Breaking News
Home / ರಾಷ್ಟ್ರೀಯ (page 401)

ರಾಷ್ಟ್ರೀಯ

ರಾಜ್ಯ ಸರ್ಕಾರಿ ನೌಕರರ ವೇತನ ಶೇ 17ರಷ್ಟು ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇಕಡ 17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ತಕ್ಷಣದಲ್ಲೇ ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಏಳನೇ ವೇತನ ಆಯೋಗವನ್ನು ಈಗಾಗಲೇ ನೇಮಿಸಲಾಗಿದೆ. ಅವರಿಂದ ವರದಿ ಪಡೆದು ಶೀಘ್ರದಲ್ಲಿ ವೇತನ ಪರಿಷ್ಕರಣೆಗೆ ಪ್ರಯತ್ನ …

Read More »

ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಸ್; ಸಿ.ಎಸ್.ಷಡಕ್ಷರಿ

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ವಾಪಸ್ ಪಡೆಯಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಕ್ಷರಿ, ರಾಜ್ಯ ಸರ್ಕಾರ ಎರಡು ಆದೇಶವನ್ನು ಹೊರಡಿಸಿದೆ. ಶೇ.17 ರಷ್ಟು ವೇತನ ಹೆಚ್ಚಳ ಹಾಗೂ ರಾಷ್ಟ್ರೀಯ ಪಿಂಚಣಿ ಯೋಜನೆ -ಎನ್ ಪಿಎಸ್ ಬಗ್ಗೆ ಪರಿಶೀಲನೆ ಆದೇಶ ಮಾಡಿದೆ. ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಮಧ್ಯಂತರ ಆದೇಶ ಹೊರಡಿಸಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರದ ಆದೇಶವನ್ನು ಸರ್ಕಾರಿ …

Read More »

ಮಾರ್ಚ್ 2ರಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ: ಅರುಣ ಶಹಾಪುರ‌

ಬೆಳಗಾವಿ: ‘ಮಾರ್ಚ್‌ 2ರಿಂದ 20ರವರೆಗೆ ಕಿತ್ತೂರು ಕರ್ನಾಟಕ ಭಾಗದ 58 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆಯೋಜಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಮಾರ್ಚ್‌ 2ರಂದು ಮಧ್ಯಾಹ್ನ 12ಕ್ಕೆ ನಂದಗಡದಲ್ಲಿ ಇದಕ್ಕೆ ಚಾಲನೆ ನೀಡುವರು’ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ‌ ಅರುಣ ಶಹಾಪುರ‌ ಹೇಳಿದರು.   ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, …

Read More »

ಬಸವಕಲ್ಯಾಣದಲ್ಲಿ ಮಾರ್ಚ್‌ 4ರಿಂದ ಲಿಂಗಾಯತ ಮಹಾ ಅಧಿವೇಶನ: ಬಸವರಾಜ ರೊಟ್ಟಿ

ಬೆಳಗಾವಿ: ‘ಮಾರ್ಚ್‌ 4 ಮತ್ತು 5ರಂದು ಬಸವಕಲ್ಯಾಣದಲ್ಲಿ ಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾದಿವೇಶನ ನಡೆಸಲಾಗುತ್ತಿದೆ. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಜನ ಪಾಲ್ಗೊಳ್ಳಬೇಕು’ ಎಂದು ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಹೇಳಿದರು.   ’12ನೇ ಶತಮಾನದಲ್ಲಿ ಬಸವಣ್ಣನವರಿಂದ ಅವೈದಿಕ ಲಿಂಗಾಯತ ಧರ್ಮ ಸ್ಥಾಪಿತವಾಗಿದ್ದು ಬಸವ ಕಲ್ಯಾಣದಲ್ಲಿ. ಅನುಭವ ಮಂಟಪ ಸ್ಥಾಪನೆಯಾದದ್ದು ಕೂಡ ಅಲ್ಲಿಯೇ. ಹೀಗಾಗಿ ಬಸವಕಲ್ಯಾಣವು ಲಿಂಗಾಯತರಿಗೆ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ. ಆ ಕಾರಣಕ್ಕಾಗಿ ಪ್ರಪ್ರಥಮ ರಾಷ್ಟ್ರೀಯ …

Read More »

ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ, ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರು

ಕಾಗವಾಡ: ಕಾಂಗ್ರೆಸ್‌ನ ಕಾಗವಾಡ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಪ್ರಶಾಂತ ಅಪರಾಜ ಅವರಿಗೆ ಐನಾಪುರ ಪಟ್ಟಣದಲ್ಲಿ ಸೋಮವಾರ ಸಂಜೆ ಅಪರಿಚಿತರು ಚಾಕು ಇರಿದು ಪರಾರಿಯಾಗಿದ್ದಾರೆ. ಅದೃಷ್ಟವಶಾತ್‌ ಪ್ರಶಾಂತ್‌ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ಐನಾಪುರ ಹೊರವಲಯದ ಬೈಕ್‌ ಮೇಲೆ ಹೊರಟಾಗ ಅಡ್ಡಗಟ್ಟಿದ ಇಬ್ಬರು ಅಪರಿಚಿತ ಯುವಕರು, ಪ್ರಶಾಂತ ಅವರ ಕೈ- ಹೊಟ್ಟೆಗೆ ಚಾಕು ಇರಿದು ಪರಾರಿಯಾದರು. ಘಟನೆ ಕಾರಣ ಗೊತ್ತಾಗಿಲ್ಲ. ಅಲ್ಲದೇ ಪ್ರಶಾಂತ ಅವರು ಚಾಕು ಇರಿದವರನ್ನು ಗುರುತಿಸಿಲ್ಲ ಎಂದು ಪೊಲೀಸರು …

Read More »

ಪದ್ಮಶ್ರೀ ಸೀತವ್ವ ಜೋಡಟ್ಟಿ ಅವರಿಗೆ ‘ರಾಣಿ ಮಲ್ಲಮ್ಮ ಪ್ರಶಸ್ತಿ’ ಪ್ರದಾನ

(ಬೈಲಹೊಂಗಲ ): ‘ರಾಣಿ ಮಲ್ಲಮ್ಮನ ವೀರೋಚಿತ ಹೋರಾಟ, ಕೆಚ್ಚೆದೆಯ ಗುಣ ಆಧುನಿಕ ಮಹಿಳೆಯರಿಗೆ ದಾರಿದೀಪವಾಗಲಿ’ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸೀತವ್ವ ಜೋಡಟ್ಟಿ ಆಶಿಸಿದರು. ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ಮಂಗಳವಾರ ರಾತ್ರಿ ಆಯೋಜಿಸಿದ್ದ ‘ಬೆಳವಡಿ ಮಲ್ಲಮ್ಮನ ಉತ್ಸವ’ ಉದ್ಘಾಟನೆ ಸಮಾರಂಭದಲ್ಲಿ ‘ರಾಣಿ ಮಲ್ಲಮ್ಮ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದರು.   ‘ವೀರ ವನಿತೆ ಬೆಳವಡಿ ಮಲ್ಲಮ್ಮನ ಸಾಹಸಮಯ ಇತಿಹಾಸ ಹಾಗೂ ಭಾಷಾ ಪ್ರೇಮ …

Read More »

ಕೊಡಲಿಯಿಂದ ಹೊಡೆದು ಮಗನ ಕೊಲೆ ಮಾಡಿದ ತಂದೆ

ಕಾಗವಾಡ: ತಾಲ್ಲೂಕಿನ ಉಗಾರ ಬಿ.ಕೆ. ಗ್ರಾಮದಲ್ಲಿ ಮಂಗಳವಾರ ತಂದೆ ಮಗನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಭರತೇಶ ಉರೂಫ್‌ ಚೇತನ್‌ ಖಾಂಜೆ (30) ಕೊಲೆಯಾದ ಯುವಕ. ಜಿನ್ನಪ್ಪ ಪಾಯಪ್ಪ ಖಾಂಜೆ (64) ಕೊಲೆ ಆರೋಪಿ. ‘ಭರತೇಶ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ತಂದೆ- ತಾಯಿಯನ್ನು ಕಾಳಜಿಯಿಂದ ನೋಡಿಕೊಳ್ಳುತ್ತಿರಲಿಲ್ಲ. ಕುಡಿತದ ಚಟ ಬೆಳೆಸಿಕೊಂಡಿದ್ದ. ಮದ್ಯಕ್ಕಾಗಿ ಹಣ ಕೊಡುವಂತೆ ಪದೇ ಪದೇ ಹೆತ್ತವರೊಂದಿಗೆ ಜಗಳವಾಡುತ್ತಿದ್ದ. ಮಂಗಳವಾರ ಕೂಡ ಇದೇ ಕಾರಣಕ್ಕೆ ಜಗಳ ನಡೆದಿದ್ದು, ಆವೇಶದಲ್ಲಿ ಕೊಲೆಯಾಗಿದೆ’ …

Read More »

10 ಲಕ್ಷ ನೌಕರರನ್ನು ಸರಕಾರ ಜೈಲಿಗೆ ಹಾಕುವುದಾದರೆ ಹಾಕಲಿ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಸ

ಬೆಂಗಳೂರು – 7ನೇ ವೇತನ ಆಯೋಗದ ವರದಿ ಜಾರಿ ಮತ್ತು ಹಳೆ ಪಿಂಚಣಿ ಯೋಜನೆ ಜಾರಿ ಬೇಡಿಕೆಗಳನ್ನು ಮುಂದಿಟ್ಟು ಸರಕಾರಿ ನೌಕರರು ಬುಧವಾರದಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಕೆಲಸಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ನಡೆಸಲು ನೌಕರರ ಸಂಘ ನಿರ್ಧರಿಸಿದೆ. ತುರ್ತು ಸೇವೆ ಹೊರತುಪಡಿಸಿ ಯಾವುದೇ ನೌಕರರು ಕೆಲಸಕ್ಕೆ ಹಾಜರಾಗಬಾರದೆಂದು ತಿಳಿಸಿದೆ. ಇದರ ಬೆನ್ನಲ್ಲೆ ಮಂಗಳವಾರ ಸರಕಾರಿ ಕಠಿಣ ಎಚ್ಚರಿಕೆ ನೀಡುವ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರಕಾರದ ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರಿ ಆದಿತ್ಯ …

Read More »

ಐತಿಹಾಸಿಕ ವಿಶೇಷ ಕಾರಿಡಾರ್ ನಿರ್ಮಾಣಕ್ಕೆ ಅನುದಾನ: ಬನವಾಸಿಯಲ್ಲಿ ಸಿಎಂ ಬೊಮ್ಮಾಯಿ

ಕಾರವಾರ(ಬನವಾಸಿ): ಕನ್ನಡ ರಾಜ್ಯವನ್ನು ಆಳಿದ ರಾಜ್ಯ ಮನೆತನಗಳಾದ ಕದಂಬರು, ಚಾಲುಕ್ಯರು, ರಾಷ್ಟ್ರಕೂಟರ ಗತವೈಭವನ್ನು ಸಾರುವ ಕಾರ್ಯಕ್ರಮಗಳಿಗೆ ಬಜೆಟ್ ನಲ್ಲಿ ವಿಶೇಷ ಅನುದಾನ ನೀಡಲಾಗಿದ್ದು, ಐತಿಹಾಸಿಕ ವಿಶೇಷ ಕಾರಿಡಾರ್ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು. ಪಂಪನ ಆಶಯದಂತೆ ಈ ಭಾಗದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿರಸಿ ತಾಲೂಕಿನ ಬನವಾಸಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಸಂಯುಕ್ತ ಆಶ್ರಯದಲ್ಲಿ …

Read More »

ಬನವಾಸಿಗೆ ಆಗಮಿಸಿದ ಸಿಎಂ ಬೊಮ್ಮಾಯಿ: ಸಿದ್ದರಾಮಯ್ಯ ಪರ ಘೋಷಣೆ ಕೂಗಿದ ಕಾಂಗ್ರೆಸ್ ಪ್ರಮುಖರು

ಶಿರಸಿ: ಕನ್ನಡ ಪ್ರಥಮ ರಾಜಧಾನಿ ಬನವಾಸಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಎದುರು ಸ್ಥಳೀಯ ಕಾಂಗ್ರೆಸ್ ಪ್ರಮುಖರು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಪರ ಘೋಷಣೆ ಕೂಗಿದ ಘಟನೆ ಮಂಗಳವಾರ ನಡೆದಿದೆ. ಜನರ ಉತ್ಸವವನ್ನಾಗಿ ಕದಂಬೋತ್ಸವವನ್ನು ಆಚರಿಸಬೇಕಿತ್ತು. ಇದು ಬಿಜೆಪಿ ಉತ್ಸವದಂತೆ ನಡೆಸಲಾಗುತ್ತಿದೆ. ಬಿಜೆಪಿ ಚಿಹ್ನೆಯ ಟಿಶರ್ಟ್ ಹಂಚಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ತಾವು ಕಾಂಗ್ರೆಸ್ ಶಾಲು ಹಾಕಿ ಬಂದಿದ್ದು ಕೆಲ‌ ಕಾಲ ಗೊಂದಲ‌ ಉಂಟಾಗಿತ್ತು. ಸಿಎಂ ತೆರಳುವ ಮಾರ್ಗದಲ್ಲಿ …

Read More »