Breaking News

ರಾಷ್ಟ್ರೀಯ

ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಧಾರವಾಡ, ನ.25: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ (Electric shock) ತಗುಲಿ ಬಾಲಕ ಮೃತಪಟ್ಟ (Death) ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ 16 ವರ್ಷದ ಶ್ರೇಯಸ್ ಶಿನ್ನೂರ ಮೃತಪಟ್ಟಿದ್ದಾನೆ. ಮನೆ ಮಹಡಿ ಮೇಲೆ ಗೆಳೆಯರೊಂದಿಗೆ ಸಂಜೆ ಕ್ರಿಕೆಟ್ (Cricket) ಆಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕ್ಯಾಚ್ ಹಿಡಿಯಲು ಹೋಗಿದ್ದಾಗ ವಿದ್ಯುತ್ ತಂತಿ ತಗುಲಿ ಶ್ರೇಯಸ್ ಅಸ್ವಸ್ಥಗೊಂಡಿದ್ದ. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ …

Read More »

ಕಂಟೋನ್ಮೆಂಟ್ ಬೋರ್ಡ್ ಸಿಇಒ ಕೊಠಡಿಯಲ್ಲಿ ಸಿಕ್ಕ ಡೆತ್ ನೋಟ್​ನಲ್ಲಿ ಆತ್ಮಹತ್ಯೆಯ ಅಸಲಿ ಸತ್ಯ ಬಯಲು

ಬೆಳಗಾವಿ, ನ.25: ಈ ಆನ್ ಲೈನ್ ಗ್ಯಾಮ್ಲಿಂಗ್ ಗೇಮ್​ಗಳೇ ಹಾಗೇ ಒಂದು ಬಾರಿ ನೀವು ಅದರಲ್ಲಿ ಇಳಿದ್ರೆ ಮತ್ತೆ ಎದ್ದು ಬಂದ ಉದಾಹರಣೆಗಳೇ ಇಲ್ಲ. ಜನ ಸಾಮಾನ್ಯರಿಗೆ ತಿಳಿ ಹೇಳಬೇಕಿದ್ದ ಅಧಿಕಾರಿಯೊಬ್ಬರು ಇದೇ ಆನ್ ಲೈನ್ ಗ್ಯಾಮ್ಲಿಂಗ್​ಗೆ (Online Gambling) ಬಲಿಯಾಗಿದ್ದಾರೆ. ರಕ್ಷಣಾ ಇಲಾಖೆಯ ಅಡಿಯಲ್ಲಿ ಸಿಇಒ ಆಗಿ ಕೆಲಸ ಮಾಡ್ತಿದ್ದ ಅಧಿಕಾರಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಬಿಐ (CBI) ದಾಳಿಯಾದ ನಾಲ್ಕೇ ದಿನಕ್ಕೆ ಅಧಿಕಾರಿ ಸಾವಿನ ದಾರಿ …

Read More »

ಚಳಿಗಾಲದ ಅಧಿವೇಶನ ಇಲ್ಲಿಯೇ ಯಾಕಾದರೂ ನಡೆಯುತ್ತದೋ ಎಂದು ಇಲ್ಲಿನ ರೈತರಿಗೆ ಧುತ್ತನೆ ಎದುರಾಗಿದೆ ಟೆನ್ಷನ್! ಏನದು ವಿಷಯ?

ಬೆಳಗಾವಿಯ ಸುವರ್ಣ ಸೌಧದಲ್ಲಿ ( Belagavi Suvarna soudha) ವಾರ್ಷಿಕ ಕಾರ್ಯಕ್ರಮದಂತೆ ಮುಂದಿನ ತಿಂಗಳು ಡಿಸೆಂಬರ್​​ 4 ರಿಂದ 15ರ ವರೆಗೆ ಚಳಿಗಾಲದ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಆದರೆ ಯಾಕಾದ್ರೂ ಈ ಚಳಿಗಾಲದ ಅಧಿವೇಶನ (legislative winter session) ಆರಂಭವಾಗ್ತಿದೆಯಲ್ಲಾ ಅನ್ನೋ ಟೆನ್ಷನ್ ಇಲ್ಲಿನ ರೈತರಿಗೆ (farmers) ಧುತ್ತನೆ ಎದುರಾಗಿದೆ. ಸುವರ್ಣ ಸೌಧದ ಆಸುಪಾಸು ಇರುವ 50ಕ್ಕೂ ಅಧಿಕ ರೈತರು ಅದಾಗಲೇ ಈ ಟೆನ್ಷನ್ ಅನುಭವಿಸತೊಡಗಿದ್ದಾರೆ! ಏನಿಲ್ಲ ಪಾಪಾ ತಾವು ಕಷ್ಟಪಟ್ಟು …

Read More »

ಭವಿಷ್ಯ ಹೇಳ್ತಿದ್ದವಳ ತಲೆ ಸೀಳಿದ ಹಂತಕರು! ಅತ್ಯಾಚಾರವೆಸಗಿ ಕೊಲೆ?

ಕಲಬುರಗಿಯಲ್ಲಿ ಒಂಟಿ ವೃದ್ದೆಯ ಭೀಕರ ಹತ್ಯೆ ಪ್ರಕರಣ ದಾಖಲಿಸಿಕೊಂಡಿರೋ ಆರ್ ಜೆ ನಗರ ಪೊಲೀಸರು ಹಂತಕರ ಪತ್ತೆಗೆ ಜಾಲ ಬೀಸಿದ್ದಾರೆ. ಅದೆನೇ ಇರಲಿ ದೇವರ ಹೆಸರಿನ ಮೇಲೆ ಭವಿಷ್ಯ ಹೇಳ್ತಿದ್ದ ರತ್ನಾಬಾಯಿ, ತನ್ನ ಭವಿಷ್ಯ ಹಿಗೇ ಅಂತ್ಯವಾಗುತ್ತೆ ಅನ್ನೊದು ತಿಳಿಯದೇ ಇರೋದು ದುರಂತವೇ ಸರಿ. ಹಂತಕರ ಬಂಧನದ ನಂತರವೇ ರತ್ನಾಬಾಯಿ ಹತ್ಯೆಗೆ ಕಾರಣ ಏನು ಅನ್ನೊದು ತಿಳಿಯಲಿದೆ‌.ಆ ವೃದ್ದೆ ದೇವರ ಹೆಸರಿನ ಮೇಲೆ ಭವಿಷ್ಯ ಹೇಳ್ತಾ ಜನರ ಕಷ್ಟಕಾರ್ಪಣ್ಯಗಳನ್ನ ದೂರ ಮಾಡುತ್ತ ಒಬ್ಬಂಟಿಯಾಗಿ …

Read More »

ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿಗೆ ಶಾಮನೂರು ಶಿವಶಂಕರಪ್ಪ ವಿರೋಧ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ಅವೈಜ್ಞಾನಿಕವಾಗಿದ್ದು, ವೈಜ್ಞಾನಿಕವಾಗಿ ಸಮಿಕ್ಷೆಯಾಗಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದ್ದಾರೆ. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಜಾತಿ ಜನಗಣತಿ ವರದಿ ಸರಿ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ”ಜಾತಿ ಗಣತಿ ಲೋಪದಿಂದ ಕೂಡಿದೆ ಎಂದು ನಾವು ವಿರೋಧ ಮಾಡುತ್ತಿದ್ದೇವೆ. ವರದಿಯಲ್ಲಿ …

Read More »

ಸೈನಿಕರ ಮಧ್ಯೆ ನಡೆದ ಗುಂಡಿನ ದಾಳಿಯಲ್ಲಿ ಯೋಧ ಕ್ಯಾಪ್ಟನ್​ ಪ್ರಾಂಜಲ್​ ಅವರು ಹುತಾತ್ಮ ಸಾರ್ವಜನಿಕರಿಂದ ಗೌರವ ಸಮರ್ಪಣೆ

ಬೆಂಗಳೂರು: ಹುತಾತ್ಮ ಯೋಧ ಕ್ಯಾಪ್ಟನ್​ ಪ್ರಾಂಜಲ್​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್​ನ ಅವರ ಮನೆ ಬಳಿ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ಹಲವು ಗಣ್ಯರು ಪ್ರಾಂಜಲ್​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ವಿರೋಧ ಪಕ್ಷದ ನಾಯಕ ಆರ್​ ಅಶೋಕ್​, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಂಸದ ಡಿ ಕೆ ಸುರೇಶ್ ಮುಂತಾದ ಗಣ್ಯರು ಪ್ರಾಂಜಲ್​ ಅವರ ಪಾರ್ಥೀವ ಶರೀರದ …

Read More »

ರಾಜಸ್ಥಾನ ಚುನಾವಣೆ: ಅಶೋಕ್ ಗೆಹ್ಲೋಟ್, ವಸುಂಧರಾ ರಾಜೆ ಸೇರಿ ಗಣ್ಯರಿಂದ ವೋಟಿಂಗ್, ಶೇ.24.74ರಷ್ಟು ಮತದಾನ

ರಾಜಸ್ಥಾನದ 200 ವಿಧಾನಸಭಾ ಕ್ಷೇತ್ರಗಳ ಪೈಕಿ 199 ಸ್ಥಾನಗಳಿಗೆ ಮತದಾನ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಈ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಬೆಳಿಗ್ಗೆ 11 ಗಂಟೆಯವರೆಗೆ ಶೇ 24.74ರಷ್ಟು ಮತದಾನವಾಗಿದೆ.   ಜೈಪುರ (ರಾಜಸ್ಥಾನ): ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗಳು ಅಂತಿಮ ಹಂತಕ್ಕೆ ಬಂದಿವೆ. ಮಿಜೋರಾಂ, ಛತ್ತೀಸ್​ಗಢ ಮತ್ತು ಮಧ್ಯಪ್ರದೇಶದಲ್ಲಿ ಈಗಾಗಲೇ ಮತದಾನ ಪೂರ್ಣಗೊಂಡಿದೆ. ರಾಜಸ್ಥಾನದ ಮತದಾರರು ಇಂದು (ಶನಿವಾರ) …

Read More »

ದೈವಕ್ಕೆ ಪೂಜೆ ಸಲ್ಲಿಸಿ ‘ಬೆಂಗಳೂರು ಕಂಬಳ ನಮ್ಮ ಕಂಬಳ’ಕ್ಕೆ ಸಾಂಕೇತಿಕ ಚಾಲನೆ

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಕರಾವಳಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸಲು ರಾಜ್ಯ ರಾಜಧಾನಿಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಜಾನಪದ ಕ್ರೀಡೆ ಕಂಬಳ ಉತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಗಂಗಾರತಿ ಸೇರಿದಂತೆ ಸಾಂಪ್ರದಾಯಿಕ ವಿಧಿ ವಿಧಾನಗಳ ಮೂಲಕ ದೈವಕ್ಕೆ ಪೂಜೆ ಸಲ್ಲಿಸಿ ಸಾಂಕೇತಿಕವಾಗಿ ಕಂಬಳಕ್ಕೆ ಚಾಲನೆ ನೀಡಲಾಯಿತು.‌ ಇದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಂಸದೆ ಶೋಭಾ‌ ಕರಂದಾಜ್ಞೆ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಕ್ಷಿಯಾದರು. ‘ಬೆಂಗಳೂರು ಕಂಬಳ‌ ನಮ್ಮ‌ ಕಂಬಳ‌’ ಹೆಸರಿನಲ್ಲಿ‌ ನಡೆಯುತ್ತಿರುವ ಉತ್ಸವಕ್ಕೆ …

Read More »

ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹಾಗೂ ಭಾರತೀಯ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್​ ಪ್ರಾಂಜಲ್​ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಶುಕ್ರವಾರ ರಾತ್ರಿ 9.30ರ ಹೊತ್ತಿಗೆ ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಪ್ರಾಂಜಲ್​ ಅವರ ಪಾರ್ಥೀವ ಶರೀರ ಆಗಮಿಸಿದ್ದು, ಈ ವೇಳೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಹುತಾತ್ಮ ಪ್ರಾಂಜಲ್​ ಅವರಿಗೆ ಅಂತಿಮ …

Read More »

ಯೋಗೀಶ್​ಗೌಡ​ ಕೊಲೆ ಪ್ರಕರಣ: ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್​ಗೌಡ​ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶದ ಆರೋಪದಡಿ ದಾಖಲಾಗಿಸಲಾಗಿರುವ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿರುವುದು ನಿಯಮ ಬಾಹಿರವಾಗಿದೆ ಎಂದು ಶಾಸಕ ವಿನಯ ಕುಲಕರ್ಣಿ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದರು. ಸುಳ್ಳು ಸಾಕ್ಷ್ಯ ನೀಡುವಂತೆ ಬೆದರಿಕೆ ಹಾಕಲಾಗಿದೆ ಎಂಬ ಆರೋಪದಡಿ ಸಿಬಿಐ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿರುವ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ …

Read More »