Breaking News

ರಾಷ್ಟ್ರೀಯ

ಬಿಎಸ್‌ವೈ ಸರ್ಕಾರದಲ್ಲಿ ಕೋವಿಡ್‌ ವೇಳೆ ಭಾರಿ ಅವ್ಯವಹಾರ? – ಯತ್ನಾಳ್‌

ವಿಜಯಪುರ : ಕೋವಿಡ್‌ ಮೊದಲ ಅಲೆಯ(Covid first wave) ಸಂದರ್ಭದಲ್ಲಿ ಬಿಎಸ್‌ವೈ(B S Yediyurappa) ಸರ್ಕಾರದ ಅವಧಿಯಲ್ಲಿ ಭಾರಿ ಅವ್ಯವಹಾರ ನಡೆದಿತ್ತು ಈ ಬಗ್ಗೆ ಮಾಜಿ ಸಿಎಂ ಬಿಎಸ್‌ವೈ ಅವರಿಗೆ ಮಾಹಿತಿ ನೀಡಿದ್ದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾ ಸಮಯದಲ್ಲಿ 45 ರೂ ಮಾಸ್ಕ್‌ಗೆ 485 ರೂ ನಿಗದಿಪಡಿಸಲಾಗಿತ್ತು . ಕೊರೊನಾ ರೋಗಿ ಹೆಸರಲ್ಲಿ …

Read More »

ರೈತರ ಅವಹೇಳನ – ಶಿವಾನಂದ ಪಾಟೀಲ್‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

ಬೆಳಗಾವಿ : ರೈತರ (Farmers) ಬಗ್ಗೆ ಅವಹೇಳನಕಾರಿ ಹೇಳಿಕೆ (Controvercial statement) ನೀಡಿದ ಹಿನ್ನೆಲೆಯಲ್ಲಿ ಸಚಿವ ಶಿವಾನಂದ ಪಾಟೀಲ್‌ (Shivanand patil) ಅವರ ಕಚೇರಿಗೆ ಬೀಗ ಜಡಿದು ಪ್ರತಿಭಟನೆ (Protest) ನಡೆಸಿರುವ ಘಟನೆ ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ಬಳಿ ನಡೆದಿದೆ. ಕಾರ್ಖಾನೆ ಬಳಿಯಿರುವ ಸಚಿವರ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ರೈತರು, ಸಚಿವರ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು. ಜೊತೆಗೆ ಸಚಿವರ ವಿರುದ್ದ ಘೋಷಣೆ ಕೂಗಿದರು. …

Read More »

ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಗೆ ಬರುವ ವಿವಿಧ ಗ್ರಾಮಗಳಿಗೆ ಹಾಗೂ ನಗರದ ದೇವಸ್ಥಾನ, ಸಮುದಾಯ ಭವನಗಳಿಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಶೇಖರ ಕೊಣ್ಣೂರ, ವಿನೋದ್ …

Read More »

ಸ್ನಾನಕ್ಕೆಂದು ಹೋಗಿದ್ದ ಯುವತಿ ಬಾತ್‌ರೂಮ್‌ನಲ್ಲೇ ಸಾವು

ಬೆಂಗಳೂರು, (ಡಿಸೆಂಬರ್ 25): ಸ್ನಾನ ಮಾಡಲು ಬಾತ್‌ರೂಮ್‌ಗೆ ಹೋಗಿದ್ದ ಯುವತಿಯೋರ್ವಳು ಅಲ್ಲಿಯೇ ಮೃತಪಟ್ಟಿದ್ದಾಳೆ. ಬಾತ್‌ರೂಮ್‌ನಲ್ಲಿದ್ದ ಗೀಸರ್‌ನ ಗ್ಯಾಸ್‌(gas geyser) ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ರಾಜೇಶ್ವರಿ (23) ಮೃತ ದುರ್ದೈವಿ. ಬೆಂಗಳೂರಿನ (Bengaluru) ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿ ಈ ದುರ್ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ವರಿ, ಅಣ್ಣನ ಮದುವೆಗೆ ರಜೆ ಹಾಕಿದ್ದಳು. ಆದ್ರೆ, ಇಂದು(ಡಿಸೆಂಬರ್ 25) ಬೆಳಗ್ಗೆ ಸ್ನಾನ ಮಾಡಲು ಹೋದಾಗ ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ …

Read More »

ರಾಜ್ಯದಲ್ಲಿ ಇಂದು 125 ಜನರಿಗೆ ಕೊರೊನಾ ಸೋಂಕು

ಬೆಂಗಳೂರು-1, ದಕ್ಷಿಣ ಕನ್ನಡ-1, ಹಾಸನ ಜಿಲ್ಲೆಯಲ್ಲಿ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇನ್ನು ಬೆಂಗಳೂರಿನಲ್ಲಿಯೇ ಇಂದು 94 ಜನರಲ್ಲಿಕೊರೊನಾ ಸೋಂಕುಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್​ಗಳ ಸಂಖ್ಯೆ 436 ಕ್ಕೆ ಏರಿಕೆಯಾಗಿದೆ. ಜೊತೆಗೆ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 3.96ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಎಲ್ಲೆಲ್ಲಿ ಕೊರೊನಾ ಸೋಂಕು ಪತ್ತೆ ಇನ್ನು ರಾಜ್ಯದಲ್ಲಿಂದು 125 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ದಕ್ಷಿಣ …

Read More »

ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ; ಕನ್ನಡ ಪರ ಸಂಘಟನೆಗಳಿಂದ ದಾಳಿ

ಬೆಂಗಳೂರು, ಡಿ.25: ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಬಳಸಿದ ವಸ್ತು ಸ್ವಚ್ಛಗೊಳಿಸಿ ಮರುಬಳಕೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆಕನ್ನಡ ಪರ ಸಂಘಟನೆಸದಸ್ಯರು ದಾಳಿ ಮಾಡಿ ಮೆಡಿಕಲ್ ತ್ಯಾಜ್ಯ(Medical waste)ತುಂಬಿದ ಲಾರಿಯನ್ನು ಬೆಂಗಳೂರಿನ ಪೀಣ್ಯ(Peenya) ಕೈಗಾರಿಕಾ ಪ್ರದೇಶದಲ್ಲಿ ತಡೆದಿದ್ದಾರೆ.   ರೋಗಿಗಳಿಗೆ ಬಳಕೆಯಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಲಿಂಗಪುರದಲ್ಲಿ ಡಂಪಿಂಗ್ ಮಾಡಿ, ಪುನಃ ಅದನ್ನೇ ಕ್ಲೀನ್ ಮಾಡಿ ಲಾರಿಗೆ ತುಂಬಿಸಿ ಆಸ್ಪತ್ರೆಗೆ ಕಳುಹಿಸುವ ಉತ್ತರ ಭಾರತದ ಯುವಕರ ಲಾರಿಯನ್ನು ತಡೆದು ಕೂಡಲೇ ಕ್ರಮ ಕೈಗೊಳ್ಳುವಂತೆ ತಾಕೀತು …

Read More »

ಮಹಿಳೆ ಜೊತೆ ಅಸಭ್ಯ ವರ್ತನೆ,ಪಿಎಸ್‌ಐ ಅಮಾನತು

ಬೆಳಗಾವಿ, ಡಿ.25: ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪದಡಿ ಜಿಲ್ಲೆಯ ಹುಕ್ಕೇರಿ(Hukkeri)ತಾಲೂಕಿನ ಸಂಕೇಶ್ವರ ಪಟ್ಟಣ ಠಾಣೆಯ ಪಿಎಸ್‌ಐ ಅಮಾನತು ಮಾಡಲಾಗಿತ್ತು. ಈ ಹಿನ್ನಲೆ ಸಿಡಿದೆದ್ದ ಸಸ್ಪೆಂಡೆಡ್ ಪಿಎಸ್‌ಐ(Suspended PSI)ನರಸಿಂಹರಾಜು ತಮ್ಮ ಠಾಣೆಯಸಿಪಿಐ ಹಾಗೂ ಸಿಬ್ಬಂದಿವಿರುದ್ಧ ಕಿಡಿಕಾರಿದ್ದಾರೆ. ಸಂಕೇಶ್ವರ ಠಾಣೆ ಸಿಪಿಐ ಮತ್ತು ಕೆಲ ಸಿಬ್ಬಂದಿ ವಿರುದ್ಧ ಪಿಎಸ್‌ಐ ಗಂಭೀರ ಆರೋಪ ಮಾಡಿದ್ದಾರೆ. ನನ್ನ ವಿರುದ್ದ ಮಹಿಳೆ, ಸಿಪಿಐ, ಕೆಲ ಪೊಲೀಸ್ ಸಿಬ್ಬಂದಿ ಸೇರಿ ಷಡ್ಯಂತ್ರ ಮಾಡಿದ್ದಾರೆ ಎಂದಿದ್ದಾರೆ. ತಂಗಿಯೆಂದು ಆ …

Read More »

ಶಿವಾನಂದ ಪಾಟೀಲ್ ಹೇಳಿಕೆಗೆ ರೈತ ಮುಖಂಡರ ಆಕ್ರೋಶ

ಬೆಳಗಾವಿ, ಡಿ.25: ಬರಗಾಲ ಬರಲಿ ಎಂದು ರೈತರಿಗೆ ಆಸೆ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ್( Shivanand Patil ) ಹೇಳಿಕೆಗೆ ‘ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ರೈತ ಮುಖಂಡ ಮಹಾದೇವ ಮಡಿವಾಳ ಹಾಗೂ ಮಂಜುನಾಥಪರಗೌಡ ಮಾತನಾಡಿ‘ನೀವು ರೈತನ ಮಕ್ಕಳು ಎಂದು ಚುನಾವಣೆ ಸಂದರ್ಭದಲ್ಲಿ ಹೇಳುತ್ತೀರಿ, ನೀವು ರೈತರ ಮಕ್ಕಳಲ್ಲ, ಬರಗಾಲ ಬರಲಿ ಎಂದು ನಿಮ್ಮ ತಂದೆ ಬಯಸಿದ್ರಾ ಎಂದು ಕೇಳಿಕೊಳ್ಳಿ ಎಂದು ಕಿಡಿಕಾರಿದ್ದಾರೆ. ಉಡಾಫೆ ಹೇಳಿಕೆ …

Read More »

ಸಿದ್ದರಾಮಯ್ಯನವರೇ ಏನ್ ಮಾಡೋಕೆ ಹೊರಟಿದ್ದೀರಿ.: ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಸಿದ್ದರಾಮಯ್ಯ (Siddaramaiah) ಅವರೇ ನಿಮ್ಮ ವೈಫಲ್ಯ ಮುಚ್ಚಲು ಈ ರೀತಿ ವಿವಾದ ಹುಟ್ಟು ಹಾಕೋದು ನಿಮ್ಮ ಕೆಲಸವಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಏನ್ ಮಾಡೋಕೆ ಹೊರಟಿದ್ದೀರಿ. ನಿಮ್ದು ಮುಠ್ಠಾಳತನವೋ, ಸಮಾಜ ಒಡೆಯಲು ಅತ್ಯಂತ ತಲೆ ಕೆಟ್ಟವರ ಥರ ಹೇಳಿಕೆ ಕೊಡ್ತಿದ್ದೀರೋ. ಸಮಾಜ ಒಡೆದು ವೋಟ್ ತೆಗೆದುಕೊಳ್ಳಬೇಕು ಅನ್ನೋದಾ? ಒಂದು ಕರ್ನಾಟಕ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ …

Read More »

ಕನಕಪುರ ಬಂಡೆಗೆ ಲಗಾಮು?: ದೆಹಲಿಗೆ ಜಾರಕಿಹೊಳಿ ದೌಡು, ಮೂರು ಡಿಸಿಎಂ ನೇಮಕಕ್ಕೆ ಒತ್ತಡ

ಬೆಂಗಳೂರು: ಕಾಂಗ್ರೆಸ್ನಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಲೋಕಸಭಾ ಚುನಾವಣೆಗೂ ಮುನ್ನ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ದಲಿತ ಮುಖಂಡರುಗಳು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಲಿಂಗಾಯತ ಸಮುದಾಯದ ಮೂವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್ನಲ್ಲಿ ಮೊದಲಿನಿಂದಲೂ ಚರ್ಚೆಗಳು …

Read More »