ಚಿಕ್ಕೋಡಿ: ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಇರುತ್ತೇನೆ. ಹೈಕಮಾಂಡ್ ಹೇಳಿದಂತೆ ಕೇಳಲು ನಾನು ಫುಟ್ಬಾಲ್ ಅಲ್ಲ’ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ ಪ್ರಶ್ನಿಸಿದರು. ತಾಲ್ಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘2014ರಲ್ಲಿ ರಾಜ್ಯದಲ್ಲಿ ಸಚಿವನಾಗಿದ್ದ ವೇಳೆ ಒಮ್ಮೆ ಒದ್ದರು, ದೆಹಲಿಗೆ ಹೋಗಿ ಬಿದ್ದೆ. ಅಲ್ಲಿಂದ ಒದ್ದರು, ವಿಧಾನ ಪರಿಷತ್ಗೆ ಬಂದೆ. ಈಗ ಮತ್ತೆ …
Read More »ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿಫೆ.3 ರಂದು ರಾಯಬಾಗ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಫೆ.3 ರಂದು ರಾಯಬಾಗ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಬೆಳಗಾವಿ, ಫೆ.2(ಕರ್ನಾಟಕ ವಾರ್ತೆ): ರಾಯಬಾಗ ತಾಲೂಕಿನ ವಿವಿಧ ಇಲಾಖೆಯ ತಾಲೂಕಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಶನಿವಾರ (ಫೆ.03) ನಂದಿಕುರಳಿ ರಸ್ತೆಯಲ್ಲಿ ಬರುವ ಹೆಸ್ಕಾಂ ವಿಭಾಗೀಯ ಕಚೇರಿಯ ಸಭಾ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆದಕಾರಣ ತಾಲೂಕಿನ ಸಾರ್ವಜನಿಕರು ತಮಗೆ ಸಂಬಂಧಿಸಿದ ಕುಂದುಕೊರತೆಗಳ …
Read More »ಜಿಲ್ಲಾಸ್ಪತ್ರೆಯಲ್ಲಿ ‘ಅಮೃತಧಾರೆ’ ಎದೆಹಾಲು ಸಂಗ್ರಹ ಬ್ಯಾಂಕ್ ಉದ್ಘಾಟನೆಯಾಗಿ ಎರಡು ತಿಂಗಳಾದರೂ ಕಾರ್ಯಾರಂಭ ಮಾಡಿಲ್ಲ.
ಬೆಳಗಾವಿ: ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬಿಮ್ಸ್) ಜಿಲ್ಲಾಸ್ಪತ್ರೆಯಲ್ಲಿ ‘ಅಮೃತಧಾರೆ’ ಎದೆಹಾಲು ಸಂಗ್ರಹ ಬ್ಯಾಂಕ್ ಉದ್ಘಾಟನೆಯಾಗಿ ಎರಡು ತಿಂಗಳಾದರೂ ಕಾರ್ಯಾರಂಭ ಮಾಡಿಲ್ಲ. ಎದೆಹಾಲಿನ ಕೊರತೆಯಿಂದ ಬಳಲುತ್ತಿರುವ ಶಿಶುಗಳಿಗೆ ನೆರವಾಗಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳಗಾವಿ, ಕಲಬುರಗಿ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ಎದೆಹಾಲು ಸಂಗ್ರಹ ಬ್ಯಾಂಕ್ ಆರಂಭಿಸಲು ಮುಂದಾಗಿತ್ತು. ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಗೆ ಬಂದಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 2023ರ ಡಿಸೆಂಬರ್ 13ರಂದು ಉದ್ಘಾಟಿಸಿದ್ದರು. ‘ಬೆಳಗಾವಿಯೊಂದಿಗೆ …
Read More »ನೀರಾವರಿ ಜೋಳ: ಬಂಪರ್ ಕಾಳು
ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಮೇಟ್ಯಾಲ್ ಗ್ರಾಮದ ಪ್ರಗತಿಪರ ಕೃಷಿಕ ಶಿವಾನಂದ ಸಿದ್ದಪ್ಪ ಅಗಸಿಮನಿ ಬಿತ್ತನೆ ಮಾಡಿರುವ ಹೈಬ್ರಿಡ್ ತಳಿಯ ಜೋಳ ತೆನೆಗಟ್ಟಿದ್ದು, ಸಹಸ್ರಾರು ಕಾಳುಗಳನ್ನು ಒಳಗೊಂಡಿರುವುದು ವಿಶೇಷವಾಗಿದೆ. ಕೈಕೊಟ್ಟ ಮುಂಗಾರು ಮಳೆಯಿಂದಾಗಿ ಕಂಗೆಡದ ಅವರು, ಹಿಂಗಾರಿನಲ್ಲಿ ವಾತಾವರಣ ಆಶ್ರಯಿಸಿ ಬರುವ ‘ಹವಾಜೋಳ’ ಬೀಜ ಬಿತ್ತನೆ ಮಾಡಲಿಲ್ಲ. ಬದಲಿಗೆ ನೀರಾವರಿ ಮೇಲೆ ಅವಲಂಬಿಸಿರುವ ಜೋಳದ ತಳಿ ಖರೀದಿಸಿ ಬಿತ್ತನೆ ಮಾಡಿದರು. ಅವರ ನಿರೀಕ್ಷೆಯೂ ಹುಸಿಯಾಗಲಿಲ್ಲ. ಹೆಚ್ಚಿನ ಇಳುವರಿಯ ಕನಸೂ ತೆನೆಗಟ್ಟಿ ಮುಖದಲ್ಲಿ ಮಂದಹಾಸ …
Read More »ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ:C.M.
ಬೆಂಗಳೂರು : ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ. ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ …
Read More »ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ
ಬೆಂಗಳೂರು, ಫೆಬ್ರುವರಿ 1: ನಾಲ್ವರು ಐಪಿಎಸ್ (IPS)ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಅಮಿತ್ ಸಿಂಗ್, ಡಿಐಜಿಪಿ, ದಕ್ಷಿಣ ವಲಯ (ಮೈಸೂರು), ಡಾ.ಎಂ.ಬಿ.ಬೋರಲಿಂಗಯ್ಯ, ಡಿಐಜಿಪಿ, ಪಶ್ಚಿಮ ವಲಯ (ಮಂಗಳೂರು), ಶಿವಪ್ರಕಾಶ್ ದೇವರಾಜು, ಪೊಲೀಸ್ ವರಿಷ್ಠಾಧಿಕಾರಿ, (ಕಲಬುರಗಿ) ಮತ್ತು ಎ.ಶ್ರೀನಿವಾಸುಲು, ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ. 4 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಅಮಿತ್ ಸಿಂಗ್: ಡಿಐಜಿ, …
Read More »ಫೆ.02 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ
ವಿಜಯನಗರ, ಫೆ.01: ನಾಳೆಯಿಂದ(ಫೆ.02) ಮೂರು ದಿನಗಳ ಕಾಲ ಹಂಪಿ ಉತ್ಸವ(Hampi Utsava) ನಡೆಯಲಿದೆ. ಈ ಹಿನ್ನಲೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಲ್ಕು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಅದರಂತೆಹಂಪಿ ಉತ್ಸವದ ಅಂತಿಮ ಹಂತದ ಸಿದ್ಧತೆಯನ್ನು ವಿಜಯನಗರ ಜಿಲ್ಲಾಧಿಕಾರಿ ದಿವಾಕರ್, ಎಸ್ಪಿ ಶ್ರೀಹರಿಬಾಬು ಬಿಎಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಖ್ಯವೇದಿಕೆಯ ನಿರ್ಮಾಣ ಮಾಡುತ್ತಿರುವ ಕಲಾವಿದ ಅರುಣ್ ಸಾಗರ್ ಅವರಿಂದ ಮಾಹಿತಿ ಪಡೆದ ಡಿಸಿ, ಎಸ್ಪಿ. ಮೂರು ದಿನಗಳ ಕಾಲ ನಡೆಯುವ ಹಂಪಿ ಉತ್ಸವಕ್ಕೆ …
Read More »ಕಾಂತರಾಜ ವರದಿ ಪಡೆಯುವುದಕ್ಕೆ 1 ತಿಂಗಳ ಟೈಮ್ ನೀಡಿದ್ದೀನಿ: ಸಿಎಂ
ಬೆಂಗಳೂರು, : ಕಾಂತರಾಜ ವರದಿ ಪಡೆಯುವುದಕ್ಕೆ 1 ತಿಂಗಳ ಟೈಮ್ ನೀಡಿದ್ದೀನಿ. ಆಮೇಲೆ ಸ್ವೀಕಾರ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವರದಿಯಲ್ಲಿ ಏನಾದರೂ ವ್ಯತ್ಯಾಸ ಕಂಡುಬಂದರೆ ಸರಿಪಡಿಸುತ್ತೇವೆ. ಜಾತಿಗಣತಿಗೆ ಕಾಂತರಾಜ ಸಮಿತಿ ರಚಿಸಿ ಹಣ ಬಿಡುಗಡೆ ಮಾಡಿದ್ದೆ. ಹೆಚ್ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾಂತರಾಜ ಸಮಿತಿ ವರದಿ ಸ್ವೀಕರಿಸಲಿಲ್ಲ. ನಾನು ಕಾಂತರಾಜ ಸಮಿತಿ ವರದಿ ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ. …
Read More »ಧಾರವಾಡ ಬಣ ರಾಜಕೀಯ ಶಮನಕ್ಕೆ ಮುಂದಾದ ಬಿವೈ ವಿಜಯೇಂದ್ರ: ಶೆಟ್ಟರ್, ಮುನೇನಕೊಪ್ಪ, ಬೆಲ್ಲದ್ ಜೊತೆ ಸಭೆ
ಹುಬ್ಬಳ್ಳಿ, ಫೆಬ್ರುವರಿ 1: ಧಾರವಾಡದ ಬಣ ರಾಜಕೀಯವನ್ನು ಶಮನ ಮಾಡಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra)ಮುಂದಾಗಿದ್ದಾರೆ. ಆ ಮೂಲಕ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮತ್ತು ವಿಧಾನಸಭಾ ಉಪನಾಯಕ ಅರವಿಂದ ಬೆಲ್ಲದ್ ಅವರೊಂದಿಗೆ ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಪ್ರತ್ಯೇಕ ಸಭೆ ಮಾಡಿದ್ದಾರೆ. ಮೂವರು ನಾಯಕರೊಂದಿಗೆ ಬಿ.ವೈ.ವಿಜಯೇಂದ್ರ ಚರ್ಚೆ ಮಾಡಿದ್ದಾರೆ. ಧಾರಾವಾಡ ಜಿಲ್ಲೆಯಲ್ಲಿ ಜಗದೀಶ್ ಶೆಟ್ಟರ್ ಘರವಾಪ್ಸಿಯಾದರೂ ಭಿನ್ನಮತವಿತ್ತು. ಶೆಟ್ಟರ್ ಮೆರವಣಿಗೆಯಲ್ಲೂ ಸ್ಥಳೀಯ ನಾಯಕರು …
Read More »ಕಲಬುರಗಿ: ಹೊಲದಿಂದ ಬರ್ತಿದ್ದ ಒಂಟಿ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ಆಸ್ಪತ್ರೆಗೆ ದಾಖಲು
ಕಲಬುರಗಿ, : ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಇದೀಗಕಲಬುರಗಿ(Kalaburagi) ಜಿಲ್ಲೆಯ ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಒಂಟಿ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಲಿಂಗಮ್ಮ ಹಲ್ಲೆಗೊಳಾದ ಮಹಿಳೆ. ಇವರು ಹೊಲದಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದಂತೆ 6 ರಿಂದ 7 ಜನರ ಗುಂಪೊಂದು ಕಬ್ಬಿಣದ ರಾಡ್, ಚಾಕು ಹಾಗೂ ಕಲ್ಲಿನಿಂದ ಲಿಂಗಮ್ಮನ ಮೇಲೆ ಏಕಾಎಕಿ ಹಲ್ಲೆ ನಡೆಸಿದೆ. …
Read More »
Laxmi News 24×7