Breaking News

ರಾಷ್ಟ್ರೀಯ

ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ 22 ಎಂಎಂ‌ ಮಳೆಯಾಗಿದೆ.

ಶಿವಮೊಗ್ಗ: ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ, ಅಕ್ಕಪಕ್ಕದ ಜಿಲ್ಲೆಗಳಲ್ಲಿ ನಿರಂತರ ವರ್ಷಧಾರೆಯಾಗುತ್ತಿದೆ. ಮಳೆ ಎಡಬಿಡದೇ ಸುರಿದ ಪರಿಣಾಮ, ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. ಅದರಂತೆ, ತುಂಗಾ ಜಲಾನಯದ ಪ್ರದೇಶಗಳಾದ ಶೃಂಗೇರಿ, ಕೊಪ್ಪ, ಆಗುಂಬೆ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ತುಂಗಾ ಡ್ಯಾಂ ಸಂಪೂರ್ಣವಾಗಿ ತುಂಬಿದ್ದು, ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಕೋರ್ಪಳಯ್ಯನ ಛತ್ರದ ಬಳಿಯ ಮಂಟಪ ಮುಳುಗುವ ಹಂತ …

Read More »

ಬೆಳಗಾವಿ ಜಿಲ್ಲೆಯ ನದಿಗಳಲ್ಲಿ ನೀರು ಹರಿಯುವ ಪ್ರಮಾಣ ಹೆಚ್ಚಳ 16 ಸೇತುವೆಗಳು ಜಲಾವೃತ

ಚಿಕ್ಕೋಡಿ: ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳಲ್ಲಿ ನೀರಿನ ಒಳಹರಿವು ಪ್ರಮಾಣ ಹೆಚ್ಚಾಗಿದ್ದು, ಬಂಗಾಲಿ ಬಾಬಾ ದರ್ಗಾ ಜಲದಿಗ್ಭಂಧನಕ್ಕೆ ಒಳಗಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕು ಕಾರದಗಾ ಗ್ರಾಮದ ಆರಾಧ್ಯ ದೈವ ಬಂಗಾಲಿ ಬಾಬಾ ದರ್ಗಾ ಜಲದಿಗ್ಭಂಧನಕ್ಕೆ ಒಳಗಾಗಿದ್ದು, ಸದ್ಯ ಬಾಬಾನ ದರ್ಶನಕ್ಕೆ ದೂದಗಂಗಾ ನದಿ ನೀರು ತಡೆಯನ್ನು ಒಡ್ಡಿದೆ. ದೂಧಗಂಗಾ ನದಿಯ ಒಳಹರಿವು ಹೆಚ್ಚಳಗೊಂಡ ಹಿನ್ನೆಲೆ ದರ್ಗಾದ ಮುಂದೆ ಎರಡು ಅಡಿಯಷ್ಟು …

Read More »

ನಾಗರಹೊಳೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಜಿಂಕೆ ಬೇಟೆ: ಮಾಂಸ ಜೋಳದ ಹೊಲದಲ್ಲಿ ಪತ್ತೆ.. ಇಬ್ಬರ ಬಂಧನ

ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಜಿಂಕೆ ಬೇಟೆಯಾಡಿ, ಆರೋಪಿಗಳು ಜೋಳದ ಹೊಲದಲ್ಲಿ ಮಾಂಸವನ್ನು ಬಚ್ಚಿಟ್ಟಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಪರಿಕರವನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ತಪ್ಪಿಸಿಕೊಂಡ ನಾಲ್ವರ ಬಂಧನಕ್ಕೆ ಬಲೆ ಬೀಸಿದ್ದಾರೆ.   ಘಟನೆ ವಿವರ: ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ, ಹಾಗು ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ನೇಗತ್ತೂರಿನ ಜೋಳದ ಹೊಲದಲ್ಲಿ, ಅಕ್ರಮವಾಗಿ ಕಾಡು ಪ್ರಾಣಿ ಮಾಂಸ ಸಂಗ್ರಹಿಸಿಟ್ಟಿದ್ದಾರೆಂದು ಖಚಿತ ಮಾಹಿತಿ ಬಂದಿತ್ತು. ಈ ಮೇರೆಗೆ ಅರಣ್ಯ …

Read More »

ಆಗಸ್ಟ್ 1ರಿಂದ ಪ್ರತಿ ಲೀಟರ್ ನಂದಿನಿ ಹಾಲಿನ ದರ 3 ರೂ. ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿದರು. ಪ್ರತಿ ಲೀಟರ್ ಹಾಲಿಗೆ ಕನಿಷ್ಠ ಮೂರು ರೂ. ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ಆಗಸ್ಟ್ ಒಂದರಿಂದ ಜಾರಿಯಾಗುವಂತೆ ಹಾಲಿನ ದರ ಹೆಚ್ಚಳ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಜೊತೆ ಸಿಎಂ ಸಭೆಕಳೆದ ತಿಂಗಳು ಕೆಎಂಎಫ್ ಅಧ್ಯಕ್ಷರಾಗಿ ಶಾಸಕ ಭೀಮಾ ನಾಯಕ್ ಆಯ್ಕೆಯಾಗಿದ್ದು, ಅಂದೇ …

Read More »

ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ – ಗದಗ ನಡುವೆ ವೋಲ್ವೊ ಬಸ್

ಹುಬ್ಬಳ್ಳಿ: ಹುಬ್ಬಳ್ಳಿ ಹಾಗೂ ಗದಗ ನಡುವೆ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಮತ್ತಷ್ಟು ಆರಾಮದಾಯಕ ಸಾರಿಗೆ ಸೌಲಭ್ಯ ಕಲ್ಪಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಂದಾಗಿದೆ. ಹುಬ್ಬಳ್ಳಿ ಮತ್ತು ಗದಗ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ಕಲ್ಪಿಸುವ ನಿಟ್ಟಿನಲ್ಲಿ ವೋಲ್ವೊ ಎಸಿ ಬಸ್​ಗಳನ್ನು ಆರಂಭಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ. ಹುಬ್ಬಳ್ಳಿ ಹಾಗೂ ಗದಗ ಭಾಗದ ಸಾರ್ವಜನಿಕರ ಬೇಡಿಕೆಯ ಮೇರೆಗೆ ಹುಬ್ಬಳ್ಳಿ- ಗದಗ ನಡುವೆ ತಡೆ …

Read More »

ಮಹಾರಾಷ್ಟ್ರದ ಪಶ್ಚಿಮಘಟ್ಟಗಳಲ್ಲಿ ಭಾರಿ ಮಳೆ ಖಾನಾಪುರ ತಾಲ್ಲೂನಾದ್ಯಂತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.:

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ನದಿಗಳಲ್ಲಿ ನೀರಿನ ಮಟ್ಟ ಪ್ರತಿ ಗಂಟೆಗೂ ಹೆಚ್ಚಳವಾಗುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಕೆಳಹಂತದ ಏಳು ಸೇತುವೆಗಳು ಜಲಾವೃತಗೊಂಡು ಸಂಚಾರ ಅಸ್ತವ್ಯಸ್ತಗೊಂಡಿದೆ. ಕೃಷ್ಣಾ ನದಿ ಹಾಗೂ ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಏಳು ಕೆಳಹಂತದ ಸೇತುವೆಗಳು ಈಗಾಗಲೇ ಜಲಾವೃತಗೊಂಡು ನದಿಯ ದಂಡೆಯ ಗ್ರಾಮದ ಸಂಪರ್ಕ ಕಡಿತಗೊಂಡಿದೆ. ಚಿಕ್ಕೋಡಿ ತಾಲೂಕಿನ ಮಲಿಕವಾಡ – ದತ್ತವಾಡ ಸಂಪರ್ಕ ಕಲ್ಪಿಸುವ ಸೇತುವೆ …

Read More »

ಕಾನೂನು ಬಾಹಿರವಾಗಿ ವಿವಿಧ ಕಂಪನಿಯ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಐ ಸಿಸಿಬಿ ರವರ ನೇತೃತ್ವದ ತಂಡದಿಂದ ಸದಾಶಿವ ನಗರದ ಅಪಾರ್ಟ್ಮೆಂಟದಲ್ಲಿ ಕಾನೂನು ಬಾಹಿರವಾಗಿ ವಿವಿಧ ಕಂಪನಿಯ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿ, ಸುಮಾರು 4 ಲಕ್ಷ ಮೌಲ್ಯದ ಅಕ್ರಮ ಮದ್ಯ, ಕಾರು, ಮೊಬೈಲ್ ಹಾಗು ಹಣ ಜಪ್ತ ಮಾಡಿ ಇಬ್ಬರೂ ಆರೋಪಿತರನ್ನು ದಸ್ತಗಿರ ಮಾಡಿದ್ದು, ಇನ್ನು 2 ಆರೋಪಿತರು ಫರಾರಿ ಇರುತ್ತಾರೆ. ರೇಡ್ ತಂಡಕ್ಕೆ ನಗದು …

Read More »

ಚೆನ್ನೈ ಸೆಂಟ್ರಲ್​ನಲ್ಲಿ ನಕಲಿ ರೈಲು ಟಿಕೆಟ್ ಮಾರಾಟ

ಚೆನ್ನೈ(ತಮಿಳುನಾಡು): ಚೆನ್ನೈ ಸೆಂಟ್ರಲ್ ಸಬರ್​​ಬನ್​​ ರಿಸರ್ವೇಶನ್ ಸೆಂಟರ್ ಎದುರು ಕೈಯಲ್ಲಿ ನೋಟ್ ಪ್ಯಾಡ್ ಹಿಡಿದು ರೈಲು ಪ್ರಯಾಣಿಕರಿಗೆ ನಕಲಿ ಟಿಕೆಟ್ ನೀಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮಂಗಳವಾರ ರೈಲ್ವೆ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ತನಿಖೆಯ ವೇಳೆ ಈತ ರಾಜಸ್ಥಾನ ಮೂಲದ ಜಿತೇಂದ್ರ ಶಾ (38) ಎಂದು ಗೊತ್ತಾಗಿದ್ದು, ಚೆನ್ನೈನ ಕೊಡಂಗಯ್ಯೂರಿನಲ್ಲಿ ಆರೋಪಿ ವಾಸವಾಗಿದ್ದ ಎಂಬುದು ತಿಳಿದು ಬಂದಿದೆ. 10ನೇ ತರಗತಿ ಓದಿರುವ ಅಪರಾಧಿ, ತಂದೆಯ ಆಭರಣ ಅಂಗಡಿಯಲ್ಲಿ ಲೆಕ್ಕಪರಿಶೋಧಕನಾಗಿ ಕೆಲಸ …

Read More »

ಈಗ ನಾನೇ ವಿರೋಧ ಪಕ್ಷದ ನಾಯಕ!: ಅಚ್ಚರಿಯ ಹೇಳಿಕೆ ನೀಡಿದ ಬಿಜೆಪಿ ರೆಬೆಲ್ ಸದಸ್ಯ

ಬೆಂಗಳೂರು: 15 ದಿನಗಳ ಕಾಲ ನಡೆದ ಬಜೆಟ್ ಅಧಿವೇಶನಕ್ಕೆ ತೆರೆ ಬಿದ್ದಿದ್ದು, ಪ್ರತಿಪಕ್ಷಗಳ ಗೈರಿನಲ್ಲೇ ಧನ ವಿನಿಯೋಗ ವಿಧೇಯಕಕ್ಕೆ ವಿಧಾನ ಪರಿಷತ್ ಅಂಗೀಕಾರ ನೀಡಿದೆ. ಸದನ ನಡೆಸಲು ಸಹಕರಿಸಿದ ಸರ್ವರಿಗೂ ಧನ್ಯವಾದ ಅರ್ಪಿಸಿದ ಸಭಾಪತಿ ಬಸವರಾಜ ಹೊರಟ್ಟಿ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿದರು. ಬಜೆಟ್ ಮೇಲಿನ ಚರ್ಚೆಯ ನಂತರ ಮಾತನಾಡಿದ ಸಭಾನಾಯಕ ಬೋಸರಾಜ್, ಕಲಾಪ ನಡೆಸಲು ಸಹಕರಿಸಿದ ಸದಸ್ಯರು, ಸಚಿವರು,ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು. ನಂತರ ಸಭಾಪತಿ ಬಸವರಾಜ ಹೊರಟ್ಟಿ, ಸಭಾನಯಕರ ನಂತರ …

Read More »

ಬಿಜೆಪಿ ಹತ್ತು ಶಾಸಕರ ಅಮಾನತು ಯಾರ ಒತ್ತಡದಿಂದ ಮಾಡಿಲ್ಲ ಎಂದು ಸ್ಪೀಕರ್

ಬೆಂಗಳೂರು: ಬಿಜೆಪಿ ಹತ್ತು ಶಾಸಕರ ಅಮಾನತು ಯಾರ ಒತ್ತಡದಿಂದ ಮಾಡಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟಪಡಿಸಿದರು. ಅಧಿವೇಶನ ಮುಕ್ತಾಯದ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸಭೆ ನಡೆಸುವುದು ಎಲ್ಲ ನಾಯಕರ ಜವಾಬ್ದಾರಿ.‌ ಅದಕ್ಕಾಗಿ ಎಲ್ಲರ ಸಹಕಾರ ಬೇಕು. ಯಾರೇ ಸದಸ್ಯರು ಪೀಠಕ್ಕೆ ಅಗೌರವದಿಂದ ನಡೆದುಕೊಂಡರೆ ಆ ಪೀಠದ ಸಭಾಧ್ಯಕ್ಷನಾಗಿ ನಾನು ಕ್ರಮ ಕೈಗೊಂಡಿದ್ದೇನೆ ಎಂದರು. ಇದರಲ್ಲಿ ಪಕ್ಷದ ವಿಚಾರ ಇಲ್ಲ. ನೋಟೀಸ್ ನೀಡದೇ ಇದ್ದರೂ ಅವರಿಗೆ ಮಾತನಾಡಲು ಅವಕಾಶ …

Read More »