Breaking News

ರಾಷ್ಟ್ರೀಯ

ತಾಯಿಯನ್ನೇ ಕೊಲೆ ಮಾಡಿದ ಆರೋಪ: ಪುತ್ರನ ಬಂಧನ

ಮಂಗಳೂರು: ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರ ಎಂಬಲ್ಲಿ ರತ್ನ ಶೆಟ್ಟಿ (60) ಮನೆಯ ಕೊಠಡಿಯೊಳಗೆ ಅಸಹಜವಾಗಿ ಸಾವನ್ನಪ್ಪಿದ್ದರು. ಕೊಲೆ ಆರೋಪದ ಮೇಲೆ ಆಕೆಯ ಮಗನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ರವಿರಾಜ್ ಶೆಟ್ಟಿ(33) ಬಂಧಿತ ಆರೋಪಿ. ರತ್ನ ಶೆಟ್ಟಿ ಅವರು ಕಟೀಲು ದುರ್ಗಾ ನಗರದ ಬಾಲಕೃಷ್ಣ ಎಂಬವರ ಮನೆಯ ಬದಿಯ ಕೊಠಡಿಯಲ್ಲಿ ಮಗ ರವಿರಾಜ್ ಜೊತೆ ವಾಸ್ತವ್ಯವಿದ್ದರು. ಆತ ಗಿಡಿಗೆರೆ ಚರ್ಚ್ ಬಳಿಯ ಬಾಲಕೃಷ್ಣ ಎಂಬವರ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ. …

Read More »

ನವೆಂಬರ್​ 3ರಂದು ‘ಇಂಡಿಯನ್​ 2’ ಸಿನಿಮಾದ ಗ್ಲಿಂಪ್ಸ್​ ಬಿಡುಗಡೆಯಾಗಲಿದೆ ಎಂದು ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ತಿಳಿಸಿದೆ.

  ‘ಇಂಡಿಯನ್​ 2’ ಎಸ್​ ಶಂಕರ್​ ನಿರ್ದೇಶನದ ಮುಂಬರುವ ತಮಿಳು ಸಿನಿಮಾ ಸಿನಿ ಪ್ರೇಮಿಗಳಲ್ಲಿ ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಕಮಲ್​ ಹಾಸನ್​ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಈ ಚಿತ್ರದ ಅಪ್​ಡೇಟ್​ ಹೊರಬಿದ್ದಿದೆ. ನವೆಂಬರ್​ 3ರಂದು ಸಿನಿಮಾದ ಒಂದು ನೋಟವನ್ನು (ಗ್ಲಿಂಪ್ಸ್​) ಚಿತ್ರತಂಡ ಹಂಚಿಕೊಳ್ಳಲಿದೆ ಎಂದು ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ತಿಳಿಸಿದೆ. ಈ ವಿಚಾರವನ್ನು ಹಂಚಿಕೊಳ್ಳಲು ‘ಇಂಡಿಯನ್ 2’ನ ಹೊಸ ಲುಕ್​ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ಲೈಕಾ ಪ್ರೊಡಕ್ಷನ್ಸ್ ಮತ್ತು …

Read More »

‘ಶೀ ಈಸ್​ ಇನ್​ ಲವ್​’ ಹಾಡಿಗೆ ಯಶ ಶಿವಕುಮಾರ್ ಜೊತೆ ಪ್ರಜ್ವಲ್ ದೇವರಾಜ್ ರೋಮ್ಯಾನ್ಸ್

ಪ್ರಜ್ವಲ್​ ದೇವರಾಜ್​ ನಟನೆಯ ‘ಗಣ’ ಸಿನಿಮಾದ ‘ಶೀ ಈಸ್​ ಇನ್​ ಲವ್​’ ಎಂಬ ರೊಮ್ಯಾಂಟಿಕ್​ ಹಾಡು ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಟ ಪ್ರಜ್ವಲ್ ದೇವರಾಜ್, ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಾ ಬ್ಯುಸಿಯಾಗಿದ್ದಾರೆ. ಅದರಲ್ಲಿ ಬಹುನಿರೀಕ್ಷಿತ ‘ಗಣ’ ಸಿನಿಮಾ ಕೂಡ ಒಂದು. ಇದೀಗ ಈ ಚಿತ್ರದ ರೊಮ್ಯಾಂಟಿಕ್​ ಹಾಡೊಂದು ರಿಲೀಸ್​ ಆಗಿದೆ. ‘ಶೀ ಈಸ್​ ಇನ್​ ಲವ್​’ ಎಂಬ ಸುಮಧುರ ಹಾಡಿಗೆ ಜನರು …

Read More »

ಶಾಸಕರನ್ನು ಖರೀದಿ ಮಾಡುವುದೇ ಬಿಜೆಪಿಯವರ ಡಿಎನ್‌ಎ ಆಗಿದೆ:ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್​​​ ಶಾಸಕರನ್ನು ಬಿಜೆಪಿಯು ಹಣದ ಆಮಿಷವೊಡ್ಡಿ ಸೆಳೆಯುವ ಪ್ರಯತ್ನ ನಡೆಸುತ್ತಿದೆ ಎಂಬ ಆರೋಪ ಬೆನ್ನಲ್ಲೇ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ. ಪ್ರಜಾಪ್ರಭುತ್ವ ದಮನ ಮಾಡುವುದೇ ಬಿಜೆಪಿ ಸಿದ್ಧಾಂತವಾಗಿದೆ. ವಾಮಮಾರ್ಗದ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯುವುದು ಹೊಸದೇನಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೆಳೆಯುತ್ತಿದೆ ಎಂಬ ಆರೋಪ ಕುರಿತು ಮಾತನಾಡಿದ ಸಚಿವರು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಶಾಸಕರನ್ನು ಖರೀದಿ ಮಾಡುತ್ತಿಲ್ಲ. 2008 ಹಾಗೂ 2019 …

Read More »

ಛತ್ತೀಸ್​ಗಢದಲ್ಲಿ ರೈತರೊಂದಿಗೆ ಭತ್ತ ಕಟಾವು ಮಾಡಿದ ರಾಹುಲ್​ ಗಾಂಧಿ!

ರಾಯ್‌ಪುರ (ಛತ್ತೀಸ್‌ಗಢ): ವಿಧಾನಸಭೆ, ಲೋಕಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಜನರೊಂದಿಗೆ ಬೆರೆಯುವುದನ್ನು ಮುಂದುವರಿಸಿದ್ದಾರೆ. ಚುನಾವಣಾ ರಾಜ್ಯವಾದ ಛತ್ತೀಸ್​ಗಢದಲ್ಲಿ ಪ್ರಚಾರ ನಡೆಸುತ್ತಿರುವ ಸಂಸದ, ಅಲ್ಲಿನ ರೈತರೊಂದಿಗೆ ಬೆಳೆ ಕಟಾವು ಮಾಡುವ ಮೂಲಕ ಗಮನ ಸೆಳೆದರು. ರಾಜಧಾನಿ ರಾಯ್​ಪುರದ ಸಮೀಪದಲ್ಲಿರುವ ಕಥಿಯಾ ಗ್ರಾಮಕ್ಕೆ ಭೇಟಿ ನೀಡಿದ ಅವರು, ಭತ್ತದ ಗದ್ದೆಗಳಲ್ಲಿ ಬೆಳೆ ಕೊಯ್ಲು ಮಾಡುತ್ತಿದ್ದ ರೈತರ ಜೊತೆ ಸೇರಿಕೊಂಡ ಬೆಳೆ ಕಟಾವು ಮಾಡಿದರು. ಬಳಿಕ ಅವರ ಜೊತೆ …

Read More »

S.B.I. ಬ್ರಾಂಡ್ ಅಂಬಾಸಿಡರ್​ ಆದ ಕ್ರಿಕೆಟರ್ ಎಂಎಸ್ ಧೋನಿ

ಮುಂಬೈ : ಭಾರತದ ಅತಿದೊಡ್ಡ ವಾಣಿಜ್ಯ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಕ್ರಿಕೆಟ್ ಲೆಜೆಂಡ್​ ಮಹೇಂದ್ರ ಸಿಂಗ್ ಧೋನಿ ಅವರನ್ನು ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿರುವುದಾಗಿ ಘೋಷಿಸಿದೆ.   ಈ ಕುರಿತು ಮಾಹಿತಿ ನೀಡಿದ ಎಸ್​ಬಿಐ ಅಧ್ಯಕ್ಷ ದಿನೇಶ್ ಖರಾ, “ಎಂಎಸ್ ಧೋನಿ ಅವರನ್ನು ಎಸ್​ಬಿಐನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿರುವುದನ್ನು ತಿಳಿಸಲು ನಮಗೆ ಸಂತೋಷವಾಗುತ್ತಿದೆ. ಎಸ್​ಬಿಐನ ಸಂತೃಪ್ತ ಗ್ರಾಹಕರಾಗಿ ಬ್ಯಾಂಕ್​ನೊಂದಿಗೆ ಧೋನಿ ಒಡನಾಟ ಹೊಂದಿದ್ದು, …

Read More »

ನ.9 ರಿಂದ ಮೈಸೂರಿನಲ್ಲಿ ಮುಖ್ಯಮಂತ್ರಿ ನಿವಾಸದ‌ ಮುಂದೆ ರೈತರಿಂದ ಧರಣಿ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್​

ಮೈಸೂರು : ಇನ್ನು ಹತ್ತು ದಿನದಲ್ಲಿ ರೈತರಿಗೆ ಕಬ್ಬಿನ ಹೆಚ್ಚುವರಿ ದರ ಕೊಡಿಸದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರ ಮೈಸೂರಿನ‌ ಮನೆಯ ಎದುರು ನ.9 ರಿಂದ ಬೃಹತ್ ಧರಣಿ ಸತ್ಯಾಗ್ರಹ ನಡೆಸಲು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘ ತೀರ್ಮಾನಿಸಿದೆ.   ನಗರದ ಪಿಡಿಡಬ್ಲ್ಯೂ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್​ ಮಾತನಾಡಿ, ರಾಜ್ಯ ಸರ್ಕಾರ ಹಿಂದಿನ ಸಾಲಿನಲ್ಲಿ ನಿಗದಿ ಮಾಡಿದ್ದ ಕಬ್ಬಿನ ಹೆಚ್ಚುವರಿ …

Read More »

ಟಗರು ಪಲ್ಯ’ಗೆ ಫುಲ್​ ಡಿಮ್ಯಾಂಡ್​​; ಸಿನಿಮಾ ರಿಮೇಕ್​ಗೂ ಹೆಚ್ಚಾಯ್ತು ಬೇಡಿಕೆ

ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿರುವ ಡಾಲಿ ಧನಂಜಯ್​ ನಿರ್ಮಾಣದ ‘ಟಗರು ಪಲ್ಯ’ ಸಿನಿಮಾದ ರಿಮೇಕ್​ಗೂ ಬೇಡಿಕೆ ಹೆಚ್ಚಿದೆ. ಕನ್ನಡ ಚಿತ್ರರಂಗದಲ್ಲಿ ಕರ್ಮಷಿಯಲ್ ಹಾಗೂ ಪ್ಯಾನ್ ಇಂಡಿಯಾ ಸಿನಿಮಾಗಳ ಅಬ್ಬರದ ನಡುವೆ ಈ ವಾರ ತೆರೆಗೆ ಬಂದ ಹಳ್ಳಿ ಸೊಗಡಿನ ‘ಟಗರು ಪಲ್ಯ’ವನ್ನು ಪ್ರೇಕ್ಷಕರು ಚಪ್ಪರಿಸಿಕೊಂಡು ಸವಿಯುತ್ತಿದ್ದಾರೆ. ಕಳೆದ ಶುಕ್ರವಾರ (ಅ.27) ರಾಜ್ಯಾದ್ಯಂತ ಬಿಡುಗಡೆಯಾದ ಚಿತ್ರ ಎಲ್ಲೆಡೆ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ದಿನದಿಂದ ದಿನಕ್ಕೆ ಶೋಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಸಂಬಂಧ, …

Read More »

ಕ್ರಾಸಿಂಗ್​ ವೇಳೆ ಎರಡು ಪ್ಯಾಸೆಂಜರ್ ​ರೈಲುಗಳ ಡಿಕ್ಕಿ

ವಿಜಯನಗರ (ಆಂಧ್ರಪ್ರದೇಶ): ರಾಜ್ಯದ ವಿಜಯನಗರ ಜಿಲ್ಲೆಯ ಕೊತ್ತವಲಸ ಮಂಡಲದ ಕಂಟಕಪಲ್ಲಿಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಕ್ರಾಸಿಂಗ್​ ಸಂದರ್ಭದಲ್ಲಿ 2 ಪ್ಯಾಸೆಂಜರ್​ ರೈಲು ಮುಖಾಮುಖಿ ಡಿಕ್ಕಿ ಹೊಡೆದಿವೆ. ಹಳಿ ದಾಟುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, 6 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.     ಅಪಘಾತದ ಪರಿಣಾಮ ರಾಯಗಡ ಪ್ಯಾಸೆಂಜರ್ ರೈಲಿನ 3 ಬೋಗಿಗಳು ಹಳಿ ತಪ್ಪಿವೆ. ಇನ್ನು ವಿದ್ಯುತ್​ ತಂತಿಗಳು ತುಂಡಾಗಿ ಬಿದ್ದು ಘಟನಾ …

Read More »

ವಿಶ್ವಕಪ್ ಬಿಗ್​ ಫೈಟ್: ಟಾಸ್​ ಗೆದ್ದ ಇಂಗ್ಲೆಂಡ್ ಬೌಲಿಂಗ್​ ಆಯ್ಕೆ,​ ನಾಯಕನಾಗಿ ರೋಹಿತ್​ಗೆ 100ನೇ ಪಂದ್ಯ​

ಲಖನೌ (ಉತ್ತರಪ್ರದೇಶ): ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ವಿಶ್ವಕಪ್​ ಕ್ರಿಕೆಟ್‌ನ ಮಹತ್ವದ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ​ ಇಂಗ್ಲೆಂಡ್ ಟಾಸ್​ ಗೆದ್ದು ಬೌಲಿಂಗ್​ ಆಯ್ದುಕೊಂಡಿತು. ಟೂರ್ನಿಯ 29ನೇ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್​ ತಂಡ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಒಂದು ವೇಳೆ ಪಂದ್ಯದಲ್ಲಿ ಸೋತರೆ ಇಂಗ್ಲೆಂಡ್​ ತಂಡ ವಿಶ್ವಕಪ್​ನಿಂದ ಬಹುತೇಕ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.     ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್​ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಸತತ ಐದನೇ …

Read More »