Breaking News

ರಾಷ್ಟ್ರೀಯ

ನಿವೃತ್ತ ಯೋಧನನ್ನು ಹತ್ಯೆಗೈದ ಬಾಮೈದ

ಚಿಕ್ಕೋಡಿ (ಬೆಳಗಾವಿ): ಚಾಕುವಿನಿಂದ ಕತ್ತು ಸೀಳಿ ನಿವೃತ್ತ ಯೋಧನನ್ನು ಬಾಮೈದ ಹತ್ಯೆಗೈದಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಶನಿವಾರ ನಡೆದಿದೆ. ಮೃತರನ್ನು ಚಿಕ್ಕೋಡಿಯ ವಿದ್ಯಾನಗರ ನಿವಾಸಿ ನಿವೃತ್ತ ಯೋಧ ಈರಗೌಡ ಟೋಪಗೋಳ(45) ಎಂದು ಗುರುತಿಸಲಾಗಿದೆ. ಮೃತ ಈರಗೌಡ ಪತ್ನಿಯ ಸಹೋದರ ಸಂಜಯ್ ಭಾಕರೆ ಕೊಲೆಗೈದ ಆರೋಪಿ ಎಂದು ತಿಳಿದುಬಂದಿದೆ. ಮೂಲತಃ ಜೈನಾಪುರ ಗ್ರಾಮದವರಾಗಿದ್ದ ಈರಗೌಡ ಟೋಪಗೋಳ ಸೇನೆಯಿಂದ ನಿವೃತ್ತಿ ಹೊಂದಿದ ಬಳಿಕ ಸ್ಟೋನ್‌ ಕ್ರಷರ್ ಘಟಕ ನಡೆಸುತ್ತಿದ್ದರು. ಶನಿವಾರ ಸಂಜೆ …

Read More »

ಆದಿತ್ಯ – ಎಲ್1 ಉಡಾವಣೆ ಯಶಸ್ವಿ: ಗಗನನೌಕೆಗೆ ಶುಭ ಹಾರೈಸೋಣ ಎಂದ ಇಸ್ರೋ ಅಧ್ಯಕ್ಷ.. ರಾಷ್ಟ್ರಪತಿ, ಪ್ರಧಾನಿ ಅಭಿನಂದನೆ

ಶ್ರೀಹರಿಕೋಟಾ (ಆಂಧ್ರಪ್ರದೇಶ): ಸೂರ್ಯ ಅಧ್ಯಯನಕ್ಕಾಗಿ ಭಾರತದ ಇಸ್ರೋ ಸಂಸ್ಥೆಯು ಇಂದು ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಉಡಾವಣೆ ಮಾಡಿದೆ. ನಿರೀಕ್ಷೆಯಂತೆ ಪಿಎಸ್‌ಎಲ್‌ವಿ ರಾಕೆಟ್‌ನಿಂದ ಆದಿತ್ಯ-ಎಲ್1 ಗಗನನೌಕೆ ಯಶಸ್ವಿಯಾಗಿ ಬೇರ್ಪಟ್ಟಿದೆ. ಇಂದಿನಿಂದ 125 ದಿನಗಳ ಸುದೀರ್ಘ ಪ್ರಯಣ ನಡೆಸಲಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ತಿಳಿಸಿದರು. ಇದೇ ವೇಳೆ, ಆದಿತ್ಯ-ಎಲ್1 ಯಶಸ್ವಿ ಉಡಾವಣೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ರಾಷ್ಟ್ರಪತಿ ಹಾಗೂ ಪ್ರಧಾನಿ ಅಭಿನಂದನೆಗಳನ್ನು ತಿಳಿಸಿದ್ದಾರೆ.     ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ …

Read More »

ಶಾಸಕ ರಾಯರೆಡ್ಡಿಯಿಂದ ಸಿಎಂಗೆ ಮತ್ತೊಂದು ಪತ್ರ

ಬೆಂಗಳೂರು: ಕಾಂಗ್ರೆಸ್​ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಸಿಎಂ ಸಿದ್ಧರಾಮಯ್ಯಗೆ ಮತ್ತೆ ಪತ್ರ ಬರೆದಿದ್ದು, ಜೆಸ್ಕಾಂ ಅಧಿಕಾರಿಗಳ ಜೊತೆ ಸಭೆ ನಡೆಸುವಂತೆ ಮನವಿ ಮಾಡಿದ್ದಾರೆ. ಶಾಸಕರ ಅಹವಾಲು ಕೇಳುವಂತೆ ಕೋರಿ ಕಳೆದ ಬಾರಿ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಆಗ್ರಹಿಸಿ ಪತ್ರ ಬರೆದಿದ್ದ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಇದೀಗ ಜೆಸ್ಕಾಂ ಅಧಿಕಾರಿಗಳ ಸಭೆ ಕರೆಯಲು ಒತ್ತಾಯಿಸಿ ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದಾರೆ.‌ ಜೆಸ್ಕಾಂ ಅಧಿಕಾರಿಗಳು ಹಾಗೂ ಇಂಧನ ಸಚಿವರ ಜೊತೆ …

Read More »

ತಲೆ ಮೇಲೆ ಕಲ್ಲು ಹೊತ್ತುಕೊಂಡು ಮಂಡ್ಯದಲ್ಲಿ ರೈತರ ಪ್ರತಿಭನೆ.. ಕಾವೇರಿ ಕಿಚ್ಚಿಗೆ ದಳಪತಿಗಳು ಎಂಟ್ರಿ, ಸರ್ಕಾರಕ್ಕೆ ಎಚ್ಚರಿಕೆ

ಮಂಡ್ಯ: ಕೆ ಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರ ಮಂಡ್ಯದಲ್ಲಿ ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಹಲವು ದಿನಗಳಿಂದ ರೈತರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಇವತ್ತು ರೈತರಿಗೆ ಬೆಂಬಲ ವ್ಯಕ್ತಪಡಿಸಿ ಜೆಡಿಎಸ್​ ನಾಯಕರು ಕಾವೇರಿ ಕಿಚ್ಚಿನಲ್ಲಿ ಪಾಲ್ಗೊಂಡಿದ್ದರು. ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದಿರೋ ರಾಜ್ಯ ಸರ್ಕಾರ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ …

Read More »

ಸ್ನೇಹಿತನನ್ನೇ ಕೊಂದು, ಬೇರೊಬ್ಬರ ಮೇಲೆ ಹಾಕಲು ಯತ್ನಿಸಿ ಸಿಕ್ಕಿಬಿದ್ದ ಖದೀಮರು

ಮೈಸೂರು : ಸ್ನೇಹಿತನ ಕೊಲೆ ಮಾಡಿ, ಕೃತ್ಯವನ್ನು ಮತ್ತೊಬ್ಬರ ಹೆಸರಿಗೆ ಕಟ್ಟಲು ಯತ್ನಿಸಿದ ಇಬ್ಬರು ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದ ಸಿನಿಮೀಯ ಶೈಲಿಯ ಪ್ರಕರಣ ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಒಂದೇ ದಿನದಲ್ಲಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಹಿನ್ನೆಲೆ : ಅಂತರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯ ಬೀಚನಹಳ್ಳಿಯ ಯುವಕ ಭಾನುಪ್ರಕಾಶ್ ಅಲಿಯಾಸ್ ಸಿದ್ದು ಎಂಬಾತ ಮಹಿಳೆಯೊಬ್ಬರಿಗೆ …

Read More »

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ: ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಹೋಗುವ ದಾರಿಯಲ್ಲಿ ಜಿಲ್ಲೆಯ ತೋರಣಗಲ್‌ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ 113 ಅಡಿ ನೀರು ಬಂದಿದೆ. ಹಾರಂಗಿ ಕಬಿನಿಯಲ್ಲಿ ನೀರು ಬರಬೇಕಿತ್ತು. ಆದರೆ ಮಳೆ ಕೊರತೆಯಿಂದ ನೀರಿನ ಕೊರತೆ ಕಾಡಿದೆ. ಮೇಕೆದಾಟು ವಿಚಾರವಾಗಿ …

Read More »

ಅಕ್ರಮ ಕಂಟ್ರಿ ಪಿಸ್ತೂಲ್ ಹೊಂದಿದ್ದವನ ಬಂಧನ

ವಿಜಯಪುರ  ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ಇಟ್ಟುಕೊಂಡು ಹೋಗುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದು ಕಂಟ್ರಿ ಪಿಸ್ತೂಲ್,ಜೀವಂತ ಗುಂಡು ಜಪ್ತಿಗೈದಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಿಕ್ಕಬೇವನೂರ ಬಳಿ ದಾಳಿಗೈದಿದ್ದಾರೆ. ಚಡಚಣದ ದೇವರ ನಿಂಬರಗಿ ಗ್ರಾಮದ ಪ್ರಶಾಂತ ನಾವಿ ಬಂಧಿತ ಆರೋಪಿ. ಇನ್ನು ಇಂಡಿಯಿಂದ ಚಿಕ್ಕಬೇವನೂರ ಕಡೆಗೆ ಹೋಗುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಪಿಎಸ್ಐ ಸೋಮೇಶ ಗೆಜ್ಜಿ ನೇತೃತ್ವದಲ್ಲಿ ದಾಳಿಗೈದು ಒಂದು ಕಂಟ್ರಿ ಪಿಸ್ತೂಲ್, ಏಳು ಜೀವಂತ ಗುಂಡು, …

Read More »

ನೂರಾರು ಜನರು ಹೆಸ್ಕಾಂ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ

ನೂರಾರು ಜನರು ಹೆಸ್ಕಾಂ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವುದರ‌ ಮೂಲಕ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ರೈತರ ಪಂಪಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯಲ್ಲಿ ಅನಿಯಮಿತ ಲೊಡ ಶೆಡ್ಡಿಂಗ ಮಾಡುತ್ತಿರುವುದರಿಂದ ರೈತರ ಬೆಳೆಗಳಾದ ಶೇಂಗಾ, ಗೊವಿನಜೋಳ, ಸೋಯಾಬಿನ, ಉದ್ದು, ಹೆಸರು ಹಾಗೂ ಕಬ್ಬಿನ ಬೆಳೆಗಳು ನೀರಿಲ್ಲದೇ ಸಂಪೂರ್ಣ ಬತ್ತಿ ಹೋಗುತ್ತಿವೆ. ನಾವು ಲಕ್ಷಾಂತರ ರೂಪಾಯಿ ಬೆಳೆಗಳಿಗೆ ಖರ್ಚು ಮಾಡಿ ಕಂಗಾಲಾಗಿ ಕುಳಿತಿದ್ದು ವಿದ್ಯುತ್‌ …

Read More »

ರಾಜ್ಯ ಸರ್ಕಾರದಿಂದ ಸಚಿವರಿಗೆ ಹೊಸ ಕಾರು ಭಾಗ್ಯ!

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಎಲ್ಲ ಸಚಿವರಿಗೆ ಹೊಸ ಇನ್ನೊವಾ ಕ್ರಸ್ಟಾ ಕಾರು ಖರೀದಿಸಲು ಮುಂದಾಗಿದೆ. 33 ಹೊಸ ಇನ್ನೊವಾ ಕ್ರಸ್ಟಾ ಹೈ ಎಂಡ್ ಕಾರನ್ನು ಖರೀದಿಸಲು ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದು, ಇದಕ್ಕಾಗಿ ಸುಮಾರು 9.9 ಕೋಟಿ ರೂ.‌ ಅನುದಾನ ನೀಡಲಾಗಿದೆ‌. ಟೆಂಡರ್ ಕರೆಯದೇ ನೇರವಾಗಿ 33 ಸಚಿವರಿಗೆ ಹೊಸ ಕಾರು ಖರೀದಿ ಮಾಡಲು ಕೆಟಿಪಿಪಿ ಕಾಯ್ದೆಯಡಿ 4ಜಿ ವಿನಾಯಿತಿ ನೀಡಲಾಗಿದೆ.‌ ಒಂದು ಇನ್ನೊವಾ ಹೈಬ್ರಿಡ್ ಎಸ್ ಯುವಿ …

Read More »

ಅಕ್ರಮವಾಗಿ ಡ್ರಗ್ಸ್​ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ವಾಟ್ಸ್‌ಆಯಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಇಬ್ಬರು ಹುಳಿಮಾವು ಪೊಲೀಸರ ಬಲೆಗೆ ಬಿದ್ದಿದ್ದು, 82.57 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಎಮಾನ್ಯೂವೆಲ್ ಅಫಾನ್ (43), ಉಚ್ಚೆನ್ನ ಲಿವನ್ಸ್ (36) ಬಂಧಿತರು. 82.57 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳಾದ 1,281 ಎಕ್ಟೆಸ್ಸಿ ಪಿಲ್ಸ್, 463 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಜಪ್ತಿ ಮಾಡಲಾಗಿದೆ. ಆರೋಪಿಗಳು ನೈಜೀರಿಯಾದಿಂದ ಕಡಿಮೆ ಬೆಲೆಗೆ ಎಂಡಿಎಂಎ ಹಾಗೂ ಎಕ್ಟಸೀ …

Read More »