ಬೆಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ವಿಸ್ತರಿಸಲಾಗಿದೆ. ಸೆ.23 ರಿಂದ 30ರವರೆಗೆ ಈ ಆದೇಶ ಜಾರಿಗೆಯಲ್ಲಿರಲಿದ್ದು, ಒಂದು ವಾರ ಸಾರ್ವಜನಿಕರು 12 ಗಂಟೆಗಳ ಕಾಲ ಸೇವೆ ಪಡೆಯಬಹುದಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ (Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ …
Read More »ಪತ್ನಿ ಜೊತೆ ಸಂಬಂಧ ಶಂಕೆ: ವ್ಯಕ್ತಿಯ ಕತ್ತರಿಸಿದ ತಲೆ ಹಿಡಿದು ಪತ್ನಿಯ ತವರು ಮನೆಗೆ ಬಂದ ಪತಿ!
ಚೆನ್ನೈ(ತಮಿಳುನಾಡು): ಪತಿಯೊಬ್ಬತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ಅನುಮಾನದ ಮೇರೆಗೆ ವ್ಯಕ್ತಿಯೋರ್ವನ ಶಿರಚ್ಛೇದ ಮಾಡಿರುವ ಆಘಾತಕಾರಿ ಘಟನೆ ಗುರುವಾರ ಸಂಜೆ ತಮಿಳುನಾಡಿನ ತೆಂಕಶಿ ಜಿಲ್ಲೆಯಲ್ಲಿ ನಡೆದಿದೆ. ಶಿರಚ್ಛೇದ ಮಾಡಿದ್ದಲ್ಲದೇ ಕತ್ತರಿಸಿದ ತಲೆಯನ್ನು ಟುಟಿಕೋರಿನ್ ಜಿಲ್ಲೆಯಲ್ಲಿರುವ ಪತ್ನಿಯ ತವರು ಮನೆ ಮುಂದೆ ಇಟ್ಟಿದ್ದ. ಕೃತ್ಯ ಎಸಗಿದ ಎಸ್.ವೇಲುಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಮುರುಗನ್ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಆಲಂಕುಳಂ ಸಮೀಪದ ರೆಡಿಯಾರಪಟ್ಟಿ ಗಿಮ್ಕುಳಂ ಗ್ರಾಮಕ್ಕೆ ಸೇರಿದ ಆರೋಪಿ ವೇಲುಸಾಮಿಯು ತೂತುಕುಡಿ ಜಿಲ್ಲೆಯ …
Read More »ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವುದೇ ತೊಂದರೆ ಇಲ್ಲ: ಸಚಿವ ಪರಮೇಶ್ವರ್
ಬೆಂಗಳೂರು: ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ನಾವು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 20ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಶೇ.45ರಷ್ಟು ಮತ ಪ್ರಮಾಣ ಗಳಿಸಿದ್ದೆವು. ಅದನ್ನು ಲೋಕಸಭೆ ಚುನಾವಣೆಯಲ್ಲೂ ಉಳಿಸುವ ಸಾಧ್ಯತೆ ಇದೆ. ಅದರಿಂದ ನಮಗೇನು ತೊಂದರೆ ಆಗಲ್ಲ. ಅವರು ಮೈತ್ರಿ ಮಾಡಿಕೊಳ್ಳಲಿ. …
Read More »ಮಹಿಳಾ ಮೀಸಲಾತಿ.. ದಿಕ್ಕು ತಪ್ಪಿಸುವ ತಂತ್ರ ಅನುಸರಿಸಿದ ಸರ್ಕಾರ: ರಾಹುಲ್ ಗಾಂಧಿ
ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಲವಾಗಿ ಪ್ರತಿಪಾದಿಸಿದರು. ಜನಗಣತಿ ಮತ್ತು ಸೀಮಾರೇಖೆಯ ಷರತ್ತುಗಳನ್ನು ಸೇರಿಸುವುದನ್ನು ಟೀಕಿಸಿದರು. ಈ ಷರತ್ತುಗಳು ಮಸೂದೆಯ ಅನುಷ್ಠಾನವನ್ನು ಅನಗತ್ಯವಾಗಿ ವಿಳಂಬಗೊಳಿಸುತ್ತವೆ ಎಂದು ಕಿಡಿಕಾರಿದರು. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಸರ್ಕಾರ ಜಾತಿವಾರು ಜನಗಣತಿ ನಡೆಸಬೇಕು. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಜಾತಿ ಗಣತಿ ಮಾಹಿತಿ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು. ”ಮಹಿಳೆಯರಿಗೆ ಇಂದೇ …
Read More »ಕಾವೇರಿ ವಿವಾದ: ಕೇಂದ್ರ ಜಲಶಕ್ತಿ ಸಚಿವರನ್ನ ಭೇಟಿಯಾದ ಸಿದ್ದರಾಮಯ್ಯ
ಕಾವೇರಿ ನದಿ ನೀರಿನ ವಿಚಾರಕ್ಕೆ ತಮಿಳುನಾಡು ಪದೇ ಪದೇ ಕ್ಯಾತೆ ತೆಗೆಯುತ್ತಿರುವುದಕ್ಕೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾವೇರಿ ನೀರು ಹರಿಸುವ ಸಂಬಂಧ ಬಗೆಹರಿಸಲು ಸಿದ್ದರಾಮಯ್ಯ ನವದೆಹಲಿಯಲ್ಲಿ ಇಂದು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಕರ್ನಾಟಕದ ವಾಸ್ತವ ಪರಿಸ್ಥಿತಿಯನ್ನು ಗಮನಕ್ಕೆ ತಂದರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ …
Read More »ಬೆಳಗಾವಿ ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಿಸಲು ೭ ದಿನ ಅವಧಿ ಕೊಟ್ಟ ರೈತ ಸಂಘ
ಬೆಳಗಾವಿ ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಹೋ ರಾತ್ರಿ ಧರಣಿ ಮಾಡುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷ ಕಲಗೌಡಾ ಪಾಟೀಲ ಆಗ್ರಹಿಸಿದ್ದಾರೆ . ಬೆಳಗಾವಿ ತಾಲೂಕಿನ ಅಗಸಗಿ ಮನ್ನಿಕೇರಿ ,ಕಡೋಲಿ ,ಕೆಟನೂರು ಹಂದಿಗನೂರು ,ಶಿವಾಪುರ ಹಳ್ಳಿಗಳ ರೈತರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಬೆಳಗಾವಿ ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ ಎಂದು ಮನವಿ …
Read More »ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಶುಕ್ರವಾರ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಗಳಿಗೆ ಮನವಿ
ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಶುಕ್ರವಾರ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಲಾಯಿತು ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಕೊಡಗನ್ನವರ ಮಾತುನಾಡಿ, ರಾಜ್ಯದಲ್ಲಿ ಈ ವರ್ಷ ಎಂದೂ ಕಾಣದಷ್ಟು ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದೆ. ವಿಶೇಷವಾಗಿ ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹೀಗಿರುವಾಗ ತಮಿಳುನಾಡಿಗೆ ನೀರು ಬಿಡುವುದಾದರೂ ಹೇಗೆ …
Read More »ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಬೌಲಿಂಗ್; ಅಯ್ಯರ್, ಸೂರ್ಯಗೆ ಪರೀಕ್ಷೆ
ಮೊಹಾಲಿ (ಪಂಜಾಬ್): ತವರಿನಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ಗೂ ಮುನ್ನ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಸಜ್ಜಾಗಿದೆ. ಮೂರು ಪಂದ್ಯಗಳ ಸರಣಿಯ ಭಾಗವಾಗಿ ಇಂದು ಮೊದಲ ಏಕದಿನ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಟಾಸ್ ಗೆದ್ದ ಭಾರತ ತಂಡ ಆಸ್ಟ್ರೇಲಿಯಾವನ್ನು ಮೊದಲು ಬ್ಯಾಟ್ ಮಾಡುವಂತೆ ಆಹ್ವಾನಿಸಿದೆ. ಮೊದಲೆರಡು ಏಕದಿನ ಪಂದ್ಯಗಳಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕುಲದೀಪ್ ಯಾದವ್ ಮತ್ತು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. …
Read More »ತಡರಾತ್ರಿ ಪಾರ್ಟಿ ವೇಳೆ ಗುಂಡೇಟಿಗೆ ವಿದ್ಯಾರ್ಥಿನಿ ಬಲಿ: ಸ್ನೇಹಿತನ ಬಂಧನ
ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ತಡರಾತ್ರಿ ಪಾರ್ಟಿಯ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಗುಂಡೇಟಿಗೆ ಬಲಿಯಾಗಿರುವ ಘಟನೆ ನಡೆದಿದೆ. ಇದು ಆಕಸ್ಮಿಕವಾಗಿ ನಡೆದ ಗುಂಡಿನ ದಾಳಿಯೋ ಅಥವಾ ಪಿತೂರಿಯ ಭಾಗವಾಗಿ ಗುಂಡಿನ ದಾಳಿ ನಡೆಸಲಾಗಿದೆಯೋ ಎಂದು ಕುರಿತು ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಕೊಲೆಯಾದ ವಿದ್ಯಾರ್ಥಿನಿಯನ್ನು ನಿಷ್ಠಾ ತ್ರಿಪಾಠಿ (23) ಎಂದು ಗುರುತಿಸಲಾಗಿದೆ. ಹರ್ದೋಯ್ ಜಿಲ್ಲೆಯ ಮೂಲದ ನಿಷ್ಠಾ ಲಖನೌದ ಬಿಬಿಡಿ ವಿಶ್ವವಿದ್ಯಾಲಯದಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಇಲ್ಲಿನ ಚಿನ್ಹಾಟ್ …
Read More »ಚೈತ್ರಾ ಕುಂದಾಪುರ ಅವರು ಸಿಸಿಬಿ ವಿಚಾರಣೆ ವೇಳೆ ಮೌನಕ್ಕೆ ಶರಣಾಗಿದ್ದಾರೆ.
ಬೆಂಗಳೂರು : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬಂಧಿಸಿದರೆ, ದೊಡ್ಡವರ ಹೆಸರು ಬಹಿರಂಗವಾಗಲಿದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಬಂಧಿತೆ ಚೈತ್ರಾ ಕುಂದಾಪುರ ಸಿಸಿಬಿ ವಿಚಾರಣೆ ವೇಳೆ ಮೌನವಾಗಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ 5 ಕೋಟಿ ರೂ. ವಂಚನೆ ಆರೋಪದಡಿ ಬಂಧಿತರಾಗಿದ್ದ ಚೈತ್ರಾ, ಮಾಧ್ಯಮಗಳ ಮುಂದೆ ಸ್ವಾಮೀಜಿ ಹಾಲಶ್ರೀ ಬಂಧಿಸಿದರೆ ದೊಡ್ಡವರ ಹೆಸರು ಹೊರಬರಲಿದೆ ಎಂದು …
Read More »
Laxmi News 24×7