Breaking News

ರಾಷ್ಟ್ರೀಯ

ಬಾಲಕಿಯರ ವಾಶ್ ರೂಂನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ ಎಂದು ಕೆಲವು ಪೋಷಕರು ಗಂಭೀರ ಆರೋಪ ಮಾಡಿದ್ದು, ಶಾಲೆಯ ಪ್ರಾಂಶುಪಾಲರ ಮೇಲೆ ಹಲ್ಲೆ

ಮಹಾರಾಷ್ಟ್ರ: ಪುಣೆ ಜಿಲ್ಲೆಯ ಖಾಸಗಿ ಶಾಲೆಯೊಂದರ ಬಾಲಕಿಯರ ವಾಶ್ ರೂಂನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ ಎಂದು ಕೆಲವು ಪೋಷಕರು ಗಂಭೀರ ಆರೋಪ ಮಾಡಿದ್ದು, ಶಾಲೆಯ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ್ದಾರೆ. ಮಂಗಳವಾರ ಮಧ್ಯಾಹ್ನ ನಡೆದ ಈ ಘಟನೆಯ ವಿಡಿಯೋ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ತಲೇಗಾಂವ್ ದಭಾಡೆ ಪ್ರದೇಶದ ಶಾಲಾ ಆವರಣದಲ್ಲಿ ಬಲಪಂಥೀಯ ಗುಂಪೊಂದು ಪ್ರಾಂಶುಪಾಲರನ್ನು ಹಿಂಬಾಲಿಸುತ್ತಿರುವ ದೃಶ್ಯವಿದೆ. ಘಟನೆ ಕುರಿತು ಶಿಕ್ಷಣ ಇಲಾಖೆ ತನಿಖೆ ನಡೆಸುತ್ತಿದೆ. …

Read More »

ಗುಂಡು ಹಾರಿಸಿಕೊಂಡು ಡಿಐಜಿ ವಿಜಯಕುಮಾರ್ ಆತ್ಮಹತ್ಯೆ

ಕೊಯಮತ್ತೂರು : ಕೊಯಮತ್ತೂರು ಕಾರ್ಗೋ ವಿಭಾಗದ ಡಿಐಜಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯಕುಮಾರ್ (45) ಅವರು ಬಂಟ ರಸ್ತೆಯ ಪಾಂಥಯ ಸಲೈನಲ್ಲಿರುವ ತಮ್ಮ ಕ್ಯಾಂಪ್ ಕಚೇರಿಯಲ್ಲಿ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 2009ರ ಐಪಿಎಸ್ ಬ್ಯಾಚ್‌ನವರಾಗಿದ್ದ ಇವರು, 2022 ಜನವರಿ 6ರಂದು ಚೆನ್ನೈನ ಅಣ್ಣಾನಗರ ಡೆಪ್ಯುಟಿ ಕಮಿಷನರ್‌ನಿಂದ ಕೊಯಮತ್ತೂರು ಡಿಐಜಿಯಾಗಿ ಬಡ್ತಿ ಪಡೆದಿದ್ದರು. ಕಾಂಚೀಪುರಂ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವರೂರ್​ನಲ್ಲಿ ಡಿಎಸ್​ಪಿಯಾಗಿ ಕೆಲಸ ಮಾಡಿದ್ದಾರೆ. ನಿನ್ನೆ ರಾತ್ರಿ ಜಿಲ್ಲಾಧಿಕಾರಿ ಸಂದೀಶ್ ಅವರ ಮಗುವಿನ …

Read More »

ಕೊಪ್ಪಳ ,ಕಲಬುರಗಿಯಲ್ಲಿ ಜಾನಪದ ಲೋಕಸ್ಥಾಪನೆ

ಬೆಂಗಳೂರು: ಚಿತ್ರರಂಗದ ಬೇಡಿಕೆಯಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಿಲ್ಮ್​ ಸಿಟಿಯನ್ನು ಮೈಸೂರಿನಲ್ಲೇ ಸ್ಥಾಪಿಸುವುದಾಗಿ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಈ ಹಿಂದಿನ ಸರ್ಕಾರದಲ್ಲಿ ಈ ಫಿಲ್ಮ್​ ಸಿಟಿಯನ್ನು ಬೆಂಗಳೂರಿಗೆ ವರ್ಗಾಯಿಸುವ ಉದ್ದೇಶ ಹೊಂದಿತು. ಇದೀಗ ಮತ್ತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪನೆ ಮಾಡುವ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಕನ್ನಡ ಚಿತ್ರರಂಗದ ಇತಿಹಾಸ, ಅದು ಬೆಳೆದು ಬಂದ ಇತಿಹಾಸ ತಿಳಿಸುವ ಸಂಗ್ರಹಾಯಲವನ್ನು ಬೆಂಗಳೂರಿನ ಕಂಠೀರವದಲ್ಲಿರುವ ಡಾ ರಾಜ್​ ಕುಮಾರ್​ …

Read More »

ನನಗೆ 82 ಅಥವಾ 92 ವರ್ಷಗಳೇ ಆಗಿರಲಿ ಏನೀಗ. ನಾನೇ ಎನ್​​ಸಿಪಿ ಅಧ್ಯಕ್ಷ: ಶರದ್ ಪವಾರ್

ನವದೆಹಲಿ: ನಾನೂ ಈಗಲೂ ಎನ್​​ಸಿಪಿಯ ಅಧ್ಯಕ್ಷ. ನನಗೆ 82 ಅಥವಾ 92 ವರ್ಷಗಳೇ ಆಗಿರಲಿ ಏನೀಗ. ನಾನು ಈಗಲೂ ಸಮರ್ಥನಾಗಿದ್ದೇನೆ ಎಂದು ಹೇಳುವ ಮೂಲಕ ಶರದ್​ ಪವಾರ್​, ತಮ್ಮ ಸಹೋದರನ ಮಗ ಅಜಿತ್​ ಪವಾರ್​ಗೆ ತಿರುಗೇಟು ನೀಡಿದ್ದಾರೆ. ಪಕ್ಷ ಇಬ್ಭಾಗವಾಗಿದ್ದು, ತಮ್ಮದೇ ನಿಜವಾದ ಪಕ್ಷ ಎಂದು ಅಜಿತ್​ ಪವಾರ್​ ಹೇಳಿಕೊಳ್ಳುತ್ತಿರುವ ಬೆನ್ನಲೇ, ಶರದ್​ ಪವಾರ್ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಿದರು. ಈ ಸಭೆಯ ಬಳಿಕ ಮಾತನಾಡಿದ ಪವಾರ್, ನಾನೇ …

Read More »

ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿದ ಚಾಲಕನ ಆತ್ಮಹತ್ಯೆ ಯತ್ನ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿನ ಕೆಎಸ್​​ಆರ್​ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿತು. ಆಡಳಿತ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಸದಸ್ಯರ ನಡುವೆ ಏರು ಧ್ವನಿಯಲ್ಲಿ ಮಾತಿನ ಚಕಮಕಿ ನಡೆದು ಇಡೀ ಸದನ ರಣರಂಗದಂತೆ ನಿರ್ಮಾಣವಾದ ಪ್ರಸಂಗ ನಡೆಯಿತು. ಅಲ್ಲದೇ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಲ್ಲಿಯವರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯ ಸ್ವಾಮಿ ರಾಜೀನಾಮೆ ನೀಡಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು …

Read More »

ಸ್ಮಾರ್ಟ್ ಸಿಟಿ ಕಾಮಗಾರಿಯ ನಿರ್ಲಕ್ಷ್ಯ ವಿದ್ಯುತ್ ತಗುಲಿ ಹಸು ಕರು ಸಾವು

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ವಿದ್ಯುತ್ ಫೀಡರ್ ಪಿಲ್ಲರ್ ತಗಲಿ ಹಸು-ಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಅಕ್ಕಿಹೊಂಡದ ಬಳಿ ನಡೆದಿದೆ. ಸ್ಮಾರ್ಟ್ ಸಿಟಿ ಯೋಜನೆಗಳಿಂದಾಗಿ ಒಂದಲ್ಲಾ ಒಂದು ಯಡವಟ್ಟುಗಳು ಆಗುತ್ತಿವೆ ಎಂದು ಅಲ್ಲಿನ ಸಾರ್ವಜನಿಕರು ಆರೋಪಿಸಿದ್ದಾರೆ. ಅದರಂತೆ ಅಕ್ಕಿಹೊಂಡದಲ್ಲಿ ಕೂಡಾ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಸುತ್ತಿರುವವರ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳಿಂದ ಇಲ್ಲಿ ಸ್ಮಾರ್ಟ್ …

Read More »

ಕನ್ನಡ ಭಾಷಾ ಪದ ಪ್ರಯೋಗದ ಬಗ್ಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಯತ್ನಾಳ್ ಹಾಸ್ಯ

ಬೆಂಗಳೂರು: ವಿಧಾನಸಭೆಯ ಅಧ್ಯಕ್ಷ ಯು ಟಿ ಖಾದರ್ ಅವರ ಕನ್ನಡ ಭಾಷಾ ಪದ ಪ್ರಯೋಗದ ಬಗ್ಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಯತ್ನಾಳ್ ಹಾಸ್ಯ ಮಾಡಿದ್ದು, ಅದನ್ನು ಸಭಾಧ್ಯಕ್ಷರು ಸ್ಪರ್ಧಾತ್ಮಕವಾಗಿ ಪರಿಗಣಿಸಿದ ಪ್ರಸಂಗ ಇಂದು ನಡೆಯಿತು. ವಿಧಾನಸಭೆಯ ಉಪಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾದ ಮೇಲೆ ಅವರನ್ನು ಅಭಿನಂದಿಸುವ ಸಂದರ್ಭದಲ್ಲಿ ಸಭಾಧ್ಯಕ್ಷರು ಹಳ್ಳಿ ಎಂಬ ಪದವನ್ನು ಹಲ್ಲಿ ಎಂದು ಉಚ್ಛಾರಣೆ ಮಾಡಿದರು. ಅದನ್ನು ಬಸನಗೌಡ ಯತ್ನಾಳ್ ಉಲ್ಲೇಖಿಸಿ ಹಳ್ಳಿ, ಹಳ್ಳಿ ಎಂದು …

Read More »

ಧರಣಿ ಹಿಂಪಡೆದ ಬಿಜೆಪಿ; ಪರಿಷತ್​ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಆರಂಭ

ಬೆಂಗಳೂರು : ಗೋಹತ್ಯೆ ನಿಷೇಧ ಕಾಯ್ದೆ ಸಾಧಕ- ಬಾಧಕಗಳ ಕುರಿತು ನಾವು ನಮ್ಮಲ್ಲಿ ಚರ್ಚೆ ನಡೆಸಿದ್ದೇವೆ. ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವ ಕೆ. ಆರ್ ವೆಂಕಟೇಶ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ರವಿಕುಮಾರ್ ಚರ್ಚೆಗೆ ಉತ್ತರಿಸಿದ ಸಚಿವರು, ನಾವು ಕಾಯ್ದೆ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಒಂದೊಮ್ಮೆ ಸದಸ್ಯರ ಬಳಿ ಈ ವಿಚಾರಕ್ಕೆ ಸಂಬಂಧಿಸಿ ಮಾಹಿತಿ ಇದ್ದರೆ ಅವರು ಮಾಹಿತಿ ನೀಡಲಿ. ಕ್ರಮ ಕೈಗೊಳ್ಳುತ್ತೇವೆ ಎಂದರು. ಮತ್ತಷ್ಟು ಚರ್ಚೆಗೆ ಮುಂದಾದ …

Read More »

ಗ್ರಾಮ ಪಂಚಾಯತಿಯ ಸದಸ್ಯರ ಗೌರವಧನವನ್ನು ನುಂಗಿದ P.D.O.

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರ ಗ್ರಾಮ ಪಂಚಾಯತಿಯ ಪಿಡಿಓ ಸದಸ್ಯರ ಗೌರವಧನವನ್ನು ನುಂಗಿ ಹಾಕಿದ ಘಟನೆ ತಡವಾಗಿ ಬೆಳಕಿಗೆ ನಡೆದಿದೆ. ರಾಯಬಾಗ ತಾಲೂಕಿನ ಆಲಕನೂರ ಪಂಚಾಯತಿಯಲ್ಲಿ 28 ಸದಸ್ಯರು ಇದ್ದು ಪ್ರತಿ ಸದಸ್ಯರಿಗೆ ಗೌರವ ಧನ ಎಂದು ತಿಂಗಳಿಗೆ 1000=00 ರೂ ಕೊಡುತ್ತಾರೆ ಈಗ ತಿಂಗಳಿಗೆ 2000=OO ಗಳಿಗೆ ಏರಿಸಿದೆ. ಆದರೆ, ಪಂಚಾತಿಯು 12 ತಿಂಗಳುಗಳಿಂದ ಗೌರವಧನನ್ನು ನೀಡಿಲ್ಲಾ. ಜಿಲ್ಲಾ ಪಂಚಾಯತಿಯು ಮಾರ್ಚ ತಿಂಗಳಲ್ಲಿ 16 ಲಕ್ಷ ರೂಗಳನ್ನು …

Read More »

ಮಂಡ್ಯದಲ್ಲಿ ‘ವರ್ಗಾವಣೆ’ಯಿಂದ ಬೇಸತ್ತು ‘KSRTC ಚಾಲಕ’ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಮಂಡ್ಯ: ಜಿಲ್ಲೆಯ ನಾಗಮಂಗಲದ ಕೆ ಎಸ್ ಆರ್ ಟಿ ಸಿ ಬಸ್ ಡಿಪೋದಲ್ಲಿಯೇ ವರ್ಗಾವಣೆಗೆ ಬೇಸತ್ತು ಚಾಲಕ ಕಂ ನಿರ್ವಾಹಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲದ ಕೆ ಎಸ್ ಆರ್ ಟಿ ಬಸ್ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತ ಚಾಲಕ ಕಂ ನಿರ್ವಾಹಕ ಹೆಚ್ ಆರ್ ಜಗದೀಶ್ ಎಂಬಾತನನ್ನು ಸಚಿವ …

Read More »