ನವದೆಹಲಿ: ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ಗೆ ಇನ್ನು ಎರಡು ತಿಂಗಳು ಮಾತ್ರ ಬಾಕಿ. ಅಕ್ಟೋಬರ್ 5ರಿಂದ ಪ್ರಾರಂಭವಾಗುವ ಪಂದ್ಯಾವಳಿಗೆ ಸಪ್ಟೆಂಬರ್ 5ರೊಳಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ಗೆ (ಐಸಿಸಿ) ಎಲ್ಲ ಕ್ರಿಕೆಟ್ ಮಂಡಳಿಗಳು ತಾತ್ಕಾಲಿಕ 15 ಆಟಗಾರರ ಪಟ್ಟಿ ಸಲ್ಲಿಸಬೇಕಿದೆ. ಸೆಪ್ಟಂಬರ್ 27ರೊಳಗೆ ಅಂತಿಮ ತಂಡ ಪ್ರಕಟಿಸಬೇಕು. ಆಸ್ಟ್ರೇಲಿಯಾ ಈಗಾಗಲೇ 18 ಸದಸ್ಯರ ತಂಡವನ್ನು ಪ್ರಕಟಿಸಿದೆ. ಭಾರತ ತಂಡದ ಆಯ್ಕೆಯಲ್ಲಿ ಹಲವು ಗೊಂದಲಗಳಿದ್ದು ಗಾಯದಿಂದ ಚೇತರಿಸಿಕೊಂಡು ಯಾರೆಲ್ಲಾ ಸ್ಥಾನ ಪಡೆಯುತ್ತಾರೆ, …
Read More »ಇನ್ಮುಂದೆ ಕನ್ನಡ ಸೇರಿದಂತೆ ಈ ಪ್ರಾದೇಶಿಕ ಭಾಷೆಯಲ್ಲೂ ಪಡೆಯಬಹುದು ಫೋನ್ ಪೇ ಪೇಮೆಂಟ್ ನೋಟಿಫಿಕೇಶನ್
ಬೆಂಗಳೂರು: ಡಿಜಿಟಲ್ ಪೇಮೆಂಟ್ ಪ್ಲಾಟ್ಫಾರ್ಮ್ನಲ್ಲಿ ಜನಸಾಮಾನ್ಯರ ಜನಪ್ರಿಯ ತಾಣವಾಗಿರುವ ಫೋನ್ಪೇ ಇದೀಗ ಮತ್ತಷ್ಟು ವ್ಯಾಪಾರಿ ಸ್ನೇಹಿಯಾಗುವತ್ತ ಹೆಜ್ಜೆ ಇಟ್ಟಿದೆ. ಈ ಹಿಂದೆ ವ್ಯಾಪಾರಿಗಳಿಗೆ ಗ್ರಾಹಕರ ಪೇಮೆಂಟ್ ಇತಿಹಾಸವನ್ನು ಸುಲಭವಾಗಿ ತಿಳಿಯುವ ಉದ್ದೇಶದಿಂದ ಪಾವತಿ ಕುರಿತು ಸ್ಮಾರ್ಟ್ ಸ್ಪೀಕರ್ ನೋಟಿಫಿಕೇಶನ್ ಅನ್ನು ಪರಿಚಯಿಸಿತು. ಇಷ್ಟು ದಿನ ಇಂಗ್ಲಿಷ್ನಲ್ಲಿ ಈ ನೋಟಿಫಿಕೇಶನ್ ಧ್ವನಿ ಕೇಳಿ ಬರುತ್ತಿತ್ತು. ಆದರೆ, ಇದೀಗ ಪ್ರಾದೇಶಿಕ ಭಾಷೆಗಳಲ್ಲೂ ಪರಿಚಯಿಸಿದೆ. ಈ ಸ್ಮಾರ್ಟ್ ಸ್ಪೀಕರ್ ಇನ್ಮುಂದೆ ಹಣದ ವಾಹಿವಾಟಿನ ಮಾಹಿತಿಯನ್ನು ಕನ್ನಡ, …
Read More »SC-ST ಕಾಯಿದೆಯಡಿಯ ಸುಳ್ಳು ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ: ಹೈಕೋರ್ಟ್
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಡಗಳ (ದೌರ್ಜನ್ಯ ತಡೆ) ಕಾಯಿದೆಯಡಿ ದಾಖಲಾಗುತ್ತಿರುವ ಸುಳ್ಳು ಕ್ರಿಮಿನಲ್ ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ ಪಡಿಸುತ್ತಿವೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಅಲ್ಲದೇ, ಈ ರೀತಿಯ ಪ್ರಕರಣಗಳು ನ್ಯಾಯಾಂಗ ಕ್ಷೇತ್ರದ ಅಮೂಲ್ಯ ಸಮಯ ವ್ಯರ್ಥ ಮಾಡುತ್ತಿವೆ ಎಂದು ತಿಳಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯಿದೆಯಡಿ ದಾಖಲಾಗಿದ್ದನ್ನು ಪ್ರಶ್ನಿಸಿ ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. …
Read More »ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ.
ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಬಾಕಿ ಬಿಲ್ ಬಿಡುಗಡೆಗೆ ಮನವಿ ಮಾಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಇರುತ್ತದೆ. ಚುನಾವಣೆ, ಹೊಸ ಸರ್ಕಾರ ರಚನೆ ಹೀಗೆ 8 ತಿಂಗಳಿನಿಂದ ಬಾಕಿ ಮೊತ್ತ ಬಿಡುಗಡೆ ಆಗಿರುವುದಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಅವರು ಅಳಲು ತೋಡಿಕೊಂಡರು. …
Read More »ಇಲಾಖೆಯಲ್ಲಿ 600 ಕೋಟಿ ರೂ. ಇದೆ, ಗುತ್ತಿಗೆದಾರರಿಗೆ ಬಿಲ್ ಪಾವತಿ ಆಗುತ್ತೆ ಎಂದು ಡಿಕೆಶಿ ಹೇಳಿದ್ದಾರೆ.
ಬೆಂಗಳೂರು: ಗುತ್ತಿಗೆದಾರರು ನನ್ನ ಬಳಿಯೂ ಬಂದಿದ್ದು, ಯಾರು ಕೆಲಸ ಮಾಡಿದ್ದಾರೋ ಅವರಿಗೆ ಬಿಲ್ ಪಾವತಿ ಮಾಡಲಾಗುತ್ತೆ ಎಂದು ಹೇಳಿದ್ದೇನೆ. ನೀರಾವರಿ ಇಲಾಖೆಗೆ 25 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿ ಬಿಲ್ ನೀಡಿದ್ದಾರೆ. 600 ಕೋಟಿ ರೂ. ಹಣ ಇಲಾಖೆಯಲ್ಲಿ ಇದೆ. ಗುತ್ತಿಗೆದಾರರಿಗೆ ನಿಯಮದ ಪ್ರಕಾರ ಬಿಲ್ ಪಾವತಿ ಆಗುತ್ತೆ. ಬ್ಲ್ಯಾಕ್ ಮೇಲ್ಗಳಿಗೆಲ್ಲಾ ಹೆದರಲ್ಲ. ಯಾರನ್ನೋ ಹೆದರಿಸಿದಂತೆ ನನ್ನನ್ನು ಹೆದರಿಸಲು ಆಗುತ್ತಾ?. ನನಗೆ ಬೆದರಿಕೆ ಹಾಕಲು ಆಗುತ್ತಾ?. ಹಾಕಲಿ ಬಿಡಿ ಎಂದು …
Read More »ಸಚಿವಾಲಯ ಕಚೇರಿಯಲ್ಲಿ ಬಾಂಬ್ ಇಟ್ಟಿದ್ದಾಗಿ ಬೆದರಿಕೆ; ಆತಂಕ ಸೃಷ್ಟಿಸಿದ ಹುಸಿ ಕರೆ, ಆರೋಪಿ ಬಂಧನ
ಮುಂಬೈ (ಮಹಾರಾಷ್ಟ್ರ): ಎರಡು ದಿನಗಳ ಹಿಂದಷ್ಟೇ ರೈಲುಗಳಲ್ಲಿ ಸರಣಿ ಬಾಂಬ್ ಇಟ್ಟಿರುವುದಾಗಿ ಹುಸಿ ಬಾಂಬ್ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ ಬೆನ್ನಲ್ಲೇ, ಇಂದು ಮತ್ತೊಂದು ಹುಸಿ ಬಾಂಬ್ ಕರೆ ಬಂದು ಮುಂಬೈ ಪೊಲೀಸರ ನೆಮ್ಮದಿಗೆ ಭಂಗ ತಂದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆಪಾದಿತ ವ್ಯಕ್ತಿಯನ್ನು ಬಂಧಿಸಲಾಗಿದೆ. ಮುಂಬೈಯಲ್ಲಿನ ಸಚಿವಾಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಸೋಮವಾರ ರಾತ್ರಿ 10 ಗಂಟೆಗೆ ಕರೆ ಮಾಡಿ ಮಾಹಿತಿ ನೀಡಿದ್ದ. ತಕ್ಷಣವೇ ಪೊಲೀಸರಿಗೆ ಮಾಹಿತಿ ಸಿಕ್ಕ …
Read More »ನಾನು ಹೋಮದಲ್ಲಿ ಭಾಗಿಯಾಗಿದ್ದು ನನಗೆ ಸಮಸ್ಯೆ ಇಲ್ಲ ಅಂದ್ಮೇಲೆ ನಿಮಗೇಕೆ?- ಪ್ರಕಾಶ್ ರಾಜ್
ಶಿವಮೊಗ್ಗ: “ದೇಹಕ್ಕಾದ ಗಾಯ ಸುಮ್ಮನಿದ್ದರೂ ವಾಸಿಯಾಗುತ್ತದೆ. ಆದರೆ ದೇಶಕ್ಕೆ, ಸಮಾಜಕ್ಕಾದ ಗಾಯ ಸುಮ್ಮನಿದ್ದಷ್ಟು ಹೆಚ್ಚುತ್ತದೆ” ಎಂದು ನಟ ಪ್ರಕಾಶ್ ರಾಜ್ ಹೇಳಿದರು. ನಗರದ ಖಾಸಗಿ ಹೋಟೆಲ್ನಲ್ಲಿಂದು ನಡೆದ ಮಾಧ್ಯಮ ಸಂವಾದದಲ್ಲಿ ಭಾಗಿಯಾಗಿ ಹಲವು ವಿಚಾರಗಳ ಬಗ್ಗೆ ಮಾತನಾಡಿದ ಅವರು, “ಮಾನವೀಯತೆಯನ್ನು ತುಳಿಯುವರ ವಿರುದ್ಧ ನಾವು ನಿಲ್ಲುತ್ತಿದ್ದೇವೆ. ನಮಗೆ ದ್ವೇಷ ಬೇಕಿಲ್ಲ, ನಮಗೆ ಬೇಕಿರುವುದು ಪ್ರೀತಿ. ಎಲ್ಲರಲ್ಲೂ ಸಮಾನತೆ ಇರಬೇಕು. ನಮ್ಮ ಕ್ರೌರ್ಯ, ವಿರೋಧಗಳು ದೇಶ ಹಾಳಾಗಲು ಕಾರಣವಾಗುತ್ತವೆ” ಎಂದು ಕಳವಳ …
Read More »ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಪತಿ
ಬೆಂಗಳೂರು : ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿ ಭಾನುವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತಳನ್ನು ಸರಿತಾ(35) ಎಂದು ಗುರುತಿಸಲಾಗಿದೆ. ತಾರಾನಾಥ್ ಕೊಲೆಗೈದ ಆರೋಪಿ. ಪತ್ನಿ ಸರಿತಾಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಹತ್ಯೆಗೈದಿರುವ ಪತಿ ತಾರಾನಾಥ್ ವೈಟ್ ಫೀಲ್ಡ್ ಠಾಣೆಗೆ ಬಂದು ಶರಣಾಗಿದ್ದಾನೆ. ಮೂಲತಃ ಮಂಗಳೂರಿನವರಾದ ಈ ದಂಪತಿ ಬೆಂಗಳೂರಿನಲ್ಲಿ ನೆಲೆಸಿ, ಪಾನೀಪುರಿ ಅಂಗಡಿ ನಡೆಸುತ್ತಿದ್ದರು. ಭಾನುವಾರ ಸಂಜೆ …
Read More »ಗಣೇಶೋತ್ಸವ ಮಂಡಳಿಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್, ಏಕಗವಾಕ್ಷಿ ಮೂಲಕ ತಕ್ಷಣ ಪರವಾನಿಗೆ..: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ನಗರದಲ್ಲಿ ಅತ್ಯಂತ ಸಂಭ್ರಮದಿಂದ ಗಣೇಶೋತ್ಸವ ಆಚರಣೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಹಾಗೂ ಉತ್ಸವ ಮಂಡಳಿಗಳಿಗೆ ಯಾವುದೇ ರೀತಿಯ ವಿಳಂಬವಾಗದಂತೆ ಏಕಗವಾಕ್ಷಿ ಯೋಜನೆ ಮೂಲಕ ಕೂಡಲೇ ಪರವಾನಿಗೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶೋತ್ಸವ ಹಿನ್ನೆಲೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಿನ್ನೆ ಸಂಜೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣೇಶೋತ್ಸವ ಮಂಡಳಿಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಒದಗಿಸುವ ಕುರಿತು ಸರ್ಕಾರದ …
Read More »‘ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯ: ಸತೀಶ ಜಾರಕಿಹೊಳಿ
ಬೆಳಗಾವಿ: ”ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯವಾಗುತ್ತದೆ” ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದ ಮಚ್ಛೆ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಇಂದು (ಮಂಗಳವಾರ) 260 ಕೋಟಿ ರೂಪಾಯಿ ವೆಚ್ಚದ 220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬಹುವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ”ಬೆಳಗಾವಿ ನಗರ ರಾಜ್ಯದಲ್ಲಿ ಶರವೇಗದಲ್ಲಿ …
Read More »
Laxmi News 24×7