Breaking News

ರಾಷ್ಟ್ರೀಯ

ಪಂಚಮಸಾಲಿ ಪೀಠಕ್ಕೆ ಜಡಿದಿದ್ದ ಬೀಗ ನಿನ್ನೆಯೇ ಓಪನ್​​: ಕಾಶಪ್ಪನವರ್, ಸ್ವಾಮೀಜಿ ಮಧ್ಯದ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್

ಬಾಗಲಕೋಟೆ, ಜುಲೈ 16: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ (Panchamasali Peetha) ಬೀಗ ಜಡಿದಿದ್ದು, ಹೊಸ ಚರ್ಚೆ ಹುಟ್ಟು ಹಾಕಿತ್ತು. ಇದು ಕಾಂಗ್ರೆಸ್‌ ನಾಯಕ ವಿಜಯಾನಂದ ಕಾಶಪ್ಪನವರ (Vijayanand Kashappanavar) ಮತ್ತು ಪಂಚಮಸಾಲಿ ಶ್ರೀಗಳ ಮಧ್ಯೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಇಂದು ಕೂಡ ಪೀಠದ ಎದುರು ಪೊಲೀಸ್ ಬಿಗಿಭದ್ರತೆ ಒದಗಿಸಲಾಗಿದ್ದು, ಪೀಠಕ್ಕೆ ಜಡಿದಿದ್ದ ಬೀಗವನ್ನು ನಿನ್ನೆಯೇ ತೆರೆಯಲಾಗಿದೆ. ಆ ಮೂಲಕ ಇಬ್ಬರ ಮಧ್ಯೆದ ಗುದ್ದಾಟ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ಕಳೆದ ನಾಲ್ಕು ದಿನದ ಹಿಂದೆಯೇ …

Read More »

2003ರರಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾದ ಎಂಬಿಬಿಎಸ್ ವಿದ್ಯಾರ್ಥಿನಿ ತಾಯಿ ಎಸ್ಪಿ ಕಚೇರಿಗೆ ಆಗಮಿಸಿ ದೂರು ನೀಡಿದ್ದಾರೆ.

ಮಂಗಳೂರು: ಧರ್ಮಸ್ಥಳದಲ್ಲಿ 2003ರಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾದ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್, ವಿಚಾರವಾಗಿ ಎರಡು ದಶಕಗಳ ನಂತರ ಆಕೆಯ ತಾಯಿ ಸುಜಾತಾ ಭಟ್ ಎಂಬುವರು ಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ತಮ್ಮ ವಕೀಲರೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಅವರು, ಎಸ್ಪಿ ಡಾ . ಅರುಣ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ದೂರುದಾರರ ದೂರಿನ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ಅರ್ಜಿ ದಾಖಲಿಸಲಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿ, ಸೂಕ್ತ ಕಾನೂನು …

Read More »

ಡಾನ್ ಸುಶೀಲ್ ಹತ್ಯೆ: ಗುಂಡೇಟು ತಿಂದ ಇಬ್ಬರು

ಡಾನ್ ಸುಶೀಲ್ ಹತ್ಯೆ: ಗುಂಡೇಟು ತಿಂದ ಇಬ್ಬರು ಭೀಮಾತೀರದ ನಟೋರಿಯಸ್ ಹಂತಕ ಬಾಗಪ್ಪ ಹರಿಜನ ಹಳೆ ಶಿಷ್ಯ ಸುಶೀಲ ಕಾಳೆ ಮೇಲೆ ನಿನ್ನೆ ಹಾಡು ಹಗಲೆ ಗುಂಡು ಹಾರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಇಬ್ಬರು ಆರೋಪಿಗಳು ಇಂದು ಬೆಳಿಗ್ಗೆ 6ಗಂಟೆ ಸುಮಾರಿಗೆ ವಿಜಯಪುರ ನಗರದ ಹೊರವಲಯದ ಇಟ್ಟಂಗಿಹಾಳ ಗ್ರಾಮದ ಬಳಿ ಪರಾರಿ ಆಗುತ್ತಿರುವ ಮಾಹಿತಿ ಪೊಲೀಸರಿಗೆ ಬಂದಿದೆ. ಬೈಕ್‌ನಲ್ಲಿ ಪರಾರಿ ಆಗಲು ಯತ್ನಿಸುತ್ತಿದ್ದಾಗ ಆರೋಪಿಗಳನ್ನು …

Read More »

ಬಿ. ಸರೋಜಾದೇವಿ ಎಲ್ಲ ಪಾತ್ರಕ್ಕೂ ಜೀವ ತುಂಬುವ ಅಭಿನಯ ಸರಸ್ವತಿ… ಬಿ.ಸರೋಜಾದೇವಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ

ಬಿ. ಸರೋಜಾದೇವಿ ಎಲ್ಲ ಪಾತ್ರಕ್ಕೂ ಜೀವ ತುಂಬುವ ಅಭಿನಯ ಸರಸ್ವತಿ… ಬಿ.ಸರೋಜಾದೇವಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ ಬಹುಭಾಷಾ ನಟಿ ಬಿ. ಸರೋಜಾ ದೇವಿ ಸೋಮವಾರದಂದು ತಮ್ಮ 87ರ ಹರೆಯದಲ್ಲಿ ಇಹಲೋಕ ತ್ಯಜಿಸಿದ್ದು, ಇಂದು ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತಿಮ ವಿಧಿ-ವಿಧಾನಗಳು ನಡೆಯಲಿವೆ. ಸಿಎಂ ಸಿದ್ದರಾಮಯ್ಯ ಅವರಿಂದು ನಟಿಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಬಿ.ಸರೋಜಾ ದೇವಿ ಅವರ ನಿಧನ …

Read More »

ಫಾಸ್ಟ್‌ಟ್ಯಾಗ್‌ ನಿಯಮ ಮತ್ತಷ್ಟು ಕಠಿಣ

FASTag Blacklist: ‘ಲೂಸ್ ಫಾಸ್ಟ್‌ಟ್ಯಾಗ್’ ಸಮಸ್ಯೆ ನಿಭಾಯಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಒಂದು ದೊಡ್ಡ ಹೆಜ್ಜೆ ಇಟ್ಟಿದೆ. ಈಗ ಕಾರಿನಿಂದ ಫಾಸ್ಟ್‌ಟ್ಯಾಗ್ ತೆಗೆದು ಟೋಲ್ ಪ್ಲಾಜಾದಲ್ಲಿ ತೋರಿಸುವವರನ್ನು ಬ್ಲ್ಯಾಕ್​ ಲಿಸ್ಟ್​ಗೆ ಸೇರಿಸಲಾಗುತ್ತದೆ. ಕಾರಿನ ವಿಂಡ್‌ಸ್ಕ್ರೀನ್‌ನಲ್ಲಿ ಫಾಸ್ಟ್‌ಟ್ಯಾಗ್ ಅನ್ನು ಸರಿಯಾಗಿ ಅಳವಡಿಸುವುದು ಅವಶ್ಯಕ. ಟೋಲ್ ಸಂಗ್ರಹವನ್ನು ಸುಗಮಗೊಳಿಸಲು ಮತ್ತು ಸಡಿಲವಾದ ಫಾಸ್ಟ್‌ಟ್ಯಾಗ್ ವರದಿ ಮಾಡುವಿಕೆಯನ್ನು ಬಲಪಡಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಟೋಲ್ ಸಂಗ್ರಹ ಏಜೆನ್ಸಿಗಳು ಮತ್ತು ರಿಯಾಯಿತಿ ನೀಡುವವರು ಲೂಸ್​ ಫಾಸ್ಟ್‌ಟ್ಯಾಗ್‌ಗಳನ್ನು …

Read More »

ಭರ್ತಿಗೂ ಮುನ್ನ ಭದ್ರಾ ಜಲಾಶಯದಿಂದ ನದಿಗೆ 1,200 ಕ್ಯೂಸೆಕ್ ನೀರು ಬಿಡುಗಡೆ

ಶಿವಮೊಗ್ಗ: ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳ ಜೀವನಾಡಿಯಾದ ಭದ್ರಾ ಜಲಾಶಯ ಭರ್ತಿಯಾಗುವ ಮುನ್ನವೇ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಶುಕ್ರವಾರ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯದಿಂದ 1,200 ಕ್ಯೂಸೆಕ್ ನೀರನ್ನು ನದಿಗೆ ನಾಲ್ಕು ಕ್ರಸ್ಟ್ ಗೇಟ್​ಗಳ ಮೂಲಕ ಸುಮಾರು ಮೂರು ಅಡಿಯಷ್ಟು ನೀರು ಬಿಡುಗಡೆ ಮಾಡಲಾಗಿದೆ.  ಜಲಾಶಯವು 186 ಅಡಿ ಗರಿಷ್ಟ ಎತ್ತರ ಹೊಂದಿದೆ. ಇಂದಿನ ನೀರಿನ ಮಟ್ಟ 174.4 ಅಡಿ ಇದೆ. ಮಳೆಗಾಲ ಇನ್ನೂ ಇದೆ. ಕಳೆದ ವರ್ಷ …

Read More »

ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ”

ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ” ಕರ್ನಾಟಕದ ಮಲೆನಾಡ ರಾಜಧಾನಿಯ ಕಲಶಕ್ಕೆ ಮುಕುಟದ ಮಣಿಯಾಗಿ ಪ್ರಜ್ವಲಿಸುತ್ತಿದ್ದ “ಶರಾವತಿ ನದಿ” ಯ ಹಿನ್ನೀರಿಗೆ ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ ರಾಜ್ಯದ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತ ಐತಿಹಾಸಿಕ ಕೇಬಲ್ ಆಧಾರಿತ 2.25 ಕಿ.ಮೀ ಉದ್ದದ ಸುಮಾರು 423.00 ಕೋಟಿ ಅನುದಾನದಲ್ಲಿ ದೇಶದ ಎರಡನೇ …

Read More »

ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ದುಷ್ಕರ್ಮಿಗಳು ಪರಾರಿ…

ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ದುಷ್ಕರ್ಮಿಗಳು ಪರಾರಿ… ವಿಜಯಪುರ: ಯುವಕನ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ದಾಳಿ‌ಗೈದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಅಮರವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಸುಶೀಲ್ ಕಾಳೆ ಮೇಲೆ ದಾಳಿ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಕಾಳೆಯನ್ನು ನಗರದ ಬಿಎಲ್ಡಿಇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು.‌ ಇನ್ನು ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ …

Read More »

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ ಅಹಲ್ಯಾಬಾಯಿ ಮಹಿಳಾ ಸಮಾಜಕ್ಕೆ ಬೆಂಗಳೂರಿನಲ್ಲಿ ಜಾಗ ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಪ್ರಗತಿಯ ಪ್ರತೀಕ ಶಿಕ್ಷಣ ಯಾರ ಸೊತ್ತೂ ಅಲ್ಲ. ಅವಕಾಶ ಮುಖ್ಯ : ಸಿ.ಎಂ ಬೆಂಗಳೂರು : ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

Read More »

ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮುಖ್ತಾರ ನೇಮಕ

ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮುಖ್ತಾರ ನೇಮಕ ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮುಖ್ತಾರ ಇನಾಮದಾರ ಅವರು ಕಾರ್ಯದರ್ಶಿಯಾಗಿ ನೇಮಕ ಮಾಡಿ ಪ್ರದೇಶ ಕಾಂಗ್ರೇಸ್ ಕಮಿಟಿ ಆದೇಶ ಪತ್ರ ಹೊರಡಿಸಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ ಚಂದ್ರಶೇಖರ್ ಅವರ ಅನುಮೋದನೆಯ ಮೇರೆಗೆ ಇಲ್ಲಿನ ಗಾಂಧಿ ನಗರದ ಮುಖ್ತಾರ ಇನಾಮದಾರ ಅವರನ್ನು “ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ” ಯನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲಾ …

Read More »