Breaking News

ರಾಷ್ಟ್ರೀಯ

ಶೀಘ್ರವೇ ಬರ ಪರಿಹಾರ ಬಿಡುಗಡೆಗೊಳಿಸಿ: ನಿರ್ಮಲಾ ಸೀತಾರಾಮನ್​ಗೆ ರಾಜ್ಯ ಸಚಿವರ ಮನವಿ

ದೆಹಲಿ/ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಬರ ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಸಂಬಂಧ ಶೀಘ್ರ ನಿರ್ಧಾರ ತೆಗೆದುಕೊಂಡು ಬರ ಪರಿಹಾರ ಹಣ ಬಿಡುಗಡೆಗೊಳಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಕೃಷಿ ಸಚಿವ ಚೆಲುವರಾಯಸ್ವಾಮಿ ಜೊತೆಗೂಡಿ ಗುರುವಾರ ದೆಹಲಿಯಲ್ಲಿ ಸಚಿವೆಯನ್ನು ಭೇಟಿ ಮಾಡಿದ ನಂತರ ಪತ್ರಕರ್ತರ ಜೊತೆ ಮಾತನಾಡಿದ ಕೃಷ್ಣ ಬೈರೇಗೌಡ, ರಾಜ್ಯದ 223 ತಾಲೂಕುಗಳನ್ನು …

Read More »

ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆಗೆ ನೀಡಿದ್ದ ಆದೇಶ ವಾಪಸ್​ ಪಡೆದ ಸರ್ಕಾರ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿ ಆದೇಶಿಸಿದ್ದ ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.   ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಡಿಕೆಶಿ ವಿರುದ್ಧ ತನಿಖೆಯನ್ನು ಸಿಬಿಐಗೆ ವಹಿಸಲು ಹಿಂದಿನ‌ ಸರ್ಕಾರ ನಿರ್ಣಯ ಮಾಡಿತ್ತು. ಕಾನೂನಾತ್ಮಕವಾಗಿ ಸ್ಪೀಕರ್ ರಿಂದ ನಿರ್ಣಯ ಪಡೆಯಬೇಕಿತ್ತು. ಅದನ್ನು …

Read More »

ರಾಜ್ಯ ಸರ್ಕಾರದಿಂದ ದರೋಡೆಕೋರರ ರಕ್ಷಣೆ:H.D.K.

ಬೆಂಗಳೂರು: ದರೋಡೆಕೋರರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ನಿಂತಿದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಜೆ.ಪಿ.ನಗರದ ತಮ್ಮ ನಿವಾಸದ ಬಳಿ ಇಂದು ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ತನಿಖೆಗಾಗಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್​ ಪಡೆದ ವಿಚಾರಕ್ಕೆ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಈ ಸರ್ಕಾರದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಮಾತನಾಡುವುದು ಬಹಳ ಇದೆ. ಚರ್ಚೆ ಮಾಡೋಣ, ಇದರ ಬಗ್ಗೆ ಆತುರ ಬೇಡ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚು ಮಾತು …

Read More »

ನ.28ಕ್ಕೆ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಎಲೆಕ್ಷನ್‍

ಬಳ್ಳಾರಿ ನ.11: ಬಳ್ಳಾರಿ (Bellari) ಜಿಲ್ಲೆ ಕಾಂಗ್ರೆಸ್ (Congress)​ ಹಿಡಿತದಲ್ಲಿದೆ. ಜಿಲ್ಲೆಯ ಐದೂ ಕ್ಷೇತ್ರದಲ್ಲಿ ಕಾಂಗ್ರೆಸ್​ ಶಾಸಕರಿದ್ದಾರೆ. ಇದೀಗ ಬಳ್ಳಾರಿ ಮಹಾನಗರ ಪಾಲಿಕೆ (Bellari City Corporation) ಮೇಯರ್ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಇದು “ಕೈ” ಗೆ ಪ್ರತಿಷ್ಠೆಯಾಗಿದೆ. ನ.28ರಂದು ಬಳ್ಳಾರಿ ಪಾಲಿಕೆ ಮೇಯರ್​, ಉಪಮೇಯರ್ ಚುನಾವಣೆ ನಡೆಯಲಿದೆ. ರಾಜ್ಯದ ಕಿರಿಯ ಮೇಯರ್ ಹೆಗ್ಗಳಿಕೆಗೆ ಪಾತ್ರವಾಗಿದ್ದ 23 ವರ್ಷದ ಡಿ.ತ್ರಿವೇಣಿ ಏಳು ತಿಂಗಳು ಆಡಳಿತ ನಡೆಸಿ, ನವೆಂಬರ್​​ 4ರಂದು ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೂತನ …

Read More »

ಮದ್ವೆ ಮಂಟಪಕ್ಕೆ ಹೋಗುತ್ತಿದ್ದಾಗ ವರ ಎಸ್ಕೇಪ್: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಪ್ರಿಯಕರ

ತುಮಕೂರು, (ನವೆಂಬರ್ 08): ಬೆಂಗಳೂರಿನ ನೆಲಗದರನಹಳ್ಳಿ ಹಾಗೂ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ (Social Media) ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ(Love). ಬಳಿಕ ಬೆಂಗಳೂರಿನ (Bengaluru) ನೆಲಗದರನಹಳ್ಳಿ ಮೂಲಕ ಗಜೇಂದ್ರ, ಮದುವೆಯಾಗುವುದಾಗಿ (Marriage) ಎರಡು ವರ್ಷಗಳಿಂದ ಯುವತಿಯನ್ನು ಕರೆದುಕೊಂಡು ಎಲ್ಲೊಂದರಲ್ಲಿ ಸುತ್ತಾಡಿದ್ದಾನೆ. ಆದ್ರೆ, ಇದೀಗ ಮದುವೆ ಮುಹೂರ್ತ ಸಮೀಪಿಸುತ್ತಿದ್ದಂತೆಯೇ ಗಜೇಂದ್ರ ಎಸ್ಕೇಪ್ ಆಗಿದ್ದಾನೆ. ಹೌದು…ಬೆಂಗಳೂರಿನ ಪಿಣ್ಯಾದ ದುಗ್ಗಾಲಮ್ಮ ದೇವಾಲಯದಲ್ಲಿ ಇಬ್ಬರ ಮದುವೆ ಫಿಕ್ಸ್ ಆಗಿತ್ತು. ಆದ್ರೆ, …

Read More »

ಪೆಟ್​​ ಕ್ಲಿನಿಕ್​ನಲ್ಲಿ ಲ್ಯಾಬ್ರಡಾರ್ ಶ್ವಾನ ಸಾವು: ವೈದ್ಯರು ಸೇರಿ ನಾಲ್ವರ ವಿರುದ್ಧ ಕೇಸ್

ಪುಣೆ (ಮಹಾರಾಷ್ಟ್ರ): ಸಾಕು ಪ್ರಾಣಿಗಳ ಕ್ಲಿನಿಕ್​ (Pet Clinic)ನಲ್ಲಿ ಸಾಕು ನಾಯಿಯೊಂದು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪುಣೆಯಲ್ಲಿ ಇಬ್ಬರು ವೈದ್ಯರು ಸೇರಿದಂತೆ ನಾಲ್ವರ ವಿರುದ್ಧ ಪೊಲೀಸ್​ ಕೇಸ್​ ದಾಖಲಾಗಿದೆ. ಶ್ವಾನದ ಮಾಲಕಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೆಟ್ ಕ್ಲಿನಿಕ್​ನ ವೈದ್ಯರನ್ನು ವಿಚಾರಣೆಗೂ ಒಳಪಡಿಸಿದ್ದಾರೆ. ಇಲ್ಲಿನ ಪಾಶಾನ್‌ ಉಪನಗರದಲ್ಲಿರುವ ಪೆಟ್ ಕ್ಲಿನಿಕ್‌ಗೆ ನವೆಂಬರ್ 17ರಂದು ಸಂಜೆ 35 ವರ್ಷದ ಮಹಿಳೆಯೊಬ್ಬರು ತಮ್ಮ ‘ಹನಿ’ ಎಂಬ ಲ್ಯಾಬ್ರಡಾರ್ ಶ್ವಾನವನ್ನು ಕರೆತಂದಿದ್ದರು. ವಾರ್ಷಿಕ …

Read More »

ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ, ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ: ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಯಾರೂ ಕೂಡ ಪಕ್ಷ ಬಿಟ್ಟು ಹೋಗುವುದಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ನೀಡಲಾದ ವಿಧಾನಸೌಧ ಕಚೇರಿ ಪೂಜೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ರಮೇಶ್ ಜಾರಕಿಹೊಳಿ ನಿವಾಸಕ್ಕೆ ವಿಜಯೇಂದ್ರ ಹೋಗಿದ್ದರ ಬಗ್ಗೆ ಪ್ರತಿಕ್ರಿಯಿಸಿದರು. ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಆರ್.ಅಶೋಕ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ. ಮಾಜಿ ಸಚಿವ ವಿ ಸೋಮಣ್ಣ ಜೊತೆ ಕೂಡ ಮಾತನಾಡುತ್ತೇವೆ. …

Read More »

ನಾಗರಹೊಳೆ ಅಭಯಾರಣ್ಯದಲ್ಲಿ ಕಳ್ಳ ಬೇಟೆಗಾರರ ಮೇಲೆ ಹದ್ದಿನ ಕಣ್ಣಿಡಲಿವೆ ಗರುಡ ಸಿಸಿಟಿವಿ ಕ್ಯಾಮೆರಾ

ಮೈಸೂರು: ನಾಗರಹೊಳೆ ಅಭಯಾರಣ್ಯ ವ್ಯಾಪ್ತಿ ಕಳ್ಳ ಬೇಟೆಗಾರರ ಚಲನವಲನ ಅರಿಯಲು ಹಾಗೂ ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಅತ್ಯಾಧುನಿಕ ತಂತ್ರಜ್ಞಾನದ ಗರುಡ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗುತ್ತಿದೆ.   ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ನಾಗರಹೊಳೆ ಅಭಯಾರಣ್ಯದಲ್ಲಿ ಸಿಸಿಟಿವಿ ಕ್ಯಾಮೆರಾ ಯೋಜನೆ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ. ಸುಮಾರು 32 ಲಕ್ಷ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಸಿಸಿಟಿವಿ ಕ್ಯಾಮೆರಾ ಟವರ್ ​ನಿರ್ಮಿಸಲಾಗುತ್ತಿದ್ದು, ಈ ಗರುಡ ಸಿಸಿಟಿವಿ ಕ್ಯಾಮೆರಾದ ವಿಶೇಷತೆ, ಕಾರ್ಯವೈಖರಿ ಕುರಿತು …

Read More »

ಎಣ್ಣೆ ಪಾರ್ಟಿ ಮಾಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು: ಬೆಳಗಾವಿ ಎಸ್ಪಿ ಆದೇಶ

ಬೆಳಗಾವಿ: ಕರ್ತವ್ಯದ ವೇಳೆ ಎಣ್ಣೆ ಪಾರ್ಟಿ ಮಾಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಆದೇಶ ಹೊರಡಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದ ಹೊರ ವಲಯದಲ್ಲಿ ಈ ಘಟನೆ ನಡೆದಿದ್ದು, 112 ಪೆಟ್ರೋಲಿಂಗ್ ವಾಹನದಲ್ಲಿ ಎಣ್ಣೆ, ಮಾಂಸದೂಟ ಮಾಡಿದ್ದ ಸಿಬ್ಬಂದಿ ಎಚ್.ಎಮ್‌. ಕಮತೆ ಮತ್ತು ದುಮಾಳ ಅವರನ್ನು ಎಸ್ಪಿ ಅಮಾನತು ಮಾಡಿದ್ದಾರೆ. ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಎಸ್ಪಿ ಡಾ. ಭೀಮಾಶಂಕರ ಗುಳೇದ …

Read More »

‘ಪಾಪಿ’ಗಳಿಂದಾಗಿ ಭಾರತ ತಂಡಕ್ಕೆ ವಿಶ್ವಕಪ್​ ಸೋಲಾಗಿದೆ: ಮೋದಿ ಟೀಕಿಸಿದ ಸಿಎಂ ಮಮತಾ ಬ್ಯಾನರ್ಜಿ

ಕೋಲ್ಕತ್ತಾ (ಪಶ್ಚಿಮಬಂಗಾಳ): ಟೀಂ ಇಂಡಿಯಾ ಸೋಲಿಗೆ ಅಪಶಕುನ (ಪನೌತಿ)ಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿಯನ್ನು ಹೀಯಾಳಿಸಿದ್ದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಬಳಿಕ, ಇದೀಗ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಸರದಿಯಾಗಿದೆ. ‘ಪಾಪಿಗಳು’ ಭಾಗಿಯಾಗಿದ್ದ ಪಂದ್ಯ ಬಿಟ್ಟು ಉಳಿದೆಲ್ಲಾ ಮ್ಯಾಚ್​ಗಳಲ್ಲಿ ಭಾರತ ತಂಡ ಗೆದ್ದಿದೆ. ಅಹಮದಾಬಾದ್​ ಬದಲಿಗೆ, ಈಡನ್​ ಗಾರ್ಡನ್ಸ್​​ ಅಥವಾ ವಾಂಖೆಡೆಯಲ್ಲಿ ಪಂದ್ಯ ಆಯೋಜಿಸಿದ್ದರೆ ನಾವು ವಿಶ್ವಕಪ್​ ಗೆಲ್ಲುತ್ತಿದ್ದೆವು ಎಂದು ಟೀಕಿಸಿದ್ದಾರೆ. ಇಲ್ಲಿನ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ …

Read More »