ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಗುಡುಗಿದ್ದ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ಗೆ ಎಐಸಿಸಿ ಶೋಕಾಸ್ ನೊಟೀಸ್ ಜಾರಿ ಮಾಡಿದೆ. ಎಐಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು, ಹತ್ತು ದಿನಗಳೊಳಗೆ ಉತ್ತರಿಸುವಂತೆ ತಿಳಿಸಿದೆ. ಕಳೆದ ಶನಿವಾರ ಅತಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ್ ಅವರು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಇದು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷವನ್ನು ತೀವ್ರ ಮುಜುಗರಕ್ಕೀಡು ಮಾಡಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಎಐಸಿಸಿ …
Read More »ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ನವದೆಹಲಿ: ಅಪರೂಪದಲ್ಲಿ ಅಪರೂಪ ಕಾಯಿಲೆಯಿಂದ ಬಳಲುತ್ತಿರುವ ದೆಹಲಿಯ ಬಾಲಕನನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಆನುವಂಶಿಕ ಕಾಯಿಲೆಯಾದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (ಎಸ್ಎಂಎ) ಚಿಕಿತ್ಸೆಗೆ ಕೋಟ್ಯಂತರ ರೂಪಾಯಿ ಬೇಕಾಗಿದ್ದು, ನೆರವಿಗೆ ಕುಟುಂಬಸ್ಥರು ಮನವಿ ಮಾಡಿದ್ದರು. ಹೀಗಾಗಿ ಸಿಎಂ ಅವರು ಖುದ್ದು ಭೇಟಿ ನೀಡಿ, ಮಾತುಕತೆ ನಡೆಸಿದರು. ಎಸ್ಎಂಎ ಕಾಯಿಲೆಯು ಅಪಾಯಕಾರಿಯಾಗಿದ್ದು, ಅದು ತೀರಾ ಅಪರೂಪವಾಗಿದೆ. ಇದಕ್ಕೆ ತಕ್ಷಣವೇ ಚಿಕಿತ್ಸೆ ಕೊಡಿಸದಿದ್ದರೆ ಪ್ರಾಣಕ್ಕೆ ಕುತ್ತು ತರಲಿದೆ. ಇಂತಹ ರೋಗ …
Read More »ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ 143 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಪಟ್ಟಣ ಪಂಚಾಯತಿ ಹಾಗೂ ಸಾರ್ವಜನಿಕರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಅಮೃತ-2 ಯೋಜನೆಯಡಿ ಈ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು. ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣಗಳಿಗೆ ತಲಾ …
Read More »ಸೆಪ್ಟೆಂಬರ್ ಕೊನೆಯಲ್ಲಿ ಈ 3 ಸಿನಿಮಾಗಳು ತೆರೆಗೆ
ಸೆಪ್ಟೆಂಬರ್ 28ರಂದು ಬಹುನಿರೀಕ್ಷಿತ ಮೂರು ಸಿನಿಮಾಗಳು ಬಿಡುಗಡೆಯಾಗಲಿವೆ. ಭಾರತೀಯ ಚಿತ್ರರಂಗದಲ್ಲಿ ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ಅತ್ಯುತ್ತಮ ಸಿನಿಮಾಗಳು ತೆರೆ ಕಾಣುತ್ತಿವೆ. ಕಾಂತಾರ, ಕೆಜಿಎಫ್, ಪಠಾಣ್, ಜೈಲರ್ ಹೀಗೆ ಸಾಕಷ್ಟು ಸಿನಿಮಾಗಳು ಪ್ರೇಕ್ಷಕರ ಮನರಂಜಿಸುವಲ್ಲಿ ಯಶಸ್ವಿಯಾಗಿವೆ. ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವಲ್ಲಿಯೂ ಸಫಲವಾಗಿವೆ. ವಿಶ್ವಾದ್ಯಂತ ಭಾರತದ ಸಿನಿಮಾಗಳು ತಿಂಗಳುಗಟ್ಟಲೆ ಪ್ರದರ್ಶನ ಕಾಣುತ್ತಿವೆ. ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಇದೀಗ ಎಲ್ಲೆಡೆ ಧೂಳೆಬ್ಬಿಸುತ್ತಿದೆ. ಈ ನಡುವೆ ಇದೇ ತಿಂಗಳು ಮತ್ತೆ ಮೂರು …
Read More »ಹಗರಣಗಳಿಂದ ಪಾರಾಗಲು ನನ್ನ ವಿರುದ್ಧ ಹೈಕಮಾಂಡ್ಗೆ ದೂರು: ಬಿ ಕೆ ಹರಿಪ್ರಸಾದ್
ಕೊಪ್ಪಳ: ‘ಕೆಲವರು ತಾವು ಮಾಡಿದ ಹಗರಣಗಳಿಂದ ಪಾರಾಗಲು ನನ್ನ ವಿರುದ್ಧ ಹೈಕಮಾಂಡ್ಗೆ ದೂರು ನೀಡುವ ನಾಟಕವಾಡುತ್ತಿದ್ದಾರೆ. ಅವರಿಗೆ ದೈರ್ಯ ಇದ್ದರೆ ಮೊದಲು ಹಗರಣಗಳಿಂದ ಹೊರಗೆ ಬರಲಿ. ಅದು ಬಿಟ್ಟು ನನ್ನ ಮೇಲೆ ದೂರು ನೀಡಲು ಮುಂದಾಗಿರುವುದು ವಿಪರ್ಯಾಸ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದರು. ಜಿಲ್ಲೆಯ ಕುಕನೂರು ತಾಲೂಕಿನ ತಳಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ”ನನ್ನ …
Read More »ಬಿಟ್ ಕಾಯಿನ್ ಹಗರಣ: ಆರೋಪಿಗಳಿಗೆ ಮುಂದಿನ ವಿಚಾರಣೆವರೆಗೂ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿದ ಹೈಕೋರ್ಟ್
ಬೆಂಗಳೂರು: ಬಿಟ್ ಕಾಯಿನ್ ಹಗರಣದ ಆರೋಪಿಗಳಾದ ಶ್ರೀಕಿ ಅಲಿಯಾಸ್ ಶ್ರೀ ಕೃಷ್ಣ, ಸುನೀಶ್ ಹೆಗ್ಡೆ ಮತ್ತು ಹೇಮಂತ್ ಮುದ್ದಪ್ಪ ಅವರಿಗೆ ಅರ್ಜಿಯ ಕುರಿತ ಮುಂದಿನ ದಿನಾಂಕದ ವರೆಗೂ ಖುದ್ದು ವಿಚಾರಣೆಗೆ ಹಾಜರಾಗುವುದಕ್ಕೆ ವಿನಾಯ್ತಿ ನೀಡಿ ಹೈಕೋರ್ಟ್ ಆದೇಶಿಸಿದೆ. ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಹಾಗೂ ಕಾನೂನು ಪ್ರಕ್ರಿಯೆ ವಜಾ ಮಾಡುವಂತೆ ಕೋರಿ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ, ಸಹ ಆರೋಪಿಗಳಾದ ಸುನೀಶ್ ಹೆಗ್ಡೆ …
Read More »ಅಧಿಕಾರಿಗಳು Work from Home ಮಾಡಬಾರದು, Not Reachable ಆಗಬಾರದು:C.M.
ಬೆಂಗಳೂರು: ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು. ಕಚೇರಿಯಲ್ಲಿರಬೇಕು, ಇಲ್ಲವೆ ಜಿಲ್ಲೆಯಲ್ಲಿ ಪ್ರವಾಸದಲ್ಲಿರಬೇಕು. ಮನೆಯಲ್ಲಿ ಕುಳಿತು ಕೆಲಸ ಮಾಡಬಾರದು. Work from home …
Read More »ಅಪಘಾತದ ಬಾಕಿ ಪರಿಹಾರ ಮೊತ್ತ ನೀಡದ ಕೆಎಸ್ಆರ್ಟಿಸಿ.. ದಾವಣಗೆರೆಯಲ್ಲಿ ಎರಡು ಬಸ್ ಜಪ್ತಿ
ದಾವಣಗೆರೆ: ಅಪಘಾತ ಪ್ರಕರಣವೊಂದರಲ್ಲಿ ಬಾಕಿ ಪರಿಹಾರ ಮೊತ್ತ ನೀಡದ ಹಿನ್ನೆಲೆ ಸೋಮವಾರ ನ್ಯಾಯಾಲಯದ ಆದೇಶದ ಮೇರೆಗೆ ಎರಡು ವಾಯುವ್ಯ ಕರ್ನಾಟಕ ಸಾರಿಗೆ ಬಸ್ಗಳನ್ನು ಜಪ್ತಿ ಮಾಡಲಾಯಿತು. ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಹಾವೇರಿ ಡಿಪೋಗೆ ಸೇರಿದ ಎರಡು ಬಸ್ಗಳನ್ನು ನ್ಯಾಯಾಂಗ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿದರು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೊಡಬೇಕಿದ್ದ ಪರಿಹಾರದ ಬಾಕಿ ಮೊತ್ತ ಉಳಿಸಿಕೊಂಡಿರುವ ಕೆಎಸ್ಆರ್ಟಿಸಿ ಸಂಸ್ಥೆಯ ಚರಾಸ್ತಿ ಜಪ್ತಿಗೆ ದಾವಣಗೆರೆ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ …
Read More »ಬಾಗೇಪಲ್ಲಿ ಬಳಿ ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ ಕಾರು ಪಲ್ಟಿ.. ಸಿನಿಮಾ ಸ್ಟೈಲ್ನಲ್ಲಿ ವೇಗವಾಗಿ ಹೊರಟಿದ್ದವರಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ: ಚಾಲಕನ ನಿಂಯತ್ರಣ ತಪ್ಪಿ ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ ಕಾರು ಪಲ್ಟಿಯಾಗಿ, ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಸಾದಲಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ನೆರೆಯ ರಾಜ್ಯ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು ಭೇಟಿ ಕೊಟ್ಟು ಗಾಯಾಳುಗಳನ್ನು …
Read More »ಒಂದೇ ಕುಟುಂಬದ 15 ಮಂದಿಯಿಂದ ಪರಿಸರಸ್ನೇಹಿ ಗಣಪತಿ ನಿರ್ಮಾಣ: ಗ್ರಾಹಕ ನಿಗದಿಪಡಿಸಿದ ದುಡ್ಡಿಗೆ ಮೂರ್ತಿ ಮಾರಾಟ
ಹಾವೇರಿ: ಇಲ್ಲಿನಗುತ್ತಲ ಪಟ್ಟಣದಲ್ಲೊಂದು ಗಣಪತಿ ತಯಾರಿಸುವ ವಿಶೇಷ ಅನ್ನಿಸುವ ಕುಟುಂಬವಿದೆ. ನೆಗಳೂರುಮಠ ಎಂಬ ಹೆಸರಿನ ಕುಟುಂಬದ ಸುಮಾರು 15 ಮಂದಿ ಗಣಪತಿ ವಿಗ್ರಹ ತಯಾರಿಸುತ್ತಾರೆ. ಮೂರ್ತಿ ಸಿದ್ಧಪಡಿಸುವ ಈ ಕಲಾವಿದರೆಲ್ಲರೂ ಸರ್ಕಾರಿ ನೌಕರಿಯಲ್ಲಿದ್ದಾರೆ. ಗಣೇಶೋತ್ಸವಕ್ಕೆ ಈ ಮನೆಯ ಅಳಿಯಂದಿರು, ಸೊಸೆಯಂದಿರು, ಮಕ್ಕಳು, ಮೊಮ್ಮಕ್ಕಳು ಒಟ್ಟು ಸೇರಿದರೆ ಇವರ ಸಂಖ್ಯೆ 25 ದಾಟುತ್ತದೆ. ಹಬ್ಬ ಸಮೀಪಿಸುತ್ತಿದ್ದಂತೆ ಸರ್ಕಾರಿ ಕೆಲಸಕ್ಕೆ ರಜೆ ಹಾಕುವ ಇವರು ವಿಘ್ನವಿನಾಶಕನ ತಯಾರಿಯಲ್ಲಿ ಸಂಪೂರ್ಣವಾಗಿ ತೊಡುಗುತ್ತಾರೆ. ಯುಗಾದಿಯಂದು ಗಣೇಶ ಮೂರ್ತಿಗಳ …
Read More »
Laxmi News 24×7