Breaking News

ರಾಷ್ಟ್ರೀಯ

100 ಮೆಟ್ರಿಕ್ ​ಟನ್​ಗೂ ಅಧಿಕ ಅಕ್ರಮ ಮರಳು ವಶಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸಲು ಸರ್ಕಾರ ಅಧಿಕೃತವಾಗಿ ಅನುಮತಿ ನೀಡಬೇಕೆಂಬ ಒತ್ತಾಯ ಕಳೆದ ಎರಡು ವರ್ಷಗಳಿಂದ ಕೇಳಿಬರುತ್ತಿದೆ. ಮತ್ತೊಂದೆಡೆ, ಜಿಲ್ಲೆಯ ಕಾಳಿ ನದಿಯಲ್ಲಿ ಎಗ್ಗಿಲ್ಲದೇ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ. ದಂಧೆಕೋರರು ಬೇಕಾಬಿಟ್ಟಿ ದರಕ್ಕೆ ಮರಳು ಮಾರಾಟ ಮಾಡುತ್ತಿರುವ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಅಧಿಕಾರಿಗಳು ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿ ಮರಳು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಕರಾವಳಿ ಭಾಗದ ಕಾಳಿ, ಶರಾವತಿ, ಅಘನಾಶಿನಿ ಹಾಗೂ …

Read More »

ಎರಡು ಅವಧಿಗೆ ಅಧಿಕಾರದಲ್ಲಿದ್ದರೂ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ಬಿಜೆಪಿ ವಿಫಲವಾಗಿದೆ ಎಂದ ದೆಹಲಿ ಸಿಎಂ

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ತೆಗೆದುಹಾಕುವುದು ದೇಶಭಕ್ತಿಯ ಶ್ರೇಷ್ಠ ಕಾರ್ಯ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಹೇಳಿದ್ದಾರೆ. ತಮ್ಮ ಚುನಾವಣಾ ಕ್ಷೇತ್ರವಾದ ನವದೆಹಲಿಯಲ್ಲಿ ಪಕ್ಷದ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿದ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್​, ಕೇಸರಿ ಪಕ್ಷ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. “ನಮ್ಮ ಪಕ್ಷದ ಸ್ವಯಂಸೇವಕರು ಯಾರೂ ಯಾವುದೇ ರಾಜಕೀಯ ಹಿನ್ನೆಲೆಯಿಂದ ಬಂದವರಲ್ಲ. ಆದರೂ ನನ್ನ ಕ್ಷೇತ್ರದ ಜನರು ಸ್ವಯಂಸೇವಕರ …

Read More »

ಕುಮಾರಸ್ವಾಮಿ ಸಿಎಂ ಆಗಿದ್ದಾಗ ತಾಜ್ ವೆಸ್ಟೆಂಡ್​​ನಲ್ಲಿ ಏತಕ್ಕಾಗಿ ಇದ್ದರು:C,M

ಬೆಂಗಳೂರು : ಕುಮಾರಸ್ವಾಮಿ ಸಿಎಂ ಆಗಿದ್ದಾಗ ಎಲ್ಲಿದ್ರು ಅಂತಾ ಗೊತ್ತಿದೆಯಲ್ಲ.?. ಇವರು ಇದ್ದದ್ದು ಎಲ್ಲಿ?. ಏತಕ್ಕಾಗಿ ಅಲ್ಲಿದ್ದರು ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಟೌನ್ ಹಾಲ್ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ತಾಜ್​ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇದ್ರಲ್ವಾ ಯಾಕೆ ಇದ್ರು?. ಇವರು ಇದ್ದದ್ದು ಎಲ್ಲಿ?. ಏತಕ್ಕೋಸ್ಕರ …

Read More »

ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜಾ ಕಾರ್ಯಕ್ರಮಗಳು ಆರಂಭ

ಮೈಸೂರು: ನವರಾತ್ರಿಯ ನವಮಿಯ ದಿನವಾದ ಇಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಆಯುಧ ಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಬೆಳಗ್ಗಿನಿಂದಲೇ ಆಯುಧ ಪೂಜೆಯ ಧಾರ್ಮಿಕ ಕೈಂಕರ್ಯಗಳು ಆರಂಭವಾಗಿವೆ. ಇಂದು ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜಾ ಕಾರ್ಯಗಳು ಬೆಳಗ್ಗಿನಿಂದಲೇ ಆರಂಭವಾಗಿವೆ. ಬೆಳಗ್ಗೆ 5:30ಕ್ಕೆ ಅರಮನೆ ಒಳಗಡೆ ಚಂಡಿಕಾ ಹೋಮ ನೆರವೇರುತ್ತಿದೆ. ಬೆಳಗ್ಗೆ 5:20 ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು …

Read More »

ಉಪಾಧ್ಯಕ್ಷ’ ಟೀಸರ್​ ರಿಲೀಸ್​: ನಾನು ‘ಹೀರೋ’ ಎಂದಾಗ ಜನ ಚುಚ್ಚುಮಾತಿನಿಂದ ನೋಯಿಸಿದ್ದಾರೆ – ಚಿಕ್ಕಣ್ಣ

ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾದ ಟೀಸರ್​ ಅನ್ನು ನಟರಾದ ದುನಿಯಾ ವಿಜಯ್​, ನೆನಪಿರಲಿ ಪ್ರೇಮ್​ ಹಾಗೂ ಅಭಿಷೇಕ್​ ಅಂಬರೀಶ್​ ಬಿಡುಗಡೆಗೊಳಿಸಿದರು. ಕಾಮಿಡಿ ಶೋಗಳಲ್ಲಿ ಅಭಿನಯಿಸುತ್ತಾ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಬಹುಬೇಡಿಕೆಯ ಹಾಸ್ಯ ನಟನಾಗಿ ಗುರುತಿಸಿಕೊಂಡವರು ಚಿಕ್ಕಣ್ಣ. ಇವರ ನಟನೆಯ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಉಪಾಧ್ಯಕ್ಷ’. ಈ ಸಿನಿಮಾದ ಮೂಲಕ ಚಿಕ್ಕಣ್ಣ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೈಲೆಂಟ್​ ಆಗಿ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗಿರುವ ‘ಉಪಾಧ್ಯಕ್ಷ’ ಚಿತ್ರದ ಟೀಸರ್​ ಬಿಡುಗಡೆಯಾಗಿದೆ. ‘ಉಪಾಧ್ಯಕ್ಷ’ …

Read More »

ಹಾವೇರಿಯ 8 ತಾಲೂಕುಗಳಲ್ಲಿ ಬರ: ಜಾನುವಾರು ಸಾಕಲಾರದೆ ಮಾರಾಟ ಮಾಡಲು ಮುಂದಾದ ರೈತರು

ಹಾವೇರಿ: ಈ ಬಾರಿ ಮಳೆ ಕೊರತೆಯಿಂದಜಿಲ್ಲೆಯ ಎಂಟು ತಾಲೂಕುಗಳನ್ನು ಭೀಕರ ಬರಗಾಲ ಆವರಿಸಿದೆ. ಜಾನುವಾರುಗಳಿಗೆ ಮೇವು, ನೀರು ನೀಡಲಾಗದೇ ರೈತರು ಅವುಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಉತ್ತರ ಕರ್ನಾಟಕದ ಅತಿದೊಡ್ಡ ಜಾನುವಾರು ಸಂತೆಗಳಲ್ಲಿ ಒಂದಾದ ಹಾವೇರಿಯಲ್ಲಿ ಈಗ ರೈತರು ತಮ್ಮ ಜಾನುವಾರುಗಳನ್ನು ಮಾರಾಟ ಮಾಡುತ್ತಿದ್ದು, ಮಾರುಕಟ್ಟೆಯ ತುಂಬೆಲ್ಲಾ ಜಾನುವಾರುಗಳೇ ಕಾಣಿಸುತ್ತಿವೆ. ರೈತರು ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಮಾರಾಟಕ್ಕೆ ತರುತ್ತಿದ್ದು ಅವುಗಳ ದರವೂ ಕಡಿಮೆಯಾಗಿದೆ. ರೈತ ನಿಂಗಪ್ಪ ನೆಲೋಗಲ್ ಮಾತನಾಡಿ, “ಮಳೆ ಕೊರತೆಯಿಂದ ಹೊಲ, …

Read More »

ಗೋವಾದಿಂದ ತೆಲಂಗಾಣಕ್ಕೆ ಅಕ್ರಮವಾಗಿ ಮದ್ಯ ಸಾಗಣೆ: ₹43 ಲಕ್ಷ ಮೌಲ್ಯದ ಮದ್ಯ ಜಪ್ತಿ

ಬೆಳಗಾವಿ: ಅಬಕಾರಿ ಅಧಿಕಾರಿಗಳು ಬಾನುವಾರ ಬೆಳಿಗ್ಗೆ ಕಾರ್ಯಾಚರಣೆ ಕೈಗೊಂಡಿದ್ದು, ಗೋವಾದಿಂದ ತೆಲಂಗಾಣಕ್ಕೆ ದುಬಾರಿ ಮದ್ಯವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪ್ರಕರಣ ಭೇದಿಸಿದ್ದಾರೆ. 43 ಲಕ್ಷ ರೂ ಮೌಲ್ಯದ ಮದ್ಯ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿಸಿದ್ದಾರೆ. ಈ ಹಿಂದೆ ಪ್ಲೈವುಡ್‌ ಮತ್ತು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಮಧ್ಯೆ ಮದ್ಯದ ಬಾಟಲಿಗಳನ್ನಿಟ್ಟು ಸಾಗಣೆ ಮಾಡುತ್ತಿದ್ದ ಎರಡು ಪ್ರಕರಣಗಳನ್ನು ಭೇದಿಸಿದ್ದ ಅಧಿಕಾರಿಗಳು, ಇದೀಗ ಮತ್ತೊಂದು ಪ್ರಕರಣ ಪತ್ತೆ ಮಾಡಿದ್ದಾರೆ. ಇಂದು ಬೆಳಿಗ್ಗೆ 3.30ರ ಸುಮಾರಿಗೆ …

Read More »

ಶುಕ್ರ, ಮಂಗಳನತ್ತ ಇಸ್ರೋ ಮುಂದಿನ ಚಿತ್ತ: ಆದಿತ್ಯ-ಎಲ್1ರ ಯೋಜನಾ ನಿರ್ದೇಶಕಿ ನಿಗರ್ ಶಾಜಿ ಹೇಳಿಕೆ

ತಿರುಚ್ಚಿ (ತಮಿಳುನಾಡು): ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಂದಿನ ಮಹತ್ವದ ಯೋಜನೆಗಳ ಬಗ್ಗೆ ವಿಜ್ಞಾನಿ ನಿಗರ್ ಶಾಜಿ ಮಾಹಿತಿ ಹಂಚಿಕೊಂಡಿದ್ದಾರೆ. ಶುಕ್ರ ಮತ್ತು ಮಂಗಳದಂತಹ ಗ್ರಹಗಳ ಕುರಿತು ಇಸ್ರೋ ತನ್ನ ಅನ್ವೇಷಣೆ ಮುಂದುವರಿಸಲಿದೆ ಎಂದು ಸೂರ್ಯನ ಅಧ್ಯಯನ ಬಗ್ಗೆ ಭಾರತದ ಮೊದಲ ಬಾಹ್ಯಾಕಾಶ ಯೋಜನೆಯಾದ ಆದಿತ್ಯ-ಎಲ್1ರ ಯೋಜನಾ ನಿರ್ದೇಶಕಿ ಶಾಜಿ ಹೇಳಿದ್ದಾರೆ. ತಮಿಳುನಾಡಿನ ತಿರುಚ್ಚಿ ಜಿಲ್ಲೆಯಲ್ಲಿ ಶನಿವಾರ ‘ತಾಂತ್ರಿಕ ಮಹಿಳೆ ವಿಶೇಷ ಪ್ರಶಸ್ತಿ ಮತ್ತು ಇಂಟರ್​ನೆಟ್​ ವಾಣಿಜ್ಯೋದ್ಯಮ ಕೌಶಲ್ಯಗಳ ತರಬೇತಿ’ …

Read More »

ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ.. ಪೈಲಟ್‌ಗೆ ಗಾಯ

ಬಾರಾಮತಿ (ಮಹಾರಾಷ್ಟ್ರ): ಕಳೆದ ಎರಡು ದಿನಗಳ ಹಿಂದಷ್ಟೇ ಬಾರಾಮತಿಯಲ್ಲಿ ನಡೆದ ವಿಮಾನ ಪತನ ಘಟನೆ ಮಾಸುವ ಮುನ್ನವೇ ಇಂದು ಬೆಳಗ್ಗೆ ಮತ್ತೆ ತರಬೇತಿ ವಿಮಾನವೊಂದು ಪತನವಾಗಿದೆ. ಇಲ್ಲಿನ ಹಳೆ ಸಹ್ಯಾದ್ರಿ ಹಸುವಿನ ತೋಟದ ಬಳಿ ಪತನಗೊಂಡಿದ್ದು, ಪೈಲಟ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬಾರಾಮತಿಯಲ್ಲಿ ವಾಯುಯಾನ ತರಬೇತಿ ಸಂಸ್ಥೆ ಇದೆ. ಕಳೆದ ಕೆಲವು ದಿನಗಳಲ್ಲಿ ವಿಮಾನ ಅಪಘಾತ ಸಂಭವಿಸಿದ ಐದನೇ ಘಟನೆ ಇದಾಗಿದ್ದು, ದುರಂತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ದಿಢೀರ್ ವಿಮಾನ …

Read More »

ಸಿಸಿಬಿ ಪೊಲೀಸರ ಸೋಗಿನಲ್ಲಿ ಅಪಹರಣ: ಪೊಲೀಸ್​ ಭಾತ್ಮೀದಾರನ ಸಹಿತ ಐವರ ಬಂಧನ

ಬೆಂಗಳೂರು: ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬನನ್ನು ಅಪಹರಿಸಿ 5 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಪೊಲೀಸ್ ಭಾತ್ಮೀದಾರನ ಸಹಿತ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಖಾಸಿಂ ಮುಜಾಹಿದ್, ಮುಕ್ತಿಯಾರ್, ವಸಿಂ, ಶಬ್ಬೀರ್ ಹಾಗೂ ಶೋಯೆಬ್‌ ಬಂಧಿತ ಆರೋಪಿಗಳು. ಪೊಲೀಸ್ ಭಾತ್ಮೀದಾರನಿಂದಲೇ ಅಪಹರಣದ ಸಂಚು: ಸಿಸಿಬಿ ಪೊಲೀಸರ ಭಾತ್ಮೀದಾರನಾಗಿದ್ದ ಮೊಹಮ್ಮದ್​ ಖಾಸಿಂ ಮುಜಾಹಿದ್, ಸಿಸಿಬಿ ಕಚೇರಿಯಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ. ಸೆಪ್ಟೆಂಬರ್ 2 ರಂದು ಕಾಲು ಸಿಂಗ್ ಎಂಬಾತ ತನ್ನ ಕಾರಿನಲ್ಲಿ …

Read More »