Breaking News

ರಾಷ್ಟ್ರೀಯ

ಈ ಜೋಡಿಗೆ ಮಾತು ಬರುವುದಿಲ್ಲ, ಕಿವಿಯೂ ಕೇಳಿಸದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಶೇಷಚೇತನ ನವಜೋಡಿ

ಹಾಸನ: ಈ ಜೋಡಿಗೆ ಮಾತು ಬರುವುದಿಲ್ಲ, ಕಿವಿಯೂ ಕೇಳಿಸದು. ಆದರೂ ತಮ್ಮ ತಮ್ಮ ನಡುವಿನ ಸನ್ನೆ ಮಾತುಗಳ ಮೂಲಕ, ನೀ ನನಗೆ ನಾ ನಿನಗೆ ಎಂಬಂತೆ ಹಸಮಣೆ ಏರುವ ಮೂಲಕ ದಾಂಪತ್ಯ ಜೀವನಕ್ಕೆ ಶುರುವಿಟ್ಟಿದ್ದಾರೆ. ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯಲ್ಲಿ ಇಂತಹದ್ದೊಂದು ಅಪರೂಪದ ಮದುವೆ ನಡೆಯಿತು. ಬಾಳ್ಳುಪೇಟೆ ಗ್ರಾಮದ ಕೆಂಚಮ್ಮ- ಮಲ್ಲೇಗೌಡ ಸಮುದಾಯ ಭವನದಲ್ಲಿ ನಡೆದ ವಿಶೇಷ ಮದುವೆಯಲ್ಲಿ ಇವರು ಹೊಸ ಜೀವನಕ್ಕೆ ಕಾಲಿಟ್ಟರು. ಈ ಸನ್ನಿವೇಶಕ್ಕೆ ಎರಡೂ ಮನೆಯ ಕುಟುಂಬರಷ್ಟೇ ಅಲ್ಲದೇ, …

Read More »

ನಟನೆಯಲ್ಲಿ ಅಭಿ ಸಾಮರ್ಥ್ಯ ಬೇರೇನೇ ಇದೆ.

ಸೂರಿ ನಿರ್ದೇಶನದಲ್ಲಿ ಅಭಿಷೇಕ್‌ ಅಂಬರೀಶ್‌ ನಾಯಕರಾಗಿರುವ “ಬ್ಯಾಡ್‌ ಮ್ಯಾನರ್ಸ್‌’ ಚಿತ್ರ ನ.24ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್‌ ಹಿಟ್‌ಲಿಸ್ಟ್‌ ಸೇರಿದೆ. ನಿರ್ದೇಶಕ ಸೂರಿ ಹೊಸ ಲೋಕವನ್ನು ಕಟ್ಟಿಕೊಟ್ಟಿರೋದು ಕಾಣುತ್ತಿದೆ. ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ನಿರ್ದೇಶಕ ಸೂರಿ “ಬ್ಯಾಡ್‌ ಮ್ಯಾನರ್ಸ್‌’ ಬಗ್ಗೆ ಮಾತನಾಡಿದ್ದಾರೆ. ಬ್ಯಾಡ್‌ ಮ್ಯಾನರ್ ಆರಂಭ ಹೇಗೆ? ಅಭಿ ಮಾಡಿರುವ “ಅಮರ್‌’ ಸಿನಿಮಾ ನಂಗೆ ಇಷ್ಟವಾಗಿತ್ತು. ನಾನು ಆ ಸಿನ್ಮಾನ ಅಭಿ ಪೋರ್ಟ್‌ಪೋಲಿಯೋ ಥರಾನೇ ನೋಡಿದ್ದೆ. ತಡಮಾಡದೇ ದರ್ಶನ್‌ ಸರ್‌ಗೆ …

Read More »

ಎಲ್ಲರಿಗೂ ಗ್ಯಾರಂಟಿ ಲಾಭ ತಲುಪಿಸಿ- ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು

ಬೆಂಗಳೂರು: ” ಗ್ಯಾರಂಟಿಗಳು ಜನರಿಗೆ ತಲುಪುತ್ತಲೇ ಇಲ್ಲ. ಸರ್ಕಾರದ ನುಡಿದಂತೆ ನಡೆಯುತ್ತಿಲ್ಲ” ಎಂದು ಪ್ರತಿಪಕ್ಷಗಳ ಆರೋಪದ ಬೆನ್ನಲ್ಲೇ ನಾಲ್ಕೂ ಯೋಜನೆಗಳ ಇಲಾಖೆಗಳ ಅಧಿಕಾರಿಗಳ ಜತೆಗೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಸಭೆ ನಡೆಸಿದ್ದಾರೆ. ಯಾರೊಬ್ಬ ಫ‌ಲಾನುಭವಿಯೂ “ಗ್ಯಾರಂಟಿ’ಗಳಿಂದ ವಂಚಿತವಾಗಬಾರದು. ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದರೂ ಬಗೆಹರಿಸಿ, ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಗೃಹಲಕ್ಷ್ಮೀ ಸೇರಿದಂತೆ ನಾಲ್ಕೂ …

Read More »

ಹಳೆ ವಿದ್ಯಾರ್ಥಿಗಳಿಂದ ಶಾಲೆಯ ದುರಸ್ತಿ ಒಂದು ಕೋಟಿ 18 ಲಕ್ಷ ರೂಪಾಯಿ ಹಣ ನೀಡಿದ ಮಾಜಿ ವಿದ್ಯಾರ್ಥಿಗಳು

ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಐತಿಹಾಸಿಕ ಹಿನ್ನೆಲೆ ಇರುವ ಗ್ರಾಮ. ಇಲ್ಲಿಯ ಕಾಂತೇಶ ದೇವಸ್ಥಾನ ವಿಶ್ವಪ್ರಸಿದ್ದಿಯಾಗಿದೆ. ಈ ಗ್ರಾಮದಲ್ಲಿ135 ವರ್ಷಗಳ ಹಿಂದೆ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಇತ್ತು. ಈ ಶಾಲೆ ಕಳೆದ ಕೆಲವರ್ಷಗಳಿಂದ ಮಳೆಗಾಲದಲ್ಲಿ ಸೋರಲಾರಂಭಿಸಿದೆ. ಮಳೆಯಿಂದ ಶಾಲೆ ಹಾಳಾಗಲಾರಂಭಿಸಿದೆ. ಪರಿಣಾಮ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗಿದೆ. ಮಳೆಯಿಂದ ಹಾಳಾದ ಶಾಲೆಯೊಳಗೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹೋಗಲು ಹೆದರಲಾರಂಭಿಸಿದ್ದಾರೆ. ಪರಿಣಾಮ ಶಾಲೆಯ ಅಕ್ಕಪಕ್ಕದಲ್ಲಿದ್ದ ಮರಗಳ ನೆರಳಿನಲ್ಲಿ ವಿದ್ಯಾರ್ಥಿಗಳು ವ್ಯಾಸಂಗ …

Read More »

ರಾಯಬಾಗ ಶಾಲೆಯ ಕೊಳವೆಬಾವಿಯಲ್ಲಿ ಕಲುಷಿತ ನೀರು: ಸರ್ಕಾರಕ್ಕೆ ಹೈಕೋರ್ಟ್​​ ನೋಟಿಸ್

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹುಬ್ಬಾರವಾಡಿ ಗ್ರಾಮದಲ್ಲಿ ಖಾಸಗಿ ಕಂಪೆನಿಯೊಂದರ ರಾಸಾಯನಿಕ ಗೊಬ್ಬರ ಸಂಗ್ರಹಣಗಾರದಿಂದಾಗಿ ಪಕ್ಕದಲ್ಲಿರುವ ಪ್ರಾಥಮಿಕ ಮತ್ತು ಅಂಗನವಾಡಿ ಕೇಂದ್ರದ ಕೊಳವೆಬಾವಿಯ ನೀರು ಕಲುಷಿತಗೊಳ್ಳುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸ್ಥಳೀಯ ನಿವಾಸಿ ಪಾಂಡುರಂಗ ಮಹದೇವ ಕಾಂಬ್ಳೆ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ …

Read More »

ರಾಜಕೀಯ, ಜಾತಿ, ಭಾಷೆಗಳನ್ನ ಮೀರಿದ ಕಾರ್ಯಕ್ರಮ ಕಂಬಳ: ಗುರುಕಿರಣ್

ಬೆಂಗಳೂರು: ಬೆಂಗಳೂರು ಕಂಬಳ – ನಮ್ಮ ಕಂಬಳಕ್ಕೆ ದಕ್ಷಿಣ ಕನ್ನಡದ ನಂಟು ಇರುವ ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ಇದು ಯಾವುದೇ ಕಮರ್ಷಿಯಲ್ ಅಗ್ರಿಮೆಂಟ್ ಅಲ್ಲ. ಆದರೆ ಕಾರ್ಯಕ್ರಮಕ್ಕೆ ಎಲ್ಲರ ಬೆಂಬಲವಿದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದರು. ಕನ್ನಡ ಸಿನಿಮಾರಂಗದ ಎಲ್ಲರಿಗೂ ಆಮಂತ್ರಣ ನೀಡಲಾಗಿದ್ದು, ಎಲ್ಲರೂ ಬರುವ ನಿರೀಕ್ಷೆಯಿದೆ. ಶಿವಣ್ಣ ಹಾಗೂ ಅವರ ಪತ್ನಿ ಬರುತ್ತಿದ್ದಾರೆ. ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಯುವ ಬರುತ್ತಿದ್ದಾರೆ. …

Read More »

ಎಲ್​ಎಂವಿ ಪರವಾನಗಿ ಹೊಂದಿರುವವರು ಲಘು ಸಾರಿಗೆ ವಾಹನ ಓಡಿಸಬಹುದೇ?; ಕೇಂದ್ರಕ್ಕೆ ಸ್ಪಷ್ಟನೆ ಕೇಳಿದ ಸುಪ್ರೀಂಕೋರ್ಟ್

ನವದೆಹಲಿ: ಲಘು ಮೋಟಾರು ವಾಹನ (ಎಲ್‌ಎಂವಿ) ಚಾಲನಾ ಪರವಾನಗಿ ಹೊಂದಿರುವವರು ಎಲ್‌ಎಂವಿ ವರ್ಗದ ಸಾರಿಗೆ ವಾಹನ ಓಡಿಸಲು ಪ್ರತ್ಯೇಕ ಅನುಮೋದನೆಯ ಅಗತ್ಯವಿದೆಯೇ ಎಂಬ ಪ್ರಶ್ನೆಗೆ ಮುಂದಿನ ವರ್ಷದ ಜನವರಿ 17ರೊಳಗೆ ಸ್ಪಷ್ಟ ಮಾರ್ಗಸೂಚಿ ಒದಗಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರಕಾರಕ್ಕೆ ಸೂಚಿಸಿದೆ.   ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್, ಪಿ.ಎಸ್.ನರಸಿಂಹ, ಪಂಕಜ್ ಮಿಥಾಲ್ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು …

Read More »

ಸಮಾಜ ಒಡೆಯುವುದೇ ಕಾಂಗ್ರೆಸ್ ಸರ್ಕಾರದ ಉದ್ದೇಶ.: H.D.K.

ಮಂಡ್ಯ: ಸಮಾಜ ಒಡೆಯುವುದೇ ಕಾಂಗ್ರೆಸ್ ಸರ್ಕಾರದ ಉದ್ದೇಶ. ಪಾಪ ಕಾಂಗ್ರೆಸ್​ನವರು ಸತ್ಯಹರಿಶ್ಚಂದ್ರನ ವಂಶದವರು ಎಂದು ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಜಾತಿಗಣತಿಗೆ ಒಕ್ಕಲಿಗರ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಸಿಎಂ ಟ್ವೀಟ್ ಅನ್ನು ನಾನು ಗಮನಿಸಿದ್ದೇನೆ. ರಾಹುಲ್ ಗಾಂಧಿ ಭಾವನೆಗೆ ಸ್ಪಂದಿಸಿ ಜಾತಿಗಣತಿ ಪಡೆಯುವ ನಿರ್ಧಾರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. “ಕಾಂತರಾಜು ವರದಿ ಮೂಲ ಪ್ರತಿ ಕಳ್ಳತನವಾದ ಮಾಹಿತಿ ಇದೆ. ಒಂದು …

Read More »

ಆನೇಕಲ್: ಅಡುಗೆ ಅನಿಲ ಸಿಲಿಂಡರ್ ಸ್ಫೋಟ, ಐವರಿಗೆ ಗಂಭೀರ ಗಾಯ

ಆನೇಕಲ್ (ಬೆಂಗಳೂರು): ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿ ಗಾಯಗೊಂಡಿರುವ ಘಟನೆ ಇಂದು ಇಲ್ಲಿನ ಬೆಂಗಳೂರು-ವೀವರ್ಸ್ ಕಾಲೊನಿಯ ಮಾರುತಿ ಬಡಾವಣೆಯಲ್ಲಿ ಸಂಭವಿಸಿತು. ಮಾರ್ಟಿನ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ವಾಸವಿದ್ದ ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್ (32), ನಾಜಿಯಾ (22), ಇರ್ಫಾನ್ (21), ಗುಲಾಬ್ (18) ಹಾಗು ಶಹಜಾದ್ (9) ಗಾಯಗೊಂಡಿದ್ದಾರೆ. ಮುಂಜಾನೆ 5:30ರ ಸುಮಾರಿಗೆ ವಿದ್ಯುತ್‌ ಬಲ್ಬ್‌ ಸ್ವಿಚ್ ಆನ್ ಮಾಡಿದಾಗ ಆಡುಗೆ ಅನಿಲ ಸೋರಿಕೆಯಾಗಿ ಸಿಲಿಂಡರ್ …

Read More »

ಐಡಿಬಿಐನಲ್ಲಿ 2,100 ಹುದ್ದೆಗಳ ಭರ್ತಿಗೆ

ಬೆಂಗಳೂರು: ಇಂಡಸ್ಟ್ರಿಯಲ್​ ಡೆವಲಪ್‌ಮೆಂಟ್​​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ (ಐಡಿಬಿಐ) ಖಾಲಿ ಇರುವ 2,100 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಭಾರತದಾದ್ಯಂತ ನೇಮಕಾತಿ ನಡೆಯಲಿದೆ. ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಹುದ್ದೆಗಳ ವಿವರ: ಜ್ಯೂನಿಯರ್​ ಅಸಿಸ್ಟೆಂಟ್​ ಮ್ಯಾನೇಜರ್​ 800, ಎಕ್ಸಿಕ್ಯುಟಿವ್​ (ಸೇಲ್ಸ್​ ಆಯಂಡ್​ ಆಪರೇಷನ್ಸ್​​) 1,300 ಹುದ್ದೆಗಳಿವೆ. ಅಧಿಸೂಚನೆವಿದ್ಯಾರ್ಹತೆ: ಅಧಿಕೃತ ವಿಶ್ವವಿದ್ಯಾಲಯ/ಮಂಡಳಿಯಿಂದ ಪದವಿ ಶಿಕ್ಷಣ. ವೇತನ: ಜ್ಯೂನಿಯರ್​ ಅಸಿಸ್ಟೆಂಟ್​ ಮ್ಯಾನೇಜರ್​​ಗೆ ವಾರ್ಷಿಕ ಪ್ಯಾಕೇಜ್​ 6,14,00-6,50,000 ರೂ. ಎಕ್ಸಿಕ್ಯೂಟಿವ್​ (ಸೇಲ್ಸ್​ ಆಯಂಡ್​ …

Read More »