Breaking News
Home / ರಾಷ್ಟ್ರೀಯ (page 441)

ರಾಷ್ಟ್ರೀಯ

ಸಾಮಾನ್ಯ ಕಾರ್ಯಕರ್ತನನ್ನು ಸಿದ್ದರಾಮಯ್ಯ ವಿರುದ್ದ ಗೆಲ್ಲಿಸುತ್ತೇವೆ: ಈಶ್ವರಪ್ಪ

ಶಿವಮೊಗ್ಗ: ಚುನಾವಣೆಯಲ್ಲಿ ಗೆದ್ದ ಶಾಸಕ ಬೇರೆ ಕ್ಷೇತ್ರ ಹುಡುಕುವುದು ರಾಜ್ಯದ ಮತ್ತು ಆ ಕ್ಷೇತ್ರದ ಮತದಾರರಿಗೆ ಮಾಡುವ ಅವಮಾನ. ತನ್ನ ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದ ಜನತೆಯ ಮುಂದಿಟ್ಟು ಮತ ಕೇಳುವಂತಿರಬೇಕು. ಇವತ್ತಿಗೂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆಂದು ಹೇಳುತ್ತಿಲ್ಲ. ಇಂದಲ್ಲ ನಾಳೆ ಯಾವ ಪಕ್ಷದಿಂದ ಸ್ಪರ್ಧೆ ಎಂದು ಹೇಳುವ ದಿನ ಕೂಡ ಬರಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕ್ಷೇತ್ರದಿಂದ ಸ್ಪರ್ಧೆ …

Read More »

ಪಣಜಿ: ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೇಂದ್ರಕ್ಕೆ ಗೋವಾ ಸರಕಾರ ಒತ್ತಾಯ

ಪಣಜಿ: ಮಹದಾಯಿ ನದಿಯಿಂದ ಅಕ್ರಮವಾಗಿ ನೀರು ತಿರುಗಿಸುವುದನ್ನು ತಡೆಯಲು ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ರಾಜ್ಯ ಸಚಿವ ಸಂಪುಟವು ಇಂದು ನಿರ್ಧರಿಸಿದೆ. ಕಳಸಾ-ಭಂಡೂರಿ ನೀರಿನ ಯೋಜನೆಗೆ ಕರ್ನಾಟಕದ ವಿವರವಾದ ಯೋಜನಾ ವರದಿಗೆ ನೀಡಲಾದ ಎನ್‍ಒಸಿಯನ್ನು ತಕ್ಷಣವೇ ಹಿಂಪಡೆಯಲು ಕೇಂದ್ರಕ್ಕೆ ಪತ್ರ ಬರೆಯಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದಲ್ಲಿ ಸೋಮವಾರ ಪಣಜಿಯಲ್ಲಿ ವಿಶೇಷ ಸಚಿವ …

Read More »

ಅರಭಾವಿ ಆಂಜನೇಯ, ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಕೆಎಂಎಫ್ ಅಧ್ಯಕ್ಷರ ಭೇಟಿ

ಮೂಡಲಗಿ: ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.   ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು ಒಳ್ಳೆಯದನ್ನು …

Read More »

ಚಾಕುವಿನಿಂದ ತಿವಿದು ಹೆತ್ತ ತಾಯಿಯ ಪ್ರಾಣವನ್ನೇ ತೆಗೆದ ಮಗಳು

ಪ್ರೇಮ ವಿವಾಹ ನಿರಾಕರಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಅಪ್ರಾಪ್ತ ಮಗಳೊಬ್ಬಳು ಅಂತ್ಯವಾಗಿಸಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಮಮತಾ ಕುಶ್ವಾಹಾ ಮೃತ ಮಹಿಳೆ. ಮಮತಾ ಅವರ ಮಗಳು ಕಳೆದ ಕೆಲ ಸಮಯದಿಂದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಮಗಳ ಸಂಬಂಧಕ್ಕೆ ತಾಯಿ ವಿರೋಧ ವ್ಯಕ್ತಪಡಿಸಿದ್ದರು. ಆ ಕಾರಣಕ್ಕಾಗಿ ಈ ಕೃತ್ಯವನ್ನು ಎಸಗಿದ್ದಾರೆ. ಮಮತಾಳ ಮಗಳನ್ನು ಆಕೆಯ ಪ್ರಿಯಕರ ಕೆಲ ಸಮಯದ ಹಿಂದೆ ಅಪಹರಿಸಿ, ಆಕೆಯ ಮೇಲೆ ದೈಹಿಕ ದೌರ್ಜನ್ಯ …

Read More »

ಹೊಸ ವರ್ಷದ ದಿನದಂದು* *ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*

  *ಮೂಡಲಗಿ*- ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು …

Read More »

2023 ರಲ್ಲಿ ವಿಧಾನಸಭಾ ಚುನಾವಣೆಗಳ ಸರಣಿ ; 2024ಕ್ಕೆ ಒಂದು ರೀತಿ ಸೆಮಿಫೈನಲ್

ನವದೆಹಲಿ : 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈ ವರ್ಷ ನಡೆಯಲಿರುವ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳು ಸೆಮಿಫೈನಲ್ ಎಂದು ಪರಿಗಣಿಸಲಾಗಿದೆ. ಪ್ರಮುಖ ರಾಜ್ಯಗಳಾದ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಈ ವರ್ಷ ಚುನಾವಣೆ ನಡೆಯಲಿದೆ.   ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯದಲ್ಲಿ ಮೊದಲಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಶಾಸಕಾಂಗ ಸಭೆಗಳ ಅವಧಿಯು ಮಾರ್ಚ್‌ನಲ್ಲಿ ವಿವಿಧ ದಿನಾಂಕಗಳಲ್ಲಿ ಕೊನೆಗೊಳ್ಳುತ್ತಿದೆ. …

Read More »

ಹೊಸ ವರ್ಷಕ್ಕೆ ಬಂತು ಮಾತೃ ಭೂಮಿ ಫೌಂಡೇಶನ್, ಲಖನ ಜಾರಕಿಹೊಳಿ ಅವರ್ ಸಹಕಾರ ದೊಂದಿಗೆ ಸಮಾಜ ಸೇವೆಗೆ ಸಿದ್ಧ್

ಗೋಕಾಕ : ಗೋಕಾಕ ನಗರದ ಯುವಕರ ತಂಡ ಸಮಾಜ ಸೇವೆ, ಯುವಕರ ಹಲವಾರು ಕಾರ್ಯಕ್ಕೆ ಪ್ರೋತ್ಸಾಹ. ದಿನ ದಲಿತರ, ಬಡ ಬಂದುಗಳ ಸೇವೆಯನ್ನು ಮಾಡುತ್ತೇವೆ ಎಂದು ಲಖನ ಜಾರಕಿಹೊಳಿ ಅವರ ಸಹಕಾರದೊಂದಿಗೆ ಒಂದು ಯುವಕರ ತಂಡ ಹೊಸ ವರ್ಷಕ್ಕೆ ಈ ಒಂದು ಫೌಂಡೇಶನ್ ಅನ್ನು ಪ್ರಾರಂಭ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಲಖನ ಜಾರಕಿಹೊಳಿ ಅವರು ಹಾಗೂ ಯುವನಾಯಕ ಪತ್ರ ಕರ್ತರ ಸಂಘದ ಗೌರವಾಧ್ಯಕ್ಷ ರಾದ ಶ್ರೀ ಸರ್ವೋತ್ತಮ ಭೀಮಶಿ …

Read More »

ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ವ್ಯಕ್ತಿಯೋರ್ವ ಮನನೊಂದು ಸ್ಮಶಾನದಲ್ಲಿಯೇ ಬೆಂಕಿ ಹಚ್ಚಿಕೊಂಡ

ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ವ್ಯಕ್ತಿಯೋರ್ವ ಮನನೊಂದು ಸ್ಮಶಾನದಲ್ಲಿಯೇ ಬೆಂಕಿ ಹಚ್ಚಿಕೊಂಡ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ. ಸಂತೋಷ ಕೊರಡಿ (೩೦) ಎಂಬಾತನೇ ಬೆಂಕಿಹಚ್ಚಿಕೊಂಡಾತ. ತನಗೆ ವಯಸ್ಸಾದರೂ ಮದುವೆಗೆ ಕನ್ಯೆ ಸಿಗಲಿಲ್ಲವೆಂದು ಮನನೊಂದಿದ್ದು, ಅಲ್ಲದೇ ಮಾನಸಿಕ ಅಸ್ವಸ್ಥನಾಗಿದ್ದ ಯುವಕ ಅಮ್ಮಿನಬಾವಿ ಗ್ರಾಮದ ಸ್ಮಶಾನದಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದೆನ್ನಲಾಗಿದೆ. ಸಂತೋಷನಿಗೆ ದೇಹದ ಶೇಕಡಾ ಅರ್ಧದಷ್ಟು ಭಾಗ ಬೆಂಕಿಗೆ ಆಹುತಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದು, ತೀವ್ರ ಗಾಯಗೊಂಡ ಹಿನ್ನಲೆ ಹುಬ್ಬಳ್ಳಿ ಕಿಮ್ಸ್ …

Read More »

ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ

ಪಣಜಿ: ರಜೆಯ ನಿಮಿತ್ತ ಗೋವಾಕ್ಕೆ ಕ್ರಿಸ್​ಮಸ್​ ಪಾರ್ಟಿ ಮಾಡಲು ಸ್ನೇಹಿತರ ಜೊತೆ ತೆರಳಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಬಸ್​ ಚಾಲಕನೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮುಂಬೈ ಮೂಲದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಶನಿವಾರದಂದು ಆರೋಪಿಯ ಬಸ್‌ನಲ್ಲಿ ಈ ಘಟನೆ ನಡೆದಿದೆ. ಆರೋಪಿಯು ವಾಸ್ಕೋದ ಜುವಾರಿನಗರದ ನಿವಾಸಿಯಾಗಿದ್ದಾನೆ. ಸಂತ್ರಸ್ತೆ 14 ಜನ ಸ್ನೇಹಿತರ ಜತೆಗೂಡಿ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ಸಂದರ್ಭದಲ್ಲಿ ಆಕೆಯ …

Read More »

ಕುಷ್ಟಗಿ ಕ್ಷೇತ್ರಕ್ಕೆ ಬಸವರಾಜ್ ಹಳ್ಳೂರಗೆ ಗಾಳ ಹಾಕಿದ ಜನಾರ್ದನ ರೆಡ್ಡಿ

ಕುಷ್ಟಗಿ:ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಗಾಲಿ ಜನಾರ್ದನ ರೆಡ್ಡಿ ಅವರ ಕರ್ನಾಟಕ ರಾಜ್ಯ ಪ್ರಗತಿ ಪಕ್ಷಕ್ಕೆ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಗಾಳ ಹಾಕಿದ್ದು,ಕುಷ್ಟಗಿ ಕ್ಷೇತ್ರದಲ್ಲಿ ರೆಡ್ಡಿ ಪಕ್ಷ ಇದೀಗ ಮುನ್ನೆಲೆಗೆ ಬಂದಿದೆ.   ಈಗಾಗಲೇ ಜೆಡಿಎಸ್ ತುಕಾರಾಮ್ ಸುರ್ವೆ ತನ್ನ ಅಭ್ಯರ್ಥಿ ಎಂದು ಪ್ರಕಟಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅಭ್ಯರ್ಥಿಗಳೆಂದು ಪ್ರಕಟಿಸುವುದು ಬಾಕಿ ಇದೆ. …

Read More »