Breaking News
Home / ರಾಷ್ಟ್ರೀಯ (page 389)

ರಾಷ್ಟ್ರೀಯ

ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಚಿಸಲಾಗಿರುವ ತಂಡಗಳು ಕಾರ್ಯೋನ್ಮುಖರಾಗಿ ಚುರುಕಿನಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಮಾ.13) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಈಗಾಗಲೇ ನಿಯೋಜಿಸಲಾಗಿರುವ ತಂಡಗಳು ಪ್ರತಿಯೊಂದು ವಾಹನಗಳ ಮೇಲೆ ನಿಗಾ ವಹಿಸಬೇಕು. ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ …

Read More »

1 ಕೆ.ಜಿ ಮರದ ಬೆಲೆ 8 ಲಕ್ಷ ರೂ.; ಅತ್ಯಂತ ದುಬಾರಿ ಮರ ಯಾವುದು ಗೊತ್ತಾ?

ನವದೆಹಲಿ: ಅತ್ಯಂತ ದುಬಾರಿ ಮರ ಯಾವುದು ಎಂದರೆ ಅನೇಕರು ಶ್ರೀಗಂಧ ಅಂತಾರೆ. ವಿಶ್ವದಾದ್ಯಂತ ವಿವಿಧ ಬಗೆಯ ದುಬಾರಿ ಮರಗಳಿವೆ. ಈ ಮರಕ್ಕೆ 1 ಕೆಜಿಗೆ ಲಕ್ಷಗಟ್ಟಲೆ ಬೆಲೆಯನ್ನು ಹೊಂದಿದೆ. ಯಾವ ಮರ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ… ಶ್ರೀಗಂಧಕ್ಕೆ ಸರಾಸರಿ 7 ರಿಂದ 8 ಸಾವಿರದವರೆಗೆ ಲಭ್ಯವಿದೆ. ಆದ್ರೆ, ಈ ದುಬಾರಿ ಬೆಲೆ ಬಾಳುವ ಈ ಮರದ ಹೆಸರು ‘ಆಫ್ರಿಕನ್ ಬ್ಲ್ಯಾಕ್‌ವುಡ್’. ಈ ಮರದ ಬೆಲೆ 8 ಸಾವಿರ ಪೌಂಡ್ …

Read More »

18 ತಿಂಗಳಿಂದ ‘DA ಬಾಕಿ’ಗಾಗಿ ಕಾದು ಕುಳಿತಿರುವ ‘ಸರ್ಕಾರಿ ನೌಕರರು-ಪಿಂಚಣಿದಾರ’ರಿಗೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್

ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತದ ಆರಂಭದೊಂದಿಗೆ ಕೇಂದ್ರ ನೌಕರರು ಮತ್ತು ಪಿಂಚಣಿದಾರರ 18 ತಿಂಗಳ ಬಾಕಿ ಸಮಸ್ಯೆ ಲೋಕಸಭೆಯಲ್ಲಿ ಉದ್ಭವಿಸಿದೆ. ಪ್ರಶ್ನೋತ್ತರ ವೇಳೆಯಲ್ಲಿ ತುಟ್ಟಿಭತ್ಯೆ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಕೇಳಲಾಗಿದ್ದು, ಕರೋನಾ ಅವಧಿಯಲ್ಲಿ ಸ್ಥಗಿತಗೊಂಡಿರುವ ಕೇಂದ್ರ ನೌಕರರು ಮತ್ತು ಪಿಂಚಣಿದಾರರ 18 ತಿಂಗಳ ತುಟ್ಟಿಭತ್ಯೆಯನ್ನ ಬಿಡುಗಡೆ ಮಾಡುವ ಉದ್ದೇಶವಿದೆಯೇ ಎಂದು ಕೇಳಲಾಯಿತು. ಈ ಪ್ರಶ್ನೆಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಡಿಎ ಬಾಕಿ ನೀಡುವ …

Read More »

BIG NEWS: ರೇವಣ್ಣ ಕುಟುಂಬಕ್ಕೆ ಮತ್ತೆ ಶಾಕ್ ಕೊಟ್ಟ HDK

ಹಾಸನ: ಹಾಸನದ ಜೆಡಿಎಸ್ ಟಿಕೆಟ್ ವಿಚಾರವಾಗಿ ರೇವಣ್ಣ ಕುಟುಂಬ ಭವಾನಿ ರೇವಣ್ಣಗೆ ನೀಡಬೇಕು ಎಂದು ಪಟ್ಟು ಹಿಡಿದಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಶಾಕ್ ನೀಡಿದ್ದಾರೆ. ಹಾಸನ ಟಿಕೆಟ್ ಸಾಮಾನ್ಯ ಕಾರ್ಯಕರ್ತನಿಗೆ ನೀಡಲಾಗುವುದು ಎಂದು ಈಗಾಗಲೇ ನಾನು ಹೇಳಿದ್ದೇನೆ. ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಯಾವುದೇ ಗೊಂದಲ ಇಲ್ಲ ಎಂದು ಹೇಳುವ ಮೂಲಕ ಭವಾನಿ ರೇವಣ್ಣಗೆ ಮತ್ತೆ ನಿರಾಸೆ ಮೂಡಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧವಾಗುತ್ತಿದೆ. ಪಕ್ಷದ ಕಾಯಕರ್ತರಿಗೆ ಆದ್ಯತೆ …

Read More »

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಾವಕಾಶ- ನಾಳೆಯೊಳಗೆ ಅರ್ಜಿ ಹಾಕಿ

BMRCL Recruitment 2023: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್(Bengaluru Metro Rail Corporation Limited) ಅಂದರೆ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ​ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆಯ ದಿನವಾಗಿದೆ. ಒಟ್ಟು 10 ಫೈಯರ್ ಇನ್ಸ್​ಪೆಕ್ಟರ್, ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಮಾರ್ಚ್​ 14, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ (Last Date). ಅಭ್ಯರ್ಥಿಗಳು ಆನ್​ಲೈನ್ …

Read More »

ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ : ಅಧಿಕೃತವಾಗಿ ‘ಉದಯ್ ಗೌಡ’ ಕಾಂಗ್ರೆಸ್ ಸೇರ್ಪಡೆ

ಮಂಡ್ಯ : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ ತಗುಲಿದ್ದು, ಬಿಜೆಪಿ ಮುಖಂಡ ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಧಾನಸಭೆ ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ ಆರಂಭವಾಗಿದೆ. ಮದ್ದೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಉದಯ್ ಗೌಡ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೆಚ್ ಡಿ …

Read More »

ಐಪಿಎಸ್ ಅಧಿಕಾರಿಯ ಮನೆಯಲ್ಲಿ ಪತ್ತೆಯಾದ ಮಹಿಳಾ ಎಎಸ್‌ಐ!

ಕಲಬುರಗಿ: ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಅವರೊಂದಿಗೆ ತನ್ನ ಪತ್ನಿ ಹೊಂದಿರುವ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಅಧಿಕಾರಿ ಜತೆ ಸೇರಿ ಪತ್ನಿ ಜೀವ ಬೆದರಿಕೆ ಹಾಕಿದ್ದಾಳೆ ಎಂದು ಆರೋಪಿಸಿ ಪೊಲೀಸ್ ಕಾನ್‌ಸ್ಟೆಬಲ್‌ಯೊಬ್ಬರು ಸ್ಟೇಷನ್ ಬಜಾರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.   ಆಂತರಿಕಾ ಭದ್ರತಾ ಘಟಕದ ಎಸ್ಪಿಯಾಗಿದ್ದ ಅರುಣ್ ರಂಗರಾಜನ್ ಹಾಗೂ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ ವಿರುದ್ಧ ದೂರು ದಾಖಲಾಗಿದೆ. ಮಹಿಳೆಯ ಪತಿ ಕಂಟೆಪ್ಪ ದೂರು ದಾಖಲಿಸಿದ್ದಾರೆ. ಎಸ್ಪಿ …

Read More »

ಬಿಜೆಪಿಯ 20ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಟಿಕೆಟ್‌ ಡೌಟ್‌! ‘ಕೊಕ್‌ʼ ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ?

ಬೆಂಗಳೂರು,ಮಾರ್ಚ್‌ 13: ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ರಾಜ್ಯ ಬಿಜೆಪಿ ಹಲವು ರೀತಿಯ ತಂತ್ರಗಾರಿಕೆಯನ್ನ ನಡೆಸುತ್ತಿದೆ. ಚುನಾವಣೆಯಲ್ಲಿ ಮಿಷನ್‌ 150 ಟಾರ್ಗೆಟ್‌ ಹಾಕಿಕೊಂಡಿರುವ ಬಿಜೆಪಿ ಹಲವು ಸಮರಾಭ್ಯಾಸವನ್ನ ನಡೆಸುತ್ತಿದೆ. ಇತ್ತ ಹಲವು ಹಲವು ಸಮೀಕ್ಷೆಗಳನ್ನ ನಡೆಸಿರುವ ಬಿಜೆಪಿಗೆ ಸರ್ವೆಯಿಂದ ದೊಡ್ಡ ಅಘಾತ ಉಂಟಾಗಿದೆ. ಹೀಗಾಗಿ ಪ್ರತಿ ಕ್ಷೇತ್ರದಲ್ಲಿಯೂ ಗೆಲ್ಲುವ ಕುದುವೆ ಹುಡುಕಾಟವನ್ನ ಬಿಜೆಪಿ ನಡೆಸುತ್ತಿದ್ದು, ಪ್ರತಿ ಕ್ಷೇತ್ರಕ್ಕೂ ಅಳೆದು ತೂಗಿ ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕು ಎನ್ನುವ …

Read More »

ನನ್ನ ಬಳಿ 10 ಸಿಡಿಗಳಿವೆ, ಆದರೇ ಬಹಿರಂಗ ಮಾಡಲ್ಲ: ಶಾಸಕ ರಮೇಶ್ ಜಾರಕಿಹೊಳಿ

ಬೆಳಗಾವಿ: ನನ್ನ ಬಳಿ 10 ಸಿಡಿಗಳಿದ್ದಾವೆ. ನಾವು ಯುದ್ಧ ಮಾಡುವ ಜನ, ಷಡ್ಯಂತರ ಮಾಡುವವರಲ್ಲ. ಹೀಗಾಗಿ ಬಿಡುಗಡೆ ಮಾಡುವುದಿಲ್ಲ ಎಂಬುದಾಗಿ ಶಾಸಕ ರಮೇಶ್ ಜಾರಕಿಹೊಳಿ ( MLA Ramesh Jarkiholi ) ಹೇಳಿದ್ದಾರೆ. ಬೆಳಗಾವಿಯ ಗೋಕಾಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಓರ್ ಮಂತ್ರಿಯನ್ನು ಬರ್ತಿರೋ, ಸಿಡಿ ಬಿಡಗಡೆ ಮಾಡಲೋ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆದರಿಸುತ್ತಾನೆ. ಸಿಡಿ ಪಾಟನರ್ ಹಾಗೂ ಆಕ್ಟರ್ ಬೆಳಗಾವಿಯಲ್ಲೇ ಇದ್ದಾನೆ. ಅದಕ್ಕೆ ಎಲ್ಲರೂ …

Read More »

ಭಾವೈಕ್ಯತೆಯ ಸಂಕೇತ ಹೊಸೂರು ಉರುಸ್

ರಬಕವಿ-ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹೊಸೂರಿನ ಸಿರಾಜಸಾಬ್ ಮತ್ತು ಮುರಾದಸಾಬ್ ದರ್ಗಾದ ಉರುಸ್ ಕಾರ್ಯಕ್ರಮ ಅತ್ಯಂತ ವಿಶೇಷವಾಗಿದ್ದು, ಇಲ್ಲಿಯ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಒಂದಾಗಿ ಉರುಸ್ ಆಚರಣೆ ಮಾಡುತ್ತಿದ್ದು, ಇದು ಭಾವ್ಯಕ್ಯತೆಯ ಸಂಕೇತದ ಉರುಸ್ ಆಗಿದೆ. ಐದು ದಿನಗಳ ಕಾಲ ನಡೆಯುವ ಉರುಸ್ ಕಾರ್ಯಕ್ರಮಕ್ಕೆ ರಬಕವಿ, ಬನಹಟ್ಟಿ, ರಾಮಪುರ ಹಾಗೂ ಹೊಸೂರಿನ ಹಿಂದೂಗಳು ಮತ್ತು ಮುಸ್ಲಿಂರು ಯಾವುದೆ ಬೇಧ ಭಾವವಿಲ್ಲದೆ ಒಂದಾಗಿ ನೂರಾರು ವರ್ಷಗಳಿಂದ ಅಚರಿಸುತ್ತ ಬಂದಿದ್ದಾರೆ. …

Read More »