ರಾಮನಗರ : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರಾಷ್ಟ್ರಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ತಿಮ್ಮಕ್ಕ ಅವರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ವೈರಲ್ ಆಗಿದ್ದು, ಇದು ಸುಳ್ಳು ಸುದ್ದಿ ಎಂದು ಪುತ್ರ ಉಮೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಉಮೇಶ್, ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಸ್ಥಿರವಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆಗೆ …
Read More »ಕಾಂಗ್ರೆಸ್ಗೆ ಲಿಂಗಾಯತರು ಮತ ಹಾಕಿಲ್ಲ ಎನ್ನುವವರು ಮೂರ್ಖರು: ವಿನಯ್ ಕುಲಕರ್ಣಿ
ಬೆಂಗಳೂರು: ಹಿರಿಯ ನಾಯಕ, ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರು, ಕಾಂಗ್ರೆಸ್ಗೆ ಲಿಂಗಾಯತರು ಓಟು ಹಾಕಿಲ್ಲ ಎನ್ನುವವರು ಮೂರ್ಖರು. ವೀರೇಂದ್ರ ಪಾಟೀಲ್ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರು ಕಾಂಗ್ರೆಸ್ ಪರ ನಿಂತಿದ್ದಾರೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಮನೂರು ಅವರ ವಿರುದ್ಧ ಯಾರು ಕೌಂಟರ್ ಕೊಡೋದು ಬೇಡ. ಅವರು ಹಿರಿಯರು, ನಮ್ಮ ಯಜಮಾನರು ಅವರು, ಅವರಿಗೆ 92 …
Read More »ಬಿಪಿ ಶುಗರ್ ಇದ್ದವರ ಮನೆಗೆ ಪ್ರತಿ ತಿಂಗಳು ಉಚಿತವಾಗಿ ಮಾತ್ರೆಗಳು ರವಾನೆ
ಬೆಳಗಾವಿ: ಮುಂದಿನ ಎರಡು ತಿಂಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ‘ಗೃಹ ಆರೋಗ್ಯ’ ಮತ್ತು ‘ಆಶಾ ಕಿರಣ’ ಎಂಬ ಎರಡು ಹೊಸ ಹೊಸ ಯೋಜನೆಗಳನ್ನು ಆರಂಭಿಸುತ್ತಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪ್ರತಿಯೊಬ್ಬರ ಆರೋಗ್ಯ ತಪಾಸಣೆಗಾಗಿ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸುವ ಗೃಹ ಆರೋಗ್ಯ ಯೋಜನೆ ಮತ್ತು ಆಶಾಕಿರಣ ಯೋಜನೆಗಳನ್ನು ಜಾರಿಗೆ …
Read More »ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಆರೋಪ: ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧದ ಪ್ರಕರಣದ ಸಾಕ್ಷಿಗಳಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಮತ್ತವರ ಪತ್ನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಮುರುಘಾ ಶರಣ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಪಿತೂರಿ ನಡೆಸಿದ ಮತ್ತು ಹಣ ಸುಲಿಗೆಗೆ ಪ್ರಯತ್ನಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಬಸವರಾಜನ್ ಮತ್ತು ಸೌಭಾಗ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರ ಪೀಠ …
Read More »ನಕಲಿ ಕಾರ್ಮಿಕ ಕಾರ್ಡ್ಗಳ ರದ್ದತಿಗೆ ಸಚಿವ ಸಂತೋಷ್ ಲಾಡ್ ಸೂಚನೆ
ಬೆಳಗಾವಿ: ”ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಟಿಸಿ ಕಾರ್ಮಿಕ ಕಾರ್ಡ್ಗಳನ್ನು ಪಡೆದು ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನ ಸಹಾಯಗಳನ್ನು ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಅಂಥವರ ನೋಂದಣಿಯನ್ನು ರದ್ದುಗೊಳಿಸಬೇಕು. ಅಲ್ಲದೇ ಮಂಡಳಿಯ ಯಾವುದೇ ಸೌಲಭ್ಯಗಳನ್ನು ಅವರಿಗೆ ನೀಡದಂತೆ ತಡೆಹಿಡಿಯಬೇಕು” ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ನಡೆದ ಕಾರ್ಮಿಕ ಇಲಾಖೆಯ ಪ್ರಾದೇಶಿಕ ಮಟ್ಟದ ಇಲಾಖೆ ಅಧಿಕಾರಿಗಳ …
Read More »ಹೊಸಪೇಟೆ: ಮಹಿಳೆಯ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಆರೋಪಿಗಳು 24 ಗಂಟೆಯೊಳಗೆ ಅಂದರ್
ವಿಜಯನಗರ (ಹೊಸಪೇಟೆ) : ಮಹಿಳೆಯೊಬ್ಬರ ಕತ್ತಿನಿಂದ ಸರ ದೋಚಿ ಪರಾರಿಯಾಗಿದ್ದ ಇಬ್ಬರು ಖದೀಮರನ್ನು 24 ಗಂಟೆಯೊಳಗೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸಪೇಟೆ ನಿವಾಸಿಗಳಾದ ಆಟೋ ಚಾಲಕ ಶ್ರೀನಿವಾಸ್ ಮತ್ತು ಆತನ ಸ್ನೇಹಿತ ವೆಂಕೋಬ ಬಂಧಿತ ಆರೋಪಿಗಳು. ಹೊರವಲಯದ ಕೊಂಡಾನಾಯಕನಹಳ್ಳಿ ಮಹಿಳೆ ವರಮಹಾಲಕ್ಷ್ಮಿ ಅವರು ಅ.1ರಂದು ಆಟೋದಲ್ಲಿ ಚರ್ಚ್ ಗೆ ಹೋಗಿದ್ದರು. ಅದೇ ಆಟೋದಲ್ಲಿ ಮರಳಿ ಮನೆಗೆ ಹೋಗುವಾಗ ಆರೋಪಿ ಶ್ರೀನಿವಾಸ್ ಆತನ ಸ್ನೇಹಿತ ವೆಂಕೋಬ ಎಂಬವನನ್ನು …
Read More »4ನೇ ಬಾರಿಗೆ ಚಿನ್ನದ ಅಂಬಾರಿ ಹೊರಲು ರೆಡಿಯಾಗುತ್ತಿರುವ ಕ್ಯಾಪ್ಟನ್ ಅಭಿಮನ್ಯು: ವಿಡಿಯೋ
ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿದೆ. ನಾಲ್ಕನೇ ಬಾರಿಗೆ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರಲು ಸಿದ್ದವಾಗುತ್ತಿರುವ ಕ್ಯಾಪ್ಟನ್ ಅಭಿಮನ್ಯು ಆನೆಯನ್ನು ವಿಶೇಷ ಆತಿಥ್ಯದೊಂದಿಗೆ ತಯಾರು ಮಾಡಲಾಗುತ್ತಿದೆ. ಈಗಾಗಲೇ 3 ಬಾರಿ ಅಂಬಾರಿ ಹೊತ್ತಿರುವ ‘ಆಪರೇಷನ್ ಕಿಂಗ್’ ಅಭಿಮನ್ಯು ಸೈ ಎನ್ನಿಸಿಕೊಂಡಿದ್ದಾನೆ. ಈ ಬಾರಿಯೂ ಗಣಪಡೆಯನ್ನು ಮುನ್ನಡೆಸುತ್ತಿದ್ದು, ಪ್ರತಿನಿತ್ಯ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಸೆಪ್ಟೆಂಬರ್ 5ರಂದು ಮೊದಲ ಹಂತದ ಗಜಪಡೆಯ ನೇತೃತ್ವ ವಹಿಸಿದ್ದ ಅಭಿಮನ್ಯು ಅರಮನೆ ಆವರಣ ಪ್ರವೇಶ ಮಾಡಿತ್ತು. …
Read More »ಬರಿಗಾಲಲ್ಲಿ ಬಂದು ಮುಂಬೈ ಸಿದ್ಧಿ ನಿನಾಯಕನ ದರ್ಶನ ಪಡೆದ ರಾಮ್ ಚರಣ್
ನಟ ರಾಮ್ ಚರಣ್ ತೇಜ (Ram Charan Teja) ದೊಡ್ಡ ಸೂಪರ್ ಸ್ಟಾರ್ ಆಗಿರುವ ಜೊತೆಗೆ ಮಹಾನ್ ದೈವ ಭಕ್ತ. ದೇವರ ಪ್ರತಿಯಾಗಿ ಅಪಾರ ಭಕ್ತಿ, ನಂಬಿಕೆ ಮತ್ತು ಶ್ರದ್ಧೆ ಹೊಂದಿದ್ದಾರೆ. ವ್ರತ ಆಚರಣೆ ಇತ್ಯಾದಿಗಳಲ್ಲಿ ಅಪಾರವಾದ ನಂಬಿಕೆ ಹೊಂದಿದ್ದಾರೆ. ಅದರಲ್ಲಿಯೂ ಶಬರಿಮಲೆ ಅಯ್ಯಪ್ಪನ ಕಟ್ಟಾ ಭಕ್ತರಾಗಿರುವ ರಾಮ್ ಚರಣ್ ತೇಜ ಹಲವು ದಿನಗಳ ಕಾಲ ಮಾಲಧಾರಿಯಾಗಿದ್ದ ವ್ರತ ಆಚರಿಸಿ ಮಲೆ ಏರಿಹಯೋಗಿ ಅಯ್ಯಪ್ಪನ ದರ್ಶನ ಪಡೆಯುತ್ತಾರೆ. ಕಳೆದ ವರ್ಷ ಮಾಲಧಾರಣೆ ಮಾಡಿದ್ದ …
Read More »ಉಜ್ವಲ ಫಲಾನುಭವಿಗಳಿಗೆ ಕೇಂದ್ರದಿಂದ ಖುಷಿ ಸುದ್ದಿ: ಎಲ್ಪಿಜಿ ಸಿಲಿಂಡರ್ ಸಬ್ಸಿಡಿ 300 ರೂ.ಗೆ ಹೆಚ್ಚಳ
ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸುವ ಎಲ್ಪಿಜಿ ಸಿಲಿಂಡರ್ಗಳ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಪ್ರಸ್ತುತ 200 ರೂಪಾಯಿ ಇದ್ದ ಸಬ್ಸಿಡಿಯನ್ನು 300 ರೂ.ಗಳಿಗೆ ಹೆಚ್ಚಿಸಲಾಗಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಬಳಿಕ ಸಚಿವ ಅನುರಾಗ್ ಠಾಕೂರ್ ಈ ಮಾಹಿತಿ ನೀಡಿದರು. 14.2 ಕೆಜಿಯ ಸಿಲಿಂಡರ್ ಬೆಲೆ ಮಾರುಕಟ್ಟೆಯಲ್ಲಿ 903 ರೂ. ಇದೆ. ಸದ್ಯ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂಪಾಯಿ ಸಬ್ಸಿಡಿಯೊಂದಿಗೆ 703 …
Read More »ಮೊಮ್ಮಗಳ ಸಿಟಿ ಸ್ಕ್ಯಾನ್ ಮಾಡಿಸಲು ಆಸ್ಪತ್ರೆಗೆ ರಿವಾಲ್ವರ್ ತಂದ ಬಿಹಾರ ಶಾಸಕ
ಸಂಯುಕ್ತ ಜನತಾದಳ (ಜೆಡಿಯು) ಶಾಸಕರೊಬ್ಬರು ತಮ್ಮ ಮೊಮ್ಮಗಳನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬಂದಾಗ ಆತ್ಮರಕ್ಷಣೆಗಾಗಿ ನೀಡಿರುವ ರಿವಾಲ್ವರ್ ಅನ್ನು ಸಾರ್ವಜನಿಕವಾಗಿ ಕೈಯಲ್ಲಿ ಹಿಡಿದುಕೊಂಡು ಓಡಾಡಿದ್ದು, ಆತಂಕದ ಜೊತೆಗೆ ಅಚ್ಚರಿಗೂ ಕಾರಣವಾಗಿದೆ. ಜೆಡಿಯು ಶಾಸಕ ಗೋಪಾಲ್ ಮಂಡಲ್ ಎಂಬವರು ಮಂಗಳವಾರ ಸಂಜೆ ಭಾಗಲ್ಪುರದ ಜವಾಹರ್ ಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಅನಾರೋಗ್ಯಕ್ಕೀಡಾಗಿದ್ದ ತಮ್ಮ ಮೊಮ್ಮಗಳನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದರು. ಭದ್ರತಾ ಸಿಬ್ಬಂದಿಯೂ ಜೊತೆಗಿದ್ದರು. ಆದರೂ, ಶಾಸಕರು ಕೈಯಲ್ಲಿ …
Read More »
Laxmi News 24×7