Breaking News

ರಾಷ್ಟ್ರೀಯ

ಗೃಹಲಕ್ಷ್ಮಿ ಯೋಜನೆ ಶೇಕಡ 95ರಷ್ಟು ತಲುಪಿದ್ದು, ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು, ನ  ): ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಶೇಕಡ 95ರಷ್ಟು ಮನೆಯ ಒಡತಿಯರಿಗೆ ತಲುಪಿದ್ದು, ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಬಿಡಬ್ಲ್ಯುಎಸ್ಎಸ್ ಬಿ ಕಚೇರಿಯಲ್ಲಿರುವ ಬೆಂಗಳೂರು ಒನ್ ಕೇಂದ್ರದಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ತರಬೇತಿ ಕುರಿತು ಸಚಿವರು …

Read More »

ಮುರುಘಾಶರಣರಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್,ಜಾಮೀನು ಸಿಕ್ಕರೂ ಸದ್ಯಕ್ಕೆ ಮುರುಘಾಶ್ರೀ ಬಿಡುಗಡೆ ಇಲ್ಲ

ಬೆಂಗಳೂರು : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಬಂಧನಕ್ಕೆ ಒಳಗಾಗಿ ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಆಲಿಸಿದ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಮುರುಘಾ ಶರಣರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಅವರ ಪೀಠ ಈ ಆದೇಶ ನೀಡಿದೆ. …

Read More »

ವಿಧಾನಸಭೆ ಚುನಾವಣೆ: ಛತ್ತೀಸ್‌ಗಢದಲ್ಲಿ ಶೇ.71, ಮಿಜೋರಾಂನಲ್ಲಿ ಶೇ.78ರಷ್ಟು ಮತದಾನ

ಛತ್ತೀಸ್‌ಗಢ/ಮಿಜೋರಾಂ: ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನದಲ್ಲಿ 20 ಸ್ಥಾನಗಳಿಗೆ ನಡೆದ ಮತದಾನದ ಅಂಕಿಅಂಶಗಳನ್ನು ಕೇಂದ್ರ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. 20 ವಿಧಾನಸಭೆಗಳ ಪೈಕಿ ಭಾನುಪ್ರತಾಪುರದಲ್ಲಿ ಅತಿ ಹೆಚ್ಚು ಶೇ.79 ರಷ್ಟು ಮತದಾನ ದಾಖಲಾಗಿದೆೆ. ಬಿಜಾಪುರದಲ್ಲಿ ಅತಿ ಕಡಿಮೆ ಶೇ.40.98 ರಷ್ಟು ಮತದಾನ ದಾಖಲಾಗಿದೆ. ಒಟ್ಟಾರೆ ಶೇ.71.48 ರಷ್ಟು ಮತದಾನವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 18 ಸ್ಥಾನಗಳಿಗೆ ಶೇ.76.47ರಷ್ಟು ಮತದಾನವಾಗಿತ್ತು. ಆದರೆ ಈ ಬಾರಿ ಮೊದಲ ಹಂತದಲ್ಲಿ ಮತ್ತೆರಡು …

Read More »

4 ಗ್ಯಾರಂಟಿಗಳಿಗೆ ರಾಜ್ಯ ಸರ್ಕಾರ ಈವರೆಗೆ ಬಿಡುಗಡೆ ಮಾಡಿದ ಅನುದಾನವೆಷ್ಟು? ಸಂಪೂರ್ಣ ವಿವರ

ಬೆಂಗಳೂರು: ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಕೇಂದ್ರೀಕೃತ ಆಡಳಿತ ನಡೆಸುತ್ತಿದೆ‌. ಇವುಗಳ ಅನುಷ್ಠಾನಕ್ಕೆ ಹಣ ಕೊರತೆಯಾಗದಂತೆ ಕಸರತ್ತು ನಡೆಸುತ್ತಿದೆ. ಇತ್ತ ಕೆಲವು ಗ್ಯಾರಂಟಿಗಳ ಹಣ ಫಲಾನುಭವಿಗಳಿಗೆ ತಲುಪದೇ ಇರುವ ಆರೋಪಗಳ ಮಧ್ಯೆ ಸರ್ಕಾರವು ಅಕ್ಟೋಬರ್​ವರೆಗೆ ನಾಲ್ಕು ಗ್ಯಾರಂಟಿಗಳಿಗೆ ಮಾಡಿದ ವೆಚ್ಚ, ಅನುದಾನ ಬಿಡುಗಡೆ ವಿವರದ ಸಮಗ್ರ ವರದಿ ಇಲ್ಲಿದೆ. 2023-24ನೇ ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗಾಗಿ ರಾಜ್ಯ ಸರ್ಕಾರ ಸುಮಾರು 40,000 ಕೋಟಿ ರೂ.‌ ಅನುದಾನ ಹಂಚಿಕೆ ಮಾಡಿದೆ. ಶಕ್ತಿ, ಅನ್ನಭಾಗ್ಯ, ಗೃಹ …

Read More »

ರಾಜ್ಯದ 1000 ಸ್ಮಾರಕಗಳನ್ನು ದತ್ತು ಕೊಡುವ ಉದ್ದೇಶವಿದೆ: ಸಚಿವ ಹೆಚ್ ಕೆ ಪಾಟೀಲ್

ಕಲಬುರಗಿ: ರಾಜ್ಯದಲ್ಲಿ ಒಟ್ಟು 1000 ಸ್ಮಾರಕಗಳನ್ನು ದತ್ತು ಕೊಡುವ ಉದ್ದೇಶವಿದ್ದು, ಎರಡು ವರ್ಷದಲ್ಲಿ ಈಡೇರಿಸುವ ಆಸೆ ಇದೆ. ಈ ಎಲ್ಲ ಸ್ಮಾರಕಗಳ ರಕ್ಷಣೆ ಆ ಬಗ್ಗೆ ಪುಸ್ತಕಗಳ ಪ್ರಕಟಣೆ ಸೇರಿದಂತೆ ಜನರಿಗೆ ತಿಳಿವಳಿಕೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಂಸದೀಯ ಹಾಗೂ ಪ್ರವಾಸೋದ್ಯಮ‌ ಸಚಿವ ಹೆಚ್ ಕೆ ಪಾಟೀಲ್ ಹೇಳಿದರು. ನಮ್ಮ ಸ್ಮಾರಕದರ್ಶನ ಹಾಗೂ ಸಂರಕ್ಷಣೆಗಾಗಿ ಪ್ರವಾಸ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಇತಿಹಾಸಕಾರರು ನಾಗಾವಿ …

Read More »

ಮಹಾರಾಷ್ಟ್ರ ಏಕೀಕರಣ ಸಮಿತಿ ಬಲ ಸಂಪೂರ್ಣ ಕುಗ್ಗಿದೆ: ಬಸವರಾಜ್ ಹೊರಟ್ಟಿ

ಬೆಳಗಾವಿ: ಸುವರ್ಣ ವಿಧಾನಸೌಧ ನಿರ್ಮಾಣದಿಂದ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಕ್ಷೀಣವಾಗಿದೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಬಲ ಸಂಪೂರ್ಣ ಕುಗ್ಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು. ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ಅಧಿವೇಶನ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗಡಿಜಿಲ್ಲೆಯಲ್ಲಿ ವಿಧಾನಸೌಧ ನಿರ್ಮಾಣದಿಂದ ಕನ್ನಡಕ್ಕೆ ಸ್ಫೂರ್ತಿ ಬಂದಂತಾಗಿದೆ. ಅನೇಕ ಸರಕಾರಿ ಕಚೇರಿಗಳು ಕೂಡ ಸ್ಥಳಾಂತರಗೊಂಡಿವೆ. ಇದರಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಸದ್ಯಕ್ಕೆ …

Read More »

SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-1ಕ್ಕೆ ನೋಂದಣಿಗೆ ನ.15ರ ವರೆಗೆ ಅವಕಾಶ

ಬೆಂಗಳೂರು: ಮಾರ್ಚ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ಕ್ಕೆ ನೋಂದಣಿ ಮಾಡಿಕೊಳ್ಳುವ ಅವಧಿ ಯನ್ನು ನ.15ರ ವರೆಗೆ ವಿಸ್ತರಣೆ ಮಾಡಲಾಗಿದ್ದು ಈ ಅವಕಾಶವನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಬಹುದಾಗಿದೆ. 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 3 ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಇದರಲ್ಲಿ ಪರೀಕ್ಷೆ-1 ಕ್ಕೆ ಅರ್ಹ ವಿದ್ಯಾರ್ಥಿಗಳು ನೋಂದಣಿ ಮಾಹಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೆಬ್‌ಸೈಟ್‌ ನಲ್ಲಿ ಶಾಲಾ ಲಾಗಿನ್‌ ಮೂಲಕ ಪಡೆಯಲು ತಿಳಿಸಲಾಗಿದೆ. ಈ ಹಿಂದೆ ಆನ್ ಲೈನ್ …

Read More »

ಕರ್ನಾಟಕ ಲೋಕಸೇವಾ ಆಯೋಗ 30 ಇಲಾಖೆಗಳ 3000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಮುಂದಿನ ವರ್ಷ?

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 30 ಇಲಾಖೆಗಳ 3000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಿದೆ. ಮುಂದಿನ ವರ್ಷ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂಬಂಧ ಅಂದಾಜು ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ. ವಿವಿಧ ಹಂತದ ಹುದ್ದೆಗಳಿಗೆ ನೇಮಕಾತಿ ಮಾಡಿಕೊಡಲು 30 ಇಲಾಖೆಗಳಿಂದ ಪ್ರಸ್ತಾವನೆ ಬಂದಿದ್ದು, ಸುಮಾರು ಮೂರು ಸಾವಿರ ಹುದ್ದೆಗಳು ಇವೆ. ಈ ಹುದ್ದೆಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಪ್ರಸಕ್ತ ವರ್ಷಾಂತ್ಯಕ್ಕೆ ಮುಂದಿನ ವರ್ಷದಲ್ಲಿ ನಡೆಸಬೇಕಾಗಿರುವ ನೇಮಕಾತಿ ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ. ನೇಮಕಾತಿ ಬಗ್ಗೆ ಮಾಹಿತಿ …

Read More »

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಕುರಿತ ಚರ್ಚೆಗೆ ಎರಡು ದಿನ‌ ಮೀಸಲು: ಬಸವರಾಜ ಹೊರಟ್ಟಿ

ಬೆಳಗಾವಿ: ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ವಿಧಾನ ಪರಿಷತ್​ನಲ್ಲಿ ಎರಡು ದಿನ‌ ಮೀಸಲಿಡುವುದರ ಜೊತೆಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ಅವರ ಜೊತೆಗೆ ಅಧಿವೇಶನ ಸಿದ್ಧತೆ ಪರಿಶೀಲಿಸಿದ ಬಳಿಕ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಮೊದಲ ವಾರದ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಮಂಗಳವಾರ ಮತ್ತು ಬುಧವಾರ ಎರಡು ದಿನ …

Read More »

ಸಿದ್ದರಾಮಯ್ಯರಿಂದ ಹಾಸನಾಂಬೆ, ಸಿದ್ದೇಶ್ವರಸ್ವಾಮಿ ದೇವರ ದರ್ಶನ; ಮಳೆಗಾಗಿ ಸಿಎಂ ಪ್ರಾರ್ಥನೆ

ಹಾಸನ: ಸಿಎಂ ಸಿದ್ದರಾಮಯ್ಯನವರು ಮಂಗಳವಾರ ಹಾಸನಾಂಬೆ ದೇವಿ ಮತ್ತು ಸಿದ್ದೇಶ್ವರಸ್ವಾಮಿ ದೇವರ ದರ್ಶನ ಪಡೆದು ರಾಜ್ಯದಲ್ಲಿ ಮಳೆಗಾಗಿ ಪ್ರಾರ್ಥಿಸಿದರು. ದೇವರ ದರ್ಶನದ ಬಳಿಕ ಮಾತನಾಡಿ, ಉಸ್ತುವಾರಿ ಸಚಿವ ರಾಜಣ್ಣ ಅವರು ನನಗೆ ಹಾಸನಾಂಬೆ ದೇವಿಯ ಪೂಜೆ ಇದೆ, ಆಶೀರ್ವಾದ ಪಡೆಯಿರಿ ಎಂದು ಹೇಳಿದರು. ಹೀಗಾಗಿ ಇದೇ ಮೊದಲ ಬಾರಿಗೆ ಹಾಸನಾಂಬೆ ದರ್ಶನ ಪಡೆದಿದ್ದೇನೆ. ರಾಜಣ್ಣ ಅವರ ಮಾರ್ಗದರ್ಶನದಲ್ಲಿ ಹಾಸನಾಂಬೆ ಪೂಜೆ ಚೆನ್ನಾಗಿ ಆಗಿದೆ. ಲಕ್ಷಾಂತರ ಜನರು ಭಾಗಿಯಾಗಿ ಹಾಸನಾಂಬೆಯ ಕೃಪೆಯನ್ನು …

Read More »