ಹುಬ್ಬಳ್ಳಿ: ಕಲಘಟಗಿ ತಾಲೂಕಿನಲ್ಲಿ ದಿನದಿನಕ್ಕೆ ಕಾಡು ಪ್ರಾಣಿಗಳ ಹಾವಳಿ ಜೋರಾಗಿದೆ. ತಾಲೂಕಿನ ಹಟಕಿನಾಳ ಗ್ರಾಮದಲ್ಲಿ ಚಿರತೆಗಳ ಗುಂಪು ದಾಳಿ ಮಾಡಿ ಎತ್ತನ್ನು ತಿಂದು ಹಾಕಿರುವ ಘಟನೆ ನಡೆದಿದೆ. ಗ್ರಾಮದ ಮಲ್ಲಯ್ಯ ಶರಣಯ್ಯ ಗೋಡಿಮನಿ ಎಂಬವರು ಎತ್ತು ಕಳೆದುಕೊಂಡಿದ್ದಾರೆ. ರಾತ್ರಿ ಹೊಲದ ಮನೆಯಲ್ಲಿ ಎರಡು ಎತ್ತುಗಳನ್ನು ಕಟ್ಟಿ ಹಾಕಿದ್ದರು. ಈ ಪೈಕಿ ಒಂದು ಕಾಣೆಯಾಗಿತ್ತು. ಬೆಳಿಗ್ಗೆ ತಾನಾಗಿಯೇ ಒಂದು ಎತ್ತು ಮನೆಯತ್ತ ಮರಳಿದೆ. ಆದ್ರೆ ಇನ್ನೊಂದು ಕಾಣದೇ ಇದ್ದಾಗ ರೈತ ಕಬ್ಬಿನ ಗದ್ದೆಯಲ್ಲಿ …
Read More »ಹುಬ್ಬಳ್ಳಿಯಲ್ಲಿ ರೈತ ಆತ್ಮಹತ್ಯೆ: ಸಾಲ ಮರುಪಾವತಿಗೆ ಕಿರುಕುಳ ಆರೋಪ
ಹುಬ್ಬಳ್ಳಿ: ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ನಡೆದಿದೆ. ರಾಜ್ಯದಲ್ಲಿ ಬರ ತಾಂಡವಾಡುತ್ತಿದ್ದು, ಮಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಳೆ ಸಾಲ ವಸೂಲಿ ಮಾಡಲು ಬ್ಯಾಂಕ್ವೊಂದರ ಮ್ಯಾನೇಜರ್ ರೈತನಿಗೆ ನಿರಂತರ ಕಿರುಕುಳ ನೀಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ. ಮಹಾದೇವಪ್ಪ ಫಕೀರಪ್ಪ ಜಾವೂರ್ (75) ಎಂಬಾತ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಈತ ನಿನ್ನೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ …
Read More »ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜೆಡಿಎಸ್ ಮಹತ್ವದ ಸಭೆ
ಬೆಂಗಳೂರು: ರಾಜ್ಯದಲ್ಲಿ ಬರ ಅಧ್ಯಯನಕ್ಕಾಗಿ ಬಿಜೆಪಿ ಮಾದರಿಯಲ್ಲಿಯೇ ತಂಡ ರಚಿಸಿಕೊಂಡು ಜೆಡಿಎಸ್ ಸಹ ಅಧ್ಯಯನ ನಡೆಸಲು ತೀರ್ಮಾನಿಸಿದ್ದು, ಈ ಸಂಬಂಧ ಇಂದು ಸಭೆ ನಡೆಸಲಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಜಿ ಸಿಎಂ, ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜಿಲ್ಲಾವಾರು, ವಿಭಾಗವಾರು ಸಭೆ ನಡೆಯಲಿದೆ. ರಾಜ್ಯದಲ್ಲಿನ ಬರ ಅಧ್ಯಯನಕ್ಕೆ ಬಿಜೆಪಿ ನಿರ್ಧರಿಸಿ ತಂಡ ರಚಿಸಿದೆ. ಈ ಬೆನ್ನಲ್ಲೇ ಜೆಡಿಎಸ್ ಸಹ ಬರ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಖಂಡಿಸಿ …
Read More »ಹಾವೇರಿಯಲ್ಲಿ ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ
ಹಾವೇರಿ : ಅಣ್ಣನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಮೈದುನ ಪರಾರಿಯಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಗೀತಾ ಮರಿಗೌಡ್ರು(32) ಅಕುಲ್(10) ಮತ್ತು ಅಂಕಿತಾ(7) ಎಂದು ಗುರುತಿಸಲಾಗಿದೆ. ಕುಮಾರಗೌಡ್ ಮರಿಗೌಡ್ರು ಕೊಲೆಗೈದ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಕುಮಾರ್ಗೌಡ್ ತನ್ನ ಸ್ವಂತ ಅಣ್ಣ ಹೊನ್ನೇಗೌಡರ ಹೆಂಡತಿ ಮತ್ತು ಮಕ್ಕಳ ಹತ್ಯೆಗೈದು ಪರಾರಿಯಾಗಿದ್ದಾನೆ. ಕೊಲೆಯಾದ ಗೀತಾ ಅವರ ಗಂಡ ಹೊನ್ನೇಗೌಡ ದುಬೈನಲ್ಲಿ ಕೆಲಸ …
Read More »ಸಿಎಂ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ,: ಚೆಲುವರಾಯ ಸ್ವಾಮಿ
ಕೊಡಗು: ಪಕ್ಷದಲ್ಲಿ ಉದ್ಬವಿಸಿರುವ ಸಮಸ್ಯೆಯನ್ನು ಹೈ-ಕಮಾಂಡ್, ಪಕ್ಷದ ಅಧ್ಯಕ್ಷರು, ಸಿಎಂ ತೀರ್ಮಾನ ಮಾಡ್ತಾರೆ. ಅದು ನಮ್ಮ ಕೆಲಸ ಅಲ್ಲ. ಸಣ್ಣಪುಟ್ಟ ಅಸಮಾಧಾನ ಎಲ್ಲಾ ಕಡೆ ಇರುತ್ತೆ ಅದನ್ನು ಸರಿಪಡಿಸುವ ಶಕ್ತಿ ಪಕ್ಷಕ್ಕೆ ಇದೆ ಎಂದು ಸಚಿವ ಚಲುವರಾಯ ಸ್ವಾಮಿ ತಿಳಿಸಿದ್ದಾರೆ. ಮುಂದಿನ ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಕೃಷಿ ಸಚಿವ ಚೆಲುವರಾಯ ಸ್ವಾಮಿ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವೇಳೆ, …
Read More »ಭ್ರೂಣ ಪತ್ತೆ ಸ್ಕ್ಯಾನಿಂಗ್ ಆರೋಪ: ಆಸ್ಪತ್ರೆ ಮೇಲೆ ಎಸಿ ನೇತೃತ್ವದಲ್ಲಿ ದಿಢೀರ್ ದಾಳಿ
ಬೆಳಗಾವಿ: ಗರ್ಭಿಣಿಯರ ಭ್ರೂಣ ಪತ್ತೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ನಿನ್ನೆ ರಾತ್ರಿ ಆಸ್ಪತ್ರೆಯೊಂದರ ಮೇಲೆ ಬೆಳಗಾವಿ ಎಸಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಸ್ಕ್ಯಾನಿಂಗ್ ರೂಮ್ ಸೀಜ್ ಮಾಡಿದ್ದಾರೆ. ಬೆಳಗಾವಿಯ ಮಾಧವ ನಗರದಲ್ಲಿರುವ ಆಸ್ಪತ್ರೆಯಲ್ಲಿ ಕಾನೂನು ಬಾಹಿರವಾಗಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆಹಚ್ಚುವ ಯಂತ್ರಗಳ ಕಾಯ್ದೆ ಉಲ್ಲಂಘನೆಯಡಿ ದಾಳಿ ಮಾಡಿ ಅಧಿಕಾರಿಗಳು …
Read More »ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕೆಂದು ಕನ್ನಡ ಪರ ಹೋರಾಟಗಾರರು ಒತ್ತಾಯ
ಬೆಳಗಾವಿ: ಅಭಿವೃದ್ಧಿ ಸೇರಿ ಮತ್ತಿತರ ವಿಚಾರದಲ್ಲಿ ಉತ್ತರ ಕರ್ನಾಟಕ ತಾರತಮ್ಯಕ್ಕೆ ಒಳಗಾಗುತ್ತಿದೆ. ಈಗ ಹೋರಾಟಗಾರರ ವಿಚಾರದಲ್ಲೂ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬ ಅನುಮಾನ ಮೂಡಿದೆ. ಮೇಕೆದಾಟು ಹೋರಾಟಗಾರರ ಕೇಸ್ ಹಿಂಪಡೆಯಲು ಮುಂದಾಗಿರುವ ಸರ್ಕಾರ, ಗಡಿ ಜಿಲ್ಲೆ ಹೋರಾಟಗಾರರನ್ನು ಮರೆತಿದೆ ಎಂದು ಆರೋಪಿಸಿ ಈ ಭಾಗದ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಹೌದು, ತೀವ್ರ ವಿರೋಧದ ಮಧ್ಯೆ ಬೆಳಗಾವಿ ಮಹಾನಗರ ಪಾಲಿಕೆ ಮುಂದೆ 2020ರಲ್ಲಿ ಕನ್ನಡ ಧ್ವಜವನ್ನು ನೆಟ್ಟು ಕನ್ನಡ ಸಂಘಟನೆಗಳು ಸಂಭ್ರಮಿಸಿದ್ದವು. …
Read More »ನೆದರ್ಲೆಂಡ್ಸ್-ಅಫ್ಘಾನಿಸ್ತಾನ ಮಧ್ಯೆ ಇಂದು ಪೈಪೋಟಿ; ಟಾಸ್ ಗೆದ್ದ ಡಚ್ ಟೀಂ ಬ್ಯಾಟಿಂಗ್
ಲಖನೌ(ಉತ್ತರಪ್ರದೇಶ): ಐಸಿಸಿ ವಿಶ್ವಕಪ್ ಕ್ರಿಕೆಟ್ 2023ರ 34ನೇ ಪಂದ್ಯ ನೆದರ್ಲ್ಯೆಂಡ್ಸ್ ಮತ್ತು ಅಫ್ಘಾನಿಸ್ತಾನ ನಡುವೆ ಇಂದು ಲಖನೌದ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ನೆದರ್ಲೆಂಡ್ಸ್ ಬ್ಯಾಟಿಂಗ್ ಆಯ್ದುಕೊಂಡಿತು. ನೆದರ್ಲೆಂಡ್ಸ್ ತಂಡದಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ವಿಕ್ರಮಜೀತ್ ಬದಲಿಗೆ ಬ್ಯಾರೆಸಿ ಸ್ಥಾನ ಪಡೆದಿದ್ದಾರೆ. ನಾಲ್ವರು ಸ್ಪಿನ್ನರ್ಗಳೊಂದಿಗೆ ಅಫ್ಘಾನಿಸ್ತಾನ ಮೈದಾನಕ್ಕಿಳಿಯಲಿದೆ. ಎರಡೂ ತಂಡಗಳು ಏಕದಿನ ವಿಶ್ವಕಪ್ನಲ್ಲಿ ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಪ್ರಸಕ್ತ ಟೂರ್ನಿಯಲ್ಲಿ ಇತ್ತಂಡಗಳಿಗೂ ಇದು 7ನೇ ಪಂದ್ಯ. ಹಶ್ಮತುಲ್ಲಾ …
Read More »ಯುವತಿಯಿಂದ ಅಶ್ಲೀಲ ವಿಡಿಯೋ ಕರೆ; 12 ಲಕ್ಷ ರೂಪಾಯಿ ಕಳ್ಕೊಂಡ ವೃದ್ಧ
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಇತರೆ ನಗರಗಳಲ್ಲಿ ಸೈಬರ್ ಕ್ರೈಂ ಮತ್ತು ಹನಿಟ್ರ್ಯಾಪ್ನಂತಹ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ ದೆಹಲಿಯಲ್ಲಿ ಸೈಬರ್ ಅಪರಾಧ ಪ್ರಕರಣವೊಂದರಲ್ಲಿ ಸಿಲುಕಿದ್ದ ವೃದ್ಧರೊಬ್ಬರನ್ನು ಪೊಲೀಸರು ರಕ್ಷಿಸಿದ್ದಾರೆ. ಅಷ್ಟೇ ಅಲ್ಲ, ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಸಂಪೂರ್ಣ ವಿವರ: ಶಾಹದಾರಾ ಜಿಲ್ಲೆಯ ಸೈಬರ್ ಸೆಲ್ ಠಾಣೆ ಪೊಲೀಸರು ರಾಜಸ್ಥಾನದ ವಂಚಕ ತಂಡದ ಇಬ್ಬರು ಸದಸ್ಯರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ರಾಜಸ್ಥಾನ ನಿವಾಸಿಗಳಾದ ಬರ್ಖತ್ ಖಾನ್ (32) …
Read More »ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ:B.S.Y.
ಬೆಂಗಳೂರು/ಶಿವಮೊಗ್ಗ: ವಿರೋಧ ಪಕ್ಷದ ನಾಯಕರನ್ನು ಹೈಕಮಾಂಡ್ ಆದಷ್ಟು ಬೇಗ ನೇಮಿಸುತ್ತದೆ ಎಂಬ ವಿಶ್ವಾಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲರೂ ವಿರೋಧ ಪಕ್ಷದ ನಾಯಕರನ್ನು ಯಾವಾಗ ಆಯ್ಕೆ ಮಾಡುತ್ತೀರಾ ಎಂದು ಕೇಳುತ್ತಿದ್ದಾರೆ. ಈಗಾಗಲೇ ಪ್ರಕ್ರಿಯೆ ತಡವಾಗಿದೆ. ಆದಷ್ಟು ಬೇಗ ಆಯ್ಕೆ ಮಾಡಲಾಗುವುದು ಎಂದರು. ನಮ್ಮ ಪಕ್ಷದ ವತಿಯಿಂದ ಇಂದಿನಿಂದ ಹತ್ತಾರು ತಂಡಗಳು ಬರ ಅಧ್ಯಯನಕ್ಕಾಗಿ ರಾಜ್ಯದಲ್ಲಿ ಪ್ರವಾಸ ಮಾಡಲಿವೆ. ನಾನು …
Read More »
Laxmi News 24×7