Breaking News

ರಾಷ್ಟ್ರೀಯ

ದೇವೇಗೌಡರ ಪುತ್ರ ವ್ಯಾಮೋಹ ಸಾಬೀತಾಗಿದೆ; ಉಚ್ಚಾಟನೆ ನಿರ್ಧಾರವನ್ನು ಚು.ಆಯೋಗದಲ್ಲಿ ಪ್ರಶ್ನಿಸುವೆ: ಸಿ.ಎಂ.ಇಬ್ರಾಹಿಂ

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಪುತ್ರ ವ್ಯಾಮೋಹ ಇರುವುದು ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಕಾದು ನೋಡಿ ಎಂದು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿತರಾದ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.   ಬೆನ್ಸನ್ ಟೌನ್‌ನಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಜೆಡಿಎಸ್ ನಾಯಕರಿಗೆ ನನ್ನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವ ಅಧಿಕಾರ ಇಲ್ಲ. ಕಾರ್ಯಕಾರಿ ಸಮಿತಿಯ 2/3ನೇ ಸದಸ್ಯರ ಅನುಮತಿ ಪಡೆದು ಮೊದಲು ನನಗೆ ನೊಟೀಸ್ ಕೊಡಬೇಕು. ನಾನು ಚುನಾವಣಾ …

Read More »

ಭಾರತ – ಬಾಂಗ್ಲಾ ಮುಖಾಮುಖಿ: ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಬಾಂಗ್ಲಾ

ಪುಣೆ (ಮಹಾರಾಷ್ಟ್ರ): ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ. ಟಾಸ್​ ಗೆದ್ದ ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ರೋಹಿತ್​ ಶರ್ಮಾ ಪಡೆಯ ಭಾರತಕ್ಕೆ ಕ್ಷೇತ್ರ ರಕ್ಷಣೆಯ ಹೊಣೆ ಹೊರೆಸಿದ್ದಾರೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ ಇಂದಿನ ಪಂದ್ಯದ ಆತಿಥ್ಯ ವಹಿಸಿಕೊಂಡಿದೆ.       ಈ ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಸತತ ಮೂರು …

Read More »

ಮಹಾರಾಷ್ಟ್ರದಲ್ಲಿ ಜೋರಾದ ಮರಾಠಾ ಮೀಸಲಾತಿ ಹೋರಾಟ

ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಬೇಡಿಕೆ ಜೋರಾಗಿದೆ. ಇದರ ನಡುವೆ ಮುಂಬೈನಲ್ಲಿ ಮೀಸಲಾತಿಗೆ ಒತ್ತಾಯಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ. ಜಲ್ನಾ ಜಿಲ್ಲೆಯ ಚಿಕಂಗಾವ್ ಮೂಲದ ಸುನೀಲ್​ ಬಾಬುರಾವ್ ಕಾವ್ಲೆ ಮೃತ ಎಂದು ಗುರುತಿಸಲಾಗಿದೆ. ಮರಾಠಾ ಮೀಸಲಾತಿಗಾಗಿ ಕೆಲ ದಿನಗಳ ಹಿಂದೆ 150 ಎಕರೆ ಜಾಗದಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಸಮಾವೇಶಗೊಂಡಿದ್ದ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಬುಧವಾರದಿಂದ ಮುಂಬೈ ಪ್ರವಾಸದಲ್ಲಿದ್ದಾರೆ. ಇಂದು ನವಿ ಮುಂಬೈ ಸೇರಿದಂತೆ ಹಲವು …

Read More »

ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ.: ಸತೀಶ್ ಜಾರಕಿಹೊಳಿ

ಬೆಂಗಳೂರು : ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ. ನನ್ನ ಮೌನ ದೌರ್ಬಲ್ಯವಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡಿ‌.ಕೆ ಶಿವಕುಮಾರ್ ಬೆಳಗಾವಿ ಜಿಲ್ಲೆ ಹಸ್ತಕ್ಷೇಪ ವಿಚಾರವಾಗಿ ಪ್ರತಿಕ್ರಿಯಿಸಿ, ವರ್ಗಾವಣೆ ವಿಚಾರವಾಗಿ ಹಸ್ತಕ್ಷೇಪವಾಗಿದೆ. ಈ ಹಿಂದೆ ಸಾಕಷ್ಟು ಬಾರಿ ಆಗಿದೆ. ನಾನು ಕೂಡ ಕಾಂಪ್ರಮೈಸ್ ಮಾಡಿಕೊಂಡಿದ್ದೇನೆ. ನಾನು ಅನುಸರಿಸಿಕೊಂಡು ಬರುತ್ತಿದ್ದೇನೆ ಎಂದು ಹೇಳಿದರು. ಪಕ್ಷದ ಹಿತದೃಷ್ಟಿಯಿಂದ …

Read More »

ಆನ್​ಲೈನ್​​ ಗೇಮ್ಸ್​​ನಲ್ಲಿ 1.5 ಕೋಟಿ ರೂ. ಗೆದ್ದಿದ್ದ ಪಿಎಸ್​ಐ ಅಮಾನತು

ಪುಣೆ (ಮಹಾರಾಷ್ಟ್ರ): ಆನ್​ಲೈನ್​ ಗೇಮಿಂಗ್ ಆಯಪ್​ನಲ್ಲಿ ಒಂದೂವರೆ ಕೋಟಿ ರೂ. ಬಹುಮಾನ ಗೆದ್ದು ಸುದ್ದಿಯಾಗಿದ್ದ ಮಹಾರಾಷ್ಟ್ರದ ಪೊಲೀಸ್​ ಅಧಿಕಾರಿ ಸೋಮನಾಥ್​ ಝೆಂಡೆ ತಲೆದಂಡವಾಗಿದೆ. ಅಶಿಸ್ತಿನ ವರ್ತನೆ ಹಾಗೂ ಪೊಲೀಸ್ ಇಲಾಖೆಯ ಪ್ರತಿಷ್ಠೆಗೆ ಕಳಂಕ ತಂದ ಆರೋಪದಡಿ ಸಬ್​ ಇನ್ಸ್​ಪೆಕ್ಟರ್​ ಆಗಿದ್ದ ಸೋಮನಾಥ್ ಅವರನ್ನು ಅಮಾನತುಗೊಳಿಸಲಾಗಿದೆ. ಪುಣೆಯ ಪಿಂಪ್ರಿ ಚಿಂಚ್​ವಾಡ ನಗರದ ಪೊಲೀಸ್​ ಮುಖ್ಯ ಕಚೇರಿಯಲ್ಲಿ ಪಿಎಸ್​ಐ ಸೋಮನಾಥ್​ ಝೆಂಡೆ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಆನ್​ಲೈನ್​ ಕ್ರಿಕೆಟ್​ ಗೇಮ್​​​​​​ನಲ್ಲಿ 1.5 ಕೋಟಿ ರೂ. …

Read More »

ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಶೇ.4ರಷ್ಟು ತುಟ್ಟಿ ಭತ್ಯೆ ಏರಿಕೆ

ನವದೆಹಲಿ: ಕೇಂದ್ರದ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಸರ್ಕಾರ ಬುಧವಾರ ಶೇ.4ರಷ್ಟು ಏರಿಕೆ ಮಾಡಿದೆ. ಇದು ಜುಲೈ 1ರಿಂದಲೇ ಪೂರ್ವಾನ್ವಯವಾಗಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್​ ಠಾಕೂರ್​ ತಿಳಿಸಿದ್ದಾರೆ. ಇದು ಲಕ್ಷಾಂತರ ಹಾಲಿ ನೌಕರರು ಹಾಗೂ ಪಿಂಚಿಣಿದಾರರಿಗೆ ಅನುಕೂಲವಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ನಡೆಯಿತು. ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಈಗ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳವಾಗಿದೆ, …

Read More »

ಬೆಳಗಾವಿಯಿಂದಲೇ ಬಂಡಾಯ ಆರಂಭ ಆಗುತ್ತೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ತಿರುಗೇಟು ಕೊಟ್ಟಿರುವ ಡಿಸಿಎಂ

ಬೆಳಗಾವಿ: ಬೆಳಗಾವಿಯಿಂದಲೇ ಬಂಡಾಯ ಆರಂಭ ಆಗುತ್ತೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ತಿರುಗೇಟು ಕೊಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ, ಯಾರ ಬಗ್ಗೆಯೂ ಏನೂ ಇಲ್ಲ. ‌136 ಶಾಸಕರೆಲ್ಲರೂ ನಮ್ಮವರೆ.. ಬಿಜೆಪಿಯವರಿಗೆ ಒಂದು ನ್ಯೂಸ್ ಬೇಕು. ಅದಕ್ಕೆ ಈ ರೀತಿ ಏನೆನೋ ಸೃಷ್ಟಿಸುತ್ತಿದ್ದಾರೆ ಎಂದಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲರ ಭಾಷಣ ಕೇಳಿದ್ದೀರಾ.. ಅವಿಶ್ವಾಸ ನಿರ್ಣಯ ಮಂಡನೆ ವೇಳೆ …

Read More »

ಆಧಾರರಹಿತ ಆರೋಪ ಮಾಡುವುದು ಬಿಜೆಪಿಯ ಚಾಳಿ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು : ಬಿಜೆಪಿ ಮುಖಂಡರಿಗೆ ಆಧಾರ ರಹಿತ ಆರೋಪ ಮಾಡುವುದು ಒಂದು ಚಾಳಿ ಆಗಿದೆ. ಪಂಚರಾಜ್ಯ ಚುನಾವಣೆಯಲ್ಲಿ ಸೋಲಿನ‌ ಭೀತಿ ಅವರನ್ನು ಕಾಡತೊಡಗಿದೆ. ಕರ್ನಾಟಕದಲ್ಲಿ ಅವರು ಧೂಳಿಪಟ ಆಗಲಿದ್ದಾರೆ ಎಂದು ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಎಟಿಎಂ ಆಗಿ ಬಳಕೆ ಆಗುತ್ತಿದೆ ಎಂದು ಕಾಂಗ್ರೆಸ್ ವಿರುದ್ದ ಬಿಜೆಪಿ ಗಂಭೀರ ಆರೋಪ ಮಾಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ಯಾವ ರೀತಿ‌ ಆಡಳಿತ ಕೊಟ್ಟಿದ್ದಾರೆ ಎಂಬುದು …

Read More »

ಪವಿತ್ರ ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಂಡ ಭಕ್ತಗಣ : ಹಲವು ಗಣ್ಯರು ಭಾಗಿ

ಕೊಡಗು : ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವದ ಕ್ಷಣಕ್ಕೆ ಸಾಕ್ಷಿಯಾದರು. ಕೊಡಗಿನ ಕುಲದೇವಿ, ನಾಡಿನ ಜೀವನದಿ ಕಾವೇರಿ ನಿಗದಿಯಂತೆ ಕರ್ಕಾಟಕ ಲಗ್ನದಲ್ಲಿ ರಾತ್ರಿ 1 ಗಂಟೆ 26 ನಿಮಿಷಕ್ಕೆ ತೀರ್ಥರೂಪಿಣಿಯಾಗಿ ನೆರೆದಿದ್ದ ಭಕ್ತರಿಗೆ ದರ್ಶನ ನೀಡಿದಳು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜ್, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ.ಮಂಥರ್ ಗೌಡ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ವೆಂಕಟರಾಜ, ಜಿ. ಪಂ. …

Read More »

ಬಿಜೆಪಿ- ಜೆಡಿಎಸ್ ಹತಾಶೆಗೆ ಮೇಜರ್ ಆಪರೇಶನ್ ಮಾಡಬೇಕು: ಡಿ ಕೆ ಶಿವಕುಮಾರ್

ಬೆಂಗಳೂರು : “ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಿಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದೆ ಎಂದು ಹೇಳಿದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಹಾಗೆಲ್ಲ …

Read More »