Breaking News

ರಾಷ್ಟ್ರೀಯ

ಬಗಲಗುಂಟೆ ವ್ಯಾಪ್ತಿಯಲ್ಲಿ ತಾಯಿ – ಮಗನ ಹತ್ಯೆ ಪ್ರಕರಣ: ಪ್ರಿಯಕರನ ಬಂಧನ

ಬೆಂಗಳೂರು : ಬಗಲಗುಂಟೆ ಠಾಣಾ ವ್ಯಾಪ್ತಿಯ ರವೀಂದ್ರನಾಥ ಗುಡ್ಡೆಯಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿ ಶೇಖರ್ ಎಂಬಾತನನ್ನು ಬಂಧಿಸಲಾಗಿದೆ. ನವನೀತಾ (35) ಹಾಗೂ ಸಾಯಿ ಸೃಜನ್ (8) ನನ್ನು ಹತ್ಯೆ ಮಾಡಿದ್ದ ಆಕೆಯ ಪ್ರಿಯಕರ ಶೇಖರ್​ನನ್ನು ಬಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ನವನೀತಾ ತನ್ನ ಪತಿಯನ್ನು ತೊರೆದು ಮಗನೊಂದಿಗೆ 2 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ವೇಳೆ, ನವನೀತಾಳಿಗೆ ಆರೋಪಿ ಶೇಖರ್ ಪರಿಚಯವಾಗಿತ್ತು. ಬಳಿಕ ಇಬ್ಬರೂ ಪರಸ್ಪರ ಪ್ರೀತಿಸಲಾರಂಭಿಸಿದ್ದರು. ಆದರೆ, …

Read More »

ಬೆಂಗಳೂರು: ಯೂಟರ್ನ್ ವೇಳೆ ಶಾಲಾ ಮಕ್ಕಳಿದ್ದ ವ್ಯಾನ್ ಪಲ್ಟಿ

ಬೆಂಗಳೂರು : ಯೂಟರ್ನ್ ಪಡೆಯುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಶಾಲಾ ಮಕ್ಕಳಿದ್ದ ವ್ಯಾನ್ ಪಲ್ಟಿಯಾದ ಘಟನೆ ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಇಂದು ನಡೆದಿದೆ.   ಬೆಳಗ್ಗೆ ಕಾಮಾಕ್ಯ ಕಡೆಯಿಂದ ಪದ್ಮನಾಭ ನಗರದ ಖಾಸಗಿ ಶಾಲೆಗೆ ತೆರಳುತ್ತಿದ್ದ ವ್ಯಾನ್ ಚಾಲಕ ರಸ್ತೆ ಸಿಗ್ನಲ್ ಫ್ರೀ ಇದ್ದುದರಿಂದ ದಿಢೀರ್ ಯೂಟರ್ನ್ ಪಡೆದಿದ್ದಾರೆ. ಈ ವೇಳೆ ವ್ಯಾನ್ ಚಕ್ರ ರಸ್ತೆ ವಿಭಜಕದ ಮೇಲೆ ಹತ್ತಿ, ಪಲ್ಟಿಯಾಗಿದೆ. ವ್ಯಾನ್​ನಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿದ್ದರು. …

Read More »

14 ದಸರಾ ಗಜಪಡೆಗೆ ವಿಮೆ; ಸೆಪ್ಟೆಂಬರ್ 1ರಿಂದ ಆಕ್ಟೋಬರ್ ಅಂತ್ಯದವರೆಗೆ ವಿಮೆ ಅವಧಿ

ಮೈಸೂರು: ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸುವ 14 ಗಜಪಡೆಗೆ ಹಾಗೂ ಮಾವುತರು, ಕಾವಾಡಿಗರು ಹಾಗೂ ಆನೆ ಜೊತೆ ಇರುವ ಅರಣ್ಯ ಸಿಬ್ಬಂದಿಗೆ ಮುಂಜಾಗೃತಾ ಕ್ರಮವಾಗಿ ವಿಮೆ ಮಾಡಿಸಲಾಗಿದೆ. ಇದು ಸೆಪ್ಟೆಂಬರ್ 1ರಿಂದ ಆಕ್ಟೋಬರ್ ಅಂತ್ಯದವರೆಗೆ ವಿಮೆ ಚಾಲ್ತಿಯಲ್ಲಿರುತ್ತದೆ. ಪ್ರತಿ ವರ್ಷ ಮುಂಜಾಗೃತಾ ಕ್ರಮವಾಗಿ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಗಜಪಡೆಗೆ, ಮಾವುತರಿಗೆ ಹಾಗೂ ಕಾವಾಡಿಗರಿಗೆ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗೆ ವಿಮೆ ಮಾಡಿಸಲಾಗುತ್ತದೆ. ಈಗಾಗಲೇ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿರುವ 9 ಗಜಪಡೆ …

Read More »

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್​ಗೆ ಅನುಕೂಲ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ”ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್​ಗೆ ಅನುಕೂಲವಾಗಲಿದೆ” ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಸದಾಶಿವನಗರ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ”ಬಿಜೆಪಿ ಮತ್ತು ಜೆಡಿಎಸ್ ಏನಾದರೂ ಮಾಡಿಕೊಳ್ಳಲಿ. ಅದು ನಮಗೆ ಸಂಬಂಧಪಟ್ಟ ವಿಷಯ ಅಲ್ಲ. ಆದರೆ, ಅವರು ಮೈತ್ರಿ ಮಾಡಿದರೆ ಕಾಂಗ್ರೆಸ್​ಗೆ ಅನುಕೂಲವಾಗಲಿದೆ. ಇದರಿಂದ ಸೆಕ್ಯುಲರ್ ಎನ್ನುವ ಹೆಸರು ಇಟ್ಟುಕೊಂಡಿರುವ ಜೆಡಿಎಸ್ ಬಣ್ಣವೂ ಬಯಲಾಗಲಿದೆ. ನಾವು ಏಕಾಂಗಿಯಾಗಿ ರಾಜ್ಯದಲ್ಲಿ ಕನಿಷ್ಠ ಅಂದ್ರೂ 20 ಸ್ಥಾನಗಳನ್ನಾದರೂ ಗೆಲ್ಲಲಿದ್ದೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು. …

Read More »

ಲೋಕ’ ಸಮರಕ್ಕೆ ಬಿಜೆಪಿ-ಜೆಡಿಎಸ್ ದೋಸ್ತಿ… ‘ದಳ’ಕ್ಕೆ ಸಿಗಲಿರುವ 4 ಕ್ಷೇತ್ರಗಳು ಯಾವುವು?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಮತ್ತೊಮ್ಮೆ ಚುನಾವಣಾ ಪೂರ್ವ ಮೈತ್ರಿ ಘೋಷಣೆಯಾಗಿದೆ.(BJP JDS alliance). ಹೈಕಮಾಂಡ್ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ನಡೆದಿದ್ದು, ಈ ಮೈತ್ರಿಯನ್ನು ಉಭಯ ಪಕ್ಷಗಳ ನಾಯಕರು ಸ್ವಾಗತಿಸಿದ್ದಾರೆ. 24+4 ಸ್ಥಾನಗಳ ಹಂಚಿಕೆ ನಡೆದಿದ್ದು ರಾಜ್ಯ ಬಿಜೆಪಿ ನಾಯಕರು ಖಚಿತಪಡಿಸಿದ್ದಾರೆ. ಸ್ಥಾನ ಕಳೆದುಕೊಳ್ಳುವ ಭೀತಿಗೆ ಸಿಲುಕಿರುವ ಹಾಲಿ ಬಿಜೆಪಿ ಸಂಸದ ಮುನಿಸ್ವಾಮಿ ಕ್ಷೇತ್ರ ತ್ಯಾಗಕ್ಕೆ ಮುಂದಾಗಿದ್ದಾರೆ. ನಾನು ಪಕ್ಷದ ನಿರ್ಧಾರಕ್ಕೆ ಬದ್ದ …

Read More »

ಗೃಹಲಕ್ಷ್ಮೀ ಯೋಜನೆಯ ಹೊಸ ನೋಂದಣಿ ಸ್ಥಗಿತಗೊಂಡಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆಯ ಹೊಸ ನೋಂದಣಿ ಸ್ಥಗಿತಗೊಂಡಿಲ್ಲ.‌ ಇಲಾಖೆ ವೆಬ್‌ಸೈಟ್ ನಲ್ಲಿ ಮಾಡಿರುವ ಪ್ರಕಟಣೆ ಬಗ್ಗೆ ನನಗೆ ಗೊತ್ತಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿ ಸಲಾಗಿದ್ದು, ಶೀಘ್ರವೇ ನೋಂದಣಿ …

Read More »

ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನ ವಿಶ್ಲೇಷಣೆ ಮಾಡತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದ ಗೃಹ ಸಚಿವ

ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನ ವಿಶ್ಲೇಷಣೆ ಮಾಡತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ನಾನು ಸಮಯ ಸಂದರ್ಭದಲ್ಲಿ ಏನ ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ. ಯಾರ ಏನ ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರ ಹಾಗೇ ಮಾತನಾಡುತ್ತಾರೆ, ಹೀಗೆ ಮಾತನಾಡುತ್ತಾರೆ ಅಂದರೆ ನಾನು ಉತ್ತರ ಕೊಡುವುದಿಲ್ಲ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾನು ಹೇಳಿರೋ ಹೇಳಿಕೆ ಬಗ್ಗೆ ಮಾತನಾಡಿಲ್ಲ‌. ಸನಾತನ …

Read More »

ಚೇಂಬರ್ ಆಫ್ ಕಾಮರ್ಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಿ ಸಿ ಹೊಂಡದಕಟ್ಟಿ

ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ನ ನೂತನ ಕಾರ್ಯನಿರ್ವಾಹಕರ ಪದಗ್ರಹಣ ಸಮಾರಂಭ ಬುಧವಾರ ಸಂಜೆ ಫೌಂಡ್ರಿ ಕ್ಲಸ್ಟರ್ ನಲ್ಲಿ ನಡೆಯಿತು 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಿ ಸಿ ಹೊಂಡದಕಟ್ಟಿ, ಹಿರಿಯ ಉಪಾಧ್ಯಕ್ಷ ಸಂಜೀವ್ ಕಟ್ಟಿಶೆಟ್ಟಿ, ಉಪಾಧ್ಯಕ್ಷ ಸತೀಶ ಕುಲಕರ್ಣಿ, ಕೀತ್ ಮಚಾಡೋ, ಕಾರ್ಯದರ್ಶಿ ರಾಜೇಂದ್ರ ಮುತಗೇಕರ, ಕೋಶಾಧಿಕಾರಿ ರೋಹಿತ್ ಕಪಾಡಿಯಾ ಅವರನ್ನು ನೇಮಿಸಲಾಯಿತು ಹೇಮಚಂದ್ರ ಪೋರವಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಫೌಂಡ್ರಿ ಕ್ಲಸ್ಟರ್ ಅಧ್ಯಕ್ಷ ರಾಮ …

Read More »

ಬೆಳಗಾವಿಯಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ವರನಟ ಡಾ.ರಾಜ್‌ಕುಮಾರ್​ ಅವರ ಮೊಮ್ಮಗಳಾದ ಸರಸ್ವತಿ ಭಾಗಿಯಾಗಿ ಗಮನ ಸೆಳೆದರು.

ಬೆಳಗಾವಿ : ಇಲ್ಲಿನ ವೈಭವ ನಗರದ ರೂಪಾಲಿ ಹೊಸಕೋಟಿ ಎಂಬವರ ಮನೆಯಲ್ಲಿ ಗುರುವಾರ ಶ್ರೀಕೃಷ್ಣಜನ್ಮಾಷ್ಠಮಿ ನಿಮಿತ್ತ ವಿಶೇಷ ಪೂಜೆ ನಡೆಯಿತು. ಈ ಕಾರ್ಯಕ್ರಮಕ್ಕೆ ಬೆಳಗಾವಿಯ ಶಿವಬಸವ ನಗರದಲ್ಲಿ ನೆಲೆಸಿರುವ ಡಾ.ರಾಜ್‌ಕುಮಾರ್ ಮಗಳು‌ ಲಕ್ಷ್ಮಿ ಮತ್ತು ಗೋವಿಂದರಾಜ ದಂಪತಿಯ ಪುತ್ರಿ ಸರಸ್ವತಿ ಆಗಮಿಸಿದ್ದು ವಿಶೇಷವಾಗಿತ್ತು. ಸರಸ್ವತಿ ಹಾಡು ಹಾಡಿ, ಶ್ರೀಕೃಷ್ಣನ ನೆನೆದು, ಎಲ್ಲರೊಂದಿಗೂ ಬೆರೆತು ಖುಷಿಪಟ್ಟರು. ಮತ್ತೊಂದೆಡೆ ಪೂಜೆಗೆ ಆಗಮಿಸಿದ್ದ ಮಹಿಳೆಯರು ಸರಸ್ವತಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಹರ್ಷ ವ್ಯಕ್ತಪಡಿಸಿದರು‌. ಡಾ. ರಾಜ್‌ಕುಮಾರ …

Read More »

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ,

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪವಿಭಾಗದಲ್ಲಿ ಆಡಳಿತ ವ್ಯವಸ್ಥೆ ಯಾವ ರೀತಿ, ಜನರ ಪರಿಸ್ಥಿತಿ ಹೇಗಿದೆ ಎಂಬುವುದಕ್ಕೆ ತಾಜಾ ಉದಾಹರಣೆ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ. ತಾಲೂಕು ಕೇಂದ್ರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡಲು ತಜ್ಞ ವೈದ್ಯರು ಹಿಂದೇಟು ಹಾಕುತ್ತಿದ್ದು ನಗರಪ್ರದೇಶಗಳಿಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರಿಂದ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಎದುರಾಗಿದ್ದು ಬಡರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಈ ಕುರಿತು ಡಿಟೇಲ್ ರಿಪೋರ್ಟ್ ಇಲ್ಲಿದೆ ನೋಡಿ… …

Read More »