Breaking News

ರಾಷ್ಟ್ರೀಯ

ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ

ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ ಬಿಎಸ್ಎಫ್ ಯೋಧ ದಗಡು ಪೂಜಾರಿ ರಜೆಯ ಮೇಲೆ ಗ್ರಾಮಕ್ಕೆ ಮರಳಿದ್ದಾಗ ಆರೋಗ್ಯ ಸಮಸ್ಯೆಯಿಂದ ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಮೃತ ಯೋಧರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಯೋಧನು ಅಸ್ಸಾಂ ರಾಜ್ಯದ ಗುವಾಹಟಿಯ170 ಬಟಾಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಯೋಧನ ಸ್ವಗ್ರಾಮದ ತೋಟದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಂತ್ಯಕ್ರಿಯೆಯಲ್ಲಿ ಸರ್ಕಾರಿ ಅಧಿಕಾರಿಗಳು ಗ್ರಾಮದ ಮುಖಂಡರು ಭಾಗಿಯಾಗಿದ್ದರು

Read More »

ಗಮನ ಸೆಳೆದ ಕೇರಳದ ಕೊಟ್ಟಿಯೂರು ಕ್ಷೇತ್ರ

ಬಂಟ್ವಾಳ(ದಕ್ಷಿಣ ಕನ್ನಡ): ಈ ವರ್ಷ ಇದ್ದಕ್ಕಿದ್ದಂತೆ ಕೇರಳದ ಪುಣ್ಯಕ್ಷೇತ್ರವೊಂದು ಗಮನ ಸೆಳೆಯುತ್ತಿದೆ. ಸೋಶಿಯಲ್​​ ಮೀಡಿಯಾದಲ್ಲಂತೂ ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಕ್ರೇಜ್​ ಸೃಷ್ಟಿಸಿದೆ. ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಶಿವ ಕ್ಷೇತ್ರದಲ್ಲಿ ವರ್ಷಕ್ಕೊಂದು ಬಾರಿ 27 ದಿನಗಳ ವೈಶಾಖ ಮಹೋತ್ಸವ ನಡೆಯುತ್ತದೆ. ಈ ವರ್ಷ ಕೊಟ್ಟಿಯೂರಿನ ವೈಶಾಖ ಮಹೋತ್ಸವ ಭಾರೀ ಸಂಚಲನ ಮೂಡಿಸಿದೆ. ದಕ್ಷಯಜ್ಞದ ಪುರಾಣ ಕಥೆಯೊಂದಿಗೆ ಸಂಬಂಧ ಇರುವ ಕೊಟ್ಟಿಯೂರು ಸನ್ನಿಧಿಯಲ್ಲಿ ಸ್ಥಾವರ ರೂಪದ ಶಾಶ್ವತ ದೇವಸ್ಥಾನಗಳಿಲ್ಲ. ವೈಶಾಖ ಮಹೋತ್ಸವಕ್ಕಾಗಿ ಪ್ರಕೃತಿದತ್ತವಾದ …

Read More »

ತರಂಗಿಣಿ’ ಕಾರ್ಯಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ವಿಶೇಷ ಚೇತನರ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ರಾಜ್ಯದ ಆಯ್ದ 200 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ‘ಅಲೆಕ್ಸಾ’ ಸಹಾಯಕ ಸಾಧನವನ್ನು ವಿತರಿಸುವ ‘ತರಂಗಿಣಿ’ ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದರು. ಸ್ಟೇಟ್ ಸ್ಟ್ರೀಟ್ ಕಂಪನಿಯ ಸಿ.ಎಸ್.ಆರ್ ಅನುದಾನದೊಂದಿಗೆ ಯುನೈಟೆಡ್‌ ವೇ ಬೆಂಗಳೂರು (ಯುಡಬ್ಲ್ಯೂಬಿಇ) ಸಂಸ್ಥೆಯ ಸಹಯೋಗದಲ್ಲಿ …

Read More »

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

ಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ನಾರಾಯಣ್ ಲಾಲ್, ಪುಷ್ಪೇಂದ್ರ ಸಿಂಗ್, ಕೀರ್ತನ್ ರಾಮ್, ಮಹೇಂದ್ರ ಗೆಹ್ಲೋಟ್ ಹಾಗೂ ದಿಲೀಪ್ ಕುಮಾರ್ ಎಂಬಾತನನ್ನ ಬಂಧಿಸಲಾಗಿದ್ದು, 50 ಲಕ್ಷ ರೂಪಾಯಿ ಮೌಲ್ಯದ 480 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆ. ಆರ್. ಪುರಂ ವ್ಯಾಪ್ತಿಯಲ್ಲಿ ಮನೆ, ಅಂಗಡಿಗಳಿಗೆ ಫೆನಾಯಿಲ್ ಸರಬರಾಜು ಮಾಡಿಕೊಂಡಿದ್ದ …

Read More »

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

ಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! ಇಂಥದ್ದೊಂದು ವಿಲಕ್ಷಣ ಘಟನೆ ಬೆಂಗಳೂರಿನ (Bengaluru) ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಜಕಾರಣಿಗಳ ಜತೆ ಹಾಗೂ ಸಹಚಚರ ಒಟ್ಟಿಗೆ ಮಲಗುವಂತೆ ಒತ್ತಾಯಿಸುತ್ತಿದ್ದುದಲ್ಲದೆ, 6 ಬಾರಿ ತಲಾಖ್ (Talaq) ನೀಡಿದ ಮತ್ತು ಅಬಾರ್ಷನ್ ಮಾಡಿಸಿದ ಆರೋಪದಲ್ಲಿ ಪತಿಯ ವಿರುದ್ಧವೇ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಜತೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಲ್ಲಿ ಅತ್ತೆ-ಮಾವನ ವಿರುದ್ಧವೂ ದೂರು ದಾಖಲಿಸಿದ್ದಾರೆ. …

Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಯೋಜನೆಗಳ ಅವಲೋಕನ

ಸುಬ್ರಹ್ಮಣ್ಯ, ದಕ್ಷಿಣ ಕನ್ನಡ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬೆಂಗಳೂರಿನ ಉದ್ಯಮಿ ಜೈಪುನೀತ್ ಅವರು ನಿರ್ಮಿಸಿಕೊಡುತ್ತಿರುವ ಆಶ್ಲೇಷ ಬಲಿಪೂಜಾ ಮಂದಿರದ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ದೇವಳದ ವತಿಯಿಂದ ನಿರ್ಮಾಣಗೊಳ್ಳಲಿರುವ ದಾಸೋಹ ಭವನ, ದೇವಳದ ಸುತ್ತು ಪೌಳಿ, 800 ಕೊಠಡಿಗಳ ವಸತಿ ಗೃಹ, ನೂತನ ಪಾರಂಪರಿಕ ರಥ ಬೀದಿ ಯೋಜನೆಗಳ ಅಂತಿಮ ಹಂತದ …

Read More »

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

ಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ವಿಕಾಸಸೌಧದಲ್ಲಿ ಇಂದು ಮಾತನಾಡಿದ ಅವರು, ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಕಾನೂನು ರೀತ್ಯಾ ಕ್ರಮ ಆಗುತ್ತಿದೆ. ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದರು. ಕಾಡುಗೋಡಿ ಪ್ಲಾಂಟೇಷನ್​ನ 120 ಎಕರೆ ಅರಣ್ಯ ಭೂಮಿ ಮರುವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ …

Read More »

ಮೈಸೂರು ದಸರಾ 2025: ಜಂಬೂಸವಾರಿ ಮೆರವಣಿಗೆಗೆ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭ

ಮೈಸೂರು: ಈ ಬಾರಿ ಸಂಭ್ರಮ ಹಾಗೂ ಅದ್ಧೂರಿ ದಸರಾ ಆಚರಿಸಲು ಜಂಬೂಸವಾರಿ ಮೆರವಣಿಗೆಗೆ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭಿಸಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಎಂಟು ಆನೆ ಶಿಬಿರಗಳಿಗೆ ಭೇಟಿ ನೀಡಿ ಸುಮಾರು 25 ಗಂಡು ಮತ್ತು ಹೆಣ್ಣು ಆನೆಗಳ ಆರೋಗ್ಯ ಪರಿಶೀಲನೆ ನಡೆಸಿದೆ. ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯೇ ಗಜಪಡೆ. ಈ ಗಜಪಡೆಯ ಪ್ರಮುಖ ಕೇಂದ್ರಬಿಂದುವಾಗಿ ಇಟ್ಟುಕೊಂಡು ನಡೆಯುವುದು ಮೈಸೂರು ದಸರಾದ ಜಂಬೂಸವಾರಿ. ಇಂತಹ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆಗಳನ್ನು ಆಯ್ಕೆ …

Read More »

ಡಿಕೆಶಿಗೆ ಮುಂದಿನ ಎರಡ್ಮೂರು ತಿಂಗಳಲ್ಲಿ ಸಿಎಂ ಸ್ಥಾನ ? ಇಕ್ಬಾಲ್ ಹುಸೇನ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಂದಿನ ಎರಡ್ಮೂರು ತಿಂಗಳಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಸಿಗಬಹುದು ಎಂದು ಕಾಂಗ್ರೆಸ್ ಶಾಸಕ ಹೆಚ್.ಎ. ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಈ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ನಮ್ಮ (ಕಾಂಗ್ರೆಸ್​ನ) ಶಕ್ತಿ ಏನಿತ್ತು ಎಂದು ನಿಮಗೆಲ್ಲರಿಗೂ ತಿಳಿದಿದೆ. ಈ ವಿಜಯವನ್ನು ಸಾಧಿಸಲು ಯಾರು ಹೋರಾಟ, ಬೆವರು ಸುರಿಸಿದರು ಮತ್ತು ಶ್ರಮ ಹಾಕಿದರು ಅನ್ನೋದು ಎಲ್ಲರಿಗೂ ತಿಳಿದಿದೆ. ಅವರ (ಶಿವಕುಮಾರ್) ತಂತ್ರ …

Read More »

ಆಹಾರ ಮತ್ತು ಪಾನೀಯ ವಿಭಾಗದಲ್ಲಿ ‘ನಂದಿನಿ’ ಬ್ರ್ಯಾಂಡ್​ಗೆ ದೇಶದಲ್ಲೇ ಟಾಪ್-4 ಸ್ಥಾನ

ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ಮೂಲಕ ರಾಜ್ಯದಲ್ಲಿ ಮನೆಮಾತಾಗಿರುವ ಕೆಎಂಎಫ್​ನ ‘ನಂದಿನಿ’ ಆಹಾರ ಮತ್ತು ಪಾನೀಯ ವಿಭಾಗದಲ್ಲಿ ದೇಶದಲ್ಲಿಯೇ ಅತ್ಯುತ್ತಮ ಟಾಪ್​​​​-4 ಬ್ರ್ಯಾಂಡ್​ ಆಗಿ ಹೊರಹೊಮ್ಮಿದೆ. ಅಷ್ಟೇ ಅಲ್ಲದೆ, ಭಾರತೀಯ ಟಾಪ್​​-100 ಬ್ರ್ಯಾಂಡ್​ಗಳಲ್ಲಿ ನಂದಿನಿಯು 38ನೇ ಸ್ಥಾನ ಅಲಂಕರಿಸಿದೆ. ವಿಶ್ವದಾದ್ಯಂತ ಬ್ರ್ಯಾಂಡ್​ಗಳ ಮೌಲ್ಯಮಾಪನಕ್ಕೆ ಹೆಸರಾಗಿರುವ ಬ್ರ್ಯಾಂಡ್​ ಫೈನಾನ್ಸ್​ ಸಂಸ್ಥೆ ಲಂಡನ್​ನಲ್ಲಿ ಬಿಡುಗಡೆ ಮಾಡಿದ ಈ ರ‍್ಯಾಂಕಿಂಗ್​ ಪಟ್ಟಿಯಲ್ಲಿ ಸಹಕಾರಿ ಕ್ಷೇತ್ರದ ನಂದಿನಿಯು ದೇಶದ ಅತ್ಯುತ್ತಮ ಬ್ರ್ಯಾಂಡ್​ಗಳ ಪಟ್ಟಿಗೆ ಸೇರಿದೆ. ದೇಶದ ಆಹಾರ …

Read More »