Breaking News
Home / ರಾಷ್ಟ್ರೀಯ (page 316)

ರಾಷ್ಟ್ರೀಯ

ಇದುಮೋದಿ ಸೋಲಲ್ಲ, ಕಾಂಗ್ರೆಸ್ ನಾಯಕತ್ವ ದೇಶದಲ್ಲೇ ಸೋತಿದೆ: ಬೊಮ್ಮಾಯಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ದಯನೀಯ ಸೋಲಿನ ಕುರಿತು ರಾಷ್ಟ್ರೀಯ ನಾಯಕರು ವರದಿ ಕೇಳಿದ್ದರು. ಈಗ ಇರುವ ಮಾಹಿತಿಯನ್ನು ಕಳುಹಿಸಿ ಕೊಡಲಾಗಿದೆ. ಸದ್ಯದಲ್ಲೇ ಸೋಲಿನ ಕುರಿತು ಆತ್ಮಾವಲೋಕನ ಸಭೆ ನಡೆಸಿ ತಪ್ಪು ತಿದ್ದುಕೊಳ್ಳುವ ಕೆಲಸ ಮಾಡುತ್ತೇವೆ ಎಂದು ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,‌ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸೋಲು, ಗೆಲುವಿನ ಬಗ್ಗೆ …

Read More »

ಕರ್ನಾಟಕ ನೂತನ ಸಿಎಂ ಆಯ್ಕೆ ವಿಚಾರ ‘ಕೈ’ ನಾಯಕಿ ಸೋನಿಯಾ ಗಾಂಧಿ ಅಂಗಳಕ್ಕೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಯಾರಾಗಬೇಕೆಂಬ ವಿಚಾರ ಇದೀಗ ಹೈಕಮಾಂಡ್ ಅಂಗಳ ತಲುಪಿದೆ. ಒಂದೆಡೆ, ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ. ಇನ್ನೊಂದೆಡೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತೊಂದು ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದಾರೆ. ಇದರಿಂದ ಮುಂದೆ ಗೊಂದಲ ಉಂಟಾಗದಿರಲಿ ಎಂಬ ಉದ್ದೇಶದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ವಿಚಾರವನ್ನು ಹೈಕಮಾಂಡ್​ ಗಮನಕ್ಕೆ ತಂದು ಸರಿಪಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕರ್ನಾಟಕ ಸಿಎಂ ಆಯ್ಕೆ ವಿಚಾರ ಸೋನಿಯಾ …

Read More »

2 ಕ್ಷೇತ್ರಗಳಲ್ಲಿಯೂ ಸೋಲನುಭವಿಸಿ ನಿರುದ್ಯೋಗಿಯಾಗಿದ್ದೇನೆ: ಸೋಮಣ್ಣ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿಯೂ ಸೋಲನುಭವಿಸಿರುವ ವಿ.ಸೋಮಣ್ಣ ನನ್ನ ಪಾಡಿಗೆ ಕೆಲಸ ಮಾಡುತ್ತಾ ಇದ್ದೆ, ಈಗ ನಿರುದ್ಯೋಗಿಯಾಗಿದ್ದೇನೆ ಎಂದು ಅಳಲು ತೋಡಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ಸೋತಾಗಿದೆ, ಏನು ಮಾತನಾಡಲಿ? ಸೋತಿದ್ದೇನೆ ಅಷ್ಟೇ. ಹೈಕಮಾಂಡ್ ಸೂಚನೆ ಮೇರೆಗೆ ಹೋಗಿ ಸ್ಪರ್ಧಿಸಿದ್ದೆ. ಎರಡು ಕ್ಷೇತ್ರಗಳನ್ನು ಚಾಲೇಂಜ್ ಆಗಿ ತೆಗೆದುಕೊಂಡಿದ್ದೆ. ಪ್ರತಿಯೊಂದಕ್ಕೂ ಕಾಲ ಅಂತ ಇರುತ್ತೇ ಎಂದಿದ್ದಾರೆ. ನನ್ನ ಕ್ಷೇತ್ರ ಚಿನ್ನದಂತೆ ಇತ್ತು. ಹೈಕಮಾಂಡ್ ಹೇಳಿತೆಂದು ಹೋದೆ. ಈಗ …

Read More »

ಶಾಂಗ್ರಿಲಾ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಮುಂದಿನ ಸಿಎಂ ಆಯ್ಕೆ ಪ್ರಕ್ರಿಯೆ ನಡೆದಿದೆ. ಕಾಂಗ್ರೆಸ್ ವೀಕ್ಷಕರಾಗಿ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್, ದೀಪಕ್ ಬಬಾರಿಯಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ಡಿ.ಕೆ.ಶಿವಕುಮಾರ್ ಸದಾಶಿವನಗರದ ತಮ್ಮ ನಿವಾಸದಲ್ಲಿ ಕಾಂಗ್ರೆಸ್ ನ 50-60 ಶಾಸಕರ ಸಭೆ ನಡೆಸಿ …

Read More »

ಬಿಜೆಪಿ ದುರಾಡಳಿತಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ: ಗಾಲಿ ಜನಾರ್ದನ ರೆಡ್ಡಿ

ಕೊಪ್ಪಳ : ಬಿಜೆಪಿ ಸರ್ಕಾರದ ದುರಹಂಕಾರ, ದುರಾಡಳಿತ ಮತ್ತು ಭ್ರಷ್ಟಾಚಾರದಿಂದಾಗಿ ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ರಾಜ್ಯದ ಜನತೆ ಒಂದು ಸ್ಪಷ್ಟ ಬಹುಮತದ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ನಿರ್ಧರಿಸಿರುವುದು ಈ ಚುನಾವಣೆಯ ಫಲಿತಾಂಶದಿಂದ ಗೊತ್ತಾಗುತ್ತದೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಳ್ಳಾರಿಯಿಂದ ಗಂಗಾವತಿ ಜನರನ್ನು ನಂಬಿಕೊಂಡು ಬಂದಿದ್ದೆ. ನನ್ನ ಕೈ ಬಿಡದೇ …

Read More »

ಕರ್ನಾಟಕ ಚುನಾವಣೆಯಲ್ಲಿ NOTA ಒತ್ತಿದ 2.6 ಲಕ್ಷಕ್ಕೂ ಹೆಚ್ಚು ಮತದಾರರು

ನವದೆಹಲಿ: ಮೇ 10 ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ನಿನ್ನೆ(ಶನಿವಾರ) ಹೊರಬಿದ್ದಿದೆ. ಕಾಂಗ್ರೆಸ್​ ಪಕ್ಷ ಬಹುಮತ ಪಡೆಯುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ. ಆದ್ರೆ, ಈ ಬಾರಿಯ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ 2.6 ಲಕ್ಷಕ್ಕೂ ಹೆಚ್ಚು ಮತದಾರರು ‘ಮೇಲಿನ ಯಾವುದೂ ಅಲ್ಲ’ ಅಥವಾ NOTA ಆಯ್ಕೆ ಬಳಸಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳು ತಿಳಿಸಿವೆ. ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ಲಭ್ಯವಿದ್ದ ಅಂಕಿಅಂಶಗಳ ಪ್ರಕಾರ, “ಬುಧವಾರದಂದು …

Read More »

ಹತ್ತರಗಿ ಹತ್ತಿರ ಟೋಲ್ ನಾಕಾ ಬಳಿ ಕಾಡಾನೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಸಮೀಪ ಹತ್ತರಗಿಯಲ್ಲಿ ಕಾಡಿನಿಂದ ಆಹಾರ ಹುಡುಕುತ್ತಾ ಆನೆಯೊಂದು ನಾಡಿಗೆ ಬಂದಿದೆ ಎನ್ನಲಾಗಿದೆ.ಇನ್ನೂ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೆಟಿ ನೀಡಿ ಆನೆಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲು ಸಿದ್ದತೆ ನಡೆಸಿದ್ದಾರೆ. ರಾಷ್ಟಿಯ ಹೇದ್ದಾರಿ 4 ಕ್ಕೆ ಹೊಂದಿಕೊಂಡಿರುವ ರಿಲಾಯನ್ಸ ಪೆಟ್ರೊಲ್ ಪಂಪನಲ್ಲಿ ಆನೆಯನ್ನು ಕಂಡು ಸ್ಥಳಿಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ, ವಿಷಯ ತಿಳಿದ ಅರಣ್ಯ ಅಧಿಕಾರಿಗಳು ಆನೆಯನ್ನ ಹಿಡಿಯಲು ಸಿದ್ದತೆ …

Read More »

ಪಾಕಿಸ್ತಾನ ಪರ ಘೋಷಣೆ: ಕಠಿಣ ಕ್ರಮಕ್ಕೆ ಬಸವರಾಜ ಹೂಗಾರ ಆಗ್ರಹ

ಬೆಳಗಾವಿಯಲ್ಲಿ ಪಾಕಿಸ್ತಾನ ಪರವಾಗಿ ಘೋಷಣೆ ಹಾಕಿರುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ್ ಹೂಗಾರ ಒತ್ತಾಯಿಸಿದರು. ವಿಜಯಪುರ ನಗರದಲ್ಲಿ ರವಿವಾರ ಮಾತನಾಡಿದ ಅವರು, ನಿನ್ನೆ ಬೆಳಗಾವಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದಾರೆ. ಇದು ಖಂಡನೀಯ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ತಕ್ಷಣವೇ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು …

Read More »

ಎರಡು ದಶಕಗಳ ಚುನಾವಣಾ ಇತಿಹಾಸದಲ್ಲೇ ಜೆಡಿಎಸ್​ ಅತ್ಯಂತ ಕಳಪೆ ಸಾಧನೆ!

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ‘ಕಿಂಗ್​ ಮೇಕರ್’ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಬಯಕೆಗೆ ರಾಜ್ಯದ ಮತದಾರ ಪ್ರಭುಗಳು ತಣ್ಣೀರೆರೆಚಿದ್ದಾರೆ. ಈ ಬಾರಿ ಕೂಡ ಅತಂತ್ರ ಫಲಿತಾಂಶ ಬರುತ್ತದೆ ಎಂದು ಕೆಲವು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು. ಅಂತೆಯೇ, ಕಾಂಗ್ರೆಸ್​ ಅಥವಾ ಬಿಜೆಪಿ ಯಾವುದೇ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಜೆಡಿಎಸ್​ ಬೆಂಬಲ ಅನಿವಾರ್ಯವಾಗುತ್ತದೆ ಎಂದೇ ಹೇಳಲಾಗುತ್ತಿತ್ತು. ಆದರೆ, ಕಾಂಗ್ರೆಸ್​ಗೆ ಸ್ಪಷ್ಟ ಬಹುಮತವನ್ನು ಜನತೆ ನೀಡಿದ್ದಾರೆ. ಇದೇ ವೇಳೆ ಜೆಡಿಎಸ್​ಗೆ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳನ್ನು …

Read More »

ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂDK.ಶಿವಕುಮಾರ್ ನಡುವೆ ನೇರ ಪೈಪೋಟಿ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತ ಸಿಕ್ಕಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಸಿದ್ಧತೆಗಳು ನಡೆದಿವೆ. ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಂಜೆ 5:30ಕ್ಕೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯಾಗಲಿದ್ದಾರೆ. ಸಭೆಯಲ್ಲಿ ಸಿಎಂ ಆಯ್ಕೆಯಾಗಲಿದೆ ಎಂದು ಈಗಾಗಲೇ ಹೈಕಮಾಂಡ್ ತಿಳಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಉತರ ಕರ್ನಾಟಕ ಭಾಗದ ಶಾಸಕರ ವಿಶ್ವಾಸ ಗಳಿಸಲು ಕಸರತ್ತು ನಡೆಸಿದ್ದಾರೆ. ಇನ್ನು ಹಳೇ …

Read More »