ್ರಮ ಜರುಗಿಸಿ ಎಂದೂ …
Read More »ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು: ಆದರೂ ಈ ಆನೆಗಳಿಗೆ ನಡೆಯಲಿದೆ ತಾಲೀಮು
ಮೈಸೂರು: ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆಯಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವೇ ಆಗಲಿದ್ದು, ಈ ಬಾರಿಯೂ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಸಾಗಲಿದ್ದಾನೆ. ಆರನೇ ಬಾರಿ ಅಂಬಾರಿ ಹೊರಲು ಅಭಿಮನ್ಯು ಸನ್ನದ್ಧ: 2025ರ ದಸರಾ ಮಹೋತ್ಸವದ ವಿಜಯ ದಶಮಿಯಲ್ಲಿ ಅಭಿಮನ್ಯು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಿದರೆ, ಒಟ್ಟು 6 ಬಾರಿ ಅಂಬಾರಿ ಹೊತ್ತಂತಾಗುತ್ತದೆ. ಅಭಿಮನ್ಯುವಿಗೆ ಅಂಬಾರಿ ತಾಲೀಮು ನಡೆಸುವಂತೆ ಉಳಿದ ಆನೆಗಳಾದ ಮಹೇಂದ್ರ, ಧನಂಜಯ, ಏಕಲವ್ಯ, ಪ್ರಶಾಂತ ಆನೆಗಳಿಗೂ …
Read More »ಜಮಖಂಡಿಯಲ್ಲಿ ಚಿರತೆ ಪತ್ತೆ!!! ಗ್ರಾಮಸ್ಥರಲ್ಲಿ ಮೂಡಿದ ಆತಂಕ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕೆಡಿ ಜಂಬಗಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಓಡಾಟ ಗ್ರಾಮಸ್ಥರಲ್ಲಿ ಆತಂಕವನ್ನು ಸೃಷ್ಠಿಸಿದೆ. ಕಳೆದ ಎರಡು ದಿನಗಳಲ್ಲಿ ಗ್ರಾಮದ ಹಲವೆಡೆ ಮೇಕೆ, ನಾಯಿ ಗಳ ಮೇಲೆ ದಾಳಿ ನಡೆಸಿದ ಈ ಚಿರತೆ, ಕೆಲವನ್ನು ಎಳೆದೊಯ್ದು, ಅರ್ದಂಮರ್ದಾ ತಿಂದ ಘಟನೆಗಳು ಗ್ರಾಮದಲ್ಲಿ ಭಯದ ವಾತಾವರಣವನ್ನು ನಿರ್ಮಿಸಿವೆ. ಬಿರಾದಾರ್ ವಸ್ತಿಯ ತೋಟದ ಸುತ್ತಲಿನ ಭಾಗದಲ್ಲಿ ಮೇಕೆಗಳ ಕಳೆಬರಹಗಳು ಪತ್ತೆಯಾಗಿದ್ದು, ಇದುವರೆಗೆ ನಾಲ್ಕು ಮೇಕೆಗಳ ಮೇಲೆ ದಾಳಿ …
Read More »ಖಾನಾಪೂರ ತಹಶೀಲ್ದಾರ್ ಕಚೇರಿ, ಎಮ್ ಸಿಎಚ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ
ಖಾನಾಪೂರ ತಹಶೀಲ್ದಾರ್ ಕಚೇರಿ, ಎಮ್ ಸಿಎಚ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ ಖಾನಾಪೂರ ತಹಶೀಲ್ದಾರ್ ಕಚೇರಿ ಸೇರಿದಂತೆ ಸಬ್ ರಿಜಿಸ್ಟ್ರಾರ್ ಕಚೇರಿ ಅದರಂತೆಯೇ ಖಾನಾಪೂರ ಎಮ್ ಸಿಎಚ್ ಆಸ್ಪತ್ರೆಯಲ್ಲಿ ಗೌರವಾನ್ವಿತ ಲೋಕಾಯುಕ್ತ ನ್ಯಾಯಮೂರ್ತಿ ಸಿ.ಎಸ್ ಪಾಟೀಲ್ ಅವರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು ಸಾರ್ವಜನಿಕರಿಗೆ ನೀಡುವ ಸೌಲಭ್ಯ ಸೇರಿದಂತೆ ಕಚೇರಿಗಳಲ್ಲಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಪ್ರಮುಖ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು ಈ ಸಂದರ್ಭದಲ್ಲಿ ಬೆಳಗಾವಿ …
Read More »
Laxmi News 24×7