ಬೆಂಗಳೂರು: ರಾಜ್ಯ ಸರ್ಕಾರದ ‘ಬಹುನಿರೀಕ್ಷಿತ’ ಗೃಹ ಲಕ್ಷ್ಮೀ ಯೋಜನೆಗೆ ಆಗಸ್ಟ್ 27ರಂದು ಚಾಲನೆ ನೀಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ …
Read More »ಬೆಂಗಳೂರಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ: ಕ್ಯಾಬ್ ಚಾಲಕ ಪೊಲೀಸ್ ವಶಕ್ಕೆ
ಬೆಂಗಳೂರು: ಮಹಿಳೆಗೆ ನಿಂದಿಸಿ ಹಲ್ಲೆ ಮಾಡಿದ ಆರೋಪದ ಮೇಲೆ ಕ್ಯಾಬ್ ಚಾಲಕನನ್ನು ಬೆಳ್ಳಂದೂರು ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪತ್ನಿಯ ಮೇಲೆ ಹಲ್ಲೆ ಮಾಡಿರುವುದಾಗಿ ಮಹಿಳೆಯ ಪತಿ ನೀಡಿದ ದೂರಿನ ಆಧಾರದ ಮೇಲೆ ಕ್ಯಾಬ್ ಚಾಲಕ ಬಸವರಾಜ್ ಎಂಬಾತನನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೆಳ್ಳಂದೂರಿನ ಬೋಗನಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ಮಹಿಳೆಯ ಕುಟುಂಬ ವಾಸವಾಗಿದೆ. ಮಗನ ಚಿಕಿತ್ಸೆ ಸಲುವಾಗಿ ಬುಧವಾರ ಬೋಗನಹಳ್ಳಿಯಿಂದ ಮಣಿಪಾಲ್ ಆಸ್ಪತ್ರೆಗೆ ತೆರಳಲು ಮಹಿಳೆಯು ಕ್ಯಾಬ್ ಬುಕ್ …
Read More »ಮನೆ ಬಾಡಿಗೆ ಹಣ ಕೇಳಿದ್ದಕ್ಕೆ ಮಹಿಳೆಗೆ ಚಾಕುವಿನಿಂದ ಇರಿದ ಬಾಡಿಗೆದಾರ..
ಬೆಂಗಳೂರು: ಬಾಡಿಗೆ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮುನೇಶ್ವರ ನಗರದ ನಿವಾಸಿ ಶ್ರೀದೇವಿ ತೀವ್ರ ಹಲ್ಲೆಗೊಳಗಾಗಿದ್ದು, ಈಕೆ ನೀಡಿದ ದೂರಿನ ಮೇರೆಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಜೀರ್, ಈತನ ಪುತ್ರ ಸದ್ದಾಂ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಮುನೇಶ್ವರ ನಗರದಲ್ಲಿ ಕಳೆದ 16 ವರ್ಷಗಳಿಂದ ಶ್ರೀದೇವಿ ವಾಸವಾಗಿದ್ದಳು. ಈಕೆ ಉಳಿದುಕೊಂಡಿದ್ದ ಕಟ್ಟಡದಲ್ಲಿ ನಜೀರ್ ವಾಸವಾಗಿದ್ದ. …
Read More »ಎಲ್ಲ ಗ್ರಾಮಗಳಿಗೆ ಸ್ಮಶಾನ ಭೂಮಿ ಮತ್ತು ಒತ್ತುವರಿಯಾದ ಸರ್ಕಾರ ಭೂಮಿಯನ್ನು ತೆರವುಗೊಳಿಸಿರುವ ಬಗ್ಗೆ ವಿವರಣೆ ನೀಡಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಬೆಂಗಳೂರು : ರಾಜ್ಯದಲ್ಲಿ ಜನವಸತಿ ಇರುವ ಎಲ್ಲ ಗ್ರಾಮಗಳಿಗೆ ಗೌರವಯುತ ಮತ್ತು ಸಾಂಪ್ರದಾಯಿಕವಾಗಿ ಶವ ಸಂಸ್ಕಾರ ಮಾಡಲು ಸ್ಮಶಾನ ಭೂಮಿ ಒದಗಿಸಲು ಹಾಗೂ ಒತ್ತುವರಿಯಾದ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಲು ಕೈಗೊಂಡಿರುವ ಕ್ರಮಗಳ ವಿರುದ್ಧ ಅರ್ಜಿದಾರರು ಎತ್ತಿರುವ ಆಕ್ಷೇಪಗಳಿಗೆ ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಸ್ಮಶಾನವಿಲ್ಲದ ಗ್ರಾಮ ಮತ್ತು ಪಟ್ಟಣಗಳಿಗೆ ಅಗತ್ಯ ಜಮೀನು ಒದಗಿಸಲು ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು …
Read More »ರಾಜ್ಯದಲ್ಲಿ ನಮ್ಮ ಕ್ಲಿನಿಕ್ಗಳನ್ನು ಇನ್ನಷ್ಟು ಜನಸ್ನೇಹಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ
ಬೆಂಗಳೂರು: ಜನಸಾಮಾನ್ಯರಿಗೆ ಉಚಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಪ್ರಾರಂಭಿಸಲಾಗಿರುವ ನಮ್ಮ ಕ್ಲಿನಿಕ್ಗಳಿಗೆ ಆರೋಗ್ಯ ಸಚಿವರು ಜನಸ್ನೇಹಿ ಸ್ಪರ್ಶ ನೀಡಿದ್ದು, ಕ್ಲಿನಿಕ್ಗಳ ಸಮಯ ಬದಲಾವಣೆ ಮಾಡಿ ಸಂಜೆ ವೇಳೆಯೂ ಚಿಕಿತ್ಸೆ ಲಭಿಸುವಂತೆ ಮಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇರುವ ಕ್ಲಿನಿಕ್ಗಳ ಪೈಕಿ ಶೇಕಡಾ 25ರಷ್ಟು ನಮ್ಮ ಕ್ಲಿನಿಕ್ಗಳ ಸಮಯ ಬದಲಾವಣೆ ಮಾಡಲು ಆರೋಗ್ಯ ಸಚಿವರು ಆದೇಶಿಸಿದ್ದಾರೆ. ಸಂಜೆ 4.30ಕ್ಕೆ ಬಾಗಿಲು ಮುಚ್ಚುತ್ತಿದ್ದ ನಮ್ಮ ಕ್ಲಿನಿಕ್ಗಳು ಇನ್ನು ಮುಂದೆ ರಾತ್ರಿ 8 ಗಂಟೆಯ ತನಕ …
Read More »ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ವಾರಾಹಿ ಯಾತ್ರೆಯ ಮೂರನೇ ಹಂತ ಇಂದಿನಿಂದ ವಿಶಾಖಪಟ್ಟಣದಲ್ಲಿ ಆರಂಭವಾಗಲಿದೆ.
ವಿಶಾಖಪಟ್ಟಣಂ, ಆಂಧ್ರಪ್ರದೇಶ: ನಟ ರಾಜಕಾರಣಿ ಪವನ್ ಕಲ್ಯಾಣ್ ಅವರಿಂದ ನಡೆಯುತ್ತಿರುವ ವಾರಾಹಿ ಯಾತ್ರೆ ಮುಂದುವರಿಯಲಿದೆ.ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ಮೂರನೇ ಹಂತದ ವಾರಾಹಿ ಯಾತ್ರೆಗೆ ಇಂದಿನಿಂದ ಚಾಲನೆ ದೊರೆಯಲಿದೆ. ವಿಶಾಖಪಟ್ಟಣದಲ್ಲಿ ಆರಂಭವಾಗಲಿರುವ ಈ ಯಾತ್ರೆ ಇದೇ ತಿಂಗಳ 19ರವರೆಗೆ ಮುಂದುವರಿಯಲಿದೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನದಂದು ತಮ್ಮ ಈ ವಾರಾಹಿ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಇಂದು ಮಧ್ಯಾಹ್ನ ಪವನ್ ಕಲ್ಯಾಣ್ ನಗರವನ್ನು ತಲುಪಲಿದ್ದು, …
Read More »ಚುನಾವಣೆ ಗೆಲ್ಲಲು ಕೈ ಮಹಾಪ್ಲಾನ್.. ವಿದ್ಯಾರ್ಥಿನಿಗೆ ಸ್ಮಾರ್ಟ್ ಫೋನ್ ವಿತರಿಸಿದ ರಾಹುಲ್
ಜೈಪುರ(ರಾಜಸ್ಥಾನ): ಮತ್ತೆ ಅಧಿಕಾರಕ್ಕೆ ಮರಳಲು ಪ್ಲಾನ್ ಹಾಕಿರುವ ಸಿಎಂ ಅಶೋಕ್ ಗೆಹ್ಲೋಟ್ ಅದಕ್ಕಾಗಿ ಭರ್ಜರಿ ಕಾರ್ಯತಂತ್ರವನ್ನು ರೂಪಿಸುತ್ತಿದ್ದಾರೆ. ಇದಕ್ಕಾಗಿ ಅವರು ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಜೈಪುರದ ಬಿರ್ಲಾ ಆಡಿಟೋರಿಯಂನಲ್ಲಿ ಇಂದು ಸ್ಮಾರ್ಟ್ಫೋನ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಯೋಜನೆಗೆ ಚಾಲನೆ ಸಿಗುವ ಮುನ್ನವೇ ಕಾಂಗ್ರೆಸ್ ನೇತಾರ, ರಾಹುಲ್ ಗಾಂಧಿ ನಿನ್ನೆ ಮಂಗರ್ನಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಸ್ಮಾರ್ಟ್ಫೋನ್ ಹಸ್ತಾಂತರಿಸುವ ಮೂಲಕ ಯೋಜನೆಗೆ ಚಾಲನೆ ಕೊಟ್ಟಿದ್ದಾರೆ. ಮೊದಲ ಸುತ್ತಿನಲ್ಲಿ ಚಿರಂಜೀವಿ ಕುಟುಂಬದ ಮಹಿಳಾ ಮುಖ್ಯಸ್ಥರು …
Read More »ಕ್ವಿಟ್ ಇಂಡಿಯಾ ದಿನಾಚರಣೆ.. ರ್ಯಾಲಿ ನಡೆಸದಂತೆ ಮುಂಬೈನಲ್ಲಿ ಗಾಂಧೀಜಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ, ಬಿಡುಗಡೆ
ಮುಂಬೈ (ಮಹಾರಾಷ್ಟ್ರ) : ಕ್ವಿಟ್ ಇಂಡಿಯಾ ಚಳವಳಿಯ 81ನೇ ವಾರ್ಷಿಕೋತ್ಸವದ ಅಂಗವಾಗಿ ಇಲ್ಲಿನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿ ನಡೆಸದಂತೆ ನನ್ನನ್ನು ಪೊಲೀಸರು ತಡೆದಿದ್ದಾರೆ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಆರೋಪಿಸಿದ್ದಾರೆ. ಇಲ್ಲಿನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ತುಷಾರ್ ಗಾಂಧಿ ಅವರು ಇಂದು ಬೆಳಿಗ್ಗೆ ಸುಬುರ್ಬಾನ್ ಸಾಂತಾ ಕ್ರೂಝ್ನಲ್ಲಿರುವ ಮನೆಯಿಂದ ಹೊರಟಿದ್ದರು. ಈ ವೇಳೆ ಮನೆಗೆ ಆಗಮಿಸಿದ …
Read More »ಪ್ರೇಮ ವಿವಾಹಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ ತಂದೆಯ ಹತ್ಯೆಗೆ ಸಂಚು ರೂಪಿಸಿದ ಮಗಳು
ಸೊಲ್ಲಾಪುರ (ಮಹಾರಾಷ್ಟ್ರ): ಪ್ರೇಮ ವಿವಾಹಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ ಮಗಳು ತಂದೆಯ ಹತ್ಯೆಗೆ ಸಂಚು ರೂಪಿಸಿದ್ದಾಳೆ. ಕೊಲೆ ಮಾಡಲು ನಾಲ್ವರಿಗೆ 60 ಸಾವಿರ ರೂ. ಸುಪಾರಿ (ತಲಾ 15 ಸಾವಿರ) ನೀಡಿದ್ದಾಳೆ. ಸೊಲ್ಲಾಪುರದ ಮಾಧಾ ಪೊಲೀಸರು ಕೂಲಂಕಷವಾಗಿ ವಿಚಾರಣೆ ನಡೆಸಿದ ಬಳಿಕ ಯುವತಿ, ಪ್ರಿಯಕರ ಹಾಗೂ ತಂದೆಯ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ಬಂಧಿಸಿದ್ದಾರೆ. ತಾಲೂಕಿನ ವಡಚಿ ವಾಡಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳು ಯವತಿಯ ತಂದೆ ಮಾದ ತಾಲೂಕಿನ ನಿವಾಸಿ …
Read More »ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಬೈಕ್ ಸವಾರರಿಬ್ಬರ ದುರ್ಮರಣ
ಕಲಬುರಗಿ: ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿತ್ತಾಪುರ ತಾಲೂಕಿನ ಸಾತನೂರ ಬಳಿ ನಡೆದಿದೆ. ಮೃತ ಬೈಕ್ ಸವಾರರು ದಿಗ್ಗಾಂವ ಗ್ರಾಮದ ಮರೆಪ್ಪ (54) ಹಾಗೂ ಭಾಗಣ್ಣಾ (35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರ ರಕ್ತಸ್ರಾವದಿಂದ ಇಬ್ಬರು ದುರ್ಮರಣ ಹೊಂದಿದ್ದಾರೆ. ಸ್ಥಳಕ್ಕೆ ಸಿಪಿಐ ಪ್ರಕಾಶ್ ಯಾತನೂರ, ಚಿತ್ತಾಪುರ ಪಿಎಸ್ಐ ಶ್ರೀಶೈಲ ಅಂಬಾಟಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಶಿವಯ್ಯಾ, ಮುಕ್ತುಂ …
Read More »
Laxmi News 24×7