Breaking News

ರಾಷ್ಟ್ರೀಯ

ತಡರಾತ್ರಿ ಪಾರ್ಟಿ ವೇಳೆ ಗುಂಡೇಟಿಗೆ ವಿದ್ಯಾರ್ಥಿನಿ ಬಲಿ: ಸ್ನೇಹಿತನ ಬಂಧನ

ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ತಡರಾತ್ರಿ ಪಾರ್ಟಿಯ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಗುಂಡೇಟಿಗೆ ಬಲಿಯಾಗಿರುವ ಘಟನೆ ನಡೆದಿದೆ. ಇದು ಆಕಸ್ಮಿಕವಾಗಿ ನಡೆದ ಗುಂಡಿನ ದಾಳಿಯೋ ಅಥವಾ ಪಿತೂರಿಯ ಭಾಗವಾಗಿ ಗುಂಡಿನ ದಾಳಿ ನಡೆಸಲಾಗಿದೆಯೋ ಎಂದು ಕುರಿತು ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಕೊಲೆಯಾದ ವಿದ್ಯಾರ್ಥಿನಿಯನ್ನು ನಿಷ್ಠಾ ತ್ರಿಪಾಠಿ (23) ಎಂದು ಗುರುತಿಸಲಾಗಿದೆ. ಹರ್ದೋಯ್‌ ಜಿಲ್ಲೆಯ ಮೂಲದ ನಿಷ್ಠಾ ಲಖನೌದ ಬಿಬಿಡಿ ವಿಶ್ವವಿದ್ಯಾಲಯದಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಇಲ್ಲಿನ ಚಿನ್ಹಾಟ್ …

Read More »

ಚೈತ್ರಾ ಕುಂದಾಪುರ ಅವರು ಸಿಸಿಬಿ ವಿಚಾರಣೆ ವೇಳೆ ಮೌನಕ್ಕೆ ಶರಣಾಗಿದ್ದಾರೆ.

ಬೆಂಗಳೂರು : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬಂಧಿಸಿದರೆ, ದೊಡ್ಡವರ ಹೆಸರು ಬಹಿರಂಗವಾಗಲಿದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಬಂಧಿತೆ ಚೈತ್ರಾ ಕುಂದಾಪುರ ಸಿಸಿಬಿ ವಿಚಾರಣೆ ವೇಳೆ ಮೌನವಾಗಿದ್ದಾರೆ.   ಉದ್ಯಮಿ ಗೋವಿಂದ ಬಾಬು ಪೂಜಾರಿ 5 ಕೋಟಿ ರೂ. ವಂಚನೆ ಆರೋಪದಡಿ ಬಂಧಿತರಾಗಿದ್ದ ಚೈತ್ರಾ, ಮಾಧ್ಯಮಗಳ ಮುಂದೆ ಸ್ವಾಮೀಜಿ ಹಾಲಶ್ರೀ ಬಂಧಿಸಿದರೆ ದೊಡ್ಡವರ ಹೆಸರು ಹೊರಬರಲಿದೆ ಎಂದು …

Read More »

ಕೆನಡಾದಲ್ಲಿ ಮತ್ತೊಬ್ಬ ಖಲಿಸ್ತಾನ ಉಗ್ರನ ಹತ್ಯೆ: ದುಷ್ಕರ್ಮಿಗಳ ಗುಂಡೇಟಿಗೆ ಸುಖ್ದೂಲ್ ಸಿಂಗ್ ಬಲಿ

ನವದೆಹಲಿ : ಖಲಿಸ್ತಾನಿ ಉಗ್ರ ಹರ್​ದೀಪ್​ ಸಿಂಗ್​ ನಿಜ್ಜರ್​ ಸಾವಿನ ಕಾರಣ ಕೆನಡಾ ಮತ್ತು ಭಾರತದ ಮಧ್ಯೆ ರಾಜತಾಂತ್ರಿಕ ಸಂಬಂಧ ಹಳಸಿದ ಬೆನ್ನಲ್ಲೇ ಇನ್ನೊಬ್ಬ ಖಲಿಸ್ತಾನ ಉಗ್ರ ಮತ್ತು ಮೋಸ್ಟ್ ವಾಂಟೆಡ್​ ಗ್ಯಾಂಗ್​ಸ್ಟರ್​ ಸುಖ್ದೂಲ್ ಸಿಂಗ್ ಅಲಿಯಾಸ್ ಸುಖ ಡುನೆಕೆ ಎಂಬಾತನ ಹತ್ಯೆ ನಡೆದಿದೆ. ಈಚೆಗೆ ನಡೆದ ಗುಂಡಿನ ದಾಳಿಯಲ್ಲಿ ಈತ ಮೃತಪಟ್ಟಿದ್ದಾನೆ ಎಂದು ತನಿಖಾ ಸಂಸ್ಥೆಗಳು ದೃಢಪಡಿಸಿವೆ. ಕೆನಡಾದ ವಿನ್ನಿಪೆಗ್‌ನಲ್ಲಿ ಸೆಪ್ಟೆಂಬರ್ 18 ರಂದು ನಡೆದ ಗುಂಡಿನ ಚಕಮಕಿಯಲ್ಲಿ ಸುಖ್ದೂಲ್ …

Read More »

ಕಾವೇರಿ ಪರ ದನಿ ಎತ್ತಿದ ರಾಘವೇಂದ್ರ ರಾಜ್​​ಕುಮಾರ್

ಬೆಂಗಳೂರು: ಕಾವೇರಿ ವಿಚಾರವಾಗಿ ಕನ್ನಡ ಚಿತ್ರರಂಗ ದನಿ ಎತ್ತಿದೆ. ವಿಕಾಸಸೌಧದಲ್ಲಿ ಇಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ನಟ ರಾಘವೇಂದ್ರ ರಾಜ್​​ಕುಮಾರ್, ನನ್ನ ತಂದೆ ಕೆಲ ವಿಚಾರ ಕಲಿಸಿಕೊಟ್ಟು ಹೋಗಿದ್ದಾರೆ. ನಾಡು, ನುಡಿ, ಭಾಷೆ ವಿಚಾರ ಬಂದಾಗ ಜೊತೆಗಿರಬೇಕೆಂದು ಹೇಳಿದ್ದಾರೆ. ಅದಕ್ಕಾಗಿ ಪ್ರಾಣ ಮುಡಿಪಾಗಿಡುತ್ತೇವೆ ಎಂದು ತಿಳಿಸಿದರು. ಹೋರಾಟಕ್ಕೆ ಬರುತ್ತೇವೆ: ಸದ್ಯ ಈ ವಿಚಾರ ನ್ಯಾಯಾಲಯದಲ್ಲಿದೆ. ನಮ್ಮ ನಮ್ಮ ಪಾತ್ರ ಬಂದಾಗ ಜನರೇ ನಮ್ಮನ್ನು ಕರೆಸಿಕೊಳ್ಳುತ್ತಾರೆ, ಆಗ ಬರುತ್ತೇವೆ. ಕೊನೆವರೆಗೂ ನಾವು ಜನರ …

Read More »

ಒಪಿಎಸ್ ಜಾರಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಶಿಕ್ಷಕರಿಂದ ಬೈಕ್ ರ್ಯಾಲಿ

ಬೆಳಗಾವಿ: ಹೊಸ ಪಿಂಚಣಿ ಬದಲಾಗಿ ಹಳೆ ಪಿಂಚಣಿ ಜಾರಿ ಸೇರಿದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಶಿಕ್ಷಕರು ಬೈಕ್ ರ್ಯಾಲಿ ನಡೆಸಿದರು. ಐದು ವರ್ಷ ಜನಪ್ರತಿನಿಧಿಗಳಾಗುವ ಶಾಸಕರು, ಸಂಸದರಿಗೆ ಇರುವ ಪಿಂಚಣಿ ನಮಗೆ ಯಾಕಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಖಿಲ ಭಾರತ ಶಿಕ್ಷಕರ ಫೆಡರೇಶನ್​​ದಿಂದ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಯಾತ್ರೆಯು ಕನ್ಯಾಕುಮಾರಿಯಿಂದ ಪ್ರಾರಂಭವಾಗಿದ್ದು, ಬುಧವಾರ ಬೆಳಗಾವಿಗೆ ಯಾತ್ರೆಯು ಆಗಮಿಸಿತು. …

Read More »

ಪ್ರೀತಿಸಲು ನಿರಾಕರಿಸಿದ ಹಿನ್ನೆಲೆ ವಿದ್ಯಾರ್ಥಿನಿ ಮೇಲೆ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಪಾಗಲ್ ಪ್ರೇಮಿ

ಕೋಲಾರ: ಪ್ರೀತಿಸಲು ನಿರಾಕರಿಸಿದ ಹಿನ್ನೆಲೆ ಪಾಗಲ್ ಪ್ರೇಮಿಯೊಬ್ಬ ಕಾಲೇಜು ವಿದ್ಯಾರ್ಥಿನಿ ಮೇಲೆ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೆಜಿಎಫ್​ನ ಚಾಂಪಿಯನ್ ರೀಫ್ ನಗರದಲ್ಲಿರುವ ಖಾಸಗಿ ಕಾಲೇಜು ಕ್ಯಾಂಪಸ್​ನಲ್ಲಿ ನಡೆದಿದೆ.   ದ್ವಿತೀಯ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್​ ವ್ಯಾಸಂಗ ಮಾಡುತ್ತಿರುವ ಪ್ರೀತಮ್ ಪ್ರಭು ಎಂಬ ಯುವಕ, ಪ್ರಥಮ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್​ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅದರಂತೆ ಇಂದು ಸಹ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಪ್ರೀತಿ ಮಾಡುವಂತೆ …

Read More »

ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್​ ನೀರು: ಸಿಡಬ್ಲ್ಯೂಎಂಎ ಆದೇಶ ಮರುಪರಿಶೀಲನೆ ಕೋರಿ ಸುಪ್ರೀಂಕೋರ್ಟ್‌ ಮೊರೆ ಹೋದ ರಾಜ್ಯ ಸರ್ಕಾರ

ನವದೆಹಲಿ: ನೀರಿನ ತೀವ್ರ ಕೊರತೆ ಇದ್ದರೂ, ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್​​ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಆದೇಶಿಸಿದ್ದು, ಅದನ್ನು ಮರುಪರಿಶೀಲನೆ ನಡೆಸಲು ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ಗೆ ಬುಧವಾರ ಅರ್ಜಿ ಸಲ್ಲಿಸಿದೆ. ಜೊತೆಗೆ ಇದೊಂದು ವಿಕೃತ ಮತ್ತು ಕಾನೂನುಬಾಹಿರ ಆದೇಶವಾಗಿದೆ ಎಂದೂ ಅಸಮಾಧಾನ ವ್ಯಕ್ತಪಡಿಸಿದೆ. ಮುಂಗಾರು ಮಳೆಯ ಕೊರತೆಯಿಂದಾಗಿ ಅಣೆಕಟ್ಟೆಗಳಲ್ಲಿ ನೀರು ಸಂಗ್ರಹವಾಗಿಲ್ಲ. ಕಾವೇರಿ ಜಲಾನಯನ ಪ್ರದೇಶ ಸೇರಿದಂತೆ ರಾಜ್ಯದೆಲ್ಲೆಡೆ ವರುಣನ …

Read More »

ಇದೇ ಮೊದಲು! ಲೋಕಸಭೆ ಚುನಾವಣೆಗೆ ಮತದಾನದ ಅವಕಾಶ ಪಡೆದ 997 ಲೈಂಗಿಕ ಕಾರ್ಯಕರ್ತೆಯರು

ಕಾನ್ಪುರ (ಉತ್ತರ ಪ್ರದೇಶ): ಈ ಬಾರಿ ಲೈಂಗಿಕ ಕಾರ್ಯಕರ್ತೆಯರೂ ಕೂಡ ಲೋಕಸಭೆ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಸಾಧ್ಯವಾಗುತ್ತಿದೆ. ಕಾನ್ಪುರ ಜಿಲ್ಲಾಡಳಿತ 997 ಮಂದಿ ಲೈಂಗಿಕ ಕಾರ್ಯಕರ್ತೆಯರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿದೆ.   ಉತ್ತರ ಪ್ರದೇಶದಲ್ಲಿ ಈವರೆಗೆ, ಮತದಾರರ ಪಟ್ಟಿಗಳು ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿ ಎಂಬ ಮೂರು ವರ್ಗದ ಮತದಾರರನ್ನು ಮಾತ್ರ ಒಳಗೊಂಡಿದ್ದವು. ಆದರೆ ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಲೈಂಗಿಕ ಕಾರ್ಯಕರ್ತೆಯರ ಹೆಸರನ್ನೂ ಮತದಾರರ ಪಟ್ಟಿಗೆ …

Read More »

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ದೆಹಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ

ನವದೆಹಲಿ/ಬೆಂಗಳೂರು:ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದ್ದು, ಈ ವಿಚಾರವಾಗಿ ನವದೆಹಲಿಯಲ್ಲಿಂದು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ನಾಯಕರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​, ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರುಗಳು, ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರುಗಳು ಸೇರಿ ಹಲವು ನಾಯಕರು ಭಾಗಿಯಾಗಿದ್ದಾರೆ.     ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಿದ್ದರಾಮಯ್ಯ, ನೀರು ಬಿಡಲು …

Read More »

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿ ಹೊಸಪೇಟೆ ಸಂಸ್ಥಾನ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಇಂದು ನಗರದ 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಯನ್ನು ಸೆಪ್ಟೆಂಬರ್ 29ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿತು. ಅಭಿನವ ಹಾಲಶ್ರಿ ಪರ ವಕೀಲ ಲೋಕೇಶ್ ಮಧ್ಯಂತರ ಜಾಮೀನಿಗೆ ಅರ್ಜಿ‌ ಸಲ್ಲಿಸಿದರು. ಸರ್ಕಾರಿ ವಕೀಲರಿಗೆ ಸೆಪ್ಟೆಂಬರ್ 29ರಂದು ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಜಾಮೀನು ಅರ್ಜಿಯನ್ನು ಕೋರ್ಟ್‌ ಮುಂದೂಡಿತು. ಹೀಗಾಗಿ, ಅಲ್ಲಿಯವರೆಗೂ ಆರೋಪಿಯನ್ನು ನ್ಯಾಯಾಲಯ ಪೊಲೀಸರ ವಶಕ್ಕೆ ಒಪ್ಪಿಸಿದೆ. ನಿನ್ನೆಯಿಂದ ಸ್ಚಾಮೀಜಿಯನ್ನು ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಒಂದಿಷ್ಟು ಮಹತ್ವದ ವಿಚಾರಗಳನ್ನು ಅವರು ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ 10:30ರ ವೇಳೆಗೆ ಸ್ವಾಮೀಜಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಚಂದ್ರಾ ಲೇಔಟ್ ಬಳಿಯ ಮನೆಯೊಂದರಲ್ಲಿ ಸ್ವಾಮೀಜಿ ಹಣ ಪಡೆದಿದ್ದಾರೆ ಎನ್ನಲಾಗಿದ್ದು, ಅಲ್ಲಿಗೆ ಕರೆದೊಯ್ದು ಸಿಸಿಬಿ ಅಧಿಕಾರಿಗಳು ಸ್ಥಳ ಮಹಜರು ಪ್ರಕ್ರಿಯೆ ಮಾಡಲಿದ್ದಾರೆ. ಪಡೆದ ಹಣವನ್ನು ಮೈಸೂರಿನಲ್ಲಿ ಇರಿಟ್ಟಿರುವ ಮಾಹಿತಿಯಿದ್ದು, ನಂತರ ಮೈಸೂರಿಗೂ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ 6 ಆರೋಪಿಗಳ ಬಂಧನವಾಗುತ್ತಿದ್ದಂತೆ ಅಭಿನವ ಹಾಲಶ್ರೀ ಸ್ವಾಮೀಜಿ ನಾಪತ್ತೆಯಾಗಿದ್ದರು. ತಲೆಮರೆಸಿಕೊಳ್ಳಲು ಸಂಚು ರೂಪಿಸಿದ್ದ ಆರೋಪಿ ಮೈಸೂರಿನಿಂದ ಒಡಿಶಾಗೆ ವಿವಿಧ ಮಾರ್ಗಗಳಲ್ಲಿ ತೆರಳಿ, ಭುವನೇಶ್ವರದಿಂದ ಭೋದ್ ಗಯಾಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಒಡಿಶಾ ಕಟಕ್ ಬಳಿ ಬಂಧಿಸಲಾಗಿದೆ.

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿ ಹೊಸಪೇಟೆ ಸಂಸ್ಥಾನ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಇಂದು ನಗರದ 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಯನ್ನು ಸೆಪ್ಟೆಂಬರ್ 29ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿತು. ಅಭಿನವ ಹಾಲಶ್ರಿ ಪರ ವಕೀಲ ಲೋಕೇಶ್ ಮಧ್ಯಂತರ ಜಾಮೀನಿಗೆ ಅರ್ಜಿ‌ ಸಲ್ಲಿಸಿದರು. ಸರ್ಕಾರಿ ವಕೀಲರಿಗೆ ಸೆಪ್ಟೆಂಬರ್ 29ರಂದು ಆಕ್ಷೇಪಣೆ ಸಲ್ಲಿಸಲು …

Read More »