Breaking News
Home / ರಾಷ್ಟ್ರೀಯ (page 376)

ರಾಷ್ಟ್ರೀಯ

ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ

ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಮೇ 10 ಕ್ಕೆ ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ಮೇ . 13 ಕ್ಕೇ ಫಲಿತಾಂಶ . ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆ ಕುರಿತು ಪೂರ್ವ ತಯಾರಿಯನ್ನು ಚುನಾವಣಾ ಆಯೋಗ ಕೈಗೊಂಡಿದ್ದು ಏಪ್ರಿಲ್ 20 ಕ್ಕೆ ನಾಮಪತ್ರ ಸಲ್ಲಿಕೆ ಕೊನೆಯ ದಿನ. ಒಂದೇ ಹಂತದಲ್ಲಿ ಚುನಾವಣೆ. ‌

Read More »

ಗಾಂಜಾ ಮಾರಿ ಜೈಲು ಪಾಲಾದ ಗಂಡ; ಪತಿಯ ವ್ಯವಹಾರವನ್ನೇ ಮುಂದುವರೆಸಿದ್ದ ಚಾಲಾಕಿ ಪತ್ನಿ!

ಬೆಂಗಳೂರು: ಪತಿ ಗಾಂಜಾ ದಂಧೆಯಲ್ಲಿ ಜೈಲು ಪಾಲಾಗುತ್ತಿದ್ದಂತೆ, ಚಾಲಾಕಿ ಪತ್ನಿ ಅದೇ ವ್ಯವಹಾರವನ್ನು ನಡೆಸಿದ್ದಾಳೆ. ಸದ್ಯ ಕಲಾಸಿಪಾಳ್ಯ ಠಾಣಾ ಪೊಲೀಸರು ಗಾಂಜಾ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ನಗ್ಮಾ(27) ಬಂಧಿತ ಮಹಿಳೆ. ಸದ್ಯ ಪೊಲೀಸರು ಆಕೆಯಿಂದ 26 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ನಗ್ಮಾಳ ಪತಿ ಮುಜ್ಜು ಎಂಬಾತ ವಿಶಾಖಪಟ್ಟಣಂನಿಂದ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟ ನಡೆಸುತ್ತಿದ್ದ. ಈತನನ್ನು ಕಳೆದ ತಿಂಗಳು ಬಂಧಿಸಿದ ಪೊಲೀಸರು ಜೈಲಿಗಟ್ಟಿದ್ದರು. ಗಂಡ ಜೈಲಿಗೆ ಹೋಗುತ್ತಿದ್ದಂತೆ ಅದೇ …

Read More »

ಬಿಜೆಪಿ ಶಾಸಕರಿಗೆ ಡಿಕೆ ಶಿವಕುಮಾರ್ ಟಿಕೆಟ್ ಆಮಿಷ: ಸಿಎಂ ಬೊಮ್ಮಾಯಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಳೆದ ಎರಡು ಮೂರು ದಿನಗಳಿಂದ ನಮ್ಮ ಶಾಸಕರಿಗೆ ಫೋನ್ ಮಾಡುತ್ತಿದ್ದಾರೆ. ಟಿಕೆಟ್ ಭರವಸೆ ನೀಡುತ್ತಿದ್ದಾರೆ. ಹತಾಶೆಯಿಂದ ‌ನಮ್ಮ ಪಕ್ಷದವರನ್ನು ಸಂಪರ್ಕಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ ಎನ್ನುವುದಕ್ಕೆ ಇದೆ ಸಾಕ್ಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಡಿಪಿಐ ಸಂಘಟನೆಯಿಂದ ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಮಾತನಾಡಿ, ಎಸ್ ಡಿಪಿಐನವರು ನನನ್ನು ಹೊಗಳಲು ಸಾಧ್ಯನಾ? ಎಸ್ …

Read More »

ಅದಾನಿ ಮ್ಯಾನೇಜರ್‌ ಮಾತ್ರ, ದುಡ್ಡೆಲ್ಲಾ ಪ್ರಧಾನಿ ನರೇಂದ್ರ ಮೋದಿಯದ್ದು: ಕೇಜ್ರಿವಾಲ್

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ʼಅದಾನಿ ಕೇವಲ ಮ್ಯಾನೇಜರ್‌ ಮಾತ್ರ, ಕಂಪನಿಯಲ್ಲಿನ ಎಲ್ಲಾ ಹಣವನ್ನು ಪ್ರಧಾನಿ ಮೋದಿಯೇ ಹೂಡಿಕೆ ಮಾಡಿದ್ದಾರೆʼ ಎಂದು ಹೇಳಿದ್ದಾರೆ.   ದಿಲ್ಲಿ ಅಸೆಂಬ್ಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಜೆಪಿಸಿ, ಸಿಬಿಐ ಅಥವಾ ಇಡಿ ತನಿಖೆಯು ಅದಾನಿ ಪತನಕ್ಕೆ ಕಾರಣವಾಗುವುದಲ್ಲ ಬದಲಾಗಿ ಪ್ರಧಾನಿ ಮೋದಿಯವರ ಪತನಕ್ಕೆ ಕಾರಣವಾಗುತ್ತದೆ. ಹಾಗಾಗಿ, ಪ್ರಧಾನಿ ಮೋದಿ ಅದಾನಿಯನ್ನು ರಕ್ಷಿಸುತ್ತಿದ್ದಾರೆ ಎಂದು …

Read More »

2023: ಕಾಂಗ್ರೆಸ್‌ ಸೇಪರ್ಡೆಯಾದ ಕೂಡ್ಲಿಗಿ ಬಿಜೆಪಿ ಶಾಸಕ

ಕೂಡ್ಲಿಗಿ, ಮಾರ್ಚ್‌, 28: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳಲ್ಲಿ ಬೆಳವಣಿಗೆಗಳು ಆಗುತ್ತಲೇ ಇವೆ. ರಾಜಕೀಯ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುತ್ತಿದ್ದು, ಎಲ್ಲಾ ಪಕ್ಷಗಳಲ್ಲಿ ಇದೀಗ ಬಂಡಾಯದ್ದೇ ಚಿಂತೆ ಆಗಿದೆ. ಇದೇ ರೀತಿ ಇಂದು ಕೂಡ್ಲಿಗಿ ಬಿಜೆಪಿ ಶಾಸಕ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಶಾಸಕ ಗೋಪಾಲಕೃಷ್ಣ ಅವರು ನಿನ್ನೆ ಕಾಂಗ್ರೆಸ್ ಮುಖಂಡರನ್ನು ಭೇಟಿ ಆಗಿದ್ದು, ಇಂದು ಕೊನೆಗೂ ಅವರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಕೂಡ್ಲಿಗಿ ವಿಧಾಸಭಾ ಕ್ಷೇತ್ರದಲ್ಲಿ …

Read More »

ವಿಜಯನಗರ ಜಿಲ್ಲೆಯ ಹಲವೆಡೆ ಭೂಕಂಪನ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಯ್ಯನಹಳ್ಳಿಯಲ್ಲಿ ಭೂಕಂಪನವಾಗಿದೆ. ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, 15ರಿಂದ 20 ಕಿಲೋ ಮೀಟರ್ ರೇಡಿಯಲ್ ವ್ಯಾಪ್ತಿಯಲ್ಲಿ ಭೂಕಂಪನ ದಾಖಲಾಗಿದೆ. ಕಂಪನದ ತೀವ್ರತೆ ಕಡಿಮೆಯಾಗಿದ್ದು, ಸ್ಥಳೀಯರಿಗೆ ಯಾವುದೇ ತೊಂದರೆಯಾಗಿಲ್ಲ. ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಯಾವುದೇ ಆತಂಕಕ್ಕೆ ಒಳಗಾಗದಂತೆ ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿದೆ

Read More »

15 ಹಳ್ಳಿಗಳ ರೈತರ ಬದುಕು ಹಸನಾಗಲಿದೆ: ಗೋವಿಂದ ಕಾರಜೋಳ

ನಾಗರಮುನ್ನೋಳಿ (ಚಿಕ್ಕೋಡಿ ತಾ.): ‘ಈ ಭಾಗದ ಜನರ ಅನೇಕ ವರ್ಷಗಳ ಬೇಡಿಕೆ ಕರಗಾಂವ ಏತ ನೀರಾವರಿ ಯೋಜನೆ ಅನುಷ್ಠಾನ ಮಾಡಲಾಗಿದೆ. ಇದರಿಂದ 15 ಹಳ್ಳಿಗಳ ರೈತರ ಬದುಕು ಹಸನಾಗಲಿದೆ. ಒಂದು ವರ್ಷದ ಅವಧಿಯಲ್ಲಿ ನೀರು ಹರಿಯಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.   ರಾಯಬಾಗ ವಿಧಾನಸಭೆ ಕ್ಣೇತ್ರಕ್ಕೆ ಬರುವ, ಚಿಕ್ಕೋಡಿ ತಾಲ್ಲೂಕಿನ 14 ಗ್ರಾಮಗಳ ಸುಮಾರು 8,390 ಹೆಕ್ಟೇರ್‌ ಜಮೀಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ₹567 ಕೋಟಿ …

Read More »

ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 27 ಲಕ್ಷಕ್ಕೂ ಅಧಿಕಹಣ ಪೊಲೀಸರ ವಶಕ್ಕೆ

ಕೌಜಲಗಿ: ‘ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹ. ಅವರ ಕೆಸಲಗಳಿಗೆ ಜನ ಸಹಕಾರ ನೀಡಬೇಕು’ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸಮೀಪದ ಕುಲಗೋಡ ಗ್ರಾಮದಲ್ಲಿ ₹1.32 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು. …

Read More »

ಕಳ್ಳರನ್ನು ಸಮಾಜ ಸುಧಾರಕರು ಎನ್ನಬೇಕೇ?’ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ‘ಕಳ್ಳರನ್ನು ಕಳ್ಳ ಎಂದು ಕರೆಯದೇ ಸಾಧುಗಳು, ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ರಾಹುಲ್‌ ಗಾಂಧಿ ಅವರ ಸಂಸತ್‌ ಸ್ಥಾನದ ಅನರ್ಹತೆಯ ಕ್ರಮ ಖಂಡಿಸಿ, ಬೆಂಗಳೂರು ಕೇಂದ್ರ, ದಕ್ಷಿಣ ಹಾಗೂ ಉತ್ತರ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಭಾನುವಾರ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.   ‘ಭಾರತ್‌ ಜೋಡೊ ಯಾತ್ರೆಯ ಬಳಿಕ ರಾಹುಲ್‌ ಗಾಂಧಿ ಅವರ ವರ್ಚಸ್ಸು ವೃದ್ಧಿಯಾಗಿದೆ. ಇದು …

Read More »

ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆಸಿದ್ದರಾಮಯ್ಯ ಹೊಸ ಬಾಂಬ್

ಮೈಸೂರು: ವಿಧಾನಸಭಾ ಚುನಾವಣೆ ಹೊತ್ತಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ತಿಳಿಸಿದ್ದಾರೆ. ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವರುಣಾದಲ್ಲಿ ನನ್ನನ್ನು ಸೋಲಿಸುವ ನಿಟ್ಟಿನಲ್ಲಿ ಹಾಗು ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿರುವುದು ನಿಜ ಎಂದು ಹೇಳಿದ್ದಾರೆ. 2018ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಈ ಎರಡೂ ಪಕ್ಷಗಳು ಒಳ ಒಪ್ಪಂದ …

Read More »