Breaking News

ರಾಷ್ಟ್ರೀಯ

ಮೊದಲನೇ ಮಹಡಿಯಿಂದ ಬಿದ್ದು ಮಗು ಗಂಭೀರ ಗಾಯ

ಕೊಪ್ಪಳ: ಆಟವಾಡುತಿದ್ದ 3.5 ವರ್ಷದ ಮಗು ಮನೆಯ ಮೊದಲನೇ ಮಹಡಿಯಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಕುಷ್ಟಗಿ ಪಟ್ಟಣದ ಗೌರಿ ನಗರದ ಮಹಡಿ ಮನೆಯೊಂದರಲ್ಲಿ ಶನಿವಾರ (7/10/2023) ರಾತ್ರಿ 9.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಪಟ್ಟಣದ ದುರ್ಗಾ ಕಾಲೋನಿಯ ನಿವಾಸಿ ಸಂಗೀತ ಕಲಾವಿದ ಹೊಳಿಯಪ್ಪ ಗುರಿಕಾರ ಅವರು, ತಮ್ಮ ಮಗಳು ಸೇರಿದಂತೆ ಕುಟುಂಬ ಸಮೇತ ಗೌರಿ ನಗರದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಸೀರೆ …

Read More »

ಶಾಹು ನಗರ ವಂದನ ಕೊಲೊನಿಯಲ್ಲಿ ಎಲ್ಲಿ ನೋಡಿದರಲ್ಲಿ ಗಬ್ಬೆದ್ದು ನಾರುತ್ತಿರುವ ಕೊಳಚೆಗಳು ರಸ್ತೆ ಪಕ್ಕದ ಮೇಲೆ ಪ್ಲಾಸ್ಟಿಕ್ ತ್ಯಾಜ್ಯಗಳು

ಬೆಳಗಾವಿಯನ್ನು ಎರಡನೇ ರಾಜಧಾನಿ ಸ್ಮಾರ್ಟ ಸಿಟಿ ಕುಂದಾನಗರಿ ಹಂಗೆ ಹಿಂಗೇ ಅಂತಾ ವರ್ಣಿಸುತ್ತಾರೆ ಆದರೆ ನಗರದಲ್ಲಿ ಕೆಲವೊಂದಿಷ್ಟು ಬೇಜವಾಬ್ದಾರಿ ಇಲಾಖೆ ಬೇಜವಾಬ್ದಾರಿ ಅಧಿಕಾರಿಗಳು ಬೆಳಗಾವಿಯನ್ನು ಸ್ವಚ್ಛವಾಗಿಡಲು ಸಹಕರಿಸುತ್ತಿಲ್ಲ ಬೆಳಗಾವಿ ಎಲ್ಲಾ ರಂಗದಲ್ಲೂ ತನ್ನ ಪ್ರಾಮುಖ್ಯತೆಯನ್ನು ಪಡೆದಿದೆ ವೀರ ರಾಣಿ ಕಿತ್ತೂರು ಚನ್ನಮ್ಮಾ ಸಂಗೊಳ್ಳಿ ರಾಯಣ್ಣ ರಂತಹ ದೇಶಭಕ್ತರ ಹುಟ್ಟಿದ ನಾಡಿದು ಬೆಳಗಾವಿ ರಾಜಕಾರಣ ಇಡೀ ರಾಜ್ಯಕ್ಕೆ ಒಂತರಾ ಡಿಫರೆಂಟ್ ಸರ್ಕಾರವನ್ನು ಕಟ್ಟುವುದರ ಜೊತೆಗೆ ಕೆಡುವುದರಲ್ಲಿ ನೈಪುಣ್ಯ ಹೊಂದಿದೆ ಎರಡೆರೆಡು ಸಚಿವರನ್ನು …

Read More »

ಕರ್ನಾಟಕದಲ್ಲಿ 5 ವರ್ಷದಲ್ಲಿ 58 ಸಾವಿರ ಮಕ್ಕಳು ಶಾಲೆಗಳಿಂದ ದೂರ.. ಕೋಟಿಗಟ್ಟಲೇ ವ್ಯಯಿಸಿದರೂ ನಿಲ್ಲದ ಡ್ರಾಪ್ ಔಟ್

ಬೆಂಗಳೂರು: ಶಾಲೆ ತೊರೆದಿರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 7 ನೇ ಸ್ಥಾನ ಪಡೆದುಕೊಂಡಿದ್ದು, ರಾಜ್ಯಾದ್ಯಂತ ಕಳೆದ ಐದು ವರ್ಷಗಳಲ್ಲಿ 57,785 ವಿದ್ಯಾರ್ಥಿಗಳು ಶಿಕ್ಷಣ ತೊರೆದಿದ್ದಾರೆ. ವಿದ್ಯಾರ್ಥಿಗಳು ಶಾಲೆ ತೊರೆಯುವುದನ್ನು ತಡೆಯಲು ಐದು ವರ್ಷದಲ್ಲಿ ಸರ್ಕಾರದಿಂದ ಬರೋಬ್ಬರಿ 1,099.63 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದೆ. ಆದರೂ ಮಕ್ಕಳು ಶಾಲೆ ತೊರೆಯುವುದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದಕ್ಕೆ ಕಾರಣವೇನು, ಸರ್ಕಾರ ಏನೆಲ್ಲಾ ಕ್ರಮವಹಿಸಲು ಮುಂದಾಗಿದೆ ಎನ್ನುವ ಕುರಿತ ಒಂದು ವರದಿ ಇಲ್ಲಿದೆ. ಶಾಲೆ ತೊರೆದ …

Read More »

ಬ್ರ್ಯಾಂಡ್ ಬೆಂಗಳೂರು ಕುರಿತು ಡಿಸಿಎಂ ಮಾತು

ಬೆಂಗಳೂರು: ನಾಗರಿಕರ ಧ್ವನಿಯೇ ನಮ್ಮ ಸರ್ಕಾರದ ಧ್ವನಿ. ಹೀಗಾಗಿ ‘ಬ್ರ್ಯಾಂಡ್ ಬೆಂಗಳೂರು’ ಯೋಜನೆಯಲ್ಲಿ ನಗರದ ಜನರ ಅಭಿಪ್ರಾಯ ಸಂಗ್ರಹಿಸಿ, ಅವರ ನಿರೀಕ್ಷೆಗೆ ತಕ್ಕಂತೆ ನಾವು ಬೆಂಗಳೂರು ಅಭಿವೃದ್ಧಿಯ ನೀಲನಕ್ಷೆ ಸಿದ್ದಪಡಿಸಲಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ‘ಬ್ರ್ಯಾಂಡ್ ಬೆಂಗಳೂರು’ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಕುಮಾರ್, ಬೆಂಗಳೂರಿಗೆ ಅಂಟಿರುವ ಗಾರ್ಬೇಜ್ ಸಿಟಿ, ಟ್ರಾಫಿಕ್ ಸಿಟಿ ಎಂಬ ಕಳಂಕವನ್ನು ತೊಡೆದು ಹಾಕುತ್ತೇವೆ. ಪ್ರತಿ ರಸ್ತೆಯಲ್ಲಿ …

Read More »

ಸೌಂದರ್ಯ ಕಳೆದುಕೊಂಡ ಕಾರವಾರದ ಪ್ರಸಿದ್ಧ ರಾಕ್ ಗಾರ್ಡನ್; ನಿರ್ವಹಣೆಗೆ ಬಜೆಟ್‌ ಕೊರತೆ

ಕಾರವಾರ : ಅದು ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಜನಾಂಗಗಳ ಕಲೆ, ಸಂಸ್ಕೃತಿ ಬಿಂಬಿಸುವ ಶಿಲ್ಪಕಲಾಕೃತಿಗಳ ವನ. ಹೆದ್ದಾರಿಗೆ ಹೊಂದಿಕೊಂಡು ಕಡಲತೀರದಲ್ಲೇ ಈ ವನ ಇರುವುದರಿಂದ ಸಾಕಷ್ಟು ಮಂದಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿ ತೆರಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸರಿಯಾದ ನಿರ್ವಹಣೆಯ ಕೊರತೆಯಿಂದ ಪ್ರವಾಸಿಗರ ಆಕರ್ಷಣೆಯ ತಾಣ ತನ್ನ ಕಳೆ ಕಳೆದುಕೊಳ್ಳುತ್ತಿದೆ. ಕಾರವಾರದಲ್ಲಿರುವ ರಾಕ್‌ಗಾರ್ಡನ್ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೀಡಾಗಿ ದುಸ್ಥಿತಿ ತಲುಪಿದೆ. ರವೀಂದ್ರನಾಥ ಟ್ಯಾಗೋರ್ …

Read More »

ಬಸ್ ಹರಿದ ಪರಿಣಾಮ ಮೂರು ವರ್ಷದ ಗಂಡು ಮಗು ಸ್ಥಳದಲ್ಲೇ ಸಾವು

ಬೆಂಗಳೂರು : ಬಿಎಂಟಿಸಿ ಬಸ್ ಹರಿದ ಪರಿಣಾಮ ಮೂರು ವರ್ಷದ ಗಂಡು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಗಾರ್ವೇಭಾವಿಪಾಳ್ಯ ಜಂಕ್ಷನ್​ನಲ್ಲಿ ನಡೆದಿದೆ. ಆಯಾನ್ ಪಾಷಾ (3) ಮೃತ ಮಗು ಎಂದು ಗುರುತಿಸಲಾಗಿದೆ. ಆಯಾನ್​ ಪಾಷಾ ದೊಡ್ಡಮ್ಮ ರುಸ್ಮಾರೊಂದಿಗೆ ಭಾನುವಾರ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದನು. ಈ ವೇಳೆ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ಇವರ​ ವಾಹನಕ್ಕೆ ಡಿಕ್ಕಿಯಾಗಿದೆ. ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಮಗು ಕೆಳಗೆ ಬಿದ್ದಿದ್ದು, ಈ ವೇಳೆ …

Read More »

ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಅಜಿತ್ ಪವಾರ್ ಮತ್ತು ಇತರ ಏಳು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಶರದ್ ಪವಾರ್ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. ತ್ವರಿತ ನಿರ್ಧಾರ ಕೈಗೊಳ್ಳಲು ಸೂಚನೆಗಳನ್ನು ನೀಡುವಂತೆ ಆದೇಶಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು …

Read More »

ಮೂರು ತಾಲೂಕುಗಳು ಬರಪೀಡಿತ ಪಟ್ಟಿಯಿಂದ ಹೊರಗೆ.. ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ನೇತೃತ್ವದಲ್ಲಿ ಪ್ರತಿಭಟನೆ

ಹಾವೇರಿ : ರಾಜ್ಯ ಸರ್ಕಾರ ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಐದು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಉಳಿದಂತೆ ಮೂರು ತಾಲೂಕುಗಳನ್ನು ಸರ್ಕಾರ ಬರಗಾಲಪೀಡಿತ ಎಂದು ಘೋಷಿಸಿಲ್ಲ. ರಾಣೆಬೆನ್ನೂರು, ಹಿರೇಕೆರೂರು, ಹಾವೇರಿ, ಸವಣೂರು ರಟ್ಟಿಹಳ್ಳಿ ತಾಲೂಕುಗಳು ಬರಗಾಲ ಪೀಡಿತವಾಗಿವೆ. ಉಳಿದಂತೆ ಬ್ಯಾಡಗಿ, ಹಾನಗಲ್ ಮತ್ತು ಶಿಗ್ಗಾಂವಿ ತಾಲೂಕುಗಳನ್ನು ಬರಗಾಲಪೀಡಿತ ಎಂದು ಘೋಷಣೆ ಮಾಡಿಲ್ಲ.ಇದರಿಂದ ಆಕ್ರೋಶಗೊಂಡು ಬ್ಯಾಡಗಿ, ಹಾನಗಲ್ ಮತ್ತು ಶಿಗ್ಗಾಂವಿ ತಾಲೂಕಿನ ರೈತರು ಇದೀಗ ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ನೇತೃತ್ವದಲ್ಲಿ ಪ್ರತಿಭಟನೆಯ …

Read More »

ಸಿಎಂ ಭೇಟಿಯಾದ ಅಶ್ವಿನಿ ಪುನೀತ್ ರಾಜಕುಮಾರ್;

ಬೆಂಗಳೂರು : ಖಾಸಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲು ಅಶ್ವಿನಿ ಪುನೀತ್ ರಾಜ್​ಕುಮಾರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ ಜೊತೆಗಿದ್ದರು. ಪವರ್​ ಸ್ಟಾರ್​ ದಿ. ಪುನೀತ್ ರಾಜಕುಮಾರ್ ಅವರ ಶಿಲ್ಪದ ಸಂಗ್ರಹದ ಅನಾವರಣ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಸಿಎಂಗೆ …

Read More »

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಸಿಐಡಿಗೆ ಹಸ್ತಾಂತರ: ಸಿಎಂ ಸಿದ್ದರಾಮಯ್ಯ

ಆನೇಕಲ್​ (ಬೆಂಗಳೂರು) : ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಶನಿವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪಟಾಕಿ ದುರಂತ ಪ್ರಕರಣವನ್ನು ಸಿಐಡಿಗೆ ವಹಿಸುವುದಾಗಿ ಎಂದು ಹೇಳಿದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ಅವಘಡ ಪ್ರಕರಣದಲ್ಲಿ ಒಟ್ಟು 14 ಮಂದಿ ಸಾವನ್ನಪ್ಪಿದ್ದು, 7 …

Read More »