ಹಾವೇರಿ : ನಿಗಮ ಮಂಡಳಿ ಆಯ್ಕೆ ವಿಚಾರ ನಾವೆಲ್ಲಾ ಚರ್ಚೆ ಮಾಡಿ ಮೊದಲ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡುತ್ತೇವೆ. ನಾನು, ಸುರ್ಜೆವಾಲ, ಡಿ ಕೆ ಶಿವಕುಮಾರ್ ಕುಳಿತು ಚರ್ಚೆ ಮಾಡ್ತೇವಿ. ಡೆಟ್ ಕೊಟ್ಟಿದ್ದೇವೆ, ಹೈಕಮಾಂಡ್ ನವರು ತೀರ್ಮಾನ ಮಾಡಬೇಕು. ನಾವು ಮಾತಾಡ್ತೇವಿ. ಈಗಾಗಲೇ ಬೆಳಿಗ್ಗೆ ಮಾತನಾಡಿದ್ದೇನೆ. ಇಂದು ಸಂಜೆ ಬೆಂಗಳೂರಿಗೆ ಬರೋಕೆ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕನಕ …
Read More »ಮತ್ತೊಮ್ಮೆ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್
ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮತ್ತೊಮ್ಮೆ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಿರುವುದಾಗಿ ಅಧಿಕೃತವಾಗಿ ಘೋಷಿಸಿದೆ. ಆದರೆ ಎಷ್ಟು ಅವಧಿ ವರೆಗೆ ಈ ಹುದ್ಧೆಯಲ್ಲಿ ಮುಂದುವರೆಯಲಿದ್ದಾರೆ ಎಂಬುದರ ಕುರಿತು ಬಿಸಿಸಿಐ ಬಹಿರಂಗ ಪಡಿಸಿಲ್ಲವಾದರೂ, 2024ರ ಜೂನ್ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ವರೆಗೆ ಮುಂದುವರೆಯಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಕಳೆದ 2021ರ ನವೆಂಬರ್ ತಿಂಗಳಲ್ಲಿ ದ್ರಾವಿಡ್ ಅವರನ್ನು ಟೀಮ್ ಇಂಡಿಯಾದ ಮುಖ್ಯ ಕೋಚ್ …
Read More »16ನೇ ಹಣಕಾಸು ಆಯೋಗದ ನಿಮಯಗಳಿಗೆ ಕೇಂದ್ರ ಸಚಿವ ಸಂಪುಟ ಅಸ್ತು
ನವದೆಹಲಿ: ಕೇಂದ್ರ ಮತ್ತು ರಾಜ್ಯಗಳ ನಡುವೆ ತೆರಿಗೆ ಆದಾಯ ಹಂಚಿಕೆ ಕುರಿತು ಶಿಫಾರಸುಗಳನ್ನು ಮಾಡುವ 16ನೇ ಹಣಕಾಸು ಆಯೋಗದ ಉಲ್ಲೇಖದ ನಿಯಮಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಮಂಗಳವಾರ ಸಂಜೆ ನಡೆದ ಕೇಂದ್ರ ಸಚಿವ ಸಂಪುಟವು ಈ ಅನುಮೋದನೆ ನೀಡಿದೆ. ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಇಂದು ವಿವರಿಸಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, 16ನೇ ಹಣಕಾಸು ಆಯೋಗದ ಶಿಫಾರಸುಗಳು 2026ರ ಏಪ್ರಿಲ್ …
Read More »ಬೆಳಗಾವಿ ಮಹಾನಗರ ಪಾಲಿಕೆಯ ಮತ್ತಿಬ್ಬರು ಬಿಜೆಪಿ ಸದಸ್ಯರಿಗೆ ಸಂಕಷ್ಟ
ಬೆಳಗಾವಿ, (ನವೆಂಬರ್ 28): ಬೆಳಗಾವಿ ಮಹಾನಗರ ಪಾಲಿಕೆಯ(belagavi city corporation) ಬಿಜೆಪಿ ಸದಸ್ಯರಿಗೆ ಒಬ್ಬರಾದ ಮೇಲೆ ಒಬ್ಬರಿಗೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ಭಾಗ್ಯನಗರದಲ್ಲಿ ಮೊಬೈಲ್ ಟವರ್ ಅನುಮತಿ ವಿಚಾರವಾಗಿ ನ.23ರಂದು ಪಾಲಿಕೆ ಸದಸ್ಯ ಅಭಿಜಿತ್ ಮತ್ತು ಸ್ಥಳೀಯ ನಿವಾಸಿ ರಮೇಶ್ ಪಾಟೀಲ್ ಮಧ್ಯೆ ಗಲಾಟೆ ನಡೆದಿದ್ದುಮ ಈ ಪ್ರಕರಣದಲ್ಲಿ ಅಭಿಜಿತ್ ಅವರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತಿಬ್ಬರು ಬಿಜೆಪಿ ಸದಸ್ಯರಿಗೆ ಅನರ್ಹ ಭೀತಿ ಶುರುವಾಗಿದೆ. …
Read More »ಕಿರಾಣಿ ಅಂಗಡಿ ಒಡತಿಯ ಮಾಂಗಲ್ಯ ದೋಚಿ ಎಸ್ಕೇಪ್ ಆದ ಐನಾತಿ
ಕರ್ನಾಟಕ ಮಹಾರಾಷ್ಟ್ರ (Maharashtra) ಗಡಿಯಲ್ಲಿ ಚೀಟಿ ತೋರಿಸಿ ಯಾಮಾರಿಸಿ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣ ವರದಿಯಾಗಿದೆ. ಕಿರಾಣಿ ಅಂಗಡಿಗೆ ಆಗಮಿಸಿದ ವ್ಯಕ್ತಿ ಒಂದು ಬಿಳಿ ಬಣ್ಣದ ಚೀಟಿ ತೋರಿಸುತ್ತಿದ್ದಂತೆ ಅಂಗಡಿ ಮಾಲಕಿ ತನ್ನ ಚಿನ್ನದ ಮಾಂಗಲ್ಯ (gold chain) ತೆಗೆದು ಆ ಚೀಟಿಯಲ್ಲಿ ಇಟ್ಟಿದ್ದಾಳೆ ಅಷ್ಟೇ. ಜಸ್ಟ್ ಎರಡೂವರೆ ನಿಮಿಷದಲ್ಲಿ ತನ್ನ ಕೈಚೆಳಕ ತೋರಿಸಿ ಚಿನ್ನದ ಸರದೊಂದಿಗೆ ಎಸ್ಕೇಪ್ ಆಗಿದ್ದಾನೆ. ಈ ಕುರಿತು ಡಿಟೇಲ್ ರಿಪೋರ್ಟ್ ಇಲ್ಲಿದೆ ನೋಡಿ. ಹೌದು …
Read More »ಚಳಿಗಾಲದ ಅಧಿವೇಶನದ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ
ಬೆಳಗಾವಿ ನ.28: ಡಿಸೆಂಬರ್ 4 ರಿಂದ 15 ರವರೆಗೆ ಸುವರ್ಣ ವಿಧಾನಸೌಧದಲ್ಲಿ (Suvarna Soudha) ನಡೆಯಲಿರುವ ರಾಜ್ಯ ವಿಧಾನಮಂಡಲದಚಳಿಗಾಲದ ಅಧಿವೇಶನದ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ (Police) ಆಯುಕ್ತ ಎಸ್.ಎನ್.ಸಿದ್ರಾಮಪ್ಪ ಹೇಳಿದರು. ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ವಿಧಾನಮಂಡಲ ಅಧಿವೇಶನಕ್ಕೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು. 12 ಜನ ಎಸ್ಪಿ, 42 ಡಿವೈಎಸ್ಪಿಗಳು ಮತ್ತು 100 ಜನ ಪೊಲೀಸ್ ಇನ್ಸ್ಪೆಕ್ಟರ್ಗಳು …
Read More »ಜಮೀರ್ ಅಹ್ಮದ್ ಖಾನ್ ವಿವಾದಾತ್ಮಕ ಹೇಳಿಕೆ: ಡಿಸೆಂಬರ್ 4 ರಂದು ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ
ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ಮೊದಲ ಬಾರಿಗೆ ಯು.ಟಿ ಖಾದರ್ ಅವರನ್ನು ವಿಧಾನಸಭಾ ಸ್ಪೀಕರ್ ಆಗಿ ನೇಮಿಸಲಾಗಿದೆ. ಈಗ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಬೆಂಗಳೂರು, ನ.28: ಸ್ಪೀಕರ್ ಸ್ಥಾನದ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಮೊದಲ ದಿನವೇ ಸಚಿವಜಮೀರ್ ಅಹ್ಮದ್ …
Read More »ಪಾರ್ಟ್ಟೈಮ್ ಜಾಬ್ ಕೊಡಿಸುವುದಾಗಿ ಹೇಳಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಪಾರ್ಟ್ಟೈಮ್ ಜಾಬ್ ಕೊಡಿಸುವುದಾಗಿ ಸಾರ್ವಜನಿಕರನ್ನು ನಂಬಿಸಿ ಹಂತ ಹಂತವಾಗಿ ಹಣ ಪಡೆದು ವಂಚಿಸುತ್ತಿದ್ದ ಜಾಲ ಬೇಧಿಸಿರುವ ನಗರದ ಈಶಾನ್ಯ ವಿಭಾಗದ ಸೆನ್ ಠಾಣೆ ಪೊಲೀಸರು ನಾಲ್ವರು ಸೈಬರ್ ವಂಚಕರನ್ನು ಬಂಧಿಸಿದ್ದಾರೆ. ಸೈಯದ್ ಯೂನಸ್, ಮೊಹಮ್ಮದ್ ಕಲೀಮುಲ್ಲಾ, ಸೈಯ್ಯದ್ ಅರ್ಬಾಜ್ ಹಾಗೂ ಇಬ್ರಾಹಿಂ ಕಲೀಂ ಬಂಧಿತ ಆರೋಪಿಗಳು. ಏನಿದು ಪ್ರಕರಣ?: ವಂಚನೆಗೊಳಗಾದ ಸಾವಂತ್ ಪೂಜಾರಿ ಎಂಬುವರು ಫೇಸ್ಬುಕ್ ನೋಡುವಾಗ ಆನ್ಲೈನ್ ಶಾಪಿಂಗ್ ಆಯಪ್ವೊಂದರಲ್ಲಿ ಪಾರ್ಟ್ ಟೈಮ್ ವರ್ಕ್ ಫ್ರಂ ಹೋಮ್ ಕೆಲಸ ಇರುವುದನ್ನು …
Read More »ನಿಗಮ ಮಂಡಳಿ ನೇಮಕದಲ್ಲಿ ಪಕ್ಷದ ಕಾರ್ಯಕರ್ತರನ್ನು ಪರಿಗಣಿಸುವಂತೆ ಮನವಿ : ಸತೀಶ್ ಜಾರಕಿಹೊಳಿ
ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ವಿಚಾರ: ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ, ಡಿಸಿಎಂ ಜಂಟಿಯಾಗಿ ನಿರ್ಧಾರ ಮಾಡುತ್ತಾರೆ. ಹಿರಿಯ ಶಾಸಕರನ್ನು ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದ್ದು, ನಾವು ಹಿರಿಯ ಶಾಸಕರ ಜೊತೆ ಕಾರ್ಯಕರ್ತರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಹೇಳಿದ್ದೇವೆ. ಶೇಕಡಾ 50ರಷ್ಟು ಕಾರ್ಯಕರ್ತರಿಗೆ, ಶೇಕಡಾ 50ರಷ್ಟು ಶಾಸಕರಿಗೆ ನೀಡಲು ಮನವಿ ಮಾಡಿದ್ದೇವೆ. ಕಾರ್ಯಕರ್ತರಿಗೆ ಕೊಟ್ಟರೆ ಒಳ್ಳೆಯದು ಎಂದು ಹೇಳಿದರು. ಚಿಕ್ಕೋಡಿ: ರಾಜ್ಯ ಸರ್ಕಾರದಹಲವು ಇಲಾಖೆಗಳಲ್ಲಿ ಅಧಿಕಾರಿಗಳ ವರ್ಗಾವಣೆ …
Read More »ಐಟಿ ದಾಳಿ ವೇಳೆ 42 ಕೋಟಿ ರೂ. ಪತ್ತೆ ಪ್ರಕರಣ: ಹೃದಯಾಘಾತದಿಂದ ಗುತ್ತಿಗೆದಾರ ಅಂಬಿಕಾಪತಿ ಸಾವು
ಬೆಂಗಳೂರು: ಐಟಿ ದಾಳಿಯ ವೇಳೆ ಕೋಟಿ ಕೋಟಿ ಹಣ ಪತ್ತೆಯಾದ ವಿಚಾರದಲ್ಲಿ ಭಾರೀ ಸುದ್ದಿಯಾಗಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 6.40 ಸುಮಾರಿಗೆ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಅಂಬಿಕಾಪತಿ ಮೃತಪಟ್ಟಿದ್ದಾರೆ. ಕಳೆದ ತಿಂಗಳಷ್ಟೇ ಅಂಬಿಕಾಪತಿ ಮನೆಯ ಮೇಲೆ ಐಟಿ ದಾಳಿ ನಡೆದಾಗ 42 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಾಗಿ ಆರೋಪ-ಪ್ರತ್ಯಾರೋಪಗಳಿಗೆ ಎಡೆಮಾಡಿಕೊಟ್ಟಿತ್ತು. ತಮ್ಮ ಮನೆಯಲ್ಲಿದ್ದ ಹಣ …
Read More »