Breaking News

ರಾಷ್ಟ್ರೀಯ

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು/ನವದೆಹಲಿ: ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕುಳಿತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಮಾಜಿ ಸಿಎಂ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸಂಸತ್‌ ಭವನದ ಪ್ರಧಾನಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆಗೂಡಿ ಭೇಟಿ ಮಾಡಿ, ಮಾತುಕತೆ ನಡೆಸಿದ ಬಳಿಕ …

Read More »

ಕೋವಿಡ್​ ನಿರ್ವಹಣೆಗೆ ಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದ ಸಿಎಂ

ಬೆಂಗಳೂರು: ಕೋವಿಡ್ ನಿರ್ವಹಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಆರೋಗ್ಯ ಇಲಾಖೆಗೆ ಸೂಚಿಸಲಾಗಿದ್ದು, ನಿರ್ವಹಣೆಗೆ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಔಷಧ ಖರೀದಿ, ಮಾಸ್ಕ್ ಕಡ್ಡಾಯ ಸೇರಿದಂತೆ ಎಲ್ಲ ವಿಷಯವನ್ನೂ ಸಮಿತಿ ನಿರ್ಧರಿಸಲಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲೇ ಉಪಸಮಿತಿ ರಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಭೆ ನಡೆಸಿದ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇಂದು ಆರೋಗ್ಯ, ವೈದ್ಯಕೀಯ, ಗೃಹ, …

Read More »

ಪ್ರಮುಖ3 ಆರೋಪಿಗಳನ್ನ ಕಸ್ಟಡಿಗೆ ತೆಗೆದುಕೊಂಡ ಸಿಐಡಿ ತಂಡ

ಬೆಳಗಾವಿ: ಇಲ್ಲಿನ ವಂಟಮೂರಿ ಎಂಬಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ತಂಡವು ಕಸ್ಟಡಿಗೆ ತೆಗೆದುಕೊಂಡು ತನಿಖೆ ಆರಂಭಿಸಿದೆ. ಬೆಳಗಾವಿಯ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಮೊದಲನೇ ಆರೋಪಿ ಬಸಪ್ಪ ರುದ್ರಪ್ಪ ನಾಯಕ, ಎರಡು ಮತ್ತು ಮೂರನೇ ಆರೋಪಿಗಳಾದ ರಾಜು ರುದ್ರಪ್ಪ ನಾಯಕ, ಶಿವಪ್ಪ ರಾಯಪ್ಪ ವಣ್ಣೂರ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ಅಧಿಕಾರಿಗಳ ತಂಡ ವಿಚಾರಣೆ …

Read More »

ರಕ್ತದಾನದ ಮೂಲಕ ಅತಿಥಿ ಉಪನ್ಯಾಸಕರ ವಿನೂತನ ಪ್ರತಿಭಟನೆ

ಚಿಕ್ಕೋಡಿ(ಬೆಳಗಾವಿ): ಸೇವಾ ಖಾಯಮಾತಿಗಾಗಿ ಒತ್ತಾಯಿಸಿ ಕಳೆದ 28 ದಿನಗಳಿಂದ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರಿದಿದೆ. ಈ ನಿಟ್ಟಿನಲ್ಲಿ ಸರ್ಕಾರ ಗಮನ ಸೆಳೆಯಲು ರಕ್ತದಾನ ಮಾಡಿ ವಿನೂತನವಾಗಿ ಚಿಕ್ಕೋಡಿಯಲ್ಲಿ ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಾದ್ಯಂತ ಕಳೆದ ಒಂದು ತಿಂಗಳಿನಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಆಯಾ ತಾಲೂಕು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ 14 ಸಾವಿರ ಅತಿಥಿ …

Read More »

ಸೂರಜ್​ ರೇವಣ್ಣಗೆ ಬಿಗ್​ ರಿಲೀಫ್​: ಎಂಎಲ್​ಸಿ ಸ್ಥಾನ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಸೂರಜ್ ರೇವಣ್ಣ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಅನೂರ್ಜಿತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶಿಸಿದೆ. ಡಾ.ಸೂರಜ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೊಳೆನರಸೀಪುರದ ಕಾಮಸಮುದ್ರ ಗ್ರಾಮದ ಎಲ್.ಹನುಮೇಗೌಡ ಅವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಹಾಸನ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ …

Read More »

ವ್ಯಕ್ತಿಯ ಹೊಟ್ಟೆಯಲ್ಲಿತ್ತು 99 ಕೊಕೇನ್ ಕ್ಯಾಪ್ಸುಲ್!

Cocaine smuggling: ಬೆಂಗಳೂರು ಡಿಆರ್‌ಐ ಅಧಿಕಾರಿಗಳು ಅತಿದೊಡ್ಡ ಕೊಕೇನ್ ಕಳ್ಳಸಾಗಣೆ ಭೇದಿಸಿದ್ದು, ಕಳ್ಳಸಾಗಾಣಿಕೆದಾರನ ಹೊಟ್ಟೆಯಲ್ಲಿದ್ದ 99 ಕೊಕೇನ್ ಕ್ಯಾಪ್ಸುಲ್ ವಶಕ್ಕೆ ಪಡೆದಿದ್ದಾರೆ. ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣ ಮೂಲಕ ಸುಮಾರು 20 ಕೋಟಿ ರೂಪಾಯಿ ಮೌಲ್ಯದ 2 ಕೆ.ಜಿ ಕೋಕೆನ್ ಕ್ಯಾಪ್ಸುಲ್ ಸಾಗಿಸುತ್ತಿದ್ದ ನೈಜಿರಿಯಾ ಮೂಲದ‌ ಪ್ರಯಾಣಿಕನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಬೆಂಗಳೂರು ಘಟಕದ (Directorate of Revenue Intelligence) ಅಧಿಕಾರಿಗಳು ಬಂಧಿಸಿದ್ದಾರೆ.   ಫ್ಲೈ ಇಥಿಯೋಪಿಯಾ ವಿಮಾನದಲ್ಲಿ …

Read More »

ಸೈಕಲ್ ಮೂಲಕ ದೇಶ ಪರ್ಯಟನೆ: ಹಾವೇರಿಗೆ ಆಗಮಿಸಿದ ಯುಪಿ ಯುವಕ​

ಹಾವೇರಿ: ಪರಿಸರ ಸಂರಕ್ಷಣೆಗಾಗಿ ಉತ್ತರ ಪ್ರದೇಶ ಇಟಾವಾ ನಗರದ ರಾಬಿನಸಿಂಗ್ ಸೈಕಲ್ ಮೇಲೆ ದೇಶ ಪರ್ಯಟನೆ ಕೈಗೊಂಡಿದ್ದಾರೆ. 2022 ಆಕ್ಟೋಬರ್ 6 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾಗಿರುವ ಇವರ ಸೈಕಲ್ ಯಾತ್ರೆ ಈಗಾಗಲೇ 26 ಸಾವಿರ ಕಿಲೋ ಮೀಟರ್ ಪ್ರವಾಸ ಪೂರ್ಣಗೊಂಡಿದೆ. ಸೈಕಲ್ ಜಾಥಾ ಆರಂಭಿಸಿ ಇಂದಿಗೆ 440 ದಿನವಾಗಿದ್ದು, ಈ ದಿನ ಹಾವೇರಿಗೆ ಆಗಮಿಸಿದ್ದಕ್ಕೆ ರಾಬಿನಸಿಂಗ್ ಸಂತಸ ವ್ಯಕ್ತಪಡಿಸಿದರು. ತಮಿಳನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಜಾರ್ಖಂಡ್​, ಪಶ್ಚಿಮ ಬಂಗಾಳ, …

Read More »

ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಮಂಗಳೂರು: ಹಿರಿಯ ಚಿಂತಕ, ಲೇಖಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಈ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಇವರ ‘ಮಹಾಭಾರತ ಅನುಸಂಧಾನದ ಭಾರತಯಾತ್ರೆ’ ಎಂಬ ಪ್ರಬಂಧ ಕೃತಿಗೆ ಪ್ರಶಸ್ತಿ ಸಂದಿದೆ.   ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದವರಾದ ಲಕ್ಷ್ಮೀಶ ತೋಳ್ಪಾಡಿಯವರದ್ದು ಸಂತನಂತಹ ಬದುಕು. ಸದಾ ಆಧ್ಯಾತ್ಮಿಕ ಚಿಂತನೆ ಹೊಂದಿರುವವರು. ಜೊತೆಗೊಂದಿಷ್ಟು ಬರಹ, ಮಾತು, ಮೌನ ಎಲ್ಲವನ್ನೂ ಒಳಗಿಟ್ಟುಕೊಂಡವರು. ಇವರು ಬರೆದಿರುವ ಅನೇಕ ಲೇಖನಗಳು ನಾಡಿನ …

Read More »

ರಾಜ್ಯ ಗಿಗ್ ಕಾರ್ಮಿಕರು ಮತ್ತು ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಜೀವ ವಿಮೆ ಹಾಗೂ ಅಪಘಾತ ಪರಿಹಾರ ಯೋಜನೆ ಜಾರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ಜೀವ ವಿಮೆ ಹಾಗೂ ಅಪಘಾತ ಪರಿಹಾರ ಯೋಜನೆ ಮತ್ತು ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯ ಜಾರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ.   ಗಿಗ್ ಕಾರ್ಮಿಕರುಗಳಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ, ಎರಡು ಲಕ್ಷ ರೂ.ಗಳ ಜೀವ ವಿಮಾ ಸೌಲಭ್ಯ ಹಾಗೂ ಎರಡು ಲಕ್ಷ ರೂ.ಗಳ ಅಪಘಾತ ವಿಮಾ ಸೌಲಭ್ಯ ಸೇರಿದಂತೆ …

Read More »

ಪರೀಕ್ಷಾ ಅಕ್ರಮ: ಆರ್‌.ಡಿ.ಪಾಟೀಲ್ ಸೇರಿ 12 ಆರೋಪಿಗಳ ಮೇಲೆ ಕೋಕಾ ಆಯಕ್ಟ್‌ನಡಿ ಪ್ರಕರಣ

ಕಲಬುರಗಿ: ಪಿಎಸ್‌ಐ ನೇಮಕಾತಿ‌ ಪರೀಕ್ಷೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ಎಸಗಿದ ಪ್ರಮುಖ ಆರೋಪಿ ಆರ್‌.ಡಿ.ಪಾಟೀಲ್ ಸೇರಿ 12 ಜನ ಆರೋಪಿಗಳ ಮೇಲೆ ಕೋಕಾ ಆಯಕ್ಟ್ ಜಾರಿಗೊಳಿಸಲಾಗಿದೆ. ಪದೇ ಪದೇ ಒಂದೇ ರೀತಿಯ ಅಪರಾಧ ಕೃತ್ಯ ಮುಂದುವರೆಸುವವರ ವಿರುದ್ದ (ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ) ಕೋಕಾ ಅಸ್ತ್ರ ಪ್ರಯೋಗಿಸಲಾಗುತ್ತದೆ.‌ ಅಶೋಕ ನಗರ ಠಾಣೆ ವ್ಯಾಪ್ತಿಯ ಖಾಸಗಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಬಳಸಿದ …

Read More »