Breaking News

ರಾಷ್ಟ್ರೀಯ

5 ಜನರ ಬಾಳಿಗೆ ಬೆಳಕಾಗಿದ್ದಾರೆ.ಚಿಕ್ಕಮಗಳೂರಿನ ಮಹಿಳೆ

ಚಿಕ್ಕಮಗಳೂರು: ಇಲ್ಲಿನ ಗೌರಿ ಕಾಲುವೆಯ ನಿವಾಸಿ ಸಹನಾ ಮೊಸೆಸ್ ಎಂಬವರು​ ಸಾವಿನಲ್ಲೂ ಸಾರ್ಥಕತೆ ಮೆರೆದು ಮಾದರಿಯಾಗಿದ್ದಾರೆ. ತಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಒಂದಲ್ಲ, ಎರಡಲ್ಲ 5 ಜನರ ಬಾಳಿಗೆ ಬೆಳಕಾಗಿದ್ದಾರೆ. ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಅವರ ಕುಟುಂಬದವರ ದೃಢ ನಿರ್ಧಾರ ಹಾಗೂ ಸಹನಾ ಅವರ ಆಸೆಯಂತೆಯೇ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಇಂದು ನಗರದ ಜಿಲ್ಲಾಸ್ಪತ್ರೆಯಲ್ಲಿ ಸಹನಾರ ಕಣ್ಣು, ಕಿಡ್ನಿ ಹಾಗೂ ಯಕೃತ್ತನ್ನು ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಆಂಬುಲೆನ್ಸ್ …

Read More »

ಮೂರು ಜಿಲ್ಲೆಗಳಾದ ತುಮಕೂರು, ಯಾದಗಿರಿ ಹಾಗೂ ಚಿತ್ರದುರ್ಗ ಶಾಸಕರು ಹಾಗೂ ಸಚಿವರ ಸಭೆ ಅಸಮಾಧಾನಕ್ಕೆ ಸಿಎಂ ಮದ್ದು

ಬೆಂಗಳೂರು: ಮೂರು ಜಿಲ್ಲೆಗಳಾದ ತುಮಕೂರು, ಯಾದಗಿರಿ ಹಾಗೂ ಚಿತ್ರದುರ್ಗ ಶಾಸಕರು ಹಾಗೂ ಸಚಿವರ ಸಭೆ ಮುಕ್ತಾಯವಾಗಿದೆ. ಈ ವೇಳೆ ಶಾಸಕರು ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ತುಮಕೂರು, ಯಾದಗಿರಿ, ಚಿತ್ರದುರ್ಗ ಜಿಲ್ಲೆಗಳ ಕ್ಷೇತ್ರವಾರು ಸಮಸ್ಯೆ, ಅನುದಾನ, ಅಭಿವೃದ್ಧಿ ಸಂಬಂಧ ಸಭೆ ನಡೆಯಿತು. ಮೊದಲಿಗೆ ತುಮಕೂರು ಜಿಲ್ಲೆಯ ಸಚಿವರು, ಶಾಸಕರ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಕುಣಿಗಲ್ ಶಾಸಕ ಡಾ.ರಂಗನಾಥ್ ಮಾತನಾಡಿ, …

Read More »

ಬೆನ್ನುಮೂಳೆಗೆ ಪೆಟ್ಟುಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಲುಮರದ ತಿಮ್ಮಕ್ಕ ಅವರನ್ನು ಇಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಬೆಂಗಳೂರು: ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆಗೆ ಪೆಟ್ಟುಬಿದ್ದ ಕಾರಣ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶತಾಯುಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕರನ್ನು ಅರಣ್ಯ ಹಾಗೂ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. “ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಸಾಕಿರುವ ಮಹಾತಾಯಿಯಾದ ನಿಮಗೆ ಇಡೀ ಕರುನಾಡಿ ಜನರಷ್ಟೇ ಅಲ್ಲದೇ ವಿಶ್ವ ಪರಿಸರ ಪ್ರೇಮಿಗಳ ದಿವ್ಯ ಶುಭ ಹಾರೈಕೆ ಇದೆ. ನೀವು ಶೀಘ್ರ ಗುಣಮುಖರಾಗುತ್ತೀರಿ” ಎಂದು …

Read More »

ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ನಡೆದ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ನಡೆದಿದೆ ಎನ್ನಲಾದ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಬಗ್ಗೆ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. “ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಲಾಗಿದೆ‌” ಎಂದು ತಿಳಿಸಿದ್ದಾರೆ. ಈ ಪ್ರಕರಣ ರಾಜಕೀಯವಾಗಿ ಭಾರಿ ಸದ್ದು ಮಾಡಿದೆ. ಬಿಜೆಪಿ, …

Read More »

ಖುದ್ದು ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಫಿಲ್ಡಿಗಿಳಿಯುವ ಮೂಲಕ ಕಸ ವಿಲೇವಾರಿ‌ ಪರಿಶೀಲನೆ

ಬೆಳಗಾವಿ : ನಗರದ ಕೆಲವು ವಾರ್ಡ್​ಗಳಿಗೆ ಕಸ ಸಂಗ್ರಹಿಸುವ ವಾಹನಗಳು ಹೋಗುತ್ತಿರಲಿಲ್ಲ. ಕೆಲವು ಕಡೆಗಳಲ್ಲಿ ಸರಿಯಾದ ಸಮಯಕ್ಕೆ ವಾಹನ ತೆರಳುತ್ತಿಲ್ಲವೆಂದು ಆಯುಕ್ತರಿಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿದ್ದವು. ಇದರಿಂದ ಎಚ್ಚೆತ್ತುಕೊಂಡ ಆಯುಕ್ತ ಅಶೋಕ ದುಡಗುಂಟಿ ಸೋಮವಾರ ಬೆಳಗ್ಗೆ 5.30ಕ್ಕೆ ಸೈಕಲ್ ಮೇಲೆ ಕಸ ಸಂಗ್ರಹಿಸುವ ವಾಹನಗಳ ಶಾಖೆಗೆ ದಿಢೀರ್ ಭೇಟಿ ನೀಡಿದ್ದರು. ಈ ವೇಳೆ ಚಾಲಕರು, ಕ್ಲೀನರ್ ಗಳು ಎಷ್ಟು ಗಂಟೆಗೆ ಡ್ಯೂಟಿಗೆ ಬರುತ್ತಾರೆ ಎಂದು ಹಾಜರಿ ಪುಸ್ತಕ ಪರೀಕ್ಷಿಸಿದರು. ಸರಿಯಾದ …

Read More »

ಕೆಎಸ್​ಆರ್​ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್​ಪೆಕ್ಟರ್​ ಹತ್ಯೆ

ಬಳ್ಳಾರಿ: ನಗರದ ಕೆಎಎಸ್​ಆರ್​ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್​ಪೆಕ್ಟರ್​ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಹುಸೇನಪ್ಪ (54) ಕೊಲೆಯಾದ ಸೆಕ್ಯುರಿಟಿ ಇನ್ಸ್​ಪೆಕ್ಟರ್​. ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಮಾರಕಾಸ್ತ್ರಗಳಿಂದ ಹುಸೇನಪ್ಪ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದಾರೆ. ಹುಸೇನಪ್ಪ ಕೆಎಸ್​​ಆರ್​ಟಿಸಿನಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ನಾಳೆ ಬೀದರ್​ನಲ್ಲಿ ಚಾಲಕರ ನೇಮಕಾತಿ ಪರೀಕ್ಷೆಗೆ ತೆರಳುತ್ತಿದ್ದ ಅವರು ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವ ವೇಳೆ ಕೊಲೆ ಮಾಡಲಾಗಿದೆ. ಸ್ಥಳಕ್ಕೆ …

Read More »

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಮೇಲೆ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಿ ಧಾರವಾಡ ಹೈಕೋರ್ಟ್

ಧಾರವಾಡ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಮೇಲೆ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಿ ಧಾರವಾಡ ಹೈಕೋರ್ಟ್ ತೀರ್ಪು ನೀಡಿದೆ. ವಿಧಾನಸಭಾ ಚುನಾವಣೆ ವೇಳೆ ಜೆಪಿ ನಡ್ಡಾ ಅವರ ಮೇಲೆ ಎಫ್‌ಐಆರ್ ದಾಖಲಾಗಿತ್ತು. ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಮೇ 11, 2023ರಂದು ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ದೂರು ದಾಖಲಾಗಿತ್ತು. ಮೇ 7, 2023 ರಂದು ಬಹಿರಂಗ ಸಭೆ ನಡೆದಿತ್ತು. ಬಹಿರಂಗ ಸಭೆಯಲ್ಲಿ ಜೆ ಪಿ ನಡ್ಡಾ ಭಾಷಣ ಮಾಡಿದ್ದರು. …

Read More »

ತಮ್ಮ ಮೇಲೆ ಕೇಳಿ ಬಂದ ಲಂಚದ ಆರೋಪಕ್ಕೆ ಸಂಬಂಧಪಟ್ಟಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ

ಮಂಡ್ಯ/ಬೆಂಗಳೂರು: ಕೃಷಿ ಸಚಿವರು ಲಂಚಕ್ಕಾಗಿ ಪೀಡಿಸುತ್ತಿದ್ದಾರೆ ಎಂದು ಸ್ವತಃ ಕೃಷಿ ಇಲಾಖೆಯ ಅಧಿಕಾರಿಗಳೇ ನೇರವಾಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು, ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ ಎಂದು ಕಿಡಿಕಾರಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಆರೋಪಿಸಿ ಮಂಡ್ಯ ಜಿಲ್ಲೆಯ ಏಳು ಕೃಷಿ ಅಧಿಕಾರಿಗಳಿಂದ ದೂರು ಅರ್ಜಿ ಬಂದಿದ್ದು, ಈ ಬಗ್ಗೆ …

Read More »

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನಿಗೆ 136 ಎಂ ಎಲ್ ಎ ಗಳ ಸಪೋರ್ಟ್ ಇದೆ:

ಬಾಗಲಕೋಟೆ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆಯಲ್ಲ. ಅಲ್ಲಿಯ ಸ್ಪೀಕರ್, ಎಷ್ಟು ಬಾರಿ ನಮ್ಮ ನಾಯಕರನ್ನು ಹೊರ ಹಾಕಿದ್ದಾರೆ? ಎಷ್ಟು ಹೊತ್ತು ಹೊರಹಾಕಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಪಕ್ಷದ ಮುಖಂಡರಿಗೆ ಅಬಕಾರಿ ಇಲಾಖೆ ಸಚಿವ ಆರ್ ಬಿ ತಿಮ್ಮಾಪೂರ ಟಾಂಗ್ ನೀಡಿದ್ದಾರೆ. ಬಾಗಲಕೋಟೆ ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಮಾಡುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು. ಅದ್ರ ಬಗ್ಗೆ ಮಾತನಾಡಲು ಯೋಗ್ಯತೆ ಅವರಿಗೆ ಇಲ್ಲ, ಮೊದಲು ಬಿಜೆಪಿಗರು ತಾವು …

Read More »

ಮುಸ್ಲಿಮರೇ ಇಲ್ಲದ ಗ್ರಾಮದಲ್ಲಿ ಹಿಂದೂಗಳಿಂದ ಮೊಹರಂ ಹಬ್ಬಾಚರಣೆ

ಬಾಗಲಕೋಟೆ : ದೇಶಾದ್ಯಂತ ಶನಿವಾರ ಶಿಯಾ ಮುಸ್ಲಿಮರು ಮೊಹರಂ ಆಚರಿಸಿದರು. ರಾಜ್ಯದಲ್ಲೂ ಶ್ರದ್ಧಾ ಭಕ್ತಿಯ ಮೊಹರಂ ನಡೆದಿದೆ. ಬಾಗಲಕೋಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಶೋಕ ಮೆರವಣಿಗೆಗಳು ನಡೆದವು. ಮುಸ್ಲಿಮರೊಂದಿಗೆ ಹಿಂದೂಗಳೂ ಭಾಗಿಯಾಗಿದ್ದರು. ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಮೊಹರಂ ಆಚರಿಸಿಕೊಂಡು ಬರಲಾಗುತ್ತಿದೆ. ಈ ಗ್ರಾಮದಲ್ಲಿ ಮುಸ್ಲಿಮರು ಇಲ್ಲ. ಹೀಗಿದ್ದರೂ ಬೇರೆ ಗ್ರಾಮದಿಂದ ಸಮುದಾಯದವರನ್ನು ಕರೆಸಿ ಮೊಹರಂ ಮಾಡಲಾಗುತ್ತದೆ. ಹಿಂದೂಗಳು ಮತ್ತು ಮುಸ್ಲಿಮರು ಪರಸ್ಪರ ಒಟ್ಟಾಗಿ ಸೇರಿ ಹಬ್ಬ …

Read More »