Breaking News
Home / ರಾಷ್ಟ್ರೀಯ (page 320)

ರಾಷ್ಟ್ರೀಯ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ದಕ್ಷಿನ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು,ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ …

Read More »

ವಿಧಾನಸಭೆ ಚುನಾವಣೆ ಮತದಾನ ಭರದಿಂದ ಸಾಗಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇಕಡಾ 37.25 ರಷ್ಟು ಮತದಾನ ಆಗಿದೆ.

ಬೆಂಗಳೂರು: ವಿಧಾನಸಭೆ ಚುನಾವಣೆ ಮತದಾನ ಭರದಿಂದ ಸಾಗಿದ್ದು, ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಗೆ ತೆರಳುತ್ತಿದ್ಧಾರೆ. ಮಧ್ಯಾಹ್ನ 1 ಗಂಟೆಯವರೆಗೆ ಮತದಾರರು ಹಕ್ಕು ಚಲಾಯಿಸಿದ ಆಯಾ ಜಿಲ್ಲೆಗಳ ವಿವರ ಇಲ್ಲಿದೆ ನೋಡಿ.. 1 ಬಿಬಿಎಂಪಿ ಸೆಂಟ್ರಲ್​ 19.30% 29.41% 2 ಬಿಬಿಎಂಪಿ ಉತ್ತರ 18.34% 29.90% 3 ಬಿಬಿಎಂಪಿ ದಕ್ಷಿಣ 19.18% 30.68% 4 ಬಾಗಲಕೋಟೆ 23.44% 40.87% 5 ಬೆಂಗಳೂರು ಗ್ರಾಮಾಂತರ 20.23% 4016% 6 ಬೆಂಗಳೂರು ನಗರ 17.72% …

Read More »

ಕೈಕೊಟ್ಟ ಮತಯಂತ್ರಗಳು 9 ಮತಗಟ್ಟೆಗಳಲ್ಲಿ ಮತದಾನ ಸ್ಥಗಿತ

ಬೆಳಗಾವಿ: ಮತಯಂತ್ರಗಳಲ್ಲಿನ ತಾಂತ್ರಿಕ ದೋಷದಿಂದಾಗಿ ಜಿಲ್ಲೆಯ 9 ಮತಗಟ್ಟೆಗಳಲ್ಲಿ ಮತದಾನ ಪ್ಕ್ರಿಯೆ ಕೆಲ ಕಾಲ ಸ್ಥಗಿತಗೊಂಡು ವ್ಯತ್ಯಯ ಉಂಟಾಯಿತು. ಕಿತ್ತೂರು ಪಟ್ಟಣ, ದೇವಗಾಂವ, ಮೂಡಲಗಿ ಪಟ್ಟಣ, ಅರಬಾವಿ, ಕಾದ್ರೊಳ್ಳಿ, ನೇಸರಗಿ, ಉಳ್ಳಿಗೇರಿ, ಅಥಣಿ, ಗಳತಗಾ ಗ್ರಾಮಗಳಲ್ಲಿ ಮತಯಂತ್ರಗಳು ಕೈಕೊಟ್ಟ ಕಾರಣ ಮತದಾನ ಕೆಲ ಕಾಲ ಸ್ಥಗಿತಗೊಂಡಿತು. ಕಿತ್ತೂರು ಪಟ್ಟಣದಲ್ಲಿ ಎರಡೂವರೆ ತಾಸುಗಳ ಕಾಲ ಮತದಾನ ಸ್ಥಗಿತಗೊಂಡಿದ್ದು, ಉಳಿದ ಮತಗಟ್ಟೆಗಳಲ್ಲಿ ಅರ್ಧದಿಂದ ಒಂದು ತಾಸು ಕಾಲ ಮತದಾನ ಪ್ರಕ್ರಿಯೆ ನಿಂತುಹೋಯಿತು. ಇದರಿಂದಾಗಿ ಉತ್ಸಾಹದಿಂದ …

Read More »

ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ರಸ್ತೆಗೆ ಬಡಿದು, ಪುಡಿ ಪುಡಿ ಮಾಡಿ ಗ್ರಾಮಸ್ಥರ ಆಕ್ರೋಶ

ವಿಜಯಪುರ: ವಿಧಾನಸಭಾ ಚುನಾವಣಾ ಮತದಾನ ಒಂದೆಡೆ ಬಿರುಸುಗೊಂದಿದ್ದು, ಇನ್ನೊಂದೆಡೆ ವಿಜಯಪುರದ ಮಸಬಿನಾಳ ಗ್ರಾಮ ರಣಾಂಗಣವಾಗಿ ಮಾರ್ಪಟ್ಟಿದೆ. ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ರಸ್ತೆಗೆ ಬಡಿದು, ಪುಡಿ ಪುಡಿ ಮಾಡಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಅಧಿಕಾರಿಗಳು ಕಾಯ್ದಿರಿಸಿದ್ದ ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ಕೊಂಡೊಯ್ಯುತ್ತಿದ್ದು. ಈ ವೇಳೆ ಮತದಾನ ಪ್ರಕ್ರಿಯೆಯನ್ನು ಅಧಿಕಾರಿಗಳು ಅರ್ಧಕ್ಕೆ ಸ್ಥಗಿತಗೊಳುಸುತ್ತಿದ್ದಾರೆ ಎಂದು ಗ್ರಾಮಸ್ಥರು ತಪ್ಪಾಗಿ ಭಾವಿಸಿ ಅಧಿಕಾರಿಗಳ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳ ವಾಹನವನ್ನು …

Read More »

ಜೋಶಿಮಠದ ಸುರಕ್ಷಿತ ವಲಯದ ಮನೆಗಳಲ್ಲೂ ಬಿರುಕು!

ಜೋಶಿಮಠ: ಉತ್ತರಾಖಂಡದ ಜೋಶಿಮಠದಲ್ಲಿ ಕೆಲವು ತಿಂಗಳ ಹಿಂದೆ ಭಾರೀ ಬಿರುಕುಗಳು ಕಾಣಿಸಿಕೊಂಡು, ಹಲವು ಮನೆಗಳು ಧ್ವಂಸಗೊಂಡಿದ್ದವು. ನೂರಾರು ಮಂದಿ ತಾಪತ್ರಯಕ್ಕೊಳಗಾಗಿದ್ದರು. ಇದೀಗ ಸುರಕ್ಷಿತ ವಲಯ ಎಂದು ಕರೆಸಿಕೊಂಡಿದ್ದ ಜಾಗಗಳಲ್ಲೂ ಬಿರುಕುಗಳು ಕಂಡು ಬಂದಿರು ವುದರಿಂದ ನಿವಾಸಿಗಳು ಆತಂಕಕ್ಕೊಳ ಗಾಗಿದ್ದಾರೆ.ಸದ್ಯದಲ್ಲೇ ಮುಂಗಾರು ಪ್ರವೇಶವಾಗುವ ಕಾರಣ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ.   ಈ ಹಿಂದೆ ಮಳೆ ಬಿದ್ದಾಗಲೇ ಮನೆಗಳಲ್ಲಿ ದೊಡ್ಡದೊಡ್ಡ ಬಿರುಕುಗಳು ಕಾಣಿಸಿಕೊಂಡಿದ್ದವು. ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟಿದ್ದ ಜ್ಯೋತಿರ್ಮಠದಲ್ಲೂ ಬಿರುಕುಗಳುಂಟಾಗಿದ್ದವು. ವಿಚಿತ್ರವೆಂದರೆ ಹಳದಿ ವಲಯ …

Read More »

ಹಾಕಲು ಅಮೆರಿಕದಿಂದ ಲಕ್ಷಾಂತರ ರೂ ಖರ್ಚು ಮಾಡಿ ಬಂದರು, ಆದರೆ ಆಗಿದ್ದೇ ಬೇರೆ!

ದಾವಣಗೆರೆ: ಮತದಾನಕ್ಕಾಗಿಯೇ ದೂರದ ಅಮೇರಿಕಾದಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬಂದಿದ್ದ ವ್ಯಕ್ತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣಕ್ಕೆ ಮತದಾನದಿಂದ ವಂಚಿತರಾಗಿದ್ದಾರೆ. ಅಮೆರಿಕಾದಲ್ಲಿ ಸಾಫ್ಟ್‌ವೇರ್ ಉದ್ಯೋಗಿ ಆಗಿರುವ ರಾಘವೇಂದ್ರ ಕಮಾಲಕರ್ ಮತದಾನಕ್ಕಾಗಿಯೇ ದಾವಣಗೆರೆಗೆ ಬಂದಿದ್ದಾರೆ. ಆದರೆ, ಅವರ ಹೆಸರೇ ಮತದಾನದ ಪಟ್ಟಿಯಲ್ಲಿ ಇರಲಿಲ್ಲ. ಹೀಗಾಗಿ ಮತದಾನ ಮಾಡಲು ಸಾಧ್ಯವಾಗಲಿಲ್ಲ. ಜನವರಿ ತಿಂಗಳಲ್ಲಿ ನನ್ನ ಹೆಸರು ಪಟ್ಟಿಯಲ್ಲಿತ್ತು. ನನಗೆ ಮಾಹಿತಿಯೂ ಬಂದಿತ್ತು. ವಿದ್ಯಾನಗರದ ಮಾಗನೂರು ಬಸಪ್ಪ ಶಾಲೆಯಲ್ಲಿ ನಾನು ಮತ …

Read More »

ಹಲವೆಡೆ ಕೈಕೊಟ್ಟ ಮತಯಂತ್ರ; ಹಸೆಮಣೆ ಏರುವ ಮುನ್ನ ಮತಚಲಾಯಿಸಿದ ನವವಧು

ಚಿಕ್ಕಮಗಳೂರು:ಪ್ರಜಾಪ್ರಭುತ್ವದ ಹಬ್ಬ ಕಾಫಿನಾಡಿನಲ್ಲಿ ಜೋರಾಗಿದ್ದು, ಯುವಕರು, ಯುವತಿಯರು, ಮಹಿಳೆಯರು, ಪುರುಷರು ಅತ್ಯುತ್ಸಹದಿಂದ ಮತಗಟ್ಟೆಗೆ ಆಗಮಿಸಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜಿಲ್ಲೆಯ ಮೂಡಿಗೆರೆಯಲ್ಲಿ ಬುಧವಾರ (ಮೇ 10) ಮದು ಮಗಳು ಹಸೆಮಣೆ ಏರುವ ಮೊದಲು ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಯವ ಮೂಲಕ ಮತದಾನದ ಮಹತ್ವವನ್ನು ಸಾರಿದ್ದಾರೆ. ಮೂಡಿಗೆರೆಯ ಚಂದ್ರಾಪುರ ಗ್ರಾಮದ ಎಸ್.ಎಂ.ರಾಜು ಅವರ ಮಗಳಾದ ಸುಶ್ಮಿತ ಅವರ ವಿವಾಹವು ಬುಧವಾರ ಮೂಡಿಗೆರೆ ರೈತಭವನದಲ್ಲಿ ಇದ್ದು, ಮದುಮಗಳು ಶೃಂಗಾರಗೊಂಡು ಮಾಕೋನ ಹಳ್ಳಿಯಲ್ಲಿ ತೆರೆಯಲಾಗಿದ್ದ …

Read More »

85 ವರ್ಷದ ಹಿರಿಯ ಮಹಿಳೆ ಮತಗಟ್ಟೆಯ ಎದುರೇ ಧರಣಿ ಕುಳಿತು ಆಕ್ರೋಶ

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ 85 ವರ್ಷದ ಹಿರಿಯ ಮಹಿಳೆಯೊಬ್ಬರು ಮತಗಟ್ಟೆಯ ಎದುರೇ ಧರಣಿ ಕುಳಿತು ಆಕ್ರೋಶ ಹೊರಹಾಕಿದ್ದಾರೆ. ಮುಕ್ತುಂಬೀ ದೊಡ್ಡಮನಿ ಹೆಸರಿನ ಅಜ್ಜಿ ಮುಂಡರಗಿ ಪಟ್ಟಣದ ಮತಗಟ್ಟೆ ಸಂಖ್ಯೆ 53ರಲ್ಲಿ ತಮ್ಮ ಮೊಮ್ಮಗನ ಜೊತೆಗೆ ಮತದಾನಕ್ಕೆ ಬಂದಿದ್ದರು. ಮತಗಟ್ಟೆಯಲ್ಲಿ ಮತ ಚಲಾಯಿಸುವ ವೇಳೆ ಮೊಮ್ಮಗನೊಂದಿಗೆ ಮತಯಂತ್ರದ ಬಳಿ ಹೋಗುವ ಅಜ್ಜಿ ನಿರ್ಧಾರಕ್ಕೆ ಮತಗಟ್ಟೆ ಅಧಿಕಾರಿಗಳು ಅನುಮತಿ ನೀಡಲಿಲ್ಲ. ಅಜ್ಜಿ ಪರಿಪರಿಯಾಗಿ ಹೇಳಿದರೂ ಕೇಳದಿದ್ದಾಗ ಅಧಿಕಾರಿಗಳೇ ಮತ ಚಲಾವಣೆಗೆ ನೆರವಿಗೆ ಬಂದಿದ್ದಾರೆ. ಆದರೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ಶೇ.20.42ರಷ್ಟು ಮತದಾನ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಮತದಾನ ಚುರುಕುಗೊಂಡಿದ್ದು, ಮತದಾರರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಿಗ್ಗೆ 11 ಗಂಟೆಯವರೆಗೆ ರಾಜ್ಯದಲ್ಲಿ ಶೇ.20.99ರಷ್ಟು ಮತದಾನವಾಗಿದೆ. ಬೆಂಗಳುರು ಕೇಂದ್ರದಲ್ಲಿ ಶೇ.19.30ರಷ್ಟು ಮತದಾನ, ಬೆಂಗಳೂರು ಉತ್ತರದಲ್ಲಿ ಶೇ.17.50ರಷ್ಟು ಮತದಾನ, ಬೆಂಗಳೂರು ದಕ್ಷಿಣದಲ್ಲಿ ಶೇ.17ರಷ್ಟು, ಬೆಂಗಳೂರು ನಗರ ಶೇ.17.72ರಷ್ಟು ಮತದಾನ, ಬೆಂಗಳೂರು ಗ್ರಾಮಾಂತರ ಶೇ.20.23ರಷ್ಟು ಮತದಾನವಾಗಿದೆ.   ಬೆಳಗಾವಿ ಜಿಲ್ಲೆಯಲ್ಲಿ ಶೇ.20.42ರಷ್ಟು ಮತದಾನವಾಗಿದೆ. ಕೊಡಗು ಶೇ.26.49ರಷ್ಟು ಮತದಾನ, ಕೊಪ್ಪಳದಲ್ಲಿ ಶೇ.21.46ರಷ್ಟು …

Read More »

ಮತದಾನಕ್ಕೆ ಬಂದಿದ್ದ ವೃದ್ಧೆ ಕುಸಿದು ಬಿದ್ದು ಸಾವು

ಬೆಳಗಾವಿ: ವಿಧಾನಸಭಾ ಚುನವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತದಾನ ಚುರುಕುಗೊಂಡಿದ್ದು, ಬೆಳಗಾವಿಯ ಸವದತ್ತಿಯಲ್ಲಿ ಮತದಾನಕ್ಕೆಂದು ಬಂದ ವೃದ್ಧೆಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸವದತ್ತಿ ಯೆಲ್ಲಮ್ಮ ಕ್ಷೇತ್ರ ವ್ಯಾಪ್ತಿಯ ಯರಝರ್ವಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಪಾರವ್ವ ಸಿದ್ನಾ (70) ಮೃತ ಮಹಿಳೆ. ಮತಚಲಾಯಿಸಲು ಮತದಾರರ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಪಾರವ್ವ ಅವರು ಲೋ ಬಿಪಿಯಿಂದಾಗಿ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More »