Breaking News
Home / ರಾಷ್ಟ್ರೀಯ (page 339)

ರಾಷ್ಟ್ರೀಯ

ಕೃಷ್ಣಾ ಮತ್ತು ಹಿರಣ್ಯಕೇಶಿ ನದಿಗೆ ನೀರು ಬಿಡಲು ಸಮ್ಮತಿಸಿದ ಡಿಸಿಎಂ ಫಡ್ನವಿಸ್

ಚಿಕ್ಕೋಡಿ : ಕೃಷ್ಣಾ ಮತ್ತು ಹಿರಣ್ಯಕೇಶಿ ನದಿಗೆ ನೀರು ಬಿಡಲು ಮಹಾರಾಷ್ಟ್ರ ಡಿಸಿಎಂ ದೇವೆಂದ್ರ ಫಡ್ನವಿಸ್ ಸಮ್ಮತಿ ಸೂಚಿಸಿದ್ದಾರೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಅವರು ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯಪುರಕ್ಕೆ ಆಗಮಿಸಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ, ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರಿನ ಒಳಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ ಹೆಚ್ಚಿನ ನೀರನ್ನು ಬಿಡುವಂತೆ ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು ಎಂದು ತಿಳಿಸಿದರು. …

Read More »

ಮಹದಾಯಿ ಯೋಜನೆಗೆ ಅನುಮತಿಮತ್ತೆ ರೈತರ ಮೂಗಿಗೆ ತುಪ್ಪ ಸವರಿದ ಸಿಎಂ

ಗದಗ(ನರಗುಂದ) : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಮಹದಾಯಿ ಯೋಜನೆಗೆ ಅನುಮತಿ ನೀಡಿದ್ದು, ಡಿಪಿಆರ್ ಕೂಡ ಸಿದ್ದ ಆಗಿದೆ. ಚುನಾವಣೆಯ ನೀತಿ ಸಂಹಿತೆ ಮುಗಿದ ಕೂಡಲೇ ಯೋಜನೆ ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ನರಗುಂದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಸಿ ಪಾಟೀಲ ಪರ ಪ್ರಚಾರ ನಡೆಸಿದ ಬಳಿಕ ಅವರು ಮಾತನಾಡಿದರು. ಸುಮಾರು ಇಪ್ಪತ್ತು ವರ್ಷಗಳ ಹಿಂದೆ ಇದೇ ರಸ್ತೆಯಲ್ಲಿ ನಿಂತು ಹೋರಾಟ ಮಾಡಿದ್ದೆವು. ಇದೇ ಸ್ಥಳದಿಂದ …

Read More »

ಎರಡು ದಿನಗಳ ಕಾಲ ಬೆಳಗಾವಿ ಪ್ರದೇಶಗಳಲ್ಲಿ ನೀರು ಸರಬರಾಜು ಮಾಡುವ ಷೆಡ್ಯೂಲ್‌ನಲ್ಲಿ ವ್ಯತ್ಯಯ

ಬೆಳಗಾವಿ : ಹಿಡಕಲ್ ಕಚ್ಚಾ ನೀರು ಸರಬರಾಜಿನ 1000 ಎಮ್.ಎಮ್. MS ಮುಖ್ಯ ಕೊಳವೆಯು ಅಂಕಲಗಿ ಹತ್ತಿರ ಗಣನೀಯ ಪ್ರಮಾಣದಲ್ಲಿ ಸೊರಿಕೆ ಉಂಟಾಗಿದ್ದು, ದುರಸ್ಥಿ ಕಾರ್ಯ ಕೈಗೊಳ್ಳಲಾಗುವುದು. ಇದರಿಂದ ಪ್ರಸ್ತುತ ಇರುವ ನೀರು ಸರಬರಾಜು ಷೆಡ್ಯೂಲ್ ಮುಂದಿನ ಎರಡು ದಿನಗಳಿಗೆ ಮುಂದುವರಿಯುತ್ತದೆ. ಹಾಗಾಗಿ ಎರಡು ದಿನಗಳ ಕಾಲ ಬೆಳಗಾವಿ ನಗರದ ಕೆಳಕಂಡ ಪ್ರದೇಶಗಳಲ್ಲಿ ನೀರು ಸರಬರಾಜು ಮಾಡುವ ಷೆಡ್ಯೂಲ್‌ನಲ್ಲಿ ವ್ಯತ್ಯಯ ಉಂಟಾಗುವುದು. ಸರಬರಾಜು ವ್ಯತ್ಯಯ ಉಂಟಾಗುವ ದಕ್ಷಿಣ -ಪ್ರದೇಶಗಳು: ಬ್ರಹ್ಮ ನಗರ, …

Read More »

ಮೋದಿ ಗಾಳಿಯೊಂದನ್ನು ಉಚಿತವಾಗಿ ನೀಡಿ ಎಲ್ಲದರ ಮೇಲೂ ಜಿಎಸ್​​ಟಿಹಾಕಿ ದ್ದಾರೆ

ಬೆಳಗಾವಿ: ಚುನಾವಣಾ ಪ್ರಚಾರವೆಂದು ರಾಜ್ಯಕ್ಕೆ ಅಮಿತ್ ಷಾ ಬಂದು ಮಾತನಾಡುತ್ತಾ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದಂಗೆಗಳು ಏಳುತ್ತವೆ ಎಂದ ಹೇಳಿದ್ದರು. ಅವರ ಈ ಮಾತುಗಳು ಕರ್ನಾಟಕದ ಜನತೆಗೆ ಮಾಡಿದ ಅಪಮಾನ. ಹಿಂದು-ಮುಸ್ಲಿಂ ಜಗಳ ಉಂಟಾಗುವಂತಹ ಪರಿಸ್ಥಿತಿ ನಿರ್ಮಾಣ ಮಾಡುವವರು ಅವರೇ ಎಂದು ಅಮಿತ್ ಷಾ ಹಾಗೂ ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.   ಚಿಕ್ಕೋಡಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಾ, ಅಮಿತ್ ಷಾ ಆಡಿರುವ ಮಾತಿನ …

Read More »

ಲಾಭ ತಗೊಂಡು ಮೋಸ ಮಾಡಿದವರಿಗೆ ಜನತೆ ಬುದ್ಧಿ ಕಲಿಸುತ್ತಾರೆ: ​ ಯತ್ನಾಳ್​

ಜಮಖಂಡಿ: ರಾಜ್ಯ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಈ ಮಧ್ಯ ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಇನ್ನು ಜಮಖಂಡಿ ಬಿಜೆಪಿ ಅಭ್ಯರ್ಥಿ ಜಗದೀಶ್ ಗುಡಗುಂಟಿ ಪರ ಬಿರುಸಿನ ಮತ ಬೇಟೆಯಲ್ಲಿ ತೊಡಗಿರುವ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದಾರೆ.   ಇನ್ನು ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಯತ್ನಾಳ್ ಕಾಂಗ್ರೆಸ್​ನವರು ಯಾರೂ ವೀರಸಾವರ್ಕರ ಚಪ್ಪಲಿ ದೂಳಿಗೂ ಸಮನಲ್ಲ. ಜಮಖಂಡಿ ನಗರದಲ್ಲಿ ವೀರಸಾವರ್ಕರ್ ಹೆಸರು …

Read More »

B.S,Y, ವಿರುದ್ಧ ಘೋಷಣೆ ಕೂಗಿದಸವದಿ ಬೆಂಬಲಿಗರು

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬೆಂಬಲಿಗರು ಘೋಷಣೆ ಕೂಗಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ನಡೆದಿದೆ. ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಂತೆಯೇ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬೆಂಬಲಿಗರು ಯಡಿಯೂರಪ್ಪ ಮೋಸಗಾರ ಎಂದು ಧಿಕ್ಕಾರ ಕೂಗಿದ್ದಾರೆ. ಯಡಿಯೂರಪ್ಪನವರು ಒಂದಲ್ಲ ಇನ್ನೂ ಹತ್ತು ಬಾರಿ ಅಥಣಿಗೆ ಬಂದರೂ ಲಕ್ಷ್ಮಣ ಸವದಿ ಗೆಲ್ಲುತ್ತಾರೆ. ಯಡಿಯೂರಪ್ಪ ಮೋಸಗಾರ ಎಂದು …

Read More »

28 ದಿನದ ಮಗುವಿಗೆ ಉಚಿತ ಹೃದಯ ಶಸ್ತ್ರಚಿಕಿತ್ಸೆಗೆ ನೆರವು:ರೋಟರಿ ಕ್ಲಬ್ ಆಫ್ ಬೆಳಗಾವಿ

ಬೆಳಗಾವಿ: ರೋಟರಿ ಕ್ಲಬ್ ಆಫ್ ಬೆಳಗಾವಿ ಸೌತ್ 28 ದಿನದ ಮಗುವಿಗೆ ಉಚಿತ ಹೃದಯ ಶಸ್ತ್ರಚಿಕಿತ್ಸೆಗೆ ನೆರವು ನೀಡುವ ಮೂಲಕ ಮಾನವೀಯತೆಗೆ ಸಾಕ್ಷಿಯಾಗಿದೆ ಇಂದು ಚಂದಗಡದ ನಡವಾಡೆ ಗ್ರಾಮದ ತನುಜಾ ಕುಂಡೇಕರ್ ಅವರಿಗೆ 28 ದಿನದ ಮಗುವಿಗೆ ಜೀವದಾನದ ಜಾಗತಿಕ ಅನುದಾನ ಯೋಜನೆಯಡಿ ಉಚಿತ ಹೃದಯ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದೆ. ಹೃದಯಾಘಾತದಿಂದ ಜನಿಸಿದ ಮಗುವಿಗೆ ಬೆಳಗಾವಿಯ ಕೆಎಲ್‌ಇ ಡಾ. ಪ್ರಭಾಕರ ಕೋರೆ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಯಲ್ಲಿ ವೈದ್ಯಕೀಯ ತಜ್ಞರ …

Read More »

ಜಗದೀಶ್ ಶೆಟ್ಟರ್ ಸೋಲಿಸೋದು ನನ್ನ ಜವಾಬ್ದಾರಿ

ಅಥಣಿ: ಬಿಜೆಪಿ ಬೆನ್ನಿಗೆ ಚೂರಿ ಹಾಕಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯನ್ನು ಸೋಲಿಸುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಥಣಿ ಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿದ್ದಾರೆ. ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಚುನಾವಣಾ ಪ್ರಚಾರ ನಡೆಸಿದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಬಿಜೆಪಿಗೆ ದ್ರೋಹ ಮಾಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಅವರನ್ನು ಕ್ಷಮಿಸುವ ಮಾತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ …

Read More »

ರೋಡ್ ಶೋ ನಡೆಸುವ ವೇಳೆಮೊಬೈಲ್ ಫೋನ್ ಒಂದು ಮೋದಿಯವರತ್ತ ತೂರಿ ಬಂದಿದೆ.

ಕೊಚ್ಚಿ: ಕೇರಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಕೊಚ್ಚಿಯಲ್ಲಿ ರೋಡ್ ಶೋ ನಡೆಸುವ ವೇಳೆ ಪುಷ್ಪ ವೃಷ್ಟಿಯ ನಡುವೆಯೇ ಮೊಬೈಲ್ ಫೋನ್ ಒಂದು ತೂರಿಬಂದು ಭದ್ರತಾ ವ್ಯವಸ್ಥೆಯನ್ನೇ ಪ್ರಶ್ನಾರ್ಹವಾಗಿಸಿದೆ. ರೋಡ್ ಶೋನಲ್ಲಿ ಪ್ರಧಾನಿ ಮೋದಿ ಕಾಲ್ನಡಿಗೆಯಲ್ಲೇ ಬರುತ್ತಿದ್ದ ವೇಳೆ ಜನ ರಸ್ತೆಯ ಇಕ್ಕೆಲಗಳಲ್ಲಿ ನಿಂತು ವ್ಯಾಪಕ ಪ್ರಮಾಣದಲ್ಲಿ ಪುಷ್ಪ ವೃಷ್ಟಿ ಆರಂಭಿಸಿದ್ದರು. ಈ ವೇಳೆ ಹಠಾತ್ತಾಗಿ ಹೂಮಳೆಯ ಮಧ್ಯೆ ಮೊಬೈಲ್ ಫೋನ್ ಒಂದು ಮೋದಿಯವರತ್ತ ತೂರಿ ಬಂದಿದೆ. ಅದೇನಾದರೂ ಪ್ರಧಾನಿಯವರಿಗೆ ತಗುಲಿದ್ದರೆ …

Read More »

ಲಕ್ಷ್ಮಣ ಸವದಿ ಪಂಚಾಯಿತಿಗೂ ಲಾಯಕ್ಕಿಲ್ಲ: ರಮೇಶ್ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ: ಲಕ್ಷ್ಮಣ ಸವದಿ ಉದ್ದ ಅಂಗಿ ಹಾಕಿಕೊಂಡು ಬರುತ್ತಿದ್ದಕ್ಕೆ ದೊಡ್ಡವನು ಅಂತಾ ತಿಳಿದಿದ್ದರು. ಆದರೆ ಬಿಜೆಪಿ ನಾಯಕರಿಗೆ ಆತ ಮೋಸ ಮಾಡಿದ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಅಥಣಿಯಲ್ಲಿ ಮಾತನಾಡಿದ ರಮೇಶ್ ಜರಕಿಹೊಳಿ, ಲಕ್ಷ್ಮಣ ಸವದಿಗೆ ಬಿಜೆಪಿಯಲ್ಲಿ ಏನು ಅನ್ಯಾಯ ಆಗಿತ್ತು? ಮಹೇಶ್ ಕುಮಟಳ್ಳಿಗೆ ಅನ್ಯಾಯವಾಗಿತ್ತು. ಸವದಿ ಸೋತಿದ್ದರೂ ಆತನಿಗೆ ಎಲ್ಲಾ ಸ್ಥಾನಮಾನ ನೀಡಲಾಗಿತ್ತು. ಒಳ್ಳೆಯ ಉದ್ದೇಶಕ್ಕಾಗಿ ಡಿಸಿಎಂ ಮಾಡಿದರು. ಆದರೆ ಆತ ಪಂಚಾಯಿತಿಗೂ ಲಾಯಕ್ಕಿಲ್ಲ …

Read More »