Breaking News

ರಾಷ್ಟ್ರೀಯ

ನಾಗರಪಂಚಮಿಗೆ ಖರೀದಿ ಜೋರು

ಹುಬ್ಬಳ್ಳಿ: ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ಆಚರಣೆಗೆ ನಗರದಲ್ಲಿ ಸಿದ್ಧತೆ ಜೋರಾಗಿದ್ದು, ಬೆಲೆ ಏರಿಕೆಯನ್ನು ಲೆಕ್ಕಿಸದೆ ಜನರು ಬುಧವಾರ ಇಲ್ಲಿನ ದುರ್ಗದ್‌ಬೈಲ್‌ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದರು. ಗುರುವಾರ, ಶುಕ್ರವಾರ ಪಂಚಮಿ, ನಾಗರಮೂರ್ತಿಗಳಿಗೆ ಹಾಲೆರೆಯುವ ಹಬ್ಬ ನಡೆಯಲಿದ್ದು, ಇಲ್ಲಿನ ಬಟ್ಟೆ ಅಂಗಡಿ, ಅಲಂಕಾರಿಕ ವಸ್ತುಗಳು, ಹೂ, ಹಣ್ಣಿನ ಅಂಗಡಿಗಳಲ್ಲಿ ವ್ಯಾಪಾರ ಜೋರಾಗಿತ್ತು.   ನಾಗಪಂಚಮಿಯ ವಿಶೇಷತೆಯಾಗಿರುವ ವಿಧವಿಧವಾದ ಉಂಡಿಗಳನ್ನು ತಯಾರಿಸಲು, ಶೇಂಗಾ, ಎಳ್ಳು, ಕೊಬ್ಬರಿ, ಕಡಲೆಹಿಟ್ಟು, ರವೆ, ಬೆಲ್ಲ, …

Read More »

ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು,

ಬೆಂಗಳೂರು: ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ (MUDA Scam) ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯಗೆ (CM Siddaramaiah) ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಾಗಿದೆ. ಬೆಂಗಳೂರಿನ (Bengaluru) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮೈಸೂರಿನ (Mysore) ಸ್ನೇಹಮಯಿ ಕೃಷ್ಣ ಎಂಬುವರು ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಆದೇಶ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿಯಲ್ಲಿ …

Read More »

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ಗೆ ಶಾಕ್‌

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕು ಎಂದು ವಿಪಕ್ಷಗಳು ಹೋರಾಟ ಮಾಡುತ್ತಿರುವ ಬೆನ್ನಲ್ಲೇ ಕೋರ್ಟ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಕ್ ಕೊಟ್ಟಿದೆ. ಆಗಸ್ಟ್ 29ರಂದು ಖುದ್ದು ಹಾಜರಾಗಬೇಕು ಎಂದು ಸಿಎಂ, ಡಿಸಿಎಂಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ ಸಮನ್ಸ್ ಜಾರಿ ಮಾಡಿದೆ. ಇದರಿಂದ ಸಿಎಂ ಮತ್ತು ಡಿಸಿಎಂಗೆ ಸಂಕಷ್ಟ ಎದುರಾಗಿದೆ. ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ಖಂಡಿಸಿ …

Read More »

: ಕಾರ್ಮಿಕನ ಶವವನ್ನು ಕೈಚೀಲದಲ್ಲಿ ಹಾಕಿ ಕೊಟ್ಟ ಜಿಲ್ಲಾಡಳಿತ

ಬೆಳಗಾವಿ: ತಾಲ್ಲೂಕಿನ ನಾವಗೆ ಗ್ರಾಮದ ಕಾರ್ಖಾನೆಯ ಅಗ್ನಿ ಅವಘಡದಲ್ಲಿ ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ (20) ಅವರ ದೇಹದ ಅವಶೇಷಗಳನ್ನು, ಅಧಿಕಾರಿಗಳು ಪ್ಲಾಸ್ಟಿಕ್‌ ಚೀಲದಲ್ಲಿ ಹಾಕಿ ತಂದೆಯ ಕೈಗೆ ಕೊಟ್ಟು ಕಳುಹಿಸಿದರು. ಸುಟ್ಟುಹೋದ ಮಗನ ದೇಹದ ಅಲ್ಪಸ್ವಲ್ಪ ಅಂಗಾಂಗಗಳನ್ನು ತಂದೆ ಸಣ್ಣಗೌಡ ಅವರು, ಸಂತೆಗೆ ಬಳಸುತ್ತಿದ್ದ ಕೈಚೀಲದಲ್ಲಿ ಹಾಕಿಕೊಂಡು ಮನೆ ಕಡೆಗೆ ಹೊರಟರು. ದಾರಿಯುದ್ದಕ್ಕೂ ಇನ್ನಿಲ್ಲದಂತೆ ದುಃಖಿಸುತ್ತಿದ್ದ ಅವರ ಪರಿಸ್ಥಿತಿಗೆ ಮರುಗದವರೇ ಇಲ್ಲ. ಕಾರ್ಖಾನೆಯ ಲಿಫ್ಟ್‌ನಲ್ಲೇ ಸಿಕ್ಕಿ ಸತ್ತುಹೋದ ಯುವಕನ …

Read More »

ಸೌಹಾರ್ದದಿಂದ ಗಣೇಶೋತ್ಸವ ಆಚರಣೆಗೆ ಸಹಕರಿಸಿ: ಜಿಲ್ಲಾಧಿಕಾರಿ

ಬೆಳಗಾವಿ: ‘ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಈ ಬಾರಿ ಶಾಂತಿ, ಸೌಹಾರ್ದದಿಂದ ಗಣೇಶೋತ್ಸವ ಆಚರಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕೋರಿದರು. ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬುಧವಾರ ನಡೆದ ಗಣೇಶೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಗಣೇಶೋತ್ಸವ ಆಚರಣೆ ನೆಪದಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಗಣೇಶನ ಪ್ರತಿಷ್ಠಾಪನೆಗೆ ಅನುಮತಿ ಕೊಡಲು ನಗರದ ಎಂಟು ಠಾಣೆಗಳಲ್ಲಿ ಏಕಗವಾಕ್ಷಿ ಪದ್ಧತಿ …

Read More »

ಪಾರಂಪರಿಕ ತಾಣಗಳ ಅಭಿವೃದ್ಧಿಗೆ ಬದ್ಧ: ಶಾಸಕ ಕಾಶಪ್ಪನವರ

ಅಮೀನಗಡ: ಪಾರಂಪರಿಕ ತಾಣಗಳು ದೇಶದ ಸಮಗ್ರತೆಯನ್ನು ಬಿಂಬಿಸುವ ಪ್ರದೇಶಗಳಾಗಿದ್ದು, ಅವುಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಅವುಗಳ ಪುನಶ್ಚೇತನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಸಮೀಪದ ಸೂಳೇಭಾವಿ ಗ್ರಾಮದಲ್ಲಿ ಮೈಸೂರು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಅಂದಾಜು ₹112 ಲಕ್ಷ ವೆಚ್ಚದಲ್ಲಿ ವೀರಭದ್ರೇಶ್ವರ ದೇವಾಲಯದ ಸಂರಕ್ಷಣಾ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಇಲ್ಲಿನ ಶೂಲೇಶ್ವರ ದೇವಸ್ಥಾನ, ವೀರಭದ್ರೇಶ್ವರ ದೇವಸ್ಥಾನಗಳು ಐತಿಹಾಸಿಕ ಪಾರಂಪರಿಕ ದೇವಾಲಯಗಳ ಪುನಶ್ಚೇತನಕ್ಕೆ …

Read More »

ಕುಡಿದು ವಾಹನ ಚಾಲನೆ: 3 ದಿನಗಳಲ್ಲಿ ₹9.60 ಲಕ್ಷ ದಂಡ ಸಂಗ್ರಹ!

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರದಲ್ಲಿ ಕುಡಿದು ವಾಹನ ಚಲಾಯಿಸಿದವರ ವಿರುದ್ಧ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಕಳೆದ ವಾರಾಂತ್ಯದ ಮೂರು ದಿನಗಳಲ್ಲಿ 96 ಪ್ರಕರಣಗಳನ್ನು ದಾಖಲಿಸಿಕೊಂಡು ₹9.60 ಲಕ್ಷ ದಂಡ ಸಂಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮೂರು ಮತ್ತು ಧಾರವಾಡದಲ್ಲಿ ಒಂದು ಸಂಚಾರ ಪೊಲೀಸ್‌ ಠಾಣೆಯಿದ್ದು, ಕಳೆದ ಶುಕ್ರವಾರ, ಶನಿವಾರ ಮತ್ತು ಭಾನುವಾರ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಕುಡಿದು ವಾಹನ ಚಲಾಯಿಸುವವರ ಪತ್ತೆಗೆ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡಿದ್ದರು. ಉತ್ತರ ಸಂಚಾರ …

Read More »

ಈದ್ಗಾ ಮೈದಾನ ಕಾಂಪೌಂಡ್ ತೆರವು ಪ್ರಕ್ರಿಯೆಗೆ ವಿರೋಧ

ಹುಬ್ಬಳ್ಳಿ: ‘ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆ ಯೋಜನೆಯ ಮೂಲ ನೀಲನಕ್ಷೆಯಲ್ಲಿ ಈದ್ಗಾ ಕಾಂಪೌಂಡ್‌ ತೆರವು ಇರಲಿಲ್ಲ. ಈಗ ನಕ್ಷೆಯನ್ನೇ ಬದಲಿಸಿ, ಕಾಂಪೌಂಡ್‌ ತೆರವಿಗೆ ನಿರ್ಧರಿಸಿರಬಹುದು’ ಎಂದು ಮುಸ್ಲಿಂ ಸಮುದಾಯದ ಮುಖಂಡ ಅಲ್ತಾಫ್‌ ಹಳ್ಳೂರ ಹೇಳಿದ್ದಾರೆ. ‘ಮೇಲ್ಸೇತುವೆ ಕಾಮಗಾರಿಗಾಗಿ ರಾಣಿ ಚನ್ನಮ್ಮ ವೃತ್ತದ ಬಳಿಯಿರುವ ಈದ್ಗಾ ಮೈದಾನದ ಕಾಂಪೌಂಡ್‌ ಭಾಗಶಃ ತೆರವು ಆಗಲಿದೆ ಎಂಬ ಮಾಹಿತಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಆದರೆ, ಮೂಲ ನೀಲನಕ್ಷೆಯಲ್ಲಿ ಇರದ ತೆರವು ಅಂಶ ಈಗ ಏಕಾಏಕಿ ಹೇಗೆ …

Read More »

35 ಎಮ್ಮೆ ರಕ್ಷಣೆ; ಪ್ರಕರಣ ದಾಖಲು

ಹುಬ್ಬಳ್ಳಿ: ಬೆಂಗಳೂರಿನ ದೇವನಹಳ್ಳಿ ಪಾಸಿಂಗ್‌ ನಂಬರ್‌ ಇರುವ ಕಂಟೇನರ್‌ ಲಾರಿಯಲ್ಲಿ ಉಸಿರಾಡಲು ಸಾಧ್ಯವಾಗದಂತೆ ಎಮ್ಮಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಮೂವರ ವಿರುದ್ಧ ಬೆಂಡಿಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.   ಲಾರಿ ಚಾಲಕ, ಕ್ಲೀನರ್‌ ಮತ್ತು ಲಾರಿ ಮಾಲೀಕರ ವಿರುದ್ಧ ಗೋಕುಲ ರಸ್ತೆಯ ಆಶೀರ್ವಾದ ಹಂಜಗಿ ದೂರು ನೀಡಿದ್ದಾರೆ. ಗದಗ ಬೈಪಾಸ್‌ ರಸ್ತೆಯಲ್ಲಿ ಭಾನುವಾರ ಸಂಜೆ ಲಾರಿಯಲ್ಲಿ 35 ಎಮ್ಮೆಗಳನ್ನು ಅಮಾನುಷವಾಗಿ ಸಾಗಿಸುತ್ತಿದ್ದರು. …

Read More »

: ಹಾಳಾದ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲ. ರಸ್ತೆಯಲ್ಲಿಯೇ ಹರಿಯುವ ಗಟಾರದ ಕೊಳಚೆ ನೀರು,

ಹುಬ್ಬಳ್ಳಿ: ಹಾಳಾದ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲ. ರಸ್ತೆಯಲ್ಲಿಯೇ ಹರಿಯುವ ಗಟಾರದ ಕೊಳಚೆ ನೀರು, ಜೆಜೆಎಂ ಯೋಜನೆಯಲ್ಲಿ 24X7 ನೀರಿನ ಪೈಪ್‌ ಅಳವಡಿಸಿದ್ದರೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಿಲ್ಲ. – ಇಂತಹ ಸಮಸ್ಯೆಗಳ ನಡುವೆಯೇ ಪಾಲಿಕೆ ವ್ಯಾಪ್ತಿಯ ಉಣಕಲ್‌ ಗ್ರಾಮದ ಜನರು ಬದುಕು ಕಟ್ಟಿಕೊಳ್ಳುತ್ತಿದ್ಧಾರೆ. ಒಂದೆಡೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹುಬ್ಬಳ್ಳಿ ನಗರ, ಇದಕ್ಕೆ ಹೊಂದಿಕೊಂಡೇ ಕೇವಲ 100 ಮೀಟರ್‌ ದೂರದಲ್ಲಿ ಉಣಕಲ್‌ ಗ್ರಾಮವಿದೆ. ಉಣಕಲ್‌ ಗ್ರಾಮವು 20 ಸಾವಿರಕ್ಕೂ …

Read More »