ಬೆಂಗಳೂರು: ಕೆಆರ್ಎಸ್ ಒಳಹರಿವು ಶೂನ್ಯ ಮಟ್ಟ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ. ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ಗಳು ಸುಟ್ಟು ಹೋದ ಸ್ಥಳಕ್ಕೆ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸಿನ ಕುರಿತು …
Read More »ಶಾಸಕ ರವಿ ಗಣಿಗ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ: ಸತೀಶ್ ಜಾರಕಿಹೊಳಿ
ವಿಜಯಪುರ: ಎರಡೂವರೆ ವರ್ಷದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಶಾಸಕ ರವಿ ಗಣಿಗ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಈ ಬಗ್ಗೆ ಯಾರು ಯಾವ ಹೇಳಿಕೆಯನ್ನು ನೀಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿ ಯಾವ ಹೇಳಿಕೆಯನ್ನು ನಾನು ನೀಡುವುದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ …
Read More »ದೇಶದಲ್ಲಿ ಈರುಳ್ಳಿ ದರ ಹೇಗಿದೆ?: ಬೆಲೆ ಏರಿಕೆ ವದಂತಿಗೆ ಕೇಂದ್ರ ಸರ್ಕಾರದಿಂದ ಅಂಕಿಅಂಶ ಬಿಡುಗಡೆ
ನವದೆಹಲಿ: ದೇಶದಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಿದೆ ಎಂಬ ವದಂತಿಯ ಮಧ್ಯೆ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಯಲ್ಲಿನ ದರಗಳ ಅಂಕಿಅಂಶವನ್ನು ಕೇಂದ್ರ ಸರ್ಕಾರ ಸೋಮವಾರ ನೀಡಿದೆ. ದೆಹಲಿಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 78 ರೂಪಾಯಿ ಇದ್ದು, ಅತ್ಯಧಿಕವಾಗಿದ್ದರೆ, ದೇಶದ ವಿವಿಧೆಡೆ 50.35 ಪೈಸೆಯಷ್ಟು ಬಿಕರಿಯಾಗುತ್ತಿದೆ ಎಂದು ತಿಳಿಸಿದೆ. ದೆಹಲಿಯಲ್ಲಿ ಸೋಮವಾರ ಈರುಳ್ಳಿ ಬೆಲೆ ಗರಿಷ್ಠ ಮಟ್ಟದಲ್ಲಿಯೇ ಇತ್ತು. ಇಲ್ಲಿನ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ಸರಾಸರಿ 78 ರೂ. ಮಾರಾಟವಾಗಿದೆ. ದೇಶದಲ್ಲಿ ಸರಾಸರಿ …
Read More »ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚು: ಕರ್ನಾಟಕದ ಬಸ್ಗೆ ಬೆಂಕಿ.. ಮಹಾರಾಷ್ಟ್ರಕ್ಕೆ ಸಂಚಾರ ತಾತ್ಕಾಲಿಕ ಸ್ಥಗಿತ
ಕಲಬುರಗಿ : ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಸೋಮವಾರ ಮಹಾರಾಷ್ಟ್ರದಲ್ಲಿ ಕರ್ನಾಟಕಕ್ಕೆ ಸೇರಿದ ಕೆಕೆಆರ್ಟಿಸಿ ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ. ಸೋಮವಾರ ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಕೆಎ-38 ಎಫ್-1201 ಸಂಖ್ಯೆ ಬಸ್ಸಿಗೆ ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಬೆಂಕಿ ಹಚ್ಚಲಾಗಿದೆ. ಪ್ರತಿಭಟನಾಕಾರರು ಬಸ್ ತಡೆದು ಪ್ರಯಾಣಿಕರನ್ನು …
Read More »ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಬೆಳಗಾವಿ ನಗರಕ್ಕೆ ವಿಸ್ತರಿಸಿ: ರೈಲ್ವೇ ಸಚಿವರಿಗೆ ಸಿಎಂ ಪತ್ರ
ಬೆಂಗಳೂರು- ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರು : ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ರೈಲು ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಕೇಂದ್ರ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ. ಕಿತ್ತೂರು ಕರ್ನಾಟಕ ಬೆಳಗಾವಿ ಭಾಗದ ಲಕ್ಷಾಂತರ ಕನ್ನಡಿಗರ ಪರವಾಗಿ ನಾನು ನಿಮಗೆ ಪತ್ರ ಬರೆಯುತ್ತಿದ್ದೇನೆ. ಕೇಂದ್ರ …
Read More »ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸಿಕ್ಸರ್ ಬಾರಿಸುತ್ತಿರುವ 22 ಅಡಿ ಉದ್ದದ ಸಚಿನ್ ಪ್ರತಿಮೆ ನಿರ್ಮಾಣ.. ನಾಳೆ ಅನಾವರಣ
ಮುಂಬೈ (ಮಹಾರಾಷ್ಟ್ರ): ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹೆಸರಿಗೆ ಅದೆಷ್ಟೋ ದಾಖಲೆಗಳಿವೆ. ಅವರಾಡಿದ ಪ್ರತಿ ಮೈದಾನಗಳೂ ದಾಖಲೆಗಳ ಗೂಡೇ. ಸಚಿನ್ ಇಷ್ಟಪಡುವ ಮತ್ತು ತವರು ಮೈದಾನವಾದ ಮುಂಬೈನಲ್ಲಿರುವ ವಾಂಖೆಡೆ ಸ್ಟೇಡಿಯಂನಲ್ಲಿ ‘ತದ್ರೂಪಿ ಲಿಟಲ್ ಮಾಸ್ಟರ್’ ಮೈದಾಳಿದ್ದು, ಬುಧವಾರ (ನವೆಂಬರ್ 1) ಅದು ಅನಾವರಣಗೊಳ್ಳಲಿದೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪ್ರತಿಮೆಯನ್ನು ಭಾರತ- ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಮುನ್ನಾದಿನದಂದು ಅನಾವರಣ ಮಾಡಲಾಗುತ್ತಿದೆ. …
Read More »ಮಾನವ ಕಳ್ಳಸಾಗಣೆ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ: 14 ಜನರ ಬಂಧನ, 20 ಮಹಿಳೆಯರ ರಕ್ಷಣೆ
ಬೆಂಗಳೂರು: ನಗರದಲ್ಲಿ ಮಾನವ ಕಳ್ಳಸಾಗಣಿಕೆ ಹಾಗೂ ವೇಶ್ಯಾವಾಟಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ 14 ಜನ ಆರೋಪಿಗಳನ್ನು ಬಂಧಿಸಲಾಗಿದೆ. ನೊಂದ 20 ಮಹಿಳೆಯರನ್ನ ರಕ್ಷಿಸಲಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಗಲಗುಂಟೆ, ವರ್ತೂರು, ಕೆ.ಆರ್. ಪುರಂ, ವಿದ್ಯಾರಣ್ಯಪುರ, ಅಮೃತಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಬಾಂಗ್ಲಾದೇಶ ಮೂಲದ ನಾಲ್ವರು, ಪಶ್ಚಿಮ ಬಂಗಾಳದ …
Read More »ಮೆಡಿಕಲ್ ಸೀಟ್ ಕೊಡಿಸುವುದಾಗಿ ವಂಚನೆ.. ಹೈದರಾಬಾದ್ ಮೂಲದ ಆರೋಪಿ ಬಂಧನ
ಬೆಂಗಳೂರು: ವೈದ್ಯಕೀಯ ಶಿಕ್ಷಣದ ಸೀಟು ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯನ್ನು ಸಂಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಮೂಲದ ಶರತ್ ಗೌಡ ಬಂಧಿತ ಆರೋಪಿ. ಹೇಗಿತ್ತು ಈತನ ಮೋಸದ ಹಾದಿ.. ಸಂಜಯ ನಗರ ವ್ಯಾಪ್ತಿಯ ನ್ಯೂ ಬಿಇಎಲ್ ರಸ್ತೆಯಲ್ಲಿ ನೆಕ್ಸಸ್ ಎಡು ಎಂಬ ಹೆಸರಿನ ಕಚೇರಿ ತೆರೆದಿದ್ದ ಆರೋಪಿ, ಸಿಇಟಿಯಲ್ಲಿ ರ್ಯಾಂಕಿಂಗ್ ಕಡಿಮೆ ಬಂದ ವಿದ್ಯಾರ್ಥಿಗಳ ಪೋಷಕರು, ವೈದ್ಯಕೀಯ ಶಿಕ್ಷಣ ಪಡೆಯಲು ಪ್ರಯತ್ನಿಸುತ್ತಿರುವವರ ಮಾಹಿತಿಯನ್ನು ಬೇರೆ ಬೇರೆ ಮೂಲಗಳಿಂದ ಸಂಗ್ರಹಿಸುತ್ತಿದ್ದ. ನಂತರ ಅವರುಗಳನ್ನ …
Read More »ಬಿಜೆಪಿ ನಾಯಕರೇ ನೀವು ಯಾತ್ರೆ ಮಾಡಬೇಕಾಗಿರುವುದು ರಾಜ್ಯದಲ್ಲಿ ಅಲ್ಲ, ನೀವು ದೆಹಲಿಗೆ ಯಾತ್ರೆ ಹೊರಡಬೇಕು.
ಬೆಂಗಳೂರು : ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಟ ಮಾಡಿದರಂತೆ ಎಂಬ ಗಾದೆ ಮಾತಿನಂತಾಗಿದೆ ರಾಜ್ಯ ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ, ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ. ಈ ಬಿಜೆಪಿ ನಾಯಕರು ಬರ ಅಧ್ಯಯನಕ್ಕೆ ರಾಜ್ಯದಲ್ಲಿ ಸುತ್ತಾಡಲು ಹೊರಟಿದ್ದಾರೆ. ಬಿಜೆಪಿ ನಾಯಕರೇ, ನಿಮ್ಮದೇ ಪಕ್ಷದ ಸರ್ಕಾರಕ್ಕೆ ಸೇರಿದ …
Read More »ಸಕ್ಕರೆನಾಡು ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ
ಮಂಡ್ಯ: ಸಕ್ಕರೆನಾಡು ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸುವರು. ಸಿಎಂಗೆ ಅದ್ಧೂರಿ ಸ್ವಾಗತ ಕೋರಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದರೆ, ಕಾವೇರಿ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆಯೂ ಇದ್ದು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಸಿಎಂ ಆದ ಬಳಿಕ ಸಿದ್ದರಾಮಯ್ಯ 2ನೇ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. …
Read More »
Laxmi News 24×7