Breaking News
Home / ರಾಷ್ಟ್ರೀಯ (page 270)

ರಾಷ್ಟ್ರೀಯ

ತಂದೆ ತಾಯಿಯ ಪ್ರೋತ್ಸಾಹ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ಬೆಳಗಾವಿಯ ಈ ಪುಟಾಣಿಯೇ ಸಾಕ್ಷಿ.

ಬೆಳಗಾವಿ : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ತಂದೆ ತಾಯಿಯ ಪ್ರೋತ್ಸಾಹ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ಬೆಳಗಾವಿಯ ಈ ಪುಟಾಣಿಯೇ ಸಾಕ್ಷಿ. ಇಂಗ್ಲಿಷ್​ ರೈಮ್ಸ್ ಹೇಳುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ದಾಖಲೆ ಬರೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ಹೌದು, ಬೆಳಗಾವಿಯ ಫುಲಬಾಗ ಗಲ್ಲಿಯ 2 ವರ್ಷ 11 ತಿಂಗಳ ಮಾನ್ವಿ ಭರತ್ ನಿಲಜಕರ್ ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸಾಧನೆ ಮೆರೆದ ಪುಟ್ಟ …

Read More »

400 ಹೆಕ್ಟೇರ್​ ಪ್ರದೇಶದಲ್ಲಿ ಬಿತ್ತಿದ್ದ ಹತ್ತಿ ಬೆಳೆ ನಾಶ: ಕೃಷಿ ತಜ್ಞರ ಭೇಟಿ, ಪರಿಶೀಲನೆ…

ಗಂಗಾವತಿ :ಕನಕಗಿರಿ ತಾಲೂಕಿನಲ್ಲಿ ಒಣ ಬೇಸಾಯದ ಮಂಗಾರು ಮಳೆಯ ಪೂರ್ವದಲ್ಲಿ ರೈತರು ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆ ನಾಟಿ ಮಾಡಿದ್ದು, ಆದರೆ ಕಳಪೆ ಗುಣಮಟ್ಟದ ಬೀಜದಿಂದಾಗಿ ಹತ್ತಿ ಬೆಳೆ ನಾಶವಾಗುವ ಆತಂಕ ಎದುರಾಗಿದೆ.   ಕಳಪೆ ಬಿತ್ತನೆ ಬೀಜ ತಂದ ಆಪತ್ತು: ತಾಲೂಕಿನ ಚಿಕ್ಕಖೇಡಾ, ಹಿರೇಖ್ಯಾಡಾ, ಗುಡದೂರು, ಬಸರಿಹಾಳ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ ಹತ್ತಿ ಬೀಜ ಬಿತ್ತಿದ್ದಾರೆ. ಒಂದು ಕಡೆ ಕಳಪೆ ಬಿತ್ತನೆ ಬೀಜ ಮತ್ತೊಂದು …

Read More »

ಮೊದಲ ವಾರ 3 ಕೋಟಿಗೂ ಹೆಚ್ಚು ಮಹಿಳೆಯರಿಂದ ಉಚಿತ ಪ್ರಯಾಣ: ಟಿಕೆಟ್​ ಮೌಲ್ಯವೆಷ್ಟು ಗೊತ್ತಾ?

ಬೆಂಗಳೂರು: ಶಕ್ತಿ ಯೋಜನೆಗೆ ಮಹಿಳೆಯರಿಂದ ಭರ್ಜರಿ ಸ್ಪಂದನೆ ಸಿಗುತ್ತಿದೆ. ವೀಕೆಂಡ್​ನಲ್ಲಂತೂ ಸಾರಿಗೆ ಬಸ್​ಗಳು ಮಹಿಳಾ ಪ್ರಯಾಣಿಕರಿಂದ ಕಿಕ್ಕಿರಿದು ತುಂಬುತ್ತಿದ್ದು, ಶನಿವಾರ 54,30,150 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಪ್ರಯಾಣ ಬೆಳೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರಿಗಾಗಿ ಬಸ್ ಪ್ರಯಾಣ ಉಚಿತವಾಗಿಸಿರುವ Shakti Schemeಗೆ ಉತ್ತಮ ಸ್ಪಂದನೆ ಸಿಗುತ್ತಿದೆ. ಮಹಿಳಾ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳಗೊಳ್ಳುತ್ತಿದೆ. ವೀಕೆಂಡ್​​ನಲ್ಲಂತೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಸರ್ಕಾರಿ ಬಸ್​​ಗಳಲ್ಲಿ ಪುಣ್ಯ ಕ್ಷೇತ್ರಗಳತ್ತ ಪಯಣ ಬೆಳೆಸಿದ್ದಾರೆ. …

Read More »

ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ RSS ಮನವಿ:

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಖಂಡಿಸಿದೆ. ತಕ್ಷಣವೇ ಶಾಂತಿಯನ್ನು ಪುನಃಸ್ಥಾಪಿಸಲು ಸ್ಥಳೀಯ ಆಡಳಿತ, ಪೊಲೀಸ್, ಭದ್ರತಾ ಪಡೆಗಳು ಮತ್ತು ಕೇಂದ್ರದ ಏಜೆನ್ಸಿಗಳು ಸೇರಿದಂತೆ ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದೂ ಸಂಘ ಒತ್ತಾಯಿಸಿದೆ. ಈ ಬಗ್ಗೆ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಈಶಾನ್ಯ ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಅಗತ್ಯ ಕ್ರಮಗಳ ಜೊತೆಗೆ ಹಿಂಸಾಚಾರದಿಂದಾಗಿ ನಿರಾಶ್ರಿತರಾದವರಿಗೆ ಪರಿಹಾರ …

Read More »

ಗೃಹ ಜ್ಯೋತಿ ಯೋಜನೆಗೆ ಮೊದಲ ದಿನ 55 ಸಾವಿರ ಗ್ರಾಹಕರ ನೋಂದಣಿ

ಬೆಂಗಳೂರು : ಗೃಹ ಜ್ಯೋತಿ ಯೋಜನೆಗಾಗಿ ಮೊದಲ ದಿನ 55,000 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ಭಾನುವಾರ ಸೇವಾ ಸಿಂಧು ಪೋರ್ಟಲ್​ನಲ್ಲಿ ಗೃಹ ಜ್ಯೋತಿ ಯೋಜನೆಯ ನೋಂದಣಿ ಆರಂಭಗೊಂಡಿದೆ‌. 200 ಯುನಿಟ್ ಉಚಿತ ವಿದ್ಯುತ್ ಪಡೆಯಲು ಮೊದಲ ದಿನವಾದ ಭಾನುವಾರ 55 ಸಾವಿರ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ ಎಂದು ಇಂಧನ ಇಲಾಖೆ ತಿಳಿಸಿದೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಆರಂಭವಾದ ಅರ್ಜಿ ಸಲ್ಲಿಕೆ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55,000 …

Read More »

ಕಲಬುರಗಿಯಲ್ಲಿ ಇಬ್ಬರು‌ ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ‌

ಕಲಬುರಗಿ: ತಂದೆಯೊಬ್ಬ ತನ್ನ ಮಗ ಹಾಗೂ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಮನಕಲುಕುವ ಘಟನೆ‌ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದ ಬಳಿ ಪೋಚಾವರಂದಲ್ಲಿ ನಡೆದಿದೆ. ಚಿಂಚೋಳಿ ತಾಲೂಕು ಕುಂಚಾವರಂ ಗ್ರಾಮದ ಹಾಗೂ ಸದ್ಯ ತೆಲಂಗಾಣದಲ್ಲಿ ವಾಸವಾಗಿದ್ದ ಹಣಮಂತ ವಡ್ಡರ್ (40) ಹಾಗೂ ಆತನ ಪುತ್ರ ಓಂಕಾರ (9), ಪುತ್ರಿ ಅಕ್ಷರಾ (6) ಮೃತರು. ಮೃತ ಹಣಮಂತ ಕೆಲ ವರ್ಷಗಳಿಂದ ತೆಲಂಗಾಣ ರಾಜ್ಯದ ತಾಂಡೂರಿನಲ್ಲಿ ವಾಸವಿದ್ದರು. ಇತ್ತೀಚೆಗೆ ಹಣಮಂತ ತನ್ನ ಮಕ್ಕಳೊಂದಿಗೆ ಕುಂಚಾವರಂ …

Read More »

ಗೋಳಗುಮ್ಮಟ ವೀಕ್ಷಣೆಗೆ ಬಂದ ನಾರಿ ‘ಶಕ್ತಿ’: ಒಂದೇ ದಿನಕ್ಕೆ 5 ಸಾವಿರ ಟಿಕೆಟ್ ಸೇಲ್

ವಿಜಯಪುರ: ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಬಸ್​ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ ಹಿನ್ನಲೆಯಲ್ಲಿ ಮಹಿಳೆಯರು ಕುಟುಂಬ ಸಮೇತ ಪ್ರವಾಸಿ ತಾಣಗಳತ್ತ ದೌಡಾಯಿಸುತ್ತಿದ್ದಾರೆ. ವಿಜಯಪುರದ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆಗೆ ಭಾನುವಾರ ಮಹಿಳೆಯರ ದಂಡೇ ಹರಿದು ಬಂದಿದೆ. ಇದರಿಂದ ಗೋಳಗುಮ್ಮಟ ಹಾಗೂ ಇಬ್ರಾಹಿಂ ರೋಜಾ ವೀಕ್ಷಣೆಗೆ ಟಿಕೆಟ್​ಗಾಗಿ ನೂಕುನುಗ್ಗಲು ಉಂಟಾಗಿತ್ತು. ಬೆಳಗ್ಗೆ 8 ಗಂಟೆಯಿಂದ ಮಹಿಳೆಯರು ತಮ್ಮ ಮಕ್ಕಳ ಜತೆ ಆಗಮಿಸಿ ಗೋಳಗುಮ್ಮಟ ವೀಕ್ಷಣೆ ಮಾಡಲು ಮುಗಿಬಿದ್ದಿದ್ದರು. ಬೆಳಗ್ಗೆ 10 ಗಂಟೆಯಿಂದ ಸಂಜೆ …

Read More »

ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರಿದರು. ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಆಹಾರ ನಿಗಮ (ಎಫ್‌ಸಿಐ)ನವರು ಮೊದಲು ಕೊಡುತ್ತೇವೆಂದು ಹೇಳಿ ಈಗ ವಿತ್‌ಡ್ರಾ ಮಾಡಿಕೊಂಡಿದ್ದಾರೆ. ರಾಜ್ಯದ ಜನರು ಯೋಚನೆ ಮಾಡಬೇಕಾಗಿಲ್ಲ. ನಾವು ಏನು ಭರವಸೆ ಕೊಟ್ಟಿದ್ದೇವೋ ಅದನ್ನು ಈಡೇರಿಸುತ್ತೇವೆ. ಜಾರ್ಖಂಡ್, ತೆಲಂಗಾಣ, ಪಂಜಾಬ್ ರಾಜ್ಯಗಳ ಜತೆ ಚರ್ಚೆ ಆಗುತ್ತಿದೆ. …

Read More »

ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವಂತೆ ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಮನವಿ

ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವಂತೆ ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಕೇಂದ್ರ ಆರೋಗ್ಯ ಮತ್ತ ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಮನ್ಸೂಖ್ ಮಂಡವೀಯ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಯಚೂರು ಜಿಲ್ಲೆಗೆ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಇದ್ದು ಆರ್ಥಿಕ ಭೌಗೋಳಿಕವಾಗಿ ಸೇರಿದಂತೆ ಹಿಂದುಳಿದ ಜಿಲ್ಲೆಯಾಗಿದೆ. ರಾಯಚೂರಿಗೆ ಮಂಜೂರು ಅವಶ್ಯಕತೆಗಳನ್ನು ಈಗಾಗಲೇ ಸ್ಥಳೀಯ ಜನಪ್ರತಿನಿಧಿ ಹಾಗೂ ಸಣ್ಣ ನೀರಾವರಿ ಸಚಿವ ಬೋಸರಾಜು …

Read More »

ಮಾನವ ಸಂಪನ್ಮೂಲ ನಮ್ಮ ದೇಶದ ಅತಿ ದೊಡ್ಡ ಶಕ್ತಿ : ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್

ನವದೆಹಲಿ : ಮಾನವ ಸಂಪನ್ಮೂಲ ನಮ್ಮ ದೇಶದ ಅತಿದೊಡ್ಡ ಶಕ್ತಿಯಾಗಿದೆ. ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರಿಗೆ ಜನರ ಸಾಮರ್ಥ್ಯದ ಮೇಲೆ ಅಪಾರ ನಂಬಿಕೆ ಇತ್ತು. ಇಂದು ದೇಶದ 1.4 ಬಿಲಿಯನ್​ ನಾಗರೀಕರನ್ನು ಸಶಕ್ತಗೊಳಿಸುವುದು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಾತ್ಮಕಗೊಳಿಸುವುದು ನಮ್ಮ ಆದ್ಯತೆ ಆಗಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ಧೋವಲ್​ ಅಭಿಪ್ರಾಯಪಟ್ಟರು. ಇಲ್ಲಿನ ಅಸೋಸಿಯೇಟೆಡ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಆಫ್ ಇಂಡಿಯಾ (ASSOCHAM) ಆಯೋಜಿಸಿದ್ದ ನೇತಾಜಿ …

Read More »