Breaking News

ರಾಷ್ಟ್ರೀಯ

ಕಡೂರು ತಾಲೂಕಿನ ಗರ್ಜೆ ಗ್ರಾಮ ಪಂಚಾಯತ್​ನಲ್ಲಿ ಮಗಳು ಅಧ್ಯಕ್ಷರಾಗಿ ಆಯ್ಕೆಯಾದರೆ, ತಾಯಿ ಉಪಾಧ್ಯಕ್ಷರಾಗಿ ಆಯ್ಕೆ

ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಗರ್ಜೆ ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಗೆದ್ದು ಅಮ್ಮ, ಮಗಳು ಇಬ್ಬರು ಅಧ್ಯಕ್ಷ ಹಾಗು ಉಪಾಧ್ಯಕ್ಷ ಸ್ಥಾನ ಅಲಂಕರಿಸಿ ಗಮನ ಸೆಳೆದಿದ್ದಾರೆ. ಅಧ್ಯಕ್ಷೆಯಾಗಿ ಮಗಳು ಸ್ನೇಹ ಆಯ್ಕೆಯಾದರೆ, ತಾಯಿ ನೇತ್ರಾವತಿ ಉಪಾಧ್ಯಕ್ಷೆಯಾದರು. ಗರ್ಜೆ ಹಾಗೂ ಜಿ.ಮಾದಾಪುರ ಗ್ರಾಮಗಳನ್ನು ಸೇರಿಸಿ ಒಂದು ಪಂಚಾಯತ್​ ಮಾಡಲಾಗಿದೆ. ಎರಡು ಗ್ರಾಮಗಳಿಂದ ಒಟ್ಟು 7 ಜನ ಗ್ರಾ.ಪಂ ಸದಸ್ಯರಿದ್ದಾರೆ. ಕಳೆದ ಅವಧಿಗೆ ಬೇರೆಯವರು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿದ್ದರು. ಈ ಬಾರಿ ಅಧ್ಯಕ್ಷ …

Read More »

ಹಾಸನದ ಹೊರವಲಯದ ಬಳಿ ಗ್ರಾನೈಟ್​ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಕೊಲೆ

ಹಾಸನ : ಹಳೆಯ ದ್ವೇಷದ ಹಿನ್ನೆಲೆ ಹಾಡಹಗಲೇ ಗ್ರಾನೈಟ್​ ಉದ್ಯಮಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹಾಸನದ ಹೊರವಲಯದ ಬಳಿ ನಡೆದಿದೆ. ಕೃಷ್ಣೇಗೌಡ (55) ಕೊಲೆಯಾದ ಮೃತ ಗ್ರಾನೈಟ್ ಉದ್ಯಮಿ. ಹಾಸನ ಮೂಲದ ಕೃಷ್ಣೇಗೌಡ, ಹಾಸನದ ಡೈರಿ ವೃತ್ತದ ಸಮೀಪ ಶ್ರೀರಾಮ ಮಾರ್ಬಲ್ ಎಂಬ ಉದ್ಯಮವನ್ನು ನಡೆಸುತ್ತಿದ್ದರು. ಜೊತೆಗೆ ಜೆಡಿಎಸ್ ಮುಖಂಡರಾಗಿರುವ ಇವರು ಮಾಜಿ ಸಚಿವ ಹೆಚ್​ ಡಿ ರೇವಣ್ಣ ಅವರ ಆಪ್ತರಾಗಿದ್ದರು. ಇಂದು ಬೆಳಗ್ಗೆ ಎಂದಿನಂತೆ ತಮ್ಮ ಗ್ರಾನೈಟ್ ಫ್ಯಾಕ್ಟರಿಗೆ ಹೋಗಿ …

Read More »

ಮಂಡ್ಯದ ಜಂಟಿ ಕೃಷಿ ಇಲಾಖೆ ಕಚೇರಿಗೆ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಿ, ಪರಿಶೀಲನೆ

ಮಂಡ್ಯ : ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಹಿನ್ನೆಲೆ, ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಬುಧವಾರ ಜಂಟಿ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.   ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿ ಮಂಗಳವಾರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ, ಐಜಿ ಪ್ರವೀಣ್‌ ಮಧುಕರ್‌ ಪವಾರ್‌ ನೇತೃತ್ವದ ತಂಡ ಜಿಲ್ಲಾಧಿಕಾರಿ …

Read More »

ಆನೆಗಳು ಬಲಿಷ್ಠ ವನ್ಯಜೀವಿಗಳಾದರೂ ಭಾರತ ಸೇರಿದಂತೆ ವಿಶ್ವಾದ್ಯಂತ ಅಪಾಯದಲ್ಲಿವೆ : ಈಶ್ವರಖಂಡ್ರೆ

ಬೆಂಗಳೂರು : ರಾಜ್ಯದ ಆನೆಗಳ ಸಂಖ್ಯೆಯಲ್ಲಿ 350ರಷ್ಟು ಹೆಚ್ಚಳವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು. ಈ ಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂದು ಅಂದಾಜು ಮಾಡಲಾಗಿದ್ದು, ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು. ಅವಸಾನದ ಅಂಚಿನಲ್ಲಿರುವ ಆನೆಗಳನ್ನು ಸಂರಕ್ಷಿಸುವ ಸಲುವಾಗಿ, ಆನೆಗಳಿಗೂ ನೆಮ್ಮದಿಯಿಂದ …

Read More »

ಅಕ್ಕಿ, ಗೋಧಿ ಮಾರಾಟ; ಬೆಲೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ

ನವದೆಹಲಿ : ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್‌ಎಸ್) ಅಡಿಯಲ್ಲಿ ಹೆಚ್ಚುವರಿ 50 ಲಕ್ಷ ಟನ್ ಗೋಧಿ ಮತ್ತು 25 ಲಕ್ಷ ಟನ್ ಅಕ್ಕಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸ್ಥಳೀಯ ಮಾರುಕಟ್ಟೆಗಳಲ್ಲಿ ಅಕ್ಕಿ ಮತ್ತು ಗೋಧಿಯ ಬೆಲೆಗಳನ್ನು ನಿಯಂತ್ರಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಆಗಸ್ಟ್ 7 ರ ಹೊತ್ತಿಗೆ ಕಳೆದ ಒಂದು ವರ್ಷದಲ್ಲಿ ಗೋಧಿ ಬೆಲೆಗಳು ಚಿಲ್ಲರೆ ಮಾರುಕಟ್ಟೆಯಲ್ಲಿ ಶೇಕಡಾ 6.77 ಮತ್ತು ಸಗಟು ಮಾರುಕಟ್ಟೆಯಲ್ಲಿ ಶೇಕಡಾ 7.37 …

Read More »

ಸತತ ಮಳೆ ಮತ್ತು ವರದಾ ನದಿಯ ಪ್ರವಾಹದಿಂದ ರೈತ ನಾಲ್ಕೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ ಬೆಳೆ ಹಾನಿ

ಹಾವೇರಿ: ಕಳೆದ ಎರಡು ತಿಂಗಳಿಂದ ಎಲ್ಲೆಡೆ ಕಿಚನ್​ ಕ್ವೀನ್​ ಟೊಮೆಟೊದ್ದೇ ಮಾತು. ಟೊಮೆಟೊ ಬೆಳೆ ಈ ಬಾರಿ ರೈತರ ಕೈ ಹಿಡಿದಿದ್ದು, ಅಧಿಕ ಲಾಭ ತಂದುಕೊಟ್ಟಿದೆ. ಇದರ ನಡುವೆ ಕೆಲ ರೈತರು ಟೊಮೆಟೊ ಕಳ್ಳತನವಾಗಬಾರದು ಎಂದು ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾರೆ. ಆದರೆ ಹಾವೇರಿ ಸಮೀಪದ ದೇವಗಿರಿ ಗ್ರಾಮದ ಟೊಮೆಟೊ ಬೆಳೆಗಾರ ದುರ್ಗಪ್ಪ ಎಂಬುವನ ಕಥೆ ಇದಕ್ಕೆ ಭಿನ್ನವಾಗಿದೆ. ದೇವಗಿರಿಯ ವರದಾ ನದಿ ತಟದಲ್ಲಿ ನಾಲ್ಕೂವರೆ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದ ರೈತ …

Read More »

ಯುವ ರೈತ ಕೇವಲ 30 ಗುಂಟೆಯಲ್ಲಿ ಟೊಮೆಟೊ ಬೆಳೆದು ಲಕ್ಷ ಲಕ್ಷ ಸಂಪಾದಿಸಿದ್ದಾನೆ.

ದಾವಣಗೆರೆ : ಟೊಮೆಟೊಗೆ ಚಿನ್ನದ ಬೆಲೆ ಸಿಕ್ಕಿದ್ದರಿಂದ ರೈತರು ಹೆಚ್ಚಿನ ಲಾಭ ಪಡೆಯುತ್ತಿದ್ದು, ಕೆಂಪು ಸುಂದರಿ ಬೆಳೆಯಲು ಮುಂದಾಗಿದ್ದಾರೆ. ಕೆಲ ರೈತರು ಕೋಟಿಗಟ್ಟಲೇ ಲಾಭ ಪಡೆದರೆ ಇನ್ನೂ ಕೆಲವರು ಲಕ್ಷಗಟ್ಟಲೇ ಆದಾಯ ಗಳಿಸಿದ್ದಾರೆ. ಈ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ರೈತರೊಬ್ಬರು ಸೇರಿದ್ದಾರೆ. ಕೇವಲ ಮೂವತ್ತು ಗುಂಟೆ ಜಮೀನಿನಲ್ಲಿ 7 ಲಕ್ಷ ರೂ. ಲಾಭ ಪಡೆದಿದ್ದು, ಇನ್ನೂ ಮೂರು ಲಕ್ಷ ಲಾಭದ ನಿರೀಕ್ಷೆಯಲ್ಲಿದ್ದಾರೆ. ಹೌದು, ದಾವಣಗೆರೆ ಜಿಲ್ಲೆಯ …

Read More »

ಸ್ಪಂದನಾ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಬೆಂಗಳೂರಿಗೆ ತಲುಪಿದ್ದು, ಅಂತಿಮ ದರ್ಶನದ ಬಳಿಕ ಇಂದು ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಯಲಿದೆ.

ಬೆಂಗಳೂರು: ಬ್ಯಾಂಕಾಕ್ ಪ್ರವಾಸದ ವೇಳೆ ನಿಧನರಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಬೆಂಗಳೂರಿಗೆ ತಲುಪಿದ್ದು, ಅಂತಿಮ ದರ್ಶನ ನಡೆಯುತ್ತಿದೆ. ಅಂತಿಮ ದರ್ಶನದ ಬಳಿಕ ಇಂದು ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಯಲಿದೆ. ಮಂಗಳವಾರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಥಾಯ್ ಏರ್ ವೇಸ್ ವಿಮಾನದಲ್ಲಿ ಕರೆತರಲಾಗಿದ್ದು, ಕಾರ್ಗೋ ಟರ್ಮಿನಲ್​ನಲ್ಲಿ ಕುಟುಂಬಸ್ಥರಿಗೆ ಪಾರ್ಥಿವ ಶರೀರ ಹಸ್ತಾಂತರ ಮಾಡಲಾಗಿದೆ. ಇದೇ ವಿಮಾನದಲ್ಲಿ ಪತಿ ವಿಜಯ ರಾಘವೇಂದ್ರ …

Read More »

ಬಾಬಾ ಸಾಹೇಬರ ಲೇಖನಿಯಿಂದ ಭಾರತ ಬದಲಾಯಿತು: ಜ್ಞಾನಪ್ರಕಾಶ ಸ್ವಾಮೀಜಿ

ಬೆಳಗಾವಿ: “ಜೀವ ಜಗತ್ತಿನಲ್ಲಿ ಮಹಿಳೆಯೇ ಶ್ರೇಷ್ಠ ಎಂದಿದ್ದರೂ ದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಶೋಷಿತ ಸಮುದಾಯಗಳೂ ಹೊರತಾಗಿಲ್ಲ. ಇದೆಲ್ಲದಕ್ಕೂ ಕಡಿವಾಣ ಹಾಕಬೇಕಿದ್ದರೆ ಶೋಷಿತ ಸಮುದಾಯಗಳು ಸುಶಿಕ್ಷಿತರಾಗಬೇಕು. ಆಗ ಮಾತ್ರ ಶಾಹುಮಹಾರಾಜರು ಮತ್ತು ಮಹಾತ್ಮಾ ಫುಲೆ ದಂಪತಿಯ ಕನಸು ನನಸಾಗಿಸಲು ಸಾಧ್ಯ” ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಅಭಿಪ್ರಾಯಪಟ್ಟರು. ಬೆಳಗಾವಿಯ ಕುಮಾರ ಗಂಧರ್ವ ಕಲಾಭವನದಲ್ಲಿ ಛತ್ರಪತಿ ಶಾಹುಮಹಾರಾಜರ 144ನೇ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ …

Read More »

DON 3: ಮುಂದಿನ ಡಾನ್​ ಶಾರುಖ್​ ಅಲ್ಲ ರಣ್​ವೀರ್

DON 3. ಬಿಟೌನ್​ಲ್ಲಿ ಡಾನ್​ ಸದ್ದಾಗುತ್ತಿದೆ. ಆಗಸ್ಟ್ 8ರಂದು ಬಾಲಿವುಡ್​ನ ಸೆನ್ಸೇಶನಲ್​ ಸುದ್ದಿ ಅಂದ್ರೆ ಅದು ‘ಡಾನ್​​ 3’. ನಟ, ನಿರ್ದೇಶಕ, ನಿರ್ಮಾಪಕ ಮತ್ತು ಬಹುಮುಖ ಪ್ರತಿಭೆ ಫರ್ಹಾನ್​ ಅಖ್ತರ್ ಇಂದು ‘ಡಾನ್​​ 3’ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಬಹಳ ಸಮಯದಿಂದ ಕಾದು ಕುಳಿತಿದ್ದರು. ಅಂತಿಮವಾಗಿ ‘ಡಾನ್​​ 3’ ಘೋಷಣೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೌದು, ಡಾನ್​ 3 ಸಿನಿಪ್ರಿಯರ …

Read More »