Breaking News
Home / ರಾಷ್ಟ್ರೀಯ (page 453)

ರಾಷ್ಟ್ರೀಯ

ವಿದ್ಯಾರ್ಥಿನಿಯ ಕತ್ತು ಕೊಯ್ದು ಕೊಂದ ಬಗ್ನ ಪ್ರೇಮಿ

ಅಮರಾವತಿ, ಡಿ .6- ಬಗ್ನ ಪ್ರೇಮಿಯೊಬ್ಬ ದಂತ ವೈದ್ಯಕೀಯ ವಿದ್ಯಾರ್ಥಿನಿಯ ಕತ್ತು ಕೂಯ್ದು ಕೊಲೆ ಮಾಡಿರುವ ಘಟನೆ ಗುಂಟೂರು ಜಿಲ್ಲೆಯ ತಕ್ಕೆಲ್ಲಪ್ಡು ನಗರದಲ್ಲಿ ಕಳೆದ ರಾತ್ರಿ ನಡೆದಿದೆ. ವಿಜಯವಾಡದಲ್ಲಿ ಕಾಲೇಜಿನಲ್ಲಿ ಬಿಡಿಎಸ್ ಮೂರನೇ ವರ್ಷದ ವಿದ್ಯಾರ್ಥಿನಿ ತಪಸ್ವಿ (20) ಕೊಲೆಯಾದ ಯುವತಿ.   ಬಗ್ನ ಪ್ರೇಮಿನ್ನು ಸಾಫ್ಟ್‍ವೇರ್ ಇಂಜಿನಿಯರ್ ಜ್ಞಾನೇಶ್ವರ್ ಎಂದು ಪೊಲೀಸರು ತಿಳಿಸಿದಾರೆ.   ಕಳೆದ 2 ವರ್ಷದ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಜ್ಞಾನೇಶ್ವರ್ ಮತ್ತು ತಪಸ್ವಿ ಸಂಪರ್ಕಕ್ಕೆ …

Read More »

ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರ ಮಹತ್ವದ ಸಭೆ

ಬೆಂಗಳೂರು, ಡಿ.6- ಬೆಳಗಾವಿಯ ಚಳಿಗಾಲದ ಅವೇಶನ, ಇತ್ತೀಚೆಗೆ ನಡೆದ ಭಯೋತ್ಪದನೆ ಘಟನೆ, ಗಡಿ ಬಿಕ್ಕಟ್ಟು, ರಾಜ್ಯದ ಸಾಮಾನ್ಯ ಕಾನೂನು ಸುವ್ಯವಸ್ಥೆ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.   ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗೃಹ ಸಚಿವರು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲï, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಎಡಿಜಿಪಿ ಅಧಿಕಾರಿಗಳಾದ ಅಲೋಕ್ ಕುಮಾರ್, ದಯಾನಂದ, …

Read More »

ಇದೇನಾ ಸರ್ಕಾರದ ಕಲ್ಯಾಣ ಕರ್ನಾಟಕ ಕಾಳಜಿ?: ವಿಶೇಷ ಅಭಿವೃದ್ಧಿ ಯೋಜನೆ ಪ್ರಗತಿ ಈಗಲೂ ಶೋಚನೀಯ!

ಉತ್ತರ ಕರ್ನಾಟಕದ ವ್ಯಕ್ತಿ ಮುಖ್ಯಮಂತ್ರಿ ಆದರೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಲೆಕ್ಕಾಚಾರ ಕಳಪೆಯಾಗಿದೆ. ಹಣ ಬಿಡುಗಡೆ ಮತ್ತು ಬಳಕೆಯಲ್ಲಿ ಬೊಮ್ಮಾಯಿ ಸರ್ಕಾರ ಮೂರನೇ ತ್ರೈಮಾಸಿಕ ಅನುದಾನ ಬಿಡುಗಡೆಯಲ್ಲೂ ಉತ್ತಮ ಪ್ರದರ್ಶನ ನೀಡಿಲ್ಲ.   ಬೆಂಗಳೂರು: ಬೊಮ್ಮಾಯಿ ಸರ್ಕಾರದ ಕೊನೆಯ ಬೆಳಗಾವಿ ಅಧಿವೇಶನಕ್ಕೆ ವೇದಿಕೆ ಸಜ್ಜಾಗಿದೆ.‌ ಉತ್ತರ ಕರ್ನಾಟಕ ಭಾಗದ ಜನರ ಆಶೋತ್ತರಗಳನ್ನು ಈಡೇರಿಸುವ ವೇದಿಕೆ ಬೆಳಗಾವಿ ಅಧಿವೇಶನ.   ಆದರೆ ಇತ್ತ ಉತ್ತರ ಕರ್ನಾಡಕ ಭಾಗದ ಕಲ್ಯಾಣಕ್ಕಾಗಿನ ವಿಶೇಷ ಅಭಿವೃದ್ಧಿ …

Read More »

ಗಡಿ ವಿಷಯದಲ್ಲಿ ಪುಂಡಾಡಿಕೆ ಮಾಡಿದವರನ್ನು ಒಳಗೆ ಹಾಕ್ತೀವಿ: ಕಾರಜೋಳ ಎಚ್ಚರಿಕೆ

ಬೆಳಗಾವಿ(ಡಿ.06): ಬೆಳಗಾವಿಯಲ್ಲಿ (Belagavi) ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಳಿಕ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ (Maharashtra Border Issue) ಮತ್ತೆ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ನಿರ್ಬಂಧ ವಿಚಾರವೂ ಅಷ್ಟೇ ಸದ್ದು ಮಾಡಿತ್ತು. ಹೌದು ಗಡಿ ವಿಚಾರವಾಗಿ ಮಾತನಾಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಗಡಿ ಸಮಸ್ಯೆ ಎತ್ತಿ, ಕನ್ನಡಿಗರು ಹಾಗೂ ಮರಾಠಿಗರ ನಡುವೆ …

Read More »

ಇಂದು ಸಂಜೆ ಕೊಗನೊಳ್ಳಿ ಚೆಕ್‌ಪೋಸ್ಟ್​ಗೆ ಬರುವುದಾಗಿ ಸವಾಲು ಹಾಕಿದ ಶಿವಸೇನೆ

ತಾವು ಇಂದು ಸಂಜೆ ಕೊಗನೊಳ್ಳಿ ಚೆಕ್‌ಪೋಸ್ಟ್​ಗೆ ಬರುವುದಾಗಿ ಕೊಲ್ಲಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಹೇಳಿಕೆ ನೀಡಿದ್ದಾರೆ.   ಬೆಳಗಾವಿ: ಗಡಿ ತಿಕ್ಕಾಟ ತೀವ್ರಗೊಂಡಿದೆ. ಇದರ ಮಧ್ಯೆ ಉರಿಯೋ ಬೆಂಕಿಗೆ ತುಪ್ಪ ಸುರಿಯಲು ಮುಂದಾದ ಮಹಾರಾಷ್ಟ್ರದ ಶಿವಸೇನೆ ಉದ್ಧವ್ ಠಾಕ್ರೆ ಬಣ ಇಂದು ಸಂಜೆ 5 ಗಂಟೆಗೆ ಬೆಳಗಾವಿಯ ಕೊಗನೊಳ್ಳಿ ಚೆಕ್‌ಪೋಸ್ಟ್​ಗೆ ಬರೋದಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಸವಾಲು ಹಾಕಿದೆ. ಮಹಾರಾಷ್ಟ್ರ ಸಚಿವರ ಬೆಳಗಾವಿ ಪ್ರವಾಸ ರದ್ದು ಮಾಡಿದ್ದರಿಂದ …

Read More »

ಕರ್ನಾಟಕ-ಮಹಾರಾಷ್ಟ್ರ ಗಡಿ ಘರ್ಷಣೆ: ಬೆಳಗಾವಿ ಭೇಟಿ ರದ್ದಾಗಿಲ್ಲ, ಮುಂದೂಡಿಕೆ – ಮಹಾ ಸಚಿವ

ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ ಭುಗಿಲೆದ್ದಿದ್ದು, ನಮ್ಮ ಬೆಳಗಾವಿ ಭೇಟಿ ಮುಂದೂಡಿಕೆಯಾಗಿದೆ. ರದ್ದುಗೊಳಿಸಿಲ್ಲ ಎಂದು ಮಹಾರಾಷ್ಟ್ರ ಸಚಿವ ಸಂಭುರಾಜ್ ದೇಸಾಯಿ ಅವರು ಮಂಗಳವಾರ ಹೇಳಿದ್ದಾರೆ. ಮಹಾರಾಷ್ಟ್ರ: ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ ಭುಗಿಲೆದ್ದಿದ್ದು, ನಮ್ಮ ಬೆಳಗಾವಿ ಭೇಟಿ ಮುಂದೂಡಿಕೆಯಾಗಿದೆ.   ರದ್ದುಗೊಳಿಸಿಲ್ಲ ಎಂದು ಮಹಾರಾಷ್ಟ್ರ ಸಚಿವ ಸಂಭುರಾಜ್ ದೇಸಾಯಿ ಅವರು ಮಂಗಳವಾರ ಹೇಳಿದ್ದಾರೆ. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸ್ ನಿಮಿತ್ತ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಬೆಳಗಾವಿಯ ಗಡಿ ಪ್ರದೇಶಕ್ಕೆ ಭೇಟಿ ನೀಡಬೇಕಾಗಿತ್ತು. …

Read More »

ಮತ್ತೆ ಎಂಇಎಸ್‌ ಪುಂಡಾಟ: ಕನ್ನಡ ನೆಲದಲ್ಲಿ ನಾಡದ್ರೋಹಿ ಘೋಷಣೆ, ಮುಖಂಡರ ಬಂಧನ

ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡರು ಮಂಗಳವಾರ ಬೆಳಗಾವಿಯಲ್ಲಿ ಕರ್ನಾಟಕ ವಿರೋಧಿ ಘೋಷಣೆ ಕೂಗುವ ಮೂಲಕ ಪ್ರಚೋದನೆ ನೀಡಿದ್ದಾರೆ.   ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದದ (Border dispute) ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲು ಇನ್ನೂ ಬಾಕಿ ಇರುವಂತೆಯೇ ಎರಡು ರಾಜ್ಯಗಳ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದರ ನಡುವೆ ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡರು ಮಂಗಳವಾರ ಮತ್ತೆ ಕನ್ನಡ ನೆಲದಲ್ಲಿ ನಾಡದ್ರೋಹಿ ಘೋಷಣೆ ಕೂಗುವ ಮೂಲಕ ಉದ್ಧಟತನ …

Read More »

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ 5 ನರಿ ಮರಿಗಳು ಪತ್ತೆ!

ಬಾಗಲಕೋಟೆ ಜಿಲ್ಲೆಯ ಹೆರಕಲ್ಲ ಗ್ರಾಮದ ಕಬ್ಬಿನ ಗದ್ದೆಯಲ್ಲಿ 5 ನರಿ ಮರಿಗಳು ಪತ್ತೆ. ಗ್ರಾಮದ ಯೋಧ ಈರಪ್ಪ ಎಂಬುವವರ ಜಮೀನಿನಲ್ಲಿ ಕಬ್ಬು ಕಟಾವು ಮಾಡುವಾಗ ಪತ್ತೆಯಾದ ನರಿ ಮರಿಗಳು.   ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಹೆರಕಲ್ಲ ಗ್ರಾಮದ ಬಳಿ ಕಬ್ಬಿನ ಗದ್ದೆಯಲ್ಲಿ 5 ನರಿ ಮರಿಗಳು ಪತ್ತೆಯಾಗಿವೆ.   ಗ್ರಾಮದ ಯೋಧ ಈರಪ್ಪ ವಾರದ ಎಂಬುವವರ ಜಮೀನಿನಲ್ಲಿ ಮರಿಗಳು ಪತ್ತೆಯಾಗಿವೆ.   ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಈರಪ್ಪ ಅವರು …

Read More »

ಮಹಾ ಸಚಿವರ ಗಡಿ ಪ್ರವೇಶಕ್ಕೆ ನಿರ್ಬಂಧ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ವಿವಾದ ದಿನದಿಂದ ದಿನಕ್ಕೆ ಭುಗಿಲೇಳುತ್ತಿದ್ದು, ಮರಾಠಿ ಭಾಷಿಕರ ಸಮಸ್ಯೆ ಕೇಳಲು ಮಹಾರಾಷ್ಟ್ರದ ಸಚಿವದ್ವಯರು ಹಾಗೂ ಗಡಿ ಸಲಹಾ ಸಮಿತಿ ಅಧ್ಯಕ್ಷರು ಡಿ.6ರಂದು ಬೆಳಗಾವಿಗೆ ಭೇಟಿ ನೀಡುತ್ತಿರುವುದರಿಂದ ಈಗಾಗಲೇ ಈ ಮೂವರಿಗೂ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.   ಮಹಾ ಸಚಿವರ ಆಗಮನ ಖಂಡಿಸಿ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ. ಕೆಲ ದಿನಗಳಿಂದ ಜಿಲ್ಲೆಯಲ್ಲಿ ಗಡಿ ವಿವಾದ ತಾರಕಕ್ಕೇರಿದ್ದು, ಮಹಾರಾಷ್ಟ್ರ ತನ್ನ ಮೊಂಡುವಾದ ಬಿಡುತ್ತಿಲ್ಲ. ಉರಿಯುವ …

Read More »

ಬೆಳಗಾವಿಯಲ್ಲಿ ಕರವೇ ಬೃಹತ್ ಪ್ರತಿಭಟನೆ: ಕುಂದಾನಗರಿಯಲ್ಲಿ ಪೊಲೀಸ್ ಸರ್ಪಗಾವಲು

ಮಹಾರಾಷ್ಟ್ರದಿಂದ ಬೆಳಗಾವಿ ಪ್ರವೇಶ ಮಾಡುವ ಎಲ್ಲ ಚೆಕ್​ ಪೋಸ್ಟ್​ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಹಿನ್ನೆಲೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಇಂದು ಪ್ರತಿಭಟನೆ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್​ ನಿಯೋಜನೆ ಮಾಡಲಾಗಿದೆ. ಬೆಳಗಾವಿ ಗಡಿ ವಿಷಯದಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರದ ಕಿಡಿಗೇಡಿಗಳ ವಿರುದ್ಧ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಇಂದು ಮಹಾರಾಷ್ಟ್ರ ಸರ್ಕಾರದ ಇಬ್ಬರು …

Read More »