Breaking News

ರಾಷ್ಟ್ರೀಯ

ಬಿಗ್​ಬಾಸ್​ ಮನೆಯಿಂದ ಅನಿರೀಕ್ಷಿತವಾಗಿ ಎಕ್ಸಿಟ್​ ಆಗಿದ್ದ ಸೀಸನ್​ 10ರ ಸ್ಪರ್ಧಿ ​ವರ್ತೂರು ಸಂತೋಷ್ ಮತ್ತೆ ರೀ ಎಂಟ್ರಿ

ಬೆಂಗಳೂರು: ಹುಲಿ ಉಗುರಿನ ಡಾಲರ್​ ಧರಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಕನ್ನಡ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿ ಹಳ್ಳಿಕಾರ್​ ಖ್ಯಾತಿಯ ವರ್ತೂರು​ ಸಂತೋಷ್​ ಮತ್ತೆ ಬಿಗ್​ ಬಾಸ್​ ಮನೆಗೆ ರೀ ಎಂಟ್ರಿ ಕೊಟ್ಟು ಸ್ಪರ್ಧಾರ್ತಿಗಳಿಗೆ ಸರ್​ಪ್ರೈಸ್​ ಕೊಟ್ಟಿದ್ದಾರೆ. ಹುಲಿ ಉಗುರಿನ ಡಾಲರ್​ ಧಾರಣೆ ಪ್ರಕರಣದಲ್ಲಿ ಅ.22ರಂದು ಬಿಗ್​ ಬಾಸ್​ ಮನೆಯಿಂದಲೇ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇದರಿಂದ ಅನಿರೀಕ್ಷಿತವಾಗಿ ಮನೆಯಿಂದ ಎಕ್ಸಿಟ್​​ ಆಗಿದ್ದ ಅವರು ಮತ್ತೆ ಬಿಗ್​ ಬಾಸ್​ …

Read More »

”ಆಪರೇಷನ್ ಕಮಲದ ಬಗ್ಗೆ ಯಾರಾದರೂ ದೂರು ಕೊಟ್ಟರೆ ತನಿಖೆ ಮಾಡುತ್ತೇವೆ.: ಡಾ. ಜಿ. ಪರಮೇಶ್ವರ್

ಬೆಂಗಳೂರು: ”ಆಪರೇಷನ್ ಕಮಲದ ಬಗ್ಗೆ ಯಾರಾದರೂ ದೂರು ಕೊಟ್ಟರೆ ತನಿಖೆ ಮಾಡುತ್ತೇವೆ. ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಸದಾಶಿವ ನಗರ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ನಾನಿದರ ಬಗ್ಗೆ ಮಾತನಾಡಿಲ್ಲ. ಯಾರಾದರೂ ದೂರು ಕೊಟ್ಟರೆ ತನಿಖೆ ಮಾಡ್ತೇವೆ. ದೂರು ಪೆಸಿಫಿಕ್ ಆಗಿರಬೇಕು” ಎಂದರು. ಅಸಮಾಧಾನ‌ ಇಲ್ಲ: ಪಕ್ಷದಲ್ಲಿ ಕಾರ್ಯಕರ್ತರ ಬೇಸರ ವಿಚಾರವಾಗಿ ಪ್ರತಿಕ್ರಿಯಿಸಿ, ”ಅಸಮಾಧಾನ ಆ ರೀತಿ ಯಾವುದೂ ಇಲ್ಲ. …

Read More »

ಷೇರು ಮಾರುಕಟ್ಟೆ ಇಂದು: 330 ಪಾಯಿಂಟ್​ ಏರಿಕೆಯಾದ ಸೆನ್ಸೆಕ್ಸ್​; 19,100 ದಾಟಿದ ನಿಫ್ಟಿ

ಬೆಂಗಳೂರು: ಜಾಗತಿಕ ಮಾರುಕಟ್ಟೆಗಳಲ್ಲಿನ ಮಂದಗತಿಯ ವಹಿವಾಟಿನ ಕಾರಣದಿಂದ ಸೋಮವಾರ ಇಳಿಕೆಯೊಂದಿಗೆ ವಹಿವಾಟು ಆರಂಭಿಸಿದ ಭಾರತೀಯ ಷೇರು ಸೂಚ್ಯಂಕಗಳು ನಂತರ ರಿಲಯನ್ಸ್ ಇಂಡಸ್ಟ್ರೀಸ್, ಭಾರ್ತಿ ಏರ್ಟೆಲ್, ಐಸಿಐಸಿಐ ಬ್ಯಾಂಕ್, ಎಚ್​ಡಿಎಫ್​ಸಿ ಬ್ಯಾಂಕ್, ಎಲ್ &ಟಿ ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಷೇರುಗಳ ಕಾರಣದಿಂದ ಎತ್ತರಕ್ಕೇರಿದವು.   ಸೋಮವಾರ ವಹಿವಾಟಿನ ಅಂತ್ಯಕ್ಕೆ ಎಸ್ &ಪಿ ಬಿಎಸ್‌ಇ ಸೆನ್ಸೆಕ್ಸ್ 330 ಪಾಯಿಂಟ್ಸ್ ಅಥವಾ ಶೇಕಡಾ 0.52ರಷ್ಟು ಏರಿಕೆ ಕಂಡು 64,113ಕ್ಕೆ ತಲುಪಿದೆ. ಮತ್ತೊಂದೆಡೆ, ನಿಫ್ಟಿ50 …

Read More »

ಹಳೆ ವೈಷಮ್ಯದ ಹಿನ್ನಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ವ್ಯಕ್ತಿ ಕೊಲೆ

ರಾಯಚೂರು : ಹಳೇ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಹಲ್ಲೆಮಾಡಿ ವ್ಯಕ್ತಿಯೊಬ್ಬರನ್ನು ಬರ್ಬರ‌ವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಮದ್ಲಾಪುರ ಗ್ರಾಮದ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ರಬಣಕಲ್‌ ಗ್ರಾಮದ ಪ್ರಸಾದ್ (38) ಎಂದು ಗುರುತಿಸಲಾಗಿದೆ. ಬೆಳಗ್ಗೆ ಭತ್ತದ ಗದ್ದೆಗೆ ನೀರು ಕಟ್ಟಲು ತೆರಳಿದಾಗ ಏಕಾಏಕಿ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿದ ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಪ್ರಸಾದ್​ ಅವರು ಜಮೀನಿಗೆ ನೀರು …

Read More »

ಬಾವಲಿಗಳನ್ನು ಮಾಂಸಕ್ಕಾಗಿ ಬೇಟೆಯಾಡುತ್ತಿದ್ದ ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಕಾಡರಾಮನಹಳ್ಳಿಯಲ್ಲಿ ಮಾಂಸಕ್ಕಾಗಿ ಎಂಟು ಬಾವಲಿಗಳನ್ನು ಕೊಂದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ಅರೆಸ್ಟ್ ಮಾಡಿದ್ದಾರೆ. ಮಾಗಡಿ ತಾಲ್ಲೂಕಿನ ಹೊಂಬಾಳಮ್ಮಪೇಟೆಯ ನಿವಾಸಿಗಳಾದ ರಂಗನಾಥ, ರಾಮಕೃಷ್ಣ, ಶಿವಶಂಕರ ಹಾಗೂ ರಂಗನಾಥ ಎಂದು ಆರೋಪಿಗಳನ್ನು ಗುರುತಿಸಲಾಗಿದೆ. ಆರೋಪಿಗಳು ಕಾಡರಾಮನಹಳ್ಳಿಯ ಜಮೀನೊಂದರಲ್ಲಿ 8 ಬಾವಲಿಗಳನ್ನು ಮಾಂಸಕ್ಕಾಗಿ ಬೇಟೆಯಾಡಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿ …

Read More »

ಬೆಂಗಳೂರು ಹೊರವಲಯದ ರಸ್ತೆ, ಅಪಾರ್ಟ್​ಮೆಂಟ್​ಗಳಲ್ಲಿ ಚಿರತೆ ಓಡಾಟ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರು: ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ಚಿರತೆ ಸಂಚಾರದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ. ಮೈಕ್ ಮೂಲಕ ಚಿರತೆ ಇದೆ‌, ಜನ ಎಚ್ಚರಿಕೆಯಿಂದ ಓಡಾಟ ಮಾಡಬೇಕು ಎಂದು ಇಲಾಖೆ ಸಿಬ್ಬಂದಿ ಮನವಿ ಮಾಡಿದ್ದಾರೆ. ಸಿಂಗಸಂದ್ರ, ಹೊಸಪಾಳ್ಯ, ಕೂಡ್ಲುಭಾಗದಲ್ಲಿ ಚಿರತೆ ಓಡಾಟ ಹೆಚ್ಚಾಗಿದೆ. ಪ್ರತಿಷ್ಠಿತ ಅಪಾರ್ಟ್​ಮೆಂಟ್​ಗಳ ಆವರಣ ಹಾಗೂ ಲೇಔಟ್​ಗಳಲ್ಲಿ ಸಂಚಾರ ಮಾಡಿದೆ. ಕತ್ತಲಾಗುತ್ತಿದ್ದಂತೆ ಅಪಾರ್ಟ್​ಮೆಂಟ್​ನ ಮೆಟ್ಟಿಲು, …

Read More »

ಮೆಟ್ರೋಗೆ ಬಸವಣ್ಣ ಅವರ ಹೆಸರಿಡಬೇಕು.:ಸಚಿವ ಎಂ ಬಿ ಪಾಟೀಲ್

ಬೆಂಗಳೂರು: ನಿಶ್ವಿತವಾಗಿ ಮೆಟ್ರೋಗೆ ಜಗಜ್ಯೋತಿ ಬಸವಣ್ಣ ಅವರ ಹೆಸರಿಡಬೇಕು. ಇದು ಜನರ ಒತ್ತಾಯ, ಹಾಗೆ ನನ್ನ ಒತ್ತಾಯವೂ ಇದೆ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.   ಮೆಟ್ರೋಗೆ ಬಸವೇಶ್ವರರ ಹೆಸರಿಡುವ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಕೆಂಪೇಗೌಡರು ಬೆಂಗಳೂರನ್ನು ನಿರ್ಮಾಣ ಮಾಡಿದರು. ಅವರ ಹೆಸರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಟ್ಟಿದ್ದೇವೆ. ಬಹಳ ಒಳ್ಳೆಯ ಕೆಲಸ ಮಾಡಿದ್ದೇವೆ. ಇನ್ನೋರ್ವ ಮಹಾತ್ಮರು ಬಸವೇಶ್ವರ. 12ನೇ ಶತಮಾನದಲ್ಲಿ ಸಮಾನತೆ ತಂದವರು. ಅನುಭವ ಮಂಟಪದ ಪರಿಕಲ್ಪನೆ ತಂದವರು. …

Read More »

ಹೊಳೆನರಸೀಪುರ ಶಾಸಕ ಹೆಚ್​ ಡಿ ರೇವಣ್ಣ ಅವರಿಗೆ ಹೈಕೋರ್ಟ್​ ಮತ್ತೊಮ್ಮೆ ಸಮನ್ಸ್ ಮರು ಜಾರಿ ಮಾಡಿದೆ.

ಬೆಂಗಳೂರು : ಚುನಾವಣಾ ಅಕ್ರಮಗಳನ್ನು ನಡೆಸಿ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಆಯ್ಕೆಯಾಗಿದ್ದು, ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಮತ್ತೊಂದು ಬಾರಿ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ.   ಹೊಳೆನರಸೀಪುರದ ಪರಾಜಿತ ಅಭ್ಯರ್ಥಿ ಹಾಗೂ ವಕೀಲ ದೇವರಾಜೇಗೌಡ ಎಂಬುವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ …

Read More »

ಮುಂಬೈನ ಐಕಾನಿಕ್ ಪ್ರೀಮಿಯರ್ ಪದ್ಮಿನಿ ಟ್ಯಾಕ್ಸಿಗಳಿಗೆ ವಿದಾಯ.. ಇಂದಿನಿಂದ ‘ಕಪ್ಪು ಹಳದಿ’ ಟ್ಯಾಕ್ಸಿಗಳು ಬಂದ್​..

ಹೈದರಾಬಾದ್: ಮುಂಬೈನ ಬೀದಿಗಳಲ್ಲಿ ಪ್ರಯಾಣಿಸುವಾಗ ‘ಕಪ್ಪು ಮತ್ತು ಹಳದಿ’ ಟ್ಯಾಕ್ಸಿಗಳ ಚಿತ್ರವು ಖಂಡಿತವಾಗಿಯೂ ಕಣ್ಮುಂದೆ ಬರುತ್ತದೆ. ಅನೇಕ ವರ್ಷಗಳಿಂದ, ಈ ಟ್ಯಾಕ್ಸಿ ಸೇವೆಯನ್ನು ‘ಕಾಲಿ-ಪಿಲಿ’ ಎಂದು ಕರೆಯಲಾಗುತ್ತಿತ್ತು. ಇದು ಸಾಮಾನ್ಯರಿಂದ ಶ್ರೀಮಂತರವರೆಗಿನ ಮುಂಬೈನ ಎಲ್ಲಾ ವರ್ಗದ ಜನರಿಗೆ ಸಾರಿಗೆ ಸಾಧನವಾಗಿತ್ತು. ಈಗ ಕನಸಿನ ನಗರಿಯಲ್ಲಿ ಕಪ್ಪು ಹಳದಿಯ ನೆನಪುಗಳು ಮೂಲೆ ಸೇರುವ ದಿನ ಸಮೀಪಿಸುತ್ತದೆ. ಮಹಾನಗರಿ ಮುಂಬೈಗೂ ಇಲ್ಲಿನ ‘ಕಾಲಿ-ಪಿಲಿ’ ಟ್ಯಾಕ್ಸಿಗೂ ಅವಿನಾಭಾವ ಸಂಬಂಧವಿದ್ದು, ಈಗ ಸುಮಾರು ಆರು ದಶಕಗಳ ನಂತರ …

Read More »

ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ

ಸಿದ್ದರಾಮಯ್ಯ ನೇತೃತ್ವದಲ್ಲಿ ಐದು 5 ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಗೋಕಾಕ : ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ 5 ವರ್ಷ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಇಲ್ಲ ಎಲ್ಲವೂ ಊಹಾಪೋಹ ಅಷ್ಟೇ ಎಂದು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸರ್ಕಾರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಕಮಲ …

Read More »