Breaking News
Home / ರಾಷ್ಟ್ರೀಯ (page 360)

ರಾಷ್ಟ್ರೀಯ

ಸ್ಪೀಕರ್ ಕಾಗೆರಿ ಅವರಿಗು ಕ್ಷೇತ್ರ ಬಿಡಲು ಹೇಳಿತಾ ಹೈ ಕಮಾಂಡ್…?

ಶಿರಸಿ: ಚುನಾವಣೆ ರಾಜಕೀಯದಿಂದ ನಿವೃತ್ತರಾಗುವಂತೆ ವಿಧಾನ ಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೂ ಹೈಕಮಾಂಡ್ ಸೂಚನೆ ನೀಡಿದೆಯಾ? ಅಂತದ್ದೊಂದು ದಟ್ಟ ಸುದ್ದಿ ರಾಜಕೀಯ ವಲಯದಲ್ಲಿ ಹರಡಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಕ್ಷೇತ್ರ ತ್ಯಾಗಕ್ಕೆ ಪಕ್ಷದ ಸೂಚನೆಯ ಬೆನ್ನಲ್ಲೇ ವಿಶ್ವೇಶ್ವರ ಹೆಗಡೆ ಅವರಿಗೂ ಅಂತಹ ಸೂಚನೆ ನೀಡಲಾಗಿದೆ, ಜೊತೆಗೆ, ಸುರೇಶ ಕುಮಾರ ಸೇರಿದಂತೆ 6 -7 ಹಿರಿಯ ನಾಯಕರಿಗೆ ಹೈಕಮಾಂಡ್ ಸೂಚಿಸಿದೆ ಎನ್ನುವ ಸುದ್ದಿ ಹರಡಿದೆ.   …

Read More »

ಇಂತಹ 10 ಅಮೂಲ್ ಬಂದರೂ ಸ್ಪರ್ಧೆ ಮಾಡುವ ಶಕ್ತಿ ನಂದಿನಿಗಿದೆ:ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಅಮೂಲ್ ಜೊತೆ ಕೆಎಂಎಫ್ ವಿಲೀನ ಇಲ್ಲವೇ ಇಲ್ಲ. ಇಂತಹ 10 ಅಮೂಲ್ ಬಂದರೂ ಸ್ಪರ್ಧೆ ಮಾಡುವ ಶಕ್ತಿ ನಂದಿನಿಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಕಾರಣಕ್ಕಾಗಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿ, ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು. ಕೆಎಂಎಫ್ ನಲ್ಲಿ 26 ಲಕ್ಷ ರೈತರು ಸದಸ್ಯರಿದ್ದಾರೆ. 10 ಲಕ್ಷ ರೈತರು ಹಾಲು ಹಾಕುತ್ತಾರೆ. 15,200 ಸಂಘಗಳಿವೆ, 28 ಸಾವಿರ …

Read More »

ಬೆಂಗಳೂರು: ಬಿಜೆಪಿ ಪಟ್ಟಿ ಎರಡು ದಿನ ವಿಳಂಬ ಸಾಧ್ಯತೆ

ಬೆಂಗಳೂರು: ಕುಟುಂಬ ಪ್ರಧಾನ ಪಕ್ಷವೆಂದು ಕಾಂಗ್ರೆಸ್‌, ಜೆಡಿಎಸ್‌ ಅನ್ನು ಹೀಯಾಳಿಸುತ್ತಿದ್ದ ಬಿಜೆಪಿ ನಾಯಕರಿಗೆ ಟಿಕೇಟ್‌ ಪಡೆಯಲು ಅದೇ ವಿಚಾರ ಮುಳುವಾಗಿದೆ. ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಹಲವು ಘಟಾನುಘಟಿ ನಾಯಕರ ಮಕ್ಕಳಿಗೆ ಟಿಕೇಟ್‌ ನೀಡಲು ಬಿಜೆಪಿ ಹೈಕಮಾಂಡ್‌ ಅಸಮ್ಮತಿ ವ್ಯಕ್ತಪಡಿಸಿದ್ದು, ಯಡಿಯೂರಪ್ಪ ಸೇರಿದಂತೆ ಹಲವು ಹಿರಿಯ ನಾಯಕರಿಗೆ ತಲೆನೋವಾಗಿದೆ.   ಭಾನುವಾರವೇ ಘೋಷಣೆಯಾಗಬೇಕಿದ್ದ ಮೊದಲ ಪಟ್ಟಿಯಲ್ಲಿ ಪ್ರಧಾನಿ ಮೋದಿ ಹಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಮೊದಲ ಪಟ್ಟಿ ಸಿದ್ಧಪಡಿಸಲು ರಾಜ್ಯ ನಾಯಕರು ಮತ್ತೆ ಚರ್ಚೆ …

Read More »

ದೇವೇಗೌಡ ಕುಟುಂಬ ಮುಗಿಸಲು ಶಕುನಿಗಳು ಕಾಯುತ್ತಿದ್ದಾರೆ: H.D.K.

ಹುಬ್ಬಳ್ಳಿ : ದೇವೇಗೌಡ ಕುಟುಂಬ ಮುಗಿಸಲು ಶಕುನಿಗಳು ಇರ್ತಾರೆ‌. ಯಾರ ತಲೆ ಕೆಡಿಸ್ತಾರೆ ಅನ್ನೋ ಮಾಹಿತಿ ಇಲ್ವಾ ಎಂದು ಮಾಜಿ ಸಿಎಂ ಕುಮಾರಸ್ಚಾಮಿ ಹೇಳಿದರು. ನಗರದಲ್ಲಿ ವಿವಿಧ ದೇವಳಗಳಿಗೆ ಭೇಟಿ ನೀಡಿ ಮಾತನಾಡಿದ ಅವರು ನಾನು‌ ಮುಖ್ಯಮಂತ್ರಿ ಆಗಿ ಕೆಲಸ ಮಾಡಿದ್ದೇನೆ. ನನಗೂ ಶಕುನಿಗಳು ಯಾರ ಅನ್ನೋ ಮಾಹಿತಿ ಬರುತ್ತದೆ. ರಾಜಕಾರಣದಲ್ಲಿ ಅವತ್ತಿನ ಕುರುಕ್ಷೇತ್ರ ನಡೀತಿದೆ. ದೇವೆಗೌಡರ ಕುಟುಂಬಕ್ಕೆ ಹಿತೈಷಿಗಳು ಎಂದು ನಾಟಕ ಮಾಡಿದವರಿಗೆ ಹಾಲೆರೆದರೆ ಏನು ಮಾಡಲಿ ಎಂದರು. ಭವಾನಿ …

Read More »

ಬಿಜೆಪಿಯಲ್ಲಿ ಟಿಕೆಟ್ ಘೋಷಣೆಗೂ ಮುನ್ನವೇ ನಿವೃತ್ತಿ ಪರ್ವ ಆರಂಭವಾಗಿದ್ದು, ಘಟಾನುಘಟಿ ನಾಯಕರೇ ರಾಜಕೀಯ ನಿವೃತ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಘೋಷಣೆಗೂ ಮುನ್ನವೇ ನಿವೃತ್ತಿ ಪರ್ವ ಆರಂಭವಾಗಿದ್ದು, ಘಟಾನುಘಟಿ ನಾಯಕರೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಭೀತಿಯಲ್ಲಿ ಸಾಲು ಸಾಲು ಬಿಜೆಪಿ ಮುಖಂಡರು ಚುನಾವಣೆಯಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ. ಎಸ್.ಎ.ರವೀಂದ್ರನಾಥ್, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬೆನ್ನಲ್ಲೇ ಇದೀಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಟಿಕೆಟ್ ಘೋಷಣೆಗೂ ಮುನ್ನವೇ ಕೇಸರಿ ಮನೆಯಲ್ಲಿ ಕಂಪನ ಆರಂಭವಾಗಿದೆ. …

Read More »

ಮಹಾರಾಷ್ಟ್ರ ನಡೆಸುತ್ತಿರುವ ಹುನ್ನಾರವನ್ನು ಸಮಗ್ರವಾಗಿ ವಿವರಿಸಿದ ಅಶೋಕ ಚಂದರಗಿ

ಕರ್ನಾಟಕದ ಐದು ಜಿಲ್ಲೆಗಳ 865 ಹಳ್ಳಿ ಪಟ್ಟಣಗಳಲ್ಲಿ ಮಹಾತ್ಮಾ ಫುಲೆ ಜನಾರೋಗ್ಯ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಕರ್ನಾಟಕದ ಆಡಳಿತದಲ್ಲಿ ನೇರವಾಗಿ ಹಸ್ತಕ್ಷೇಪ ಮಾಡುತ್ತಿರುವ ಮತ್ತು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟು ಮಾಡಲು ಹೊರಟಿರುವ ಮಹಾರಾಷ್ಟ್ರ ಸರಕಾರಕ್ಕೆ ಕಡಿವಾಣ ಹಾಕಲು ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವದಾಗಿ ರಾಜ್ಯ ಗಡಿ ಸಂರಕ್ಷಣಾ ಮತ್ತು ಜಲ ಆಯೋಗದ ಅಧ್ಯಕ್ಷ ಶಿವರಾಜ ಪಾಟೀಲ ಮತ್ತು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಭರವಸೆ …

Read More »

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ಕೊಲೆ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಪುಣೆ: ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ಕೊಲೆ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿ ರಾಜೇಶ್ ಅಗವಾನೆ (42) ಬಂಧಿತ. ಈತ ವಡಗಾಂವ ನಿಂಬಾಳ್ಕರ್ ನಿವಾಸಿಯಾಗಿದ್ದು, ಸದ್ಯ ಮುಂಬಯಿಯ ಧಾರಾವಿ ಪ್ರದೇಶದಲ್ಲಿ ವಾಸವಾಗಿದ್ದಾನೆ. ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿರುವ ಈತನ ಪತ್ನಿ ಪುಣೆಯಲ್ಲಿ ನೆಲೆಸಿದ್ದು ಆಗಾಗ ಅಲ್ಲಿಗೆ ಹೋಗುತ್ತಿದ್ದ. ಸೋಮವಾರ ಸಂಜೆ ಕುಡಿದ ಮತ್ತಿನಲ್ಲಿ ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ, ತನಗೆ ಎದೆನೋವು ಶುರುವಾಗಿದ್ದು …

Read More »

ಲಿಂಗಾಯತ ಸಮಾಜದ ಭೂಮಿ ದುರ್ಬಳಕೆಯಾಗಿರುವ ಶಂಕೆ

ಬೆಳಗಾವಿ : ಲಿಂಗಾಯತ ಸಮಾಜದ ಭೂಮಿಯ ಅಭಿವೃದ್ಧಿ ಮಾಡುವ ಕುರಿತು ಅನುದಾನ ದುರ್ಬಳಕೆಯಾಗಿರುವ ಶಂಕೆ ವ್ಯಕ್ತವಾಗಿದ್ದು ವಿವಿಧ ಲಿಂಗಾಯತ ಸಮುದಾಯದ ಸಂಘಟನೆಗಳು ಸೋಮವಾರ ಬೆಳಗಾವಿ ಮಹಾಪಾಲಿಕೆಯ ಆಯುಕ್ತರ ಜೊತೆಗೆ ಚರ್ಚೆ ನಡೆಸಿದರು. ಲಿಂಗಾಯತ ಮುಖಂಡ ರಾಜಕುಮಾರ ಟೋಪಣ್ಣವರ ಮಾತನಾಡಿ, ಲಿಂಗಾಯತ ರುದ್ರಭೂಮಿಗೆ ಬಿಡುಗಡೆಯಾದ ಅನುದಾನವನ್ನು ಲಿಂಗಾಯತ ಸಮಾಜದ ರುದ್ರಭೂಮಿಗೆ ಅಭಿವೃದ್ಧಿ ಪಡಿಸಿ ಬೇರೆ ಕಡೆ ಅನುದಾನವನ್ನು ಬಳಕೆ ಮಾಡಬೇಡಿ ಮಾಡಬೇಡಿ ಎಂದರು. 2022 ರಲ್ಲಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಿರುವುದಾಗಿ …

Read More »

ನೀರಿನ‌ ಸಮಸ್ಯೆ ಉದ್ಬವಿಸದಂತೆ ಮುನ್ನೆಚ್ಚರಿಕೆ ವಹಿಸಿ

ಬೆಳಗಾವಿ (ಚನ್ನಮ್ಮ ಕಿತ್ತೂರು) :  ಈ ಬಾರಿ ಬೇಸಿಗೆಯ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ತಾಲೂಕಿನ ಯಾವುದೇ ಗ್ರಾಮದಲ್ಲಿಯೂ ನೀರಿನ ಸಮಸ್ಯೆ ಉಲ್ಬಣವಾಗದಂತೆ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಎಲ್ಲರಿಗೂ ಶುದ್ಧ ಕುಡಿಯುವ ನೀರು ಒದಗಿಸಬೇಕು. ಲೋಪದೋಷಗಳು ಕಂಡುಬಂದರೆ  ಸಂಬಂಧಪಟ್ಟು ಪಂಚಾಯಿತಿಯ ಅಧಿಕಾರಿಗಳನ್ನು ಹೊಣೆಯನ್ನಾಗಿಸಿ ಕ್ರಮ‌ ಕೈಗೊಳ್ಳಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ ಸೂಚನೆ ನೀಡಿದರು. ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ  ಸೋಮವಾರ ‘ಶುದ್ಧ ಕುಡಿಯುವ ನೀರು ಪೂರೈಕೆಯ ಟಾಸ್ಕ್ …

Read More »

ಶಾಸಕರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ದೇವರ ಹಿಪ್ಪರಗಿಯ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ನಡೆಯಿತು. ಗ್ರಾಮದ ಅಭಿವೃದ್ಧಿ ವಿಚಾರವಾಗಿ ಸಿಟ್ಟಾಗಿದ್ದ ಕೆಲ ಗ್ರಾಮಸ್ಥರು ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಶಾಸಕರನ್ನು ಊರಲ್ಲಿ ಸಿಸಿ ರಸ್ತೆಗಳಾಗಿಲ್ಲ, ಚರಂಡಿ ವ್ಯವಸ್ಥೆ ಸರಿ ಇಲ್ಲ, ಅಭಿವೃದ್ಧಿಗೆ ಬಂದಿದ್ದ ಹಣ ಏನ್ ಮಾಡಿದ್ರಿ ಎಂದು ಆಕ್ರೋಶ ವ್ಯಕ್ತಪಡಿಸಿದರು     ಆ ಸಂದರ್ಭ ಶಾಸಕರ ಬೆಂಬಲಿಗರ ಜತೆ ಕೆಲ ಗ್ರಾಮಸ್ಥರು ವಾಗ್ವಾದ ನಡೆಸಿದ್ದಾರೆ.ಗ್ರಾಮದಲ್ಲಿ ಅಭಿವೃದ್ಧಿ …

Read More »