Breaking News
Home / ರಾಷ್ಟ್ರೀಯ (page 260)

ರಾಷ್ಟ್ರೀಯ

ವಿಧಾನಪರಿಷತ್​ಗೆ ನೂತನವಾಗಿ ಆಯ್ಕೆಯಾದ ಎಮ್​ಎಲ್​ಸಿಗಳ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್. ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಜಗದೀಶ್​ ಶೆಟ್ಟರ್ ಮತ್ತು ಎನ್.ಎಸ್. ಭೋಸರಾಜು ಅವರು ಭಗವಂತನ ಹೆಸರಿನ ಮೇಲೆ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ನೂತನ ಸದಸ್ಯರುಗಳಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು …

Read More »

ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರನ ಆತ್ಮಹತ್ಯೆ

ಹಾವೇರಿ: ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಸ್ ಡಿಪೋದಲ್ಲಿ ನಡೆದಿದೆ. ರಾಣೆಬೆನ್ನೂರು ನಗರದ ಹೊರ ವಲಯದ ಮಾಗಡಿ ರಸ್ತೆಯಲ್ಲಿರುವ NWKRTC ಬಸ್ ಡಿಪೋದಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ನೌಕರನನ್ನು ಡ್ರೈವರ್​ ಕಂ ಕಂಡಕ್ಟರ್​ 48 ವರ್ಷದ ಮಲ್ಲನಗೌಡ ಬಡಿಗೇರ ಎಂದು ಗುರುತಿಸಲಾಗಿದೆ. ಹಲಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಲನಗೌಡ ಒಂದು ವಾರದಿಂದ ರಜೆಯಲ್ಲಿದ್ದು, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗೆ …

Read More »

 ಸಿಎಂ ಕಚೇರಿಯಲ್ಲಿ ಸಣ್ಣ ಹುದ್ದೆಗೆ 30 ಲಕ್ಷ ರೂ., ದೊಡ್ಡ ಹುದ್ದೆಗೆ ಕೋಟಿ ಕೋಟಿ ಹಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸಿಎಂ ಕಚೇರಿಯಲ್ಲಿ ಸಣ್ಣ ಹುದ್ದೆಗೆ 30 ಲಕ್ಷ ರೂ., ದೊಡ್ಡ ಹುದ್ದೆಗೆ ಕೋಟಿ ಕೋಟಿ ಹಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು. ಬೆಂಗಳೂರು: ಸಿಎಂ ಕಚೇರಿಯಲ್ಲಿ ಸಣ್ಣ ಹುದ್ದೆಗೆ 30 ಲಕ್ಷ ರೂ., ದೊಡ್ಡ ಹುದ್ದೆಗೆ ಕೋಟಿ ಕೋಟಿ ಹಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು. ಭ್ರಷ್ಟಾಚಾರ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಅವರ …

Read More »

ಗುರು ಪೂರ್ಣಿಮೆ ಹಾಗೂ ದಿವ್ಯ ಸತ್ಸಂಗ ಕಾರ್ಯಕ್ರಮದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸನ್ಮಾನ

ಬೆಳಗಾವಿ: ಮಂತ್ರಿಯಾದ ನಂತರ ಇಡೀ ರಾಜ್ಯ ಮತ್ತು ಜಿಲ್ಲೆಯಿಂದ ಜನ ಭೇಟಿಯಾಗಲು ಬರುತ್ತಿದ್ದಾರೆ. ಆದರೆ ನನ್ನ ಕ್ಷೇತ್ರದ ಜನರ ಕಷ್ಟ ಸುಖ ಹಂಚಿಕೊಳ್ಳಲು ಅವರಿಗೆ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ. ಇದು ನನಗೆ ನಿಜವಾಗಲೂ ದೊಡ್ಡ ತಲೆ‌ನೋವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೇಸರ ಹೊರಹಾಕಿದ್ದಾರೆ. ಭಾನುವಾರ ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖಾ ಮಠದಲ್ಲಿ ನಡೆದ 68ನೇ ಮಾಸಿಕ ಸುವಿಚಾರ ಚಿಂತನೆ ಅಂಗವಾಗಿ …

Read More »

ಬಿಟ್ ಕಾಯಿನ್ ಹಗರಣ: ತನಿಖೆಗೆ ಎಡಿಜಿಪಿ ಮನೀಶ್ ಕರ್ಬಿಕರ್ ನೇತೃತ್ವದ ಎಸ್‌ಐಟಿ ತಂಡ ರಚನೆ

ಬೆಂಗಳೂರು: ಇಡೀ ರಾಜ್ಯ ಅಷ್ಟೇ ಅಲ್ಲದೆ ರಾಷ್ಟ್ರ ಮಟ್ಟದಲ್ಲೂ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣ ಮತ್ತೆ ಮುನ್ನೆಲೆಗೆ ಬಂದಿದೆ. ಸರ್ಕಾರ ಮೊದಲೇ ತಿಳಿಸಿದಂತೆ ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಎಸ್‌ಐಟಿ (ವಿಶೇಷ ತನಿಖಾ ತಂಡ)ವನ್ನ ರಚನೆ ಮಾಡಿದೆ. ಅದರ ಮುಖ್ಯಸ್ಥರನ್ನನಾಗಿ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ತಂಡದಲ್ಲಿ ಡಿಐಜಿ ವಂಶಿಕೃಷ್ಣ, ಡಿಸಿಪಿ ಅನೂಪ್ ಶೆಟ್ಟಿ, ಎಸ್​ಪಿ ಶರತ್ ಸಹ ಇರಲಿದ್ದಾರೆ. ತಂಡ ರಚನೆಯಾಗುತ್ತಿದ್ದಂತೆ ಸಿಐಡಿಯಲ್ಲಿ …

Read More »

ಪಂಚ ಗ್ಯಾರಂಟಿಗಳಿಗೆ ಅಂದಾಜು 30,000 – 40,000 ಕೋಟಿ ರೂ. ಬೇಕಾಗಬಹುದು?: ಆರ್ಥಿಕ ಇಲಾಖೆ

ಬೆಂಗಳೂರು: 2023-24ನೇ ಸಾಲಿನ ಬಜೆಟ್ (ಆಯವ್ಯಯ) ಮಂಡನೆಗೆ (ಜುಲೈ 7) ಸಿಎಂ ಸಿದ್ದರಾಮಯ್ಯ ಅಂತಿಮ ಸ್ಪರ್ಶ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಹಣಕಾಸು ವರ್ಷದ ಉಳಿದ ಒಂಬತ್ತು ತಿಂಗಳಿಗೆ ಮಂಡಿಸುವ ಈ ಬಜೆಟ್​ನಲ್ಲಿ ಒಂದಷ್ಟು ಹೊರೆಗಳು ಸವಾಲಾಗಿವೆ. ಈ ಬಾರಿಯ ಬಜೆಟ್​ನಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಕಡಿಮೆ. ಬೊಮ್ಮಾಯಿ ಸರ್ಕಾರ ಮಂಡಿಸಿದ್ದ ಲೇಖಾನುದಾನದಲ್ಲಿ ಮೀಸಲಿರಿಸಿದ ಅನುದಾನಗಳನ್ನೇ ಪೂರ್ಣಪ್ರಮಾಣದ ಬಜೆಟ್​ನಲ್ಲಿ ಮರು ಹಂಚಿಕೆ ಮಾಡುವ ಸಂಭವ ಹೆಚ್ಚು. ಅಂದಾಜು 3.35 ಲಕ್ಷ …

Read More »

ರಾಷ್ಟ್ರಪತಿ ಅವರೊಂದಿಗೆ ಸಂವಾದಕ್ಕೆ ಚಾಮರಾಜನಗರದ ಬುಡಕಟ್ಟು ಜನರು ಆಯ್ಕೆ

ಚಾಮರಾಜನಗರ : ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜು.3ರಂದು ಸಂಜೆ 7ರಿಂದ 7.30ರವರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಬುಡಕಟ್ಟು ಜನಾಂಗದವರ ಸಂವಾದ ನಡೆಯಲಿದೆ. ಇದರಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಜೇನುಕುರುಬ, ಕೊರಗ ಸಮಾಜದವರನ್ನು ಆಯ್ಕೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಗುಂಡ್ಲುಪೇಟೆಯ ಮೂವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ತಿಳಿಸಿದ್ದಾರೆ. ಅಲ್ಲದೆ ಜು.3ರಂದು ನಡೆಯಲಿರುವ ಸಂವಾದಕ್ಕೆ ಚಾಮರಾಜನಗರ ಜಿಲ್ಲೆ ಸೇರಿದಂತೆ ಮೈಸೂರು, ಕೊಡಗು, …

Read More »

ಈ ವರ್ಷದ ಬಜೆಟ್​ನಲ್ಲೇ ಐದೂ ಘೋಷಣೆಗಳಿಗೂ ಹಣ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಮಸ್ತ ಶೋಷಿತ ಸಮುದಾಯಗಳ ಮಹಾಸಂಸ್ಥಾನ ಆಗಬೇಕು ಎನ್ನುವ ಮಹಾ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ-ಸಮಾಜದ ಮಠ ಅಲ್ಲ. ಸರ್ವ ಶೋಷಿತ ಸಮಾಜಗಳಿಗೆ ಸೇರಿದ ಮಹಾಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಟ್ಟಾಗಿಸಿ ಕಾಗಿನೆಲೆ …

Read More »

ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಸಂಚಲನ

ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಸಂಚಲನ ಉಂಟಾಗಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್​ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಹಾಗೂ ಇತರ ಒಂಬತ್ತು ಎನ್​ಸಿಪಿ ನಾಯಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಎನ್​ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಸಿಗದಿರುವುದಕ್ಕೆ ಅಜಿತ್ ಅಸಮಾಧಾನಗೊಂಡಿದ್ದರು ಎಂದು ತಿಳಿದುಬಂದಿದೆ. ಅಜಿತ್ ಪವಾರ್ ರಾಜ್ಯಪಾಲರನ್ನು ಭೇಟಿಯಾಗಿ ಡಿಸಿಎಂ ಆಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ …

Read More »

ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದಲ್ಲಿ ಹರಿಯುವ ದೂಧಗಂಗಾ ನದಿಯ ಪಕ್ಕದಲ್ಲಿ ನಾಲ್ಕು ಮಾನವ ತಲೆಬುರುಡೆಗಳು ದೊರೆತಿವೆ.

ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದಲ್ಲಿ ಹರಿಯುವ ದೂಧಗಂಗಾ ನದಿಯ ಪಕ್ಕದಲ್ಲಿ ನಾಲ್ಕು ಮಾನವ ತಲೆಬುರುಡೆಗಳು ದೊರೆತಿವೆ. ಜಾನುವಾರುಗಳ ಮೈ ತೊಳೆಯಲು ಹೋದಾಗ ರೈತರ ಕಣ್ಣಿಗೆ ಈ ತಲೆ ಬುರುಡೆಗಳು ಕಾಣಿಸಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನಲ್ಲಿರುವ ಹಾಗೂ ಗಡಿ ಜಿಲ್ಲೆ ಬೆಳಗಾವಿಗೆ ಹೊಂದಿಕೊಂಡಿರುವ ಶಿದ್ನಳ್ಳಿ ಗ್ರಾಮದಲ್ಲಿ ತಲೆಬುರುಡೆಗಳು ಸಿಕ್ಕಿದ್ದು, ಕೂಡಲೇ ಸ್ಥಳೀಯರು ಕಾಗಲ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸ್ ಅಧಿಕಾರಿಗಳು …

Read More »